Homeಮುಖಪುಟನೆಟ್ಟಿಗರಿಂದ ಮೋದಿ ಮೇಲೆ ಟ್ರೋಲ್, ರಾಹುಲ್ ಪ್ರಿಯಾಂಕ ಮೇಲೆ ಲವ್

ನೆಟ್ಟಿಗರಿಂದ ಮೋದಿ ಮೇಲೆ ಟ್ರೋಲ್, ರಾಹುಲ್ ಪ್ರಿಯಾಂಕ ಮೇಲೆ ಲವ್

ಬಿಜೆಪಿ ಕಾರ್ಯಕರ್ತರಿಗೆ “ನಿಮ್ಮ ನಿಲುವು ನಿಮ್ಮದು, ನನ್ನ ನಿಲುವು ನನ್ನದು, ಆಲ್ ದಿ ಬೆಸ್ಟ್” ಎಂದ ಪ್ರಿಯಾಂಕ ಗಾಂಧಿ

- Advertisement -
- Advertisement -

ಕೊನೆಯ ಹಂತದ ಚುನಾವಣೆಗಳು ಮುಗಿಯುವ ವೇಳೆಗೆ ರಾಜಕೀಯ ಪಲ್ಲಟಗಳು ನಡೆಯುತ್ತಿವೆ. ಒಂದು ಕಡೆ ಮೋಡ-ರಾಡಾರ್, ಡಿಜಿಟಲ್ ಕ್ಯಾಮೆರ – ಮೇಲ್ ಅಂತ ಮೋದಿ ತೀವ್ರ ಟೀಕೆಗೆ, ಟ್ರೋಲ್‍ಗೆ ಒಳಗಾಗುತ್ತಿದ್ದರೆ ಇತ್ತ ರಾಹುಲ್, ಪ್ರಿಯಾಂಕ ಅಣ್ಣ-ತಂಗಿ ಇಬ್ಬರೂ ತಮ್ಮ ಧೈರ್ಯ ಮತ್ತು ಮಾನವೀಯ ನಡವಳಿಕೆಗಳಿಂದ ಪ್ರಶಂಸೆಯ ಸುರಿಮಳೆ ಪಡೆಯುತ್ತಿದ್ದಾರೆ.

ನವದೆಹಲಿಯಲ್ಲಿ ಪ್ರಿಯಾಂಕ ಗಾಂಧಿ ಕಾರಿನಲ್ಲಿ ತೆರಳುತ್ತಿದ್ದ ಮಾರ್ಗದಲ್ಲಿ ನಿಂತಿದ್ದ ಬಿಜೆಪಿ ಕಾರ್ಯಕರ್ತರು ಪ್ರಿಯಾಂಕ ಕಾರು ಬಂದಕೂಡಲೇ ಮೋದಿ-ಮೋದಿ, ಮತ್ತೊಮ್ಮೆ ಎಂದು ಜೋರಾಗಿ ಕೂಗಿದ್ದಾರೆ. ತಕ್ಷಣವೇ ಕಾರು ನಿಲ್ಲಿಸಲು ಹೇಳಿ, ಕಾರಿನಿಂದಿಳಿದ ಪ್ರಿಯಾಂಕ ಗಾಂಧಿ ಅವರತ್ತ ಹಸ್ತಲಾಘವ ಚಾಚುತ್ತಾರೆ. “ನಿಮ್ಮ ನಿಲುವು ನಿಮ್ಮದು, ನನ್ನ ನಿಲುವು ನನ್ನದು, ಆಲ್ ದಿ ಬೆಸ್ಟ್” ಎಂದು ಪ್ರಿಯಾಂಕ ಗಾಂಧಿ ಹೇಳಿದೊಡನೆಯೇ ಅವರೆಲ್ಲರೂ ಖುಷಿಯಿಂದ ಹಸ್ತಲಾಘವ ಮಾಡಿದ್ದಲ್ಲದೇ ಆಲ್ ದಿ ಬೆಸ್ಟ ಮೇಡಂ, ಬೆಸ್ಟ್ ಆಫ್ ಲಕ್ ಎಂದು ಶುಭ ಹಾರೈಸಿದ್ದಾರೆ. ಅಷ್ಟೆ ಅಲ್ಲದೇ ಆ ಕಾರ್ಯಕರ್ತುರು ಪ್ರಿಯಾಂಕರ ಫೋಟೊ ಜೊತೆಗೆ ಸೆಲ್ಫಿ ಸಹ ಕ್ಲಿಕ್ಕಿಸಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪ್ರಿಯಾಂಕಾ ಗಾಂಧಿಯವರ ಧೈರ್ಯ ಮತ್ತು ಹೃದಯವೈಶಾಲ್ಯತೆಯನ್ನು ನೆಟ್ಟಿಗರು ಕೊಂಡಾಡಿದ್ದಾರೆ. ಇದು ಪ್ರಿಯಾಂಕರವರ ‘ಗಾಂಧಿಗಿರಿ’ ಎಂದು ಬಿರುದ್ದು ನೀಡಿದ್ದಾರೆ.

ವಿಡಿಯೋ ನೋಡಿ

ಇನ್ನೊಂದು ಕಡೆ ಮೋದಿಯ ಸ್ಕ್ರಿಪ್ಟೆಡ್ ಪ್ರಶ್ನೆಗಳ ಸಂದರ್ಶನದ ಕಾರಣಕ್ಕಾಗಿ, ಮೋಡ-ರಾಡಾರ್, ಡಿಜಿಟಲ್ ಕ್ಯಾಮೆರ – ಮೇಲ್ ವಿಷಯದ ಕಾರಣಕ್ಕಾಗಿ ಭಾರೀ ಸದ್ದು ಮಾಡಿದ್ದ ನ್ಯೂಸ್ ನೇಷನ್ ಚಾನಲ್ ಇಂದು ಪಂಜಾಬ್‍ನ ಬಹಿರಂಗ ಮೈದಾನದಲ್ಲಿ ಸ್ಕ್ರಿಪ್ಟೆಡ್ ಪ್ರಶ್ನೆಗಳಿಲ್ಲದೆ ರಾಹುಲ್ ಗಾಂಧಿಯವರ ಸಂದರ್ಶನ ಮಾಡಿದೆ.

ಈ ಐದು ವರ್ಷದ ಮೋದಿಜಿ ಆಡಳಿತದಲ್ಲಿ ಒಬ್ಬ ವ್ಯಕ್ತಿಯ ಸರ್ಕಾರವಾಗಿದೆ. ಅವರು ಯಾರ ಮಾತನ್ನು ಕೇಳಿಲ್ಲ. ನೋಟು ನಿಷೇಧ ಮತ್ತು ಜಿಎಸ್‍ಟಿ ಜಾರಿ ಮಾಡುವಾಗ ಮೋದಿ ಯಾರ ಸಲಹೆಯನ್ನು ಪಡೆಯದೇ ಏಕಾಏಕಿ ನಿರ್ಧಾರ ಮಾಡಿದರು. ಭಾರತದಲ್ಲಿ ಆರ್ಥಿಕ ಇಲಾಖೆ ಇದೆ, ಅರ್ಥ ಸಚಿವರಿದ್ದಾರೆ, ಸಮರ್ಥ ಅಧಿಕಾರಿಗಳಿದ್ದಾರೆ, ಆರ್‍ಬಿಐ ಗವರ್ನರ್ ಇದ್ದಾರೆ, ಯಾರನ್ನು ಕೇಳದೆ ಹೇಳದೆ ಜಾರಿ ಮಾಡಿದುದು ಸರಿ ಅಲ್ಲ, ಭಾರತದ ಜನರ ದನಿಗೆ ಅನುಗುಣವಾಗಿ ಸರ್ಕಾರ ನಡೆಸಬೇಕೆ ಹೊರತು ಒಬ್ಬ ವ್ಯಕ್ತಿಯ ಮನಸ್ಸಿಗೆ ಬಂದ ಹಾಗೆ ಅಲ್ಲ ಎಂದು ರಾಹುಲ್ ಹೇಳಿದರು.

ಅದಕ್ಕೆ ಸಂದರ್ಶಕ, ನೀವು ನೋಟ್ ಬ್ಯಾನ್ ಮತ್ತು ಜಿಎಸ್‍ಟಿ ವಿರುದ್ಧ ಮಾತಾಡುತ್ತೀರಿ ಅವನ್ನು ಜಾರಿಗೆ ತಂದ ನಂತರವೂ ಉತ್ತರ ಪ್ರದೇಶ ಮತ್ತು ಗುಜರಾತ್‍ನಲ್ಲಿ ಬಿಜೆಪಿ ಗೆದ್ದಿದೆ ಎಂದು ಮೋದಿ ನಮ್ಮ ಸಂದರ್ಶನದಲ್ಲಿ ಉತ್ತರಿಸಿದ್ದರಲ್ಲ ಎಂದು ಕೇಳಿದರು. ಆಗ “ಮೋದಿಜಿಯವರು ಸ್ಕ್ರಿಪ್ಟೆಡ್ ಫೈಲ್‍ನಲ್ಲಿ ಈ ಉತ್ತರವನ್ನು ಬರೆದುಕೊಂಡು ಬಂದಿದ್ದರ?” ಎಂದು ರಾಹುಲ್ ವ್ಯಂಗ್ಯವಾಡಿದ್ದಾರೆ. ಅದಕ್ಕೆ ಸಂದರ್ಶಕ ಇಲ್ಲ ಮೋದಿಯವರು ಕೇವಲ ಕವನ ಮಾತ್ರ ಫೈಲ್‍ನಲ್ಲಿ ಬರೆದುಕೊಂಡು ಬಂದಿದ್ದರು ಎಂದಾಗ, ಮೋದಿಯವರ ಫೈಲ್‍ನಲ್ಲಿ ಪ್ರಶ್ನೆ, ಉತ್ತರ ಎರಡು ಇರುವುದನ್ನು ಇಂಟರ್‍ನೆಟ್‍ನಲ್ಲಿ ಎಲ್ಲರೂ ನೋಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಇದೇ ಸಂದರ್ಶನದಲ್ಲಿ ನಾವು ಭಾರತವನ್ನು ಪ್ರೀತಿ, ಸಹೋದರತೆ, ನ್ಯಾಯ, ನಾವೆಲ್ಲ ಒಂದು ಎನ್ನುವ ಮನೋಭಾವದ ಆಧಾರದಲ್ಲಿ ಕಟ್ಟಲು ಬಯಸಿದ್ದೇವೆ ಎಂದು ರಾಹುಲ್ ಹೇಳಿದ್ದಾರೆ.

ಸಂದರ್ಶನ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಸಂಘರ್ಷ| ಇರಾನ್ ಮೇಲಿನ ದಾಳಿಗೆ ಅಮೆರಿಕಾ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ಹೇಳಿಕೆ ವೈರಲ್: ಭಾರತದ ಪ್ರತಿಕ್ರಿಯೆ ಏನು?

ಇರಾನ್ ಮೇಲೆ ನೌಕಾ ದಾಳಿ ನಡೆಸಲು ಅಮೆರಿಕ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ವೈರಲ್ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ಅಲ್ಲದೇ ಈ ಆರೋಪಗಳನ್ನು "ನಕಲಿ"  ಮತ್ತು “ಆಧಾರರಹಿತ” ಎಂದು ಕರೆದಿದೆ. ಬುಧವಾರ ವಿದೇಶಾಂಗ...

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಬಾಬಾ ಬುಡನ್‌...

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...