Homeಕರ್ನಾಟಕಚುನಾವಣೆಯಲ್ಲಿ BJP ಸೋಲಿಸಿದರೆ ಇಂಧನ ದರ ಇಳಿಯುತ್ತದೆ ಎಂಬ ಪಾಠ ಕಲಿಸಿಕೊಟ್ಟ ಮೋದಿ: ಸಿದ್ದರಾಮಯ್ಯ

ಚುನಾವಣೆಯಲ್ಲಿ BJP ಸೋಲಿಸಿದರೆ ಇಂಧನ ದರ ಇಳಿಯುತ್ತದೆ ಎಂಬ ಪಾಠ ಕಲಿಸಿಕೊಟ್ಟ ಮೋದಿ: ಸಿದ್ದರಾಮಯ್ಯ

- Advertisement -
- Advertisement -

ಚುನಾವಣೆಯಲ್ಲಿ ಮತದಾರರು ಬಿಜೆಪಿ ಸೋಲಿಸಿದರೆ ಪೆಟ್ರೋಲ್ –ಡೀಸೆಲ್ ಬೆಲೆ ಇಳಿಯುತ್ತದೆ ಎನ್ನುವ ಪಾಠವನ್ನು ಹೇಳಿಕೊಟ್ಟ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂಧನ ದರ ಇಳಿಕೆಯ ಬಗ್ಗೆ ಒಕ್ಕೂಟ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ಯುಪಿಎ ಕಾಲದಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್‌ಗೆ 125 ಡಾಲರ್ ಇದ್ದಾಗ ಪೆಟ್ರೋಲ್ ಬೆಲೆ 65 ರೂಪಾಯಿಗಳಾಗಿತ್ತು. ಬಿಜೆಪಿ ಸರ್ಕಾರದಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್‌‌ಗೆ 82 ಡಾಲರ್ ಇದ್ದಾಗ ಪೆಟ್ರೋಲ್ ಬೆಲೆ 100 ರೂಪಾಯಿಗೆ ಇಳಿಸಿದ್ದು ಮಹಾನ್ ಸಾಧನೆ. ಚುನಾವಣೆಯಲ್ಲಿ ಮತದಾರರು ಬಿಜೆಪಿ ಸೋಲಿಸಿದರೆ ಪೆಟ್ರೋಲ್ –ಡೀಸೆಲ್ ಬೆಲೆ ಇಳಿಯುತ್ತದೆ ಎನ್ನುವ ಪಾಠವನ್ನು ಹೇಳಿಕೊಟ್ಟ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 12 ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಅಲ್ಪ ಇಳಿಕೆ: ಯಾರ್ಯಾರು, ಎಷ್ಟೆಷ್ಟು?

“ಇದು ಪ್ರಧಾನಿಗಳು ನೀಡಿದ ದೀಪಾವಳಿ ಕೊಡುಗೆ ಅಲ್ಲ, ಇದು ದೇಶದಾದ್ಯಂತ ನಡೆದ ಉಪಚುನಾವಣೆಗಳ ಕೊಡುಗೆ. ಅಡುಗೆ ಅನಿಲ ಬೆಲೆ ಸಾವಿರ ರೂಪಾಯಿ ತಲುಪಿದೆ, ಆಹಾರ ಧಾನ್ಯ, ಖಾದ್ಯತೈಲದ ಬೆಲೆ ಏರುತ್ತಲೇ ಇದೆ. ಈ ಬೆಲೆಗಳು ಕೂಡಾ ಇಳಿಯಬೇಕಾದರೆ ಬಿಜೆಪಿಯನ್ನು ಇನ್ನಷ್ಟು ಚುನಾವಣೆಗಳಲ್ಲಿ ಮತದಾರರು
ಸೋಲಿಸುತ್ತಲೇ ಇರಬೇಕು” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

“ಸದ್ಯದಲ್ಲಿಯೇ ನಮ್ಮ ರಾಜ್ಯದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಗಳಿಗೆ ಹಾಗೂ ಬೆಂಗಳೂರು ಮಹಾನಗರಪಾಲಿಕೆಗೆ ಚುನಾವಣೆಗಳು ನಡೆಯಲಿವೆ. ನರೇಂದ್ರ ಮೋದಿ ಅವರು ಹೇಳಿಕೊಟ್ಟಿರುವ ಪಾಠವನ್ನು ಮತದಾರರು ನೆನಪಲ್ಲಿಟ್ಟುಕೊಂಡು ಮತದಾನ ನಡೆಸಬೇಕು” ಎಂದು ಅವರು ರಾಜ್ಯದ ಜನತೆಯಲ್ಲಿ ವಿನಂತಿಸಿದ್ದಾರೆ.

ಕಳೆದೊಂದು ವರ್ಷದಿಂದ ಹೆಚ್ಚಳವಾಗುತ್ತಲೆ ಇದ್ದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಂದು ಕೊಂಚ ಇಳಿಕೆ ಕಂಡಿದೆ. ಒಕ್ಕೂಟ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಶುಂಕವನ್ನು ಪ್ರತಿ ಲೀಟರ್ ಮೇಲೆ 5 ರೂ ಮತ್ತು ಡೀಸೆಲ್ ಮೇಲೆ 10 ರೂ ಕಡಿತಗೊಳಿಸಿದೆ. ಇದರ ಬೆನ್ನಲ್ಲೆ ಬಿಜೆಪಿ ಆಡಳಿತದ 10 ರಾಜ್ಯಗಳು ಮತ್ತು ಇತರ ಎರಡು ರಾಜ್ಯಗಳು ಸಹ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತ ಮಾಡಿವೆ.

ಇತ್ತೀಚೆಗೆ ದೇಶದಾದ್ಯಂತ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ತುಸು ಮಟ್ಟಿನ ಹಿನ್ನಡೆಯನ್ನು ಅನುಭವಿಸಿತ್ತು. ಈ ಹಿನ್ನಲೆ ಮತ್ತು ಮುಂಬರುವ ವರ್ಷಗಳಲ್ಲಿ ಉತ್ತರ ಪ್ರದೇಶ ಮತ್ತು ಗೋವಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಚುನಾವಣೆಯ ದೃಷ್ಟಿಯಿಂದ ಇಂಧನ ದರಗಳು ಇಳಿಕೆಯಾಗಿದೆ ಎಂದು ವಿರೋಧ ಪಕ್ಷಗಳು ಟೀಕಿಸಿವೆ.

ಇದನ್ನೂ ಓದಿ: ಉಪಚುನಾವಣೆ ಸೋಲಿನಿಂದಾಗಿ ಕೇಂದ್ರವು ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತಗೊಳಿಸಿದೆ: ಪಿ ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...