Homeಕರೋನಾ ತಲ್ಲಣಮಂದಿರ ಕಟ್ಟಿದರೆ ಕೊರೊನಾ ನಿಯಂತ್ರಣ ಸಾಧ್ಯವೆಂದು ಕೆಲವರು ಭಾವಿಸಿದ್ದಾರೆ: ಶರದ್ ಪವಾರ್

ಮಂದಿರ ಕಟ್ಟಿದರೆ ಕೊರೊನಾ ನಿಯಂತ್ರಣ ಸಾಧ್ಯವೆಂದು ಕೆಲವರು ಭಾವಿಸಿದ್ದಾರೆ: ಶರದ್ ಪವಾರ್

- Advertisement -
- Advertisement -

ಕೆಲವು ಜನರು ಮಂದಿರ ಕಟ್ಟಿದ ನಂತರ ಕೊರೊನಾ ವೈರಸ್ ನಿಯಂತ್ರಣ ಸಾಧ್ಯ ಎಂದು ಭಾವಿಸಿದ್ದಾರೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ವಾಗ್ದಾಳಿ ಮಾಡಿದ್ದಾರೆ.

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಮೇಲ್ವಿಚಾರಣೆಗೆ ರಚಿಸಿದ ಟ್ರಸ್ಟ್ ಮಂದಿರಕ್ಕೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮೋದಿಗೆ ಆಹ್ವಾನ ಕಳುಹಿಸಿದ ಒಂದು ದಿನದ ನಂತದ ಶರದ್ ಪವಾರ್ ಈ ಹೇಳಿಕೆ ನೀಡಿದ್ದಾರೆ.

“ಕೊರೊನಾ ವೈರಸ್ ನಿರ್ಮೂಲನೆ ಮಹಾರಾಷ್ಟ್ರ ಸರ್ಕಾರದ ಆದ್ಯತೆಯಾಗಿದೆ. ಆದರೆ ಮಂದಿರ ನಿರ್ಮಿಸಿದ ನಂತರ ಕೊರೊನಾ ವೈರಸ್ ಹೋಗುತ್ತದೆ ಎಂದು ಕೆಲವರು ಭಾವಿಸುತ್ತಾರೆ, ಅದಕ್ಕಾಗಿಯೇ ಅವರು ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದಾರೆ” ಎಂದು ಶರದ್ ಪವಾರ್ ಸೋಲಾಪುರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪ್ರಸ್ತುತ ಮಹಾರಾಷ್ಟ್ರ ಸರ್ಕಾರಲ್ಲಿ ಎನ್‌ಸಿಪಿಯ ಮೈತ್ರಿ ಪಕ್ಷವಾಗಿರುವ ಶಿವಸೇನೆ ರಾಮ ಮಂದಿರದ ನಿರ್ಮಾಣಕ್ಕೆ ಬೆಂಬಲ ನೀಡುತ್ತಿದೆ. ಈ ವಿಷಯವನ್ನು ರಾಜಕೀಯಗೊಳಿಸಬಾರದು ಎಂದು ಶಿವಸೇನೆ ಸಂಸದ ಅರವಿಂದ ಸಾವಂತ್ ಹೇಳಿದ್ದಾರೆ.

“ರಾಮ ದೇವರು ನಂಬಿಕೆಯ ವಿಷಯವಾಗಿದ್ದು, ಅದಕ್ಕೆ ರಾಜಕೀಯ ಬಣ್ಣವನ್ನು ನೀಡುವ ಅಗತ್ಯವಿಲ್ಲ. ಶಿವಸೇನೆ ರಾಮ ಮಂದಿರ ಚಳವಳಿಯ ಪ್ರಮುಖ ಬೆಳಕು. ಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗುವ ಮೊದಲು ಮತ್ತು ಅಧಿಕಾರ ವಹಿಸಿಕೊಂಡ ನಂತರವೂ ಅಯೋಧ್ಯೆಗೆ ಭೇಟಿ ನೀಡಿದ್ದರು” ಎಂದು ಅವರು ಹೇಳಿದ್ದಾರೆ.

ಬಜೆಪಿ ಮುಖಂಡ ಹಾಗೂ ಮಾಜಿ ಸಚಿವರಾದ ಸುಧೀರ್ ಮುಂಗಂತಿವಾರ್ ಮಂದಿರದ ನಿರ್ಮಾಣವು ನಂಬಿಕೆಯ ವಿಷಯವಾಗಿದೆ ಎಂದಿದ್ದಾರೆಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

“ರಾಮ ಮಂದಿರವನ್ನು ನಿರ್ಮಿಸುವುದರಿಂದ ಕೊರೊನಾ ಹೋಗುವುದಿಲ್ಲ ಎಂದು ಎಲ್ಲರಿಗೂ ತಿಳಿದಿದೆ. ಅವರು ತಮ್ಮ ರಾಜ್ಯದತ್ತ ಗಮನ ಹರಿಸಬೇಕು. ತಮ್ಮ ಮಂತ್ರಿಗಳಿಗೆ ದುಬಾರಿ ಕಾರುಗಳನ್ನು ಖರೀದಿಸುವ ಮೂಲಕ, ರೈತರಿಗೆ ಸಾಲ ಮನ್ನಾ ಮಾಡದೇ ಮಾಸ್ಕ್‌ಗಳನ್ನು ಕಾಳಸಂತೆಯಲ್ಲಿ ಮಾರಿದರೆ ಕೊರೊನಾ ಹೋಗುತ್ತಿದೆಯೆ?… ಈ ಅಗ್ಗದ ರಾಜಕಾರಣದ ಅಗತ್ಯವಿಲ್ಲ, ಮಂದಿರವು ಲಕ್ಷಾಂತರ ಹಿಂದೂಗಳ ನಂಬಿಕೆಯ ವಿಷಯವಾಗಿದೆ” ಎಂದು ಅವರು ಶರದ್ ಪವಾರ್ ಅವರಿಗೆ ತಿರುಗೇಟು ನೀಡಿದ್ದಾರೆ.

ಈ ಮಧ್ಯೆ, ಲಾಕ್ ಡೌನ್ ನಿಂದ ಉಂಟಾದ ಸಾಂಕ್ರಾಮಿಕ ಮತ್ತು ಆರ್ಥಿಕತೆಯ ಬಗ್ಗೆ ಹೆಚ್ಚಿನ ಗಮನ ನೀಡಬೇಕೆಂದು ಪವಾರ್ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ನಾವು ಯಾವಾಗಲೂ ಆದ್ಯತೆ ನೀಡಬೇಕಾದುದರ ಬಗ್ಗೆ ಯೋಚಿಸುತ್ತೇವೆ” ಎಂದು ಅವರು ಹೇಳಿದರು. “ಈಗ ಕೊರೊನಾ ವೈರಸ್ ಸೋಂಕಿತರಿಗೆ ಚೇತರಿಸಿಕೊಳ್ಳಲು ಸಹಾಯ ಮಾಡುವುದು ನಮ್ಮ ಆದ್ಯತೆಯಾಗಿದೆ. ವೈರಸ್ ಕಾರಣ ಲಾಕ್‌ಡೌನ್ ಅನ್ನು ಜಾರಿಗೊಳಿಸಬೇಕಾಯಿತು. ಆರ್ಥಿಕ ಬಿಕ್ಕಟ್ಟು, ಸಣ್ಣ ಉದ್ಯಮಗಳ ಮೇಲೆ ಅದು ಬೀರಿದ ಪರಿಣಾಮದ ಬಗ್ಗೆ ನಮಗೆ ಕಾಳಜಿ ಇದೆ. ಅದಕ್ಕಾಗಿಯೇ ಕೇಂದ್ರ ಸರ್ಕಾರ ವಿಶೇಷ ಗಮನ ಹರಿಸಬೇಕೆಂದು ನಾನು ವಿನಂತಿಸುತ್ತೇನೆ … ಆರ್ಥಿಕ ಬಿಕ್ಕಟ್ಟಿನಿಂದ ಹೊರಬರಲು ಜನರಿಗೆ ಹೇಗೆ ಸಹಾಯ ಮಾಡಬೇಕೆಂಬುದರ ಬಗ್ಗೆ ದೆಹಲಿಯಲ್ಲಿ ಚರ್ಚೆ ನಡೆಯಬೇಕು” ಎಂದು ಅವರು ಆಗ್ರಹಿಸಿದ್ದಾರೆ.


ಓದಿ: ಪೊಲೀಸರ ರಕ್ತದಲ್ಲಿ ತೊಯ್ದ ‘ಉತ್ತಮ’ಪ್ರದೇಶ : ಶಿವಸೇನೆ ಟೀಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. When case go against babri masjid, not only India but world wide lot of losses and desease appear , during the period of built up lot more crisis will come up . Let the govt hold the decision for the time being.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...