Homeಮುಖಪುಟನೆಟ್ಟಿಗರಿಂದ ಮೋದಿ ಮೇಲೆ ಟ್ರೋಲ್, ರಾಹುಲ್ ಪ್ರಿಯಾಂಕ ಮೇಲೆ ಲವ್

ನೆಟ್ಟಿಗರಿಂದ ಮೋದಿ ಮೇಲೆ ಟ್ರೋಲ್, ರಾಹುಲ್ ಪ್ರಿಯಾಂಕ ಮೇಲೆ ಲವ್

ಬಿಜೆಪಿ ಕಾರ್ಯಕರ್ತರಿಗೆ “ನಿಮ್ಮ ನಿಲುವು ನಿಮ್ಮದು, ನನ್ನ ನಿಲುವು ನನ್ನದು, ಆಲ್ ದಿ ಬೆಸ್ಟ್” ಎಂದ ಪ್ರಿಯಾಂಕ ಗಾಂಧಿ

- Advertisement -
- Advertisement -

ಕೊನೆಯ ಹಂತದ ಚುನಾವಣೆಗಳು ಮುಗಿಯುವ ವೇಳೆಗೆ ರಾಜಕೀಯ ಪಲ್ಲಟಗಳು ನಡೆಯುತ್ತಿವೆ. ಒಂದು ಕಡೆ ಮೋಡ-ರಾಡಾರ್, ಡಿಜಿಟಲ್ ಕ್ಯಾಮೆರ – ಮೇಲ್ ಅಂತ ಮೋದಿ ತೀವ್ರ ಟೀಕೆಗೆ, ಟ್ರೋಲ್‍ಗೆ ಒಳಗಾಗುತ್ತಿದ್ದರೆ ಇತ್ತ ರಾಹುಲ್, ಪ್ರಿಯಾಂಕ ಅಣ್ಣ-ತಂಗಿ ಇಬ್ಬರೂ ತಮ್ಮ ಧೈರ್ಯ ಮತ್ತು ಮಾನವೀಯ ನಡವಳಿಕೆಗಳಿಂದ ಪ್ರಶಂಸೆಯ ಸುರಿಮಳೆ ಪಡೆಯುತ್ತಿದ್ದಾರೆ.

ನವದೆಹಲಿಯಲ್ಲಿ ಪ್ರಿಯಾಂಕ ಗಾಂಧಿ ಕಾರಿನಲ್ಲಿ ತೆರಳುತ್ತಿದ್ದ ಮಾರ್ಗದಲ್ಲಿ ನಿಂತಿದ್ದ ಬಿಜೆಪಿ ಕಾರ್ಯಕರ್ತರು ಪ್ರಿಯಾಂಕ ಕಾರು ಬಂದಕೂಡಲೇ ಮೋದಿ-ಮೋದಿ, ಮತ್ತೊಮ್ಮೆ ಎಂದು ಜೋರಾಗಿ ಕೂಗಿದ್ದಾರೆ. ತಕ್ಷಣವೇ ಕಾರು ನಿಲ್ಲಿಸಲು ಹೇಳಿ, ಕಾರಿನಿಂದಿಳಿದ ಪ್ರಿಯಾಂಕ ಗಾಂಧಿ ಅವರತ್ತ ಹಸ್ತಲಾಘವ ಚಾಚುತ್ತಾರೆ. “ನಿಮ್ಮ ನಿಲುವು ನಿಮ್ಮದು, ನನ್ನ ನಿಲುವು ನನ್ನದು, ಆಲ್ ದಿ ಬೆಸ್ಟ್” ಎಂದು ಪ್ರಿಯಾಂಕ ಗಾಂಧಿ ಹೇಳಿದೊಡನೆಯೇ ಅವರೆಲ್ಲರೂ ಖುಷಿಯಿಂದ ಹಸ್ತಲಾಘವ ಮಾಡಿದ್ದಲ್ಲದೇ ಆಲ್ ದಿ ಬೆಸ್ಟ ಮೇಡಂ, ಬೆಸ್ಟ್ ಆಫ್ ಲಕ್ ಎಂದು ಶುಭ ಹಾರೈಸಿದ್ದಾರೆ. ಅಷ್ಟೆ ಅಲ್ಲದೇ ಆ ಕಾರ್ಯಕರ್ತುರು ಪ್ರಿಯಾಂಕರ ಫೋಟೊ ಜೊತೆಗೆ ಸೆಲ್ಫಿ ಸಹ ಕ್ಲಿಕ್ಕಿಸಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪ್ರಿಯಾಂಕಾ ಗಾಂಧಿಯವರ ಧೈರ್ಯ ಮತ್ತು ಹೃದಯವೈಶಾಲ್ಯತೆಯನ್ನು ನೆಟ್ಟಿಗರು ಕೊಂಡಾಡಿದ್ದಾರೆ. ಇದು ಪ್ರಿಯಾಂಕರವರ ‘ಗಾಂಧಿಗಿರಿ’ ಎಂದು ಬಿರುದ್ದು ನೀಡಿದ್ದಾರೆ.

ವಿಡಿಯೋ ನೋಡಿ

ಇನ್ನೊಂದು ಕಡೆ ಮೋದಿಯ ಸ್ಕ್ರಿಪ್ಟೆಡ್ ಪ್ರಶ್ನೆಗಳ ಸಂದರ್ಶನದ ಕಾರಣಕ್ಕಾಗಿ, ಮೋಡ-ರಾಡಾರ್, ಡಿಜಿಟಲ್ ಕ್ಯಾಮೆರ – ಮೇಲ್ ವಿಷಯದ ಕಾರಣಕ್ಕಾಗಿ ಭಾರೀ ಸದ್ದು ಮಾಡಿದ್ದ ನ್ಯೂಸ್ ನೇಷನ್ ಚಾನಲ್ ಇಂದು ಪಂಜಾಬ್‍ನ ಬಹಿರಂಗ ಮೈದಾನದಲ್ಲಿ ಸ್ಕ್ರಿಪ್ಟೆಡ್ ಪ್ರಶ್ನೆಗಳಿಲ್ಲದೆ ರಾಹುಲ್ ಗಾಂಧಿಯವರ ಸಂದರ್ಶನ ಮಾಡಿದೆ.

ಈ ಐದು ವರ್ಷದ ಮೋದಿಜಿ ಆಡಳಿತದಲ್ಲಿ ಒಬ್ಬ ವ್ಯಕ್ತಿಯ ಸರ್ಕಾರವಾಗಿದೆ. ಅವರು ಯಾರ ಮಾತನ್ನು ಕೇಳಿಲ್ಲ. ನೋಟು ನಿಷೇಧ ಮತ್ತು ಜಿಎಸ್‍ಟಿ ಜಾರಿ ಮಾಡುವಾಗ ಮೋದಿ ಯಾರ ಸಲಹೆಯನ್ನು ಪಡೆಯದೇ ಏಕಾಏಕಿ ನಿರ್ಧಾರ ಮಾಡಿದರು. ಭಾರತದಲ್ಲಿ ಆರ್ಥಿಕ ಇಲಾಖೆ ಇದೆ, ಅರ್ಥ ಸಚಿವರಿದ್ದಾರೆ, ಸಮರ್ಥ ಅಧಿಕಾರಿಗಳಿದ್ದಾರೆ, ಆರ್‍ಬಿಐ ಗವರ್ನರ್ ಇದ್ದಾರೆ, ಯಾರನ್ನು ಕೇಳದೆ ಹೇಳದೆ ಜಾರಿ ಮಾಡಿದುದು ಸರಿ ಅಲ್ಲ, ಭಾರತದ ಜನರ ದನಿಗೆ ಅನುಗುಣವಾಗಿ ಸರ್ಕಾರ ನಡೆಸಬೇಕೆ ಹೊರತು ಒಬ್ಬ ವ್ಯಕ್ತಿಯ ಮನಸ್ಸಿಗೆ ಬಂದ ಹಾಗೆ ಅಲ್ಲ ಎಂದು ರಾಹುಲ್ ಹೇಳಿದರು.

ಅದಕ್ಕೆ ಸಂದರ್ಶಕ, ನೀವು ನೋಟ್ ಬ್ಯಾನ್ ಮತ್ತು ಜಿಎಸ್‍ಟಿ ವಿರುದ್ಧ ಮಾತಾಡುತ್ತೀರಿ ಅವನ್ನು ಜಾರಿಗೆ ತಂದ ನಂತರವೂ ಉತ್ತರ ಪ್ರದೇಶ ಮತ್ತು ಗುಜರಾತ್‍ನಲ್ಲಿ ಬಿಜೆಪಿ ಗೆದ್ದಿದೆ ಎಂದು ಮೋದಿ ನಮ್ಮ ಸಂದರ್ಶನದಲ್ಲಿ ಉತ್ತರಿಸಿದ್ದರಲ್ಲ ಎಂದು ಕೇಳಿದರು. ಆಗ “ಮೋದಿಜಿಯವರು ಸ್ಕ್ರಿಪ್ಟೆಡ್ ಫೈಲ್‍ನಲ್ಲಿ ಈ ಉತ್ತರವನ್ನು ಬರೆದುಕೊಂಡು ಬಂದಿದ್ದರ?” ಎಂದು ರಾಹುಲ್ ವ್ಯಂಗ್ಯವಾಡಿದ್ದಾರೆ. ಅದಕ್ಕೆ ಸಂದರ್ಶಕ ಇಲ್ಲ ಮೋದಿಯವರು ಕೇವಲ ಕವನ ಮಾತ್ರ ಫೈಲ್‍ನಲ್ಲಿ ಬರೆದುಕೊಂಡು ಬಂದಿದ್ದರು ಎಂದಾಗ, ಮೋದಿಯವರ ಫೈಲ್‍ನಲ್ಲಿ ಪ್ರಶ್ನೆ, ಉತ್ತರ ಎರಡು ಇರುವುದನ್ನು ಇಂಟರ್‍ನೆಟ್‍ನಲ್ಲಿ ಎಲ್ಲರೂ ನೋಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಇದೇ ಸಂದರ್ಶನದಲ್ಲಿ ನಾವು ಭಾರತವನ್ನು ಪ್ರೀತಿ, ಸಹೋದರತೆ, ನ್ಯಾಯ, ನಾವೆಲ್ಲ ಒಂದು ಎನ್ನುವ ಮನೋಭಾವದ ಆಧಾರದಲ್ಲಿ ಕಟ್ಟಲು ಬಯಸಿದ್ದೇವೆ ಎಂದು ರಾಹುಲ್ ಹೇಳಿದ್ದಾರೆ.

ಸಂದರ್ಶನ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...