Homeಮುಖಪುಟನೆಟ್ಟಿಗರಿಂದ ಮೋದಿ ಮೇಲೆ ಟ್ರೋಲ್, ರಾಹುಲ್ ಪ್ರಿಯಾಂಕ ಮೇಲೆ ಲವ್

ನೆಟ್ಟಿಗರಿಂದ ಮೋದಿ ಮೇಲೆ ಟ್ರೋಲ್, ರಾಹುಲ್ ಪ್ರಿಯಾಂಕ ಮೇಲೆ ಲವ್

ಬಿಜೆಪಿ ಕಾರ್ಯಕರ್ತರಿಗೆ “ನಿಮ್ಮ ನಿಲುವು ನಿಮ್ಮದು, ನನ್ನ ನಿಲುವು ನನ್ನದು, ಆಲ್ ದಿ ಬೆಸ್ಟ್” ಎಂದ ಪ್ರಿಯಾಂಕ ಗಾಂಧಿ

- Advertisement -
- Advertisement -

ಕೊನೆಯ ಹಂತದ ಚುನಾವಣೆಗಳು ಮುಗಿಯುವ ವೇಳೆಗೆ ರಾಜಕೀಯ ಪಲ್ಲಟಗಳು ನಡೆಯುತ್ತಿವೆ. ಒಂದು ಕಡೆ ಮೋಡ-ರಾಡಾರ್, ಡಿಜಿಟಲ್ ಕ್ಯಾಮೆರ – ಮೇಲ್ ಅಂತ ಮೋದಿ ತೀವ್ರ ಟೀಕೆಗೆ, ಟ್ರೋಲ್‍ಗೆ ಒಳಗಾಗುತ್ತಿದ್ದರೆ ಇತ್ತ ರಾಹುಲ್, ಪ್ರಿಯಾಂಕ ಅಣ್ಣ-ತಂಗಿ ಇಬ್ಬರೂ ತಮ್ಮ ಧೈರ್ಯ ಮತ್ತು ಮಾನವೀಯ ನಡವಳಿಕೆಗಳಿಂದ ಪ್ರಶಂಸೆಯ ಸುರಿಮಳೆ ಪಡೆಯುತ್ತಿದ್ದಾರೆ.

ನವದೆಹಲಿಯಲ್ಲಿ ಪ್ರಿಯಾಂಕ ಗಾಂಧಿ ಕಾರಿನಲ್ಲಿ ತೆರಳುತ್ತಿದ್ದ ಮಾರ್ಗದಲ್ಲಿ ನಿಂತಿದ್ದ ಬಿಜೆಪಿ ಕಾರ್ಯಕರ್ತರು ಪ್ರಿಯಾಂಕ ಕಾರು ಬಂದಕೂಡಲೇ ಮೋದಿ-ಮೋದಿ, ಮತ್ತೊಮ್ಮೆ ಎಂದು ಜೋರಾಗಿ ಕೂಗಿದ್ದಾರೆ. ತಕ್ಷಣವೇ ಕಾರು ನಿಲ್ಲಿಸಲು ಹೇಳಿ, ಕಾರಿನಿಂದಿಳಿದ ಪ್ರಿಯಾಂಕ ಗಾಂಧಿ ಅವರತ್ತ ಹಸ್ತಲಾಘವ ಚಾಚುತ್ತಾರೆ. “ನಿಮ್ಮ ನಿಲುವು ನಿಮ್ಮದು, ನನ್ನ ನಿಲುವು ನನ್ನದು, ಆಲ್ ದಿ ಬೆಸ್ಟ್” ಎಂದು ಪ್ರಿಯಾಂಕ ಗಾಂಧಿ ಹೇಳಿದೊಡನೆಯೇ ಅವರೆಲ್ಲರೂ ಖುಷಿಯಿಂದ ಹಸ್ತಲಾಘವ ಮಾಡಿದ್ದಲ್ಲದೇ ಆಲ್ ದಿ ಬೆಸ್ಟ ಮೇಡಂ, ಬೆಸ್ಟ್ ಆಫ್ ಲಕ್ ಎಂದು ಶುಭ ಹಾರೈಸಿದ್ದಾರೆ. ಅಷ್ಟೆ ಅಲ್ಲದೇ ಆ ಕಾರ್ಯಕರ್ತುರು ಪ್ರಿಯಾಂಕರ ಫೋಟೊ ಜೊತೆಗೆ ಸೆಲ್ಫಿ ಸಹ ಕ್ಲಿಕ್ಕಿಸಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪ್ರಿಯಾಂಕಾ ಗಾಂಧಿಯವರ ಧೈರ್ಯ ಮತ್ತು ಹೃದಯವೈಶಾಲ್ಯತೆಯನ್ನು ನೆಟ್ಟಿಗರು ಕೊಂಡಾಡಿದ್ದಾರೆ. ಇದು ಪ್ರಿಯಾಂಕರವರ ‘ಗಾಂಧಿಗಿರಿ’ ಎಂದು ಬಿರುದ್ದು ನೀಡಿದ್ದಾರೆ.

ವಿಡಿಯೋ ನೋಡಿ

ಇನ್ನೊಂದು ಕಡೆ ಮೋದಿಯ ಸ್ಕ್ರಿಪ್ಟೆಡ್ ಪ್ರಶ್ನೆಗಳ ಸಂದರ್ಶನದ ಕಾರಣಕ್ಕಾಗಿ, ಮೋಡ-ರಾಡಾರ್, ಡಿಜಿಟಲ್ ಕ್ಯಾಮೆರ – ಮೇಲ್ ವಿಷಯದ ಕಾರಣಕ್ಕಾಗಿ ಭಾರೀ ಸದ್ದು ಮಾಡಿದ್ದ ನ್ಯೂಸ್ ನೇಷನ್ ಚಾನಲ್ ಇಂದು ಪಂಜಾಬ್‍ನ ಬಹಿರಂಗ ಮೈದಾನದಲ್ಲಿ ಸ್ಕ್ರಿಪ್ಟೆಡ್ ಪ್ರಶ್ನೆಗಳಿಲ್ಲದೆ ರಾಹುಲ್ ಗಾಂಧಿಯವರ ಸಂದರ್ಶನ ಮಾಡಿದೆ.

ಈ ಐದು ವರ್ಷದ ಮೋದಿಜಿ ಆಡಳಿತದಲ್ಲಿ ಒಬ್ಬ ವ್ಯಕ್ತಿಯ ಸರ್ಕಾರವಾಗಿದೆ. ಅವರು ಯಾರ ಮಾತನ್ನು ಕೇಳಿಲ್ಲ. ನೋಟು ನಿಷೇಧ ಮತ್ತು ಜಿಎಸ್‍ಟಿ ಜಾರಿ ಮಾಡುವಾಗ ಮೋದಿ ಯಾರ ಸಲಹೆಯನ್ನು ಪಡೆಯದೇ ಏಕಾಏಕಿ ನಿರ್ಧಾರ ಮಾಡಿದರು. ಭಾರತದಲ್ಲಿ ಆರ್ಥಿಕ ಇಲಾಖೆ ಇದೆ, ಅರ್ಥ ಸಚಿವರಿದ್ದಾರೆ, ಸಮರ್ಥ ಅಧಿಕಾರಿಗಳಿದ್ದಾರೆ, ಆರ್‍ಬಿಐ ಗವರ್ನರ್ ಇದ್ದಾರೆ, ಯಾರನ್ನು ಕೇಳದೆ ಹೇಳದೆ ಜಾರಿ ಮಾಡಿದುದು ಸರಿ ಅಲ್ಲ, ಭಾರತದ ಜನರ ದನಿಗೆ ಅನುಗುಣವಾಗಿ ಸರ್ಕಾರ ನಡೆಸಬೇಕೆ ಹೊರತು ಒಬ್ಬ ವ್ಯಕ್ತಿಯ ಮನಸ್ಸಿಗೆ ಬಂದ ಹಾಗೆ ಅಲ್ಲ ಎಂದು ರಾಹುಲ್ ಹೇಳಿದರು.

ಅದಕ್ಕೆ ಸಂದರ್ಶಕ, ನೀವು ನೋಟ್ ಬ್ಯಾನ್ ಮತ್ತು ಜಿಎಸ್‍ಟಿ ವಿರುದ್ಧ ಮಾತಾಡುತ್ತೀರಿ ಅವನ್ನು ಜಾರಿಗೆ ತಂದ ನಂತರವೂ ಉತ್ತರ ಪ್ರದೇಶ ಮತ್ತು ಗುಜರಾತ್‍ನಲ್ಲಿ ಬಿಜೆಪಿ ಗೆದ್ದಿದೆ ಎಂದು ಮೋದಿ ನಮ್ಮ ಸಂದರ್ಶನದಲ್ಲಿ ಉತ್ತರಿಸಿದ್ದರಲ್ಲ ಎಂದು ಕೇಳಿದರು. ಆಗ “ಮೋದಿಜಿಯವರು ಸ್ಕ್ರಿಪ್ಟೆಡ್ ಫೈಲ್‍ನಲ್ಲಿ ಈ ಉತ್ತರವನ್ನು ಬರೆದುಕೊಂಡು ಬಂದಿದ್ದರ?” ಎಂದು ರಾಹುಲ್ ವ್ಯಂಗ್ಯವಾಡಿದ್ದಾರೆ. ಅದಕ್ಕೆ ಸಂದರ್ಶಕ ಇಲ್ಲ ಮೋದಿಯವರು ಕೇವಲ ಕವನ ಮಾತ್ರ ಫೈಲ್‍ನಲ್ಲಿ ಬರೆದುಕೊಂಡು ಬಂದಿದ್ದರು ಎಂದಾಗ, ಮೋದಿಯವರ ಫೈಲ್‍ನಲ್ಲಿ ಪ್ರಶ್ನೆ, ಉತ್ತರ ಎರಡು ಇರುವುದನ್ನು ಇಂಟರ್‍ನೆಟ್‍ನಲ್ಲಿ ಎಲ್ಲರೂ ನೋಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಇದೇ ಸಂದರ್ಶನದಲ್ಲಿ ನಾವು ಭಾರತವನ್ನು ಪ್ರೀತಿ, ಸಹೋದರತೆ, ನ್ಯಾಯ, ನಾವೆಲ್ಲ ಒಂದು ಎನ್ನುವ ಮನೋಭಾವದ ಆಧಾರದಲ್ಲಿ ಕಟ್ಟಲು ಬಯಸಿದ್ದೇವೆ ಎಂದು ರಾಹುಲ್ ಹೇಳಿದ್ದಾರೆ.

ಸಂದರ್ಶನ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....