Homeಕರೋನಾ ತಲ್ಲಣಮಂದಿರ ಕಟ್ಟಿದರೆ ಕೊರೊನಾ ನಿಯಂತ್ರಣ ಸಾಧ್ಯವೆಂದು ಕೆಲವರು ಭಾವಿಸಿದ್ದಾರೆ: ಶರದ್ ಪವಾರ್

ಮಂದಿರ ಕಟ್ಟಿದರೆ ಕೊರೊನಾ ನಿಯಂತ್ರಣ ಸಾಧ್ಯವೆಂದು ಕೆಲವರು ಭಾವಿಸಿದ್ದಾರೆ: ಶರದ್ ಪವಾರ್

- Advertisement -
- Advertisement -

ಕೆಲವು ಜನರು ಮಂದಿರ ಕಟ್ಟಿದ ನಂತರ ಕೊರೊನಾ ವೈರಸ್ ನಿಯಂತ್ರಣ ಸಾಧ್ಯ ಎಂದು ಭಾವಿಸಿದ್ದಾರೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ವಾಗ್ದಾಳಿ ಮಾಡಿದ್ದಾರೆ.

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಮೇಲ್ವಿಚಾರಣೆಗೆ ರಚಿಸಿದ ಟ್ರಸ್ಟ್ ಮಂದಿರಕ್ಕೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮೋದಿಗೆ ಆಹ್ವಾನ ಕಳುಹಿಸಿದ ಒಂದು ದಿನದ ನಂತದ ಶರದ್ ಪವಾರ್ ಈ ಹೇಳಿಕೆ ನೀಡಿದ್ದಾರೆ.

“ಕೊರೊನಾ ವೈರಸ್ ನಿರ್ಮೂಲನೆ ಮಹಾರಾಷ್ಟ್ರ ಸರ್ಕಾರದ ಆದ್ಯತೆಯಾಗಿದೆ. ಆದರೆ ಮಂದಿರ ನಿರ್ಮಿಸಿದ ನಂತರ ಕೊರೊನಾ ವೈರಸ್ ಹೋಗುತ್ತದೆ ಎಂದು ಕೆಲವರು ಭಾವಿಸುತ್ತಾರೆ, ಅದಕ್ಕಾಗಿಯೇ ಅವರು ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದಾರೆ” ಎಂದು ಶರದ್ ಪವಾರ್ ಸೋಲಾಪುರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪ್ರಸ್ತುತ ಮಹಾರಾಷ್ಟ್ರ ಸರ್ಕಾರಲ್ಲಿ ಎನ್‌ಸಿಪಿಯ ಮೈತ್ರಿ ಪಕ್ಷವಾಗಿರುವ ಶಿವಸೇನೆ ರಾಮ ಮಂದಿರದ ನಿರ್ಮಾಣಕ್ಕೆ ಬೆಂಬಲ ನೀಡುತ್ತಿದೆ. ಈ ವಿಷಯವನ್ನು ರಾಜಕೀಯಗೊಳಿಸಬಾರದು ಎಂದು ಶಿವಸೇನೆ ಸಂಸದ ಅರವಿಂದ ಸಾವಂತ್ ಹೇಳಿದ್ದಾರೆ.

“ರಾಮ ದೇವರು ನಂಬಿಕೆಯ ವಿಷಯವಾಗಿದ್ದು, ಅದಕ್ಕೆ ರಾಜಕೀಯ ಬಣ್ಣವನ್ನು ನೀಡುವ ಅಗತ್ಯವಿಲ್ಲ. ಶಿವಸೇನೆ ರಾಮ ಮಂದಿರ ಚಳವಳಿಯ ಪ್ರಮುಖ ಬೆಳಕು. ಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗುವ ಮೊದಲು ಮತ್ತು ಅಧಿಕಾರ ವಹಿಸಿಕೊಂಡ ನಂತರವೂ ಅಯೋಧ್ಯೆಗೆ ಭೇಟಿ ನೀಡಿದ್ದರು” ಎಂದು ಅವರು ಹೇಳಿದ್ದಾರೆ.

ಬಜೆಪಿ ಮುಖಂಡ ಹಾಗೂ ಮಾಜಿ ಸಚಿವರಾದ ಸುಧೀರ್ ಮುಂಗಂತಿವಾರ್ ಮಂದಿರದ ನಿರ್ಮಾಣವು ನಂಬಿಕೆಯ ವಿಷಯವಾಗಿದೆ ಎಂದಿದ್ದಾರೆಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

“ರಾಮ ಮಂದಿರವನ್ನು ನಿರ್ಮಿಸುವುದರಿಂದ ಕೊರೊನಾ ಹೋಗುವುದಿಲ್ಲ ಎಂದು ಎಲ್ಲರಿಗೂ ತಿಳಿದಿದೆ. ಅವರು ತಮ್ಮ ರಾಜ್ಯದತ್ತ ಗಮನ ಹರಿಸಬೇಕು. ತಮ್ಮ ಮಂತ್ರಿಗಳಿಗೆ ದುಬಾರಿ ಕಾರುಗಳನ್ನು ಖರೀದಿಸುವ ಮೂಲಕ, ರೈತರಿಗೆ ಸಾಲ ಮನ್ನಾ ಮಾಡದೇ ಮಾಸ್ಕ್‌ಗಳನ್ನು ಕಾಳಸಂತೆಯಲ್ಲಿ ಮಾರಿದರೆ ಕೊರೊನಾ ಹೋಗುತ್ತಿದೆಯೆ?… ಈ ಅಗ್ಗದ ರಾಜಕಾರಣದ ಅಗತ್ಯವಿಲ್ಲ, ಮಂದಿರವು ಲಕ್ಷಾಂತರ ಹಿಂದೂಗಳ ನಂಬಿಕೆಯ ವಿಷಯವಾಗಿದೆ” ಎಂದು ಅವರು ಶರದ್ ಪವಾರ್ ಅವರಿಗೆ ತಿರುಗೇಟು ನೀಡಿದ್ದಾರೆ.

ಈ ಮಧ್ಯೆ, ಲಾಕ್ ಡೌನ್ ನಿಂದ ಉಂಟಾದ ಸಾಂಕ್ರಾಮಿಕ ಮತ್ತು ಆರ್ಥಿಕತೆಯ ಬಗ್ಗೆ ಹೆಚ್ಚಿನ ಗಮನ ನೀಡಬೇಕೆಂದು ಪವಾರ್ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ನಾವು ಯಾವಾಗಲೂ ಆದ್ಯತೆ ನೀಡಬೇಕಾದುದರ ಬಗ್ಗೆ ಯೋಚಿಸುತ್ತೇವೆ” ಎಂದು ಅವರು ಹೇಳಿದರು. “ಈಗ ಕೊರೊನಾ ವೈರಸ್ ಸೋಂಕಿತರಿಗೆ ಚೇತರಿಸಿಕೊಳ್ಳಲು ಸಹಾಯ ಮಾಡುವುದು ನಮ್ಮ ಆದ್ಯತೆಯಾಗಿದೆ. ವೈರಸ್ ಕಾರಣ ಲಾಕ್‌ಡೌನ್ ಅನ್ನು ಜಾರಿಗೊಳಿಸಬೇಕಾಯಿತು. ಆರ್ಥಿಕ ಬಿಕ್ಕಟ್ಟು, ಸಣ್ಣ ಉದ್ಯಮಗಳ ಮೇಲೆ ಅದು ಬೀರಿದ ಪರಿಣಾಮದ ಬಗ್ಗೆ ನಮಗೆ ಕಾಳಜಿ ಇದೆ. ಅದಕ್ಕಾಗಿಯೇ ಕೇಂದ್ರ ಸರ್ಕಾರ ವಿಶೇಷ ಗಮನ ಹರಿಸಬೇಕೆಂದು ನಾನು ವಿನಂತಿಸುತ್ತೇನೆ … ಆರ್ಥಿಕ ಬಿಕ್ಕಟ್ಟಿನಿಂದ ಹೊರಬರಲು ಜನರಿಗೆ ಹೇಗೆ ಸಹಾಯ ಮಾಡಬೇಕೆಂಬುದರ ಬಗ್ಗೆ ದೆಹಲಿಯಲ್ಲಿ ಚರ್ಚೆ ನಡೆಯಬೇಕು” ಎಂದು ಅವರು ಆಗ್ರಹಿಸಿದ್ದಾರೆ.


ಓದಿ: ಪೊಲೀಸರ ರಕ್ತದಲ್ಲಿ ತೊಯ್ದ ‘ಉತ್ತಮ’ಪ್ರದೇಶ : ಶಿವಸೇನೆ ಟೀಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. When case go against babri masjid, not only India but world wide lot of losses and desease appear , during the period of built up lot more crisis will come up . Let the govt hold the decision for the time being.

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...