Homeಮುಖಪುಟನೆಟ್ಟಿಗರಿಂದ ಮೋದಿ ಮೇಲೆ ಟ್ರೋಲ್, ರಾಹುಲ್ ಪ್ರಿಯಾಂಕ ಮೇಲೆ ಲವ್

ನೆಟ್ಟಿಗರಿಂದ ಮೋದಿ ಮೇಲೆ ಟ್ರೋಲ್, ರಾಹುಲ್ ಪ್ರಿಯಾಂಕ ಮೇಲೆ ಲವ್

ಬಿಜೆಪಿ ಕಾರ್ಯಕರ್ತರಿಗೆ “ನಿಮ್ಮ ನಿಲುವು ನಿಮ್ಮದು, ನನ್ನ ನಿಲುವು ನನ್ನದು, ಆಲ್ ದಿ ಬೆಸ್ಟ್” ಎಂದ ಪ್ರಿಯಾಂಕ ಗಾಂಧಿ

- Advertisement -
- Advertisement -

ಕೊನೆಯ ಹಂತದ ಚುನಾವಣೆಗಳು ಮುಗಿಯುವ ವೇಳೆಗೆ ರಾಜಕೀಯ ಪಲ್ಲಟಗಳು ನಡೆಯುತ್ತಿವೆ. ಒಂದು ಕಡೆ ಮೋಡ-ರಾಡಾರ್, ಡಿಜಿಟಲ್ ಕ್ಯಾಮೆರ – ಮೇಲ್ ಅಂತ ಮೋದಿ ತೀವ್ರ ಟೀಕೆಗೆ, ಟ್ರೋಲ್‍ಗೆ ಒಳಗಾಗುತ್ತಿದ್ದರೆ ಇತ್ತ ರಾಹುಲ್, ಪ್ರಿಯಾಂಕ ಅಣ್ಣ-ತಂಗಿ ಇಬ್ಬರೂ ತಮ್ಮ ಧೈರ್ಯ ಮತ್ತು ಮಾನವೀಯ ನಡವಳಿಕೆಗಳಿಂದ ಪ್ರಶಂಸೆಯ ಸುರಿಮಳೆ ಪಡೆಯುತ್ತಿದ್ದಾರೆ.

ನವದೆಹಲಿಯಲ್ಲಿ ಪ್ರಿಯಾಂಕ ಗಾಂಧಿ ಕಾರಿನಲ್ಲಿ ತೆರಳುತ್ತಿದ್ದ ಮಾರ್ಗದಲ್ಲಿ ನಿಂತಿದ್ದ ಬಿಜೆಪಿ ಕಾರ್ಯಕರ್ತರು ಪ್ರಿಯಾಂಕ ಕಾರು ಬಂದಕೂಡಲೇ ಮೋದಿ-ಮೋದಿ, ಮತ್ತೊಮ್ಮೆ ಎಂದು ಜೋರಾಗಿ ಕೂಗಿದ್ದಾರೆ. ತಕ್ಷಣವೇ ಕಾರು ನಿಲ್ಲಿಸಲು ಹೇಳಿ, ಕಾರಿನಿಂದಿಳಿದ ಪ್ರಿಯಾಂಕ ಗಾಂಧಿ ಅವರತ್ತ ಹಸ್ತಲಾಘವ ಚಾಚುತ್ತಾರೆ. “ನಿಮ್ಮ ನಿಲುವು ನಿಮ್ಮದು, ನನ್ನ ನಿಲುವು ನನ್ನದು, ಆಲ್ ದಿ ಬೆಸ್ಟ್” ಎಂದು ಪ್ರಿಯಾಂಕ ಗಾಂಧಿ ಹೇಳಿದೊಡನೆಯೇ ಅವರೆಲ್ಲರೂ ಖುಷಿಯಿಂದ ಹಸ್ತಲಾಘವ ಮಾಡಿದ್ದಲ್ಲದೇ ಆಲ್ ದಿ ಬೆಸ್ಟ ಮೇಡಂ, ಬೆಸ್ಟ್ ಆಫ್ ಲಕ್ ಎಂದು ಶುಭ ಹಾರೈಸಿದ್ದಾರೆ. ಅಷ್ಟೆ ಅಲ್ಲದೇ ಆ ಕಾರ್ಯಕರ್ತುರು ಪ್ರಿಯಾಂಕರ ಫೋಟೊ ಜೊತೆಗೆ ಸೆಲ್ಫಿ ಸಹ ಕ್ಲಿಕ್ಕಿಸಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪ್ರಿಯಾಂಕಾ ಗಾಂಧಿಯವರ ಧೈರ್ಯ ಮತ್ತು ಹೃದಯವೈಶಾಲ್ಯತೆಯನ್ನು ನೆಟ್ಟಿಗರು ಕೊಂಡಾಡಿದ್ದಾರೆ. ಇದು ಪ್ರಿಯಾಂಕರವರ ‘ಗಾಂಧಿಗಿರಿ’ ಎಂದು ಬಿರುದ್ದು ನೀಡಿದ್ದಾರೆ.

ವಿಡಿಯೋ ನೋಡಿ

ಇನ್ನೊಂದು ಕಡೆ ಮೋದಿಯ ಸ್ಕ್ರಿಪ್ಟೆಡ್ ಪ್ರಶ್ನೆಗಳ ಸಂದರ್ಶನದ ಕಾರಣಕ್ಕಾಗಿ, ಮೋಡ-ರಾಡಾರ್, ಡಿಜಿಟಲ್ ಕ್ಯಾಮೆರ – ಮೇಲ್ ವಿಷಯದ ಕಾರಣಕ್ಕಾಗಿ ಭಾರೀ ಸದ್ದು ಮಾಡಿದ್ದ ನ್ಯೂಸ್ ನೇಷನ್ ಚಾನಲ್ ಇಂದು ಪಂಜಾಬ್‍ನ ಬಹಿರಂಗ ಮೈದಾನದಲ್ಲಿ ಸ್ಕ್ರಿಪ್ಟೆಡ್ ಪ್ರಶ್ನೆಗಳಿಲ್ಲದೆ ರಾಹುಲ್ ಗಾಂಧಿಯವರ ಸಂದರ್ಶನ ಮಾಡಿದೆ.

ಈ ಐದು ವರ್ಷದ ಮೋದಿಜಿ ಆಡಳಿತದಲ್ಲಿ ಒಬ್ಬ ವ್ಯಕ್ತಿಯ ಸರ್ಕಾರವಾಗಿದೆ. ಅವರು ಯಾರ ಮಾತನ್ನು ಕೇಳಿಲ್ಲ. ನೋಟು ನಿಷೇಧ ಮತ್ತು ಜಿಎಸ್‍ಟಿ ಜಾರಿ ಮಾಡುವಾಗ ಮೋದಿ ಯಾರ ಸಲಹೆಯನ್ನು ಪಡೆಯದೇ ಏಕಾಏಕಿ ನಿರ್ಧಾರ ಮಾಡಿದರು. ಭಾರತದಲ್ಲಿ ಆರ್ಥಿಕ ಇಲಾಖೆ ಇದೆ, ಅರ್ಥ ಸಚಿವರಿದ್ದಾರೆ, ಸಮರ್ಥ ಅಧಿಕಾರಿಗಳಿದ್ದಾರೆ, ಆರ್‍ಬಿಐ ಗವರ್ನರ್ ಇದ್ದಾರೆ, ಯಾರನ್ನು ಕೇಳದೆ ಹೇಳದೆ ಜಾರಿ ಮಾಡಿದುದು ಸರಿ ಅಲ್ಲ, ಭಾರತದ ಜನರ ದನಿಗೆ ಅನುಗುಣವಾಗಿ ಸರ್ಕಾರ ನಡೆಸಬೇಕೆ ಹೊರತು ಒಬ್ಬ ವ್ಯಕ್ತಿಯ ಮನಸ್ಸಿಗೆ ಬಂದ ಹಾಗೆ ಅಲ್ಲ ಎಂದು ರಾಹುಲ್ ಹೇಳಿದರು.

ಅದಕ್ಕೆ ಸಂದರ್ಶಕ, ನೀವು ನೋಟ್ ಬ್ಯಾನ್ ಮತ್ತು ಜಿಎಸ್‍ಟಿ ವಿರುದ್ಧ ಮಾತಾಡುತ್ತೀರಿ ಅವನ್ನು ಜಾರಿಗೆ ತಂದ ನಂತರವೂ ಉತ್ತರ ಪ್ರದೇಶ ಮತ್ತು ಗುಜರಾತ್‍ನಲ್ಲಿ ಬಿಜೆಪಿ ಗೆದ್ದಿದೆ ಎಂದು ಮೋದಿ ನಮ್ಮ ಸಂದರ್ಶನದಲ್ಲಿ ಉತ್ತರಿಸಿದ್ದರಲ್ಲ ಎಂದು ಕೇಳಿದರು. ಆಗ “ಮೋದಿಜಿಯವರು ಸ್ಕ್ರಿಪ್ಟೆಡ್ ಫೈಲ್‍ನಲ್ಲಿ ಈ ಉತ್ತರವನ್ನು ಬರೆದುಕೊಂಡು ಬಂದಿದ್ದರ?” ಎಂದು ರಾಹುಲ್ ವ್ಯಂಗ್ಯವಾಡಿದ್ದಾರೆ. ಅದಕ್ಕೆ ಸಂದರ್ಶಕ ಇಲ್ಲ ಮೋದಿಯವರು ಕೇವಲ ಕವನ ಮಾತ್ರ ಫೈಲ್‍ನಲ್ಲಿ ಬರೆದುಕೊಂಡು ಬಂದಿದ್ದರು ಎಂದಾಗ, ಮೋದಿಯವರ ಫೈಲ್‍ನಲ್ಲಿ ಪ್ರಶ್ನೆ, ಉತ್ತರ ಎರಡು ಇರುವುದನ್ನು ಇಂಟರ್‍ನೆಟ್‍ನಲ್ಲಿ ಎಲ್ಲರೂ ನೋಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಇದೇ ಸಂದರ್ಶನದಲ್ಲಿ ನಾವು ಭಾರತವನ್ನು ಪ್ರೀತಿ, ಸಹೋದರತೆ, ನ್ಯಾಯ, ನಾವೆಲ್ಲ ಒಂದು ಎನ್ನುವ ಮನೋಭಾವದ ಆಧಾರದಲ್ಲಿ ಕಟ್ಟಲು ಬಯಸಿದ್ದೇವೆ ಎಂದು ರಾಹುಲ್ ಹೇಳಿದ್ದಾರೆ.

ಸಂದರ್ಶನ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...