Homeಮುಖಪುಟನೆಟ್ಟಿಗರಿಂದ ಮೋದಿ ಮೇಲೆ ಟ್ರೋಲ್, ರಾಹುಲ್ ಪ್ರಿಯಾಂಕ ಮೇಲೆ ಲವ್

ನೆಟ್ಟಿಗರಿಂದ ಮೋದಿ ಮೇಲೆ ಟ್ರೋಲ್, ರಾಹುಲ್ ಪ್ರಿಯಾಂಕ ಮೇಲೆ ಲವ್

ಬಿಜೆಪಿ ಕಾರ್ಯಕರ್ತರಿಗೆ “ನಿಮ್ಮ ನಿಲುವು ನಿಮ್ಮದು, ನನ್ನ ನಿಲುವು ನನ್ನದು, ಆಲ್ ದಿ ಬೆಸ್ಟ್” ಎಂದ ಪ್ರಿಯಾಂಕ ಗಾಂಧಿ

- Advertisement -
- Advertisement -

ಕೊನೆಯ ಹಂತದ ಚುನಾವಣೆಗಳು ಮುಗಿಯುವ ವೇಳೆಗೆ ರಾಜಕೀಯ ಪಲ್ಲಟಗಳು ನಡೆಯುತ್ತಿವೆ. ಒಂದು ಕಡೆ ಮೋಡ-ರಾಡಾರ್, ಡಿಜಿಟಲ್ ಕ್ಯಾಮೆರ – ಮೇಲ್ ಅಂತ ಮೋದಿ ತೀವ್ರ ಟೀಕೆಗೆ, ಟ್ರೋಲ್‍ಗೆ ಒಳಗಾಗುತ್ತಿದ್ದರೆ ಇತ್ತ ರಾಹುಲ್, ಪ್ರಿಯಾಂಕ ಅಣ್ಣ-ತಂಗಿ ಇಬ್ಬರೂ ತಮ್ಮ ಧೈರ್ಯ ಮತ್ತು ಮಾನವೀಯ ನಡವಳಿಕೆಗಳಿಂದ ಪ್ರಶಂಸೆಯ ಸುರಿಮಳೆ ಪಡೆಯುತ್ತಿದ್ದಾರೆ.

ನವದೆಹಲಿಯಲ್ಲಿ ಪ್ರಿಯಾಂಕ ಗಾಂಧಿ ಕಾರಿನಲ್ಲಿ ತೆರಳುತ್ತಿದ್ದ ಮಾರ್ಗದಲ್ಲಿ ನಿಂತಿದ್ದ ಬಿಜೆಪಿ ಕಾರ್ಯಕರ್ತರು ಪ್ರಿಯಾಂಕ ಕಾರು ಬಂದಕೂಡಲೇ ಮೋದಿ-ಮೋದಿ, ಮತ್ತೊಮ್ಮೆ ಎಂದು ಜೋರಾಗಿ ಕೂಗಿದ್ದಾರೆ. ತಕ್ಷಣವೇ ಕಾರು ನಿಲ್ಲಿಸಲು ಹೇಳಿ, ಕಾರಿನಿಂದಿಳಿದ ಪ್ರಿಯಾಂಕ ಗಾಂಧಿ ಅವರತ್ತ ಹಸ್ತಲಾಘವ ಚಾಚುತ್ತಾರೆ. “ನಿಮ್ಮ ನಿಲುವು ನಿಮ್ಮದು, ನನ್ನ ನಿಲುವು ನನ್ನದು, ಆಲ್ ದಿ ಬೆಸ್ಟ್” ಎಂದು ಪ್ರಿಯಾಂಕ ಗಾಂಧಿ ಹೇಳಿದೊಡನೆಯೇ ಅವರೆಲ್ಲರೂ ಖುಷಿಯಿಂದ ಹಸ್ತಲಾಘವ ಮಾಡಿದ್ದಲ್ಲದೇ ಆಲ್ ದಿ ಬೆಸ್ಟ ಮೇಡಂ, ಬೆಸ್ಟ್ ಆಫ್ ಲಕ್ ಎಂದು ಶುಭ ಹಾರೈಸಿದ್ದಾರೆ. ಅಷ್ಟೆ ಅಲ್ಲದೇ ಆ ಕಾರ್ಯಕರ್ತುರು ಪ್ರಿಯಾಂಕರ ಫೋಟೊ ಜೊತೆಗೆ ಸೆಲ್ಫಿ ಸಹ ಕ್ಲಿಕ್ಕಿಸಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪ್ರಿಯಾಂಕಾ ಗಾಂಧಿಯವರ ಧೈರ್ಯ ಮತ್ತು ಹೃದಯವೈಶಾಲ್ಯತೆಯನ್ನು ನೆಟ್ಟಿಗರು ಕೊಂಡಾಡಿದ್ದಾರೆ. ಇದು ಪ್ರಿಯಾಂಕರವರ ‘ಗಾಂಧಿಗಿರಿ’ ಎಂದು ಬಿರುದ್ದು ನೀಡಿದ್ದಾರೆ.

ವಿಡಿಯೋ ನೋಡಿ

ಇನ್ನೊಂದು ಕಡೆ ಮೋದಿಯ ಸ್ಕ್ರಿಪ್ಟೆಡ್ ಪ್ರಶ್ನೆಗಳ ಸಂದರ್ಶನದ ಕಾರಣಕ್ಕಾಗಿ, ಮೋಡ-ರಾಡಾರ್, ಡಿಜಿಟಲ್ ಕ್ಯಾಮೆರ – ಮೇಲ್ ವಿಷಯದ ಕಾರಣಕ್ಕಾಗಿ ಭಾರೀ ಸದ್ದು ಮಾಡಿದ್ದ ನ್ಯೂಸ್ ನೇಷನ್ ಚಾನಲ್ ಇಂದು ಪಂಜಾಬ್‍ನ ಬಹಿರಂಗ ಮೈದಾನದಲ್ಲಿ ಸ್ಕ್ರಿಪ್ಟೆಡ್ ಪ್ರಶ್ನೆಗಳಿಲ್ಲದೆ ರಾಹುಲ್ ಗಾಂಧಿಯವರ ಸಂದರ್ಶನ ಮಾಡಿದೆ.

ಈ ಐದು ವರ್ಷದ ಮೋದಿಜಿ ಆಡಳಿತದಲ್ಲಿ ಒಬ್ಬ ವ್ಯಕ್ತಿಯ ಸರ್ಕಾರವಾಗಿದೆ. ಅವರು ಯಾರ ಮಾತನ್ನು ಕೇಳಿಲ್ಲ. ನೋಟು ನಿಷೇಧ ಮತ್ತು ಜಿಎಸ್‍ಟಿ ಜಾರಿ ಮಾಡುವಾಗ ಮೋದಿ ಯಾರ ಸಲಹೆಯನ್ನು ಪಡೆಯದೇ ಏಕಾಏಕಿ ನಿರ್ಧಾರ ಮಾಡಿದರು. ಭಾರತದಲ್ಲಿ ಆರ್ಥಿಕ ಇಲಾಖೆ ಇದೆ, ಅರ್ಥ ಸಚಿವರಿದ್ದಾರೆ, ಸಮರ್ಥ ಅಧಿಕಾರಿಗಳಿದ್ದಾರೆ, ಆರ್‍ಬಿಐ ಗವರ್ನರ್ ಇದ್ದಾರೆ, ಯಾರನ್ನು ಕೇಳದೆ ಹೇಳದೆ ಜಾರಿ ಮಾಡಿದುದು ಸರಿ ಅಲ್ಲ, ಭಾರತದ ಜನರ ದನಿಗೆ ಅನುಗುಣವಾಗಿ ಸರ್ಕಾರ ನಡೆಸಬೇಕೆ ಹೊರತು ಒಬ್ಬ ವ್ಯಕ್ತಿಯ ಮನಸ್ಸಿಗೆ ಬಂದ ಹಾಗೆ ಅಲ್ಲ ಎಂದು ರಾಹುಲ್ ಹೇಳಿದರು.

ಅದಕ್ಕೆ ಸಂದರ್ಶಕ, ನೀವು ನೋಟ್ ಬ್ಯಾನ್ ಮತ್ತು ಜಿಎಸ್‍ಟಿ ವಿರುದ್ಧ ಮಾತಾಡುತ್ತೀರಿ ಅವನ್ನು ಜಾರಿಗೆ ತಂದ ನಂತರವೂ ಉತ್ತರ ಪ್ರದೇಶ ಮತ್ತು ಗುಜರಾತ್‍ನಲ್ಲಿ ಬಿಜೆಪಿ ಗೆದ್ದಿದೆ ಎಂದು ಮೋದಿ ನಮ್ಮ ಸಂದರ್ಶನದಲ್ಲಿ ಉತ್ತರಿಸಿದ್ದರಲ್ಲ ಎಂದು ಕೇಳಿದರು. ಆಗ “ಮೋದಿಜಿಯವರು ಸ್ಕ್ರಿಪ್ಟೆಡ್ ಫೈಲ್‍ನಲ್ಲಿ ಈ ಉತ್ತರವನ್ನು ಬರೆದುಕೊಂಡು ಬಂದಿದ್ದರ?” ಎಂದು ರಾಹುಲ್ ವ್ಯಂಗ್ಯವಾಡಿದ್ದಾರೆ. ಅದಕ್ಕೆ ಸಂದರ್ಶಕ ಇಲ್ಲ ಮೋದಿಯವರು ಕೇವಲ ಕವನ ಮಾತ್ರ ಫೈಲ್‍ನಲ್ಲಿ ಬರೆದುಕೊಂಡು ಬಂದಿದ್ದರು ಎಂದಾಗ, ಮೋದಿಯವರ ಫೈಲ್‍ನಲ್ಲಿ ಪ್ರಶ್ನೆ, ಉತ್ತರ ಎರಡು ಇರುವುದನ್ನು ಇಂಟರ್‍ನೆಟ್‍ನಲ್ಲಿ ಎಲ್ಲರೂ ನೋಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಇದೇ ಸಂದರ್ಶನದಲ್ಲಿ ನಾವು ಭಾರತವನ್ನು ಪ್ರೀತಿ, ಸಹೋದರತೆ, ನ್ಯಾಯ, ನಾವೆಲ್ಲ ಒಂದು ಎನ್ನುವ ಮನೋಭಾವದ ಆಧಾರದಲ್ಲಿ ಕಟ್ಟಲು ಬಯಸಿದ್ದೇವೆ ಎಂದು ರಾಹುಲ್ ಹೇಳಿದ್ದಾರೆ.

ಸಂದರ್ಶನ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...