Homeಮುಖಪುಟನೆಟ್ಟಿಗರಿಂದ ಮೋದಿ ಮೇಲೆ ಟ್ರೋಲ್, ರಾಹುಲ್ ಪ್ರಿಯಾಂಕ ಮೇಲೆ ಲವ್

ನೆಟ್ಟಿಗರಿಂದ ಮೋದಿ ಮೇಲೆ ಟ್ರೋಲ್, ರಾಹುಲ್ ಪ್ರಿಯಾಂಕ ಮೇಲೆ ಲವ್

ಬಿಜೆಪಿ ಕಾರ್ಯಕರ್ತರಿಗೆ “ನಿಮ್ಮ ನಿಲುವು ನಿಮ್ಮದು, ನನ್ನ ನಿಲುವು ನನ್ನದು, ಆಲ್ ದಿ ಬೆಸ್ಟ್” ಎಂದ ಪ್ರಿಯಾಂಕ ಗಾಂಧಿ

- Advertisement -
- Advertisement -

ಕೊನೆಯ ಹಂತದ ಚುನಾವಣೆಗಳು ಮುಗಿಯುವ ವೇಳೆಗೆ ರಾಜಕೀಯ ಪಲ್ಲಟಗಳು ನಡೆಯುತ್ತಿವೆ. ಒಂದು ಕಡೆ ಮೋಡ-ರಾಡಾರ್, ಡಿಜಿಟಲ್ ಕ್ಯಾಮೆರ – ಮೇಲ್ ಅಂತ ಮೋದಿ ತೀವ್ರ ಟೀಕೆಗೆ, ಟ್ರೋಲ್‍ಗೆ ಒಳಗಾಗುತ್ತಿದ್ದರೆ ಇತ್ತ ರಾಹುಲ್, ಪ್ರಿಯಾಂಕ ಅಣ್ಣ-ತಂಗಿ ಇಬ್ಬರೂ ತಮ್ಮ ಧೈರ್ಯ ಮತ್ತು ಮಾನವೀಯ ನಡವಳಿಕೆಗಳಿಂದ ಪ್ರಶಂಸೆಯ ಸುರಿಮಳೆ ಪಡೆಯುತ್ತಿದ್ದಾರೆ.

ನವದೆಹಲಿಯಲ್ಲಿ ಪ್ರಿಯಾಂಕ ಗಾಂಧಿ ಕಾರಿನಲ್ಲಿ ತೆರಳುತ್ತಿದ್ದ ಮಾರ್ಗದಲ್ಲಿ ನಿಂತಿದ್ದ ಬಿಜೆಪಿ ಕಾರ್ಯಕರ್ತರು ಪ್ರಿಯಾಂಕ ಕಾರು ಬಂದಕೂಡಲೇ ಮೋದಿ-ಮೋದಿ, ಮತ್ತೊಮ್ಮೆ ಎಂದು ಜೋರಾಗಿ ಕೂಗಿದ್ದಾರೆ. ತಕ್ಷಣವೇ ಕಾರು ನಿಲ್ಲಿಸಲು ಹೇಳಿ, ಕಾರಿನಿಂದಿಳಿದ ಪ್ರಿಯಾಂಕ ಗಾಂಧಿ ಅವರತ್ತ ಹಸ್ತಲಾಘವ ಚಾಚುತ್ತಾರೆ. “ನಿಮ್ಮ ನಿಲುವು ನಿಮ್ಮದು, ನನ್ನ ನಿಲುವು ನನ್ನದು, ಆಲ್ ದಿ ಬೆಸ್ಟ್” ಎಂದು ಪ್ರಿಯಾಂಕ ಗಾಂಧಿ ಹೇಳಿದೊಡನೆಯೇ ಅವರೆಲ್ಲರೂ ಖುಷಿಯಿಂದ ಹಸ್ತಲಾಘವ ಮಾಡಿದ್ದಲ್ಲದೇ ಆಲ್ ದಿ ಬೆಸ್ಟ ಮೇಡಂ, ಬೆಸ್ಟ್ ಆಫ್ ಲಕ್ ಎಂದು ಶುಭ ಹಾರೈಸಿದ್ದಾರೆ. ಅಷ್ಟೆ ಅಲ್ಲದೇ ಆ ಕಾರ್ಯಕರ್ತುರು ಪ್ರಿಯಾಂಕರ ಫೋಟೊ ಜೊತೆಗೆ ಸೆಲ್ಫಿ ಸಹ ಕ್ಲಿಕ್ಕಿಸಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪ್ರಿಯಾಂಕಾ ಗಾಂಧಿಯವರ ಧೈರ್ಯ ಮತ್ತು ಹೃದಯವೈಶಾಲ್ಯತೆಯನ್ನು ನೆಟ್ಟಿಗರು ಕೊಂಡಾಡಿದ್ದಾರೆ. ಇದು ಪ್ರಿಯಾಂಕರವರ ‘ಗಾಂಧಿಗಿರಿ’ ಎಂದು ಬಿರುದ್ದು ನೀಡಿದ್ದಾರೆ.

ವಿಡಿಯೋ ನೋಡಿ

ಇನ್ನೊಂದು ಕಡೆ ಮೋದಿಯ ಸ್ಕ್ರಿಪ್ಟೆಡ್ ಪ್ರಶ್ನೆಗಳ ಸಂದರ್ಶನದ ಕಾರಣಕ್ಕಾಗಿ, ಮೋಡ-ರಾಡಾರ್, ಡಿಜಿಟಲ್ ಕ್ಯಾಮೆರ – ಮೇಲ್ ವಿಷಯದ ಕಾರಣಕ್ಕಾಗಿ ಭಾರೀ ಸದ್ದು ಮಾಡಿದ್ದ ನ್ಯೂಸ್ ನೇಷನ್ ಚಾನಲ್ ಇಂದು ಪಂಜಾಬ್‍ನ ಬಹಿರಂಗ ಮೈದಾನದಲ್ಲಿ ಸ್ಕ್ರಿಪ್ಟೆಡ್ ಪ್ರಶ್ನೆಗಳಿಲ್ಲದೆ ರಾಹುಲ್ ಗಾಂಧಿಯವರ ಸಂದರ್ಶನ ಮಾಡಿದೆ.

ಈ ಐದು ವರ್ಷದ ಮೋದಿಜಿ ಆಡಳಿತದಲ್ಲಿ ಒಬ್ಬ ವ್ಯಕ್ತಿಯ ಸರ್ಕಾರವಾಗಿದೆ. ಅವರು ಯಾರ ಮಾತನ್ನು ಕೇಳಿಲ್ಲ. ನೋಟು ನಿಷೇಧ ಮತ್ತು ಜಿಎಸ್‍ಟಿ ಜಾರಿ ಮಾಡುವಾಗ ಮೋದಿ ಯಾರ ಸಲಹೆಯನ್ನು ಪಡೆಯದೇ ಏಕಾಏಕಿ ನಿರ್ಧಾರ ಮಾಡಿದರು. ಭಾರತದಲ್ಲಿ ಆರ್ಥಿಕ ಇಲಾಖೆ ಇದೆ, ಅರ್ಥ ಸಚಿವರಿದ್ದಾರೆ, ಸಮರ್ಥ ಅಧಿಕಾರಿಗಳಿದ್ದಾರೆ, ಆರ್‍ಬಿಐ ಗವರ್ನರ್ ಇದ್ದಾರೆ, ಯಾರನ್ನು ಕೇಳದೆ ಹೇಳದೆ ಜಾರಿ ಮಾಡಿದುದು ಸರಿ ಅಲ್ಲ, ಭಾರತದ ಜನರ ದನಿಗೆ ಅನುಗುಣವಾಗಿ ಸರ್ಕಾರ ನಡೆಸಬೇಕೆ ಹೊರತು ಒಬ್ಬ ವ್ಯಕ್ತಿಯ ಮನಸ್ಸಿಗೆ ಬಂದ ಹಾಗೆ ಅಲ್ಲ ಎಂದು ರಾಹುಲ್ ಹೇಳಿದರು.

ಅದಕ್ಕೆ ಸಂದರ್ಶಕ, ನೀವು ನೋಟ್ ಬ್ಯಾನ್ ಮತ್ತು ಜಿಎಸ್‍ಟಿ ವಿರುದ್ಧ ಮಾತಾಡುತ್ತೀರಿ ಅವನ್ನು ಜಾರಿಗೆ ತಂದ ನಂತರವೂ ಉತ್ತರ ಪ್ರದೇಶ ಮತ್ತು ಗುಜರಾತ್‍ನಲ್ಲಿ ಬಿಜೆಪಿ ಗೆದ್ದಿದೆ ಎಂದು ಮೋದಿ ನಮ್ಮ ಸಂದರ್ಶನದಲ್ಲಿ ಉತ್ತರಿಸಿದ್ದರಲ್ಲ ಎಂದು ಕೇಳಿದರು. ಆಗ “ಮೋದಿಜಿಯವರು ಸ್ಕ್ರಿಪ್ಟೆಡ್ ಫೈಲ್‍ನಲ್ಲಿ ಈ ಉತ್ತರವನ್ನು ಬರೆದುಕೊಂಡು ಬಂದಿದ್ದರ?” ಎಂದು ರಾಹುಲ್ ವ್ಯಂಗ್ಯವಾಡಿದ್ದಾರೆ. ಅದಕ್ಕೆ ಸಂದರ್ಶಕ ಇಲ್ಲ ಮೋದಿಯವರು ಕೇವಲ ಕವನ ಮಾತ್ರ ಫೈಲ್‍ನಲ್ಲಿ ಬರೆದುಕೊಂಡು ಬಂದಿದ್ದರು ಎಂದಾಗ, ಮೋದಿಯವರ ಫೈಲ್‍ನಲ್ಲಿ ಪ್ರಶ್ನೆ, ಉತ್ತರ ಎರಡು ಇರುವುದನ್ನು ಇಂಟರ್‍ನೆಟ್‍ನಲ್ಲಿ ಎಲ್ಲರೂ ನೋಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಇದೇ ಸಂದರ್ಶನದಲ್ಲಿ ನಾವು ಭಾರತವನ್ನು ಪ್ರೀತಿ, ಸಹೋದರತೆ, ನ್ಯಾಯ, ನಾವೆಲ್ಲ ಒಂದು ಎನ್ನುವ ಮನೋಭಾವದ ಆಧಾರದಲ್ಲಿ ಕಟ್ಟಲು ಬಯಸಿದ್ದೇವೆ ಎಂದು ರಾಹುಲ್ ಹೇಳಿದ್ದಾರೆ.

ಸಂದರ್ಶನ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...