Homeಮುಖಪುಟನರೇಂದ್ರ ಮೋದಿ ಟ್ವಿಟರ್‌‌ ಖಾತೆ ಹ್ಯಾಕ್‌: ಬಿಟ್‌ ಕಾಯಿನ್‌ ಕುರಿತು ನಕಲಿ ಪೋಸ್ಟ್‌

ನರೇಂದ್ರ ಮೋದಿ ಟ್ವಿಟರ್‌‌ ಖಾತೆ ಹ್ಯಾಕ್‌: ಬಿಟ್‌ ಕಾಯಿನ್‌ ಕುರಿತು ನಕಲಿ ಪೋಸ್ಟ್‌

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಅಧಿಕೃತ ಟ್ವಿಟರ್‌ ಖಾತೆಯನ್ನು ಕಿಡಿಗೇಡಿಗಳು ಹ್ಯಾಕ್‌ ಮಾಡಿ, ಬಿಟ್‌ ಕಾಯಿನ್ ಲೀಗಲ್ ಟೆಂಡರ್‌ ಮಾಡಲಾಗಿದೆ ಎಂದು ಪೋಸ್ಟ್‌ ಮಾಡಿರುವ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.

ಬಿಟ್‌ ಕಾಯಿನ್‌ ಸಂಬಂಧಿಸಿದಂತೆ ಪೋಸ್ಟ್‌ ಹರಿದಾಡಿದ ಬಳಿಕ ‘ಪ್ರೈಮ್‌ ಮಿನಿಸ್ಟರ್‌ ಆಫ್ ಇಂಡಿಯಾ’ (PMO India) ಟ್ವಿಟರ್‌ ಖಾತೆಯ ಮೂಲಕ ‘NarendraModi’ ಟ್ವಿಟ್ಟರ್ ಖಾತೆಯ ಕುರಿತು ಸ್ಪಷ್ಟನೆ ನೀಡಲಾಗಿದೆ.

“ಪ್ರಧಾನಿ @narendramodi ಅವರ ಟ್ವಿಟರ್ ಖಾತೆ ಕೆಲವು ಸಮಯ (briefly compromised) ರಾಜಿಯಾಗಿದೆ (ದುರ್ಬಳಕೆಯಾಗಿದೆ). ಈ ವಿಷಯವನ್ನು ಟ್ವಿಟರ್‌ಗೆ ತಿಳಿಸಲಾಯಿತು. ಖಾತೆಯನ್ನು ತಕ್ಷಣವೇ ಸುರಕ್ಷಿತಗೊಳಿಸಲಾಗಿದೆ. ಖಾತೆಯ ದುರ್ಬಳಕೆಯಾದ ಅಲ್ಪಾವಧಿಯಲ್ಲಿ, ಯಾವುದೇ ಟ್ವೀಟ್ ಹಂಚಿಕೊಂಡಿದ್ದರೆ ಅದನ್ನು ನಿರ್ಲಕ್ಷಿಸಬೇಕು” ಎಂದು PMO India ಖಾತೆಯ ಮೂಲಕ ಟ್ವೀಟ್ ಮಾಡಲಾಗಿದೆ.

ಖಾತೆಯನ್ನು ಈಗ ಮರುಸ್ಥಾಪಿಸಲಾಗಿದೆ ಮತ್ತು ದುರುದ್ದೇಶಪೂರಿತ ಟ್ವೀಟ್‌ಗಳನ್ನು ಅಳಿಸಲಾಗಿದೆ.

ಹಲವಾರು ಬಳಕೆದಾರರು Twitterನಲ್ಲಿ ಹಂಚಿಕೊಂಡಿರುವ ಸ್ಕ್ರೀನ್‌ಶಾಟ್‌ಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿಯವರ (@narendramodi) ಖಾತೆಯಿಂದ ಹಾಕಲಾದ ಟ್ವೀಟ್‌ಗಳು ಚರ್ಚೆಗೆ ಗ್ರಾಸವಾಗಿವೆ.

“ಭಾರತವು ಅಧಿಕೃತವಾಗಿ ಬಿಟ್‌ಕಾಯಿನ್ ಅನ್ನು ಕಾನೂನುಬದ್ಧ ಟೆಂಡರ್ ಎಂದು ಸ್ವೀಕರಿಸಿದೆ. ಸರ್ಕಾರವು ಅಧಿಕೃತವಾಗಿ 500 BTC ಅನ್ನು ಖರೀದಿಸಿದೆ ಮತ್ತು ಅವುಗಳನ್ನು ದೇಶದ ಎಲ್ಲಾ ನಿವಾಸಿಗಳಿಗೆ ವಿತರಿಸುತ್ತಿದೆ” ಎಂದು ಟ್ವೀಟ್ ಮಾಡಲಾಗಿತ್ತು. ಜೊತೆಗೆ, ಸಂಭವನೀಯ ಹಗರಣದ ಲಿಂಕ್ ಅನ್ನು ಸಹ ಲಗತ್ತಿಸಲಾಗಿತ್ತು.

ಟ್ವೀಟ್ ಅನ್ನು ಶೀಘ್ರದಲ್ಲೇ ಅಳಿಸಲಾಗಿದ್ದರೂ #Hacked ಹ್ಯಾಷ್‌ಟ್ಯಾಗ್‌ ತಕ್ಷಣವೇ ಟ್ರೆಂಡ್ ಆಗಿತ್ತು. ಬಳಕೆದಾರರು ಈಗ ಅಳಿಸಲಾದ ಟ್ವೀಟ್‌ನ ಸ್ಕ್ರೀನ್‌ಶಾಟ್‌ನೊಂದಿಗೆ ಟ್ವೀಟ್ ಮಾಡುತ್ತಿದ್ದಾರೆ. “ಗುಡ್ ಮಾರ್ನಿಂಗ್ ಮೋದಿ ಜಿ, ಸಬ್ ಚಂಗಾ ಸಿ?” ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಟ್ವೀಟ್ ಮಾಡಿದ್ದಾರೆ.

ರಾಜಕೀಯ ಕಾರ್ಯಕರ್ತ ತೆಹಸೀನ್ ಪೂನವಾಲಾ ಟ್ವೀಟ್ ಮಾಡಿ, “ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರ ಟ್ವಿಟರ್ ಖಾತೆ ಹ್ಯಾಕ್ ಆಗಿದೆಯೇ?” ಎಂದು ಕೇಳಿದ್ದಾರೆ.

ಮತ್ತೊಬ್ಬ ಟ್ವಿಟರ್ ಬಳಕೆದಾರರು, “#PMmodi #modi ಖಾತೆ #ಹ್ಯಾಕ್ ಮಾಡಲಾಗಿದೆ, ದಯವಿಟ್ಟು ಲಿಂಕ್ ಅನ್ನು ಕ್ಲಿಕ್ ಮಾಡಬೇಡಿ. ಇದು ಒಂದು ಹಗರಣ. PM ಖಾತೆ ಕೂಡ ಸುರಕ್ಷಿತವಾಗಿಲ್ಲ” ಎಂದಿದ್ದಾರೆ.


ಇದನ್ನೂ ಓದಿರಿ: ಬಿಎಸ್‌ಎಫ್‌ ಅಧಿಕಾರ ವ್ಯಾಪ್ತಿ ವಿಸ್ತರಣೆ ವಿರುದ್ಧ ಸುಪ್ರಿಂ ಮೆಟ್ಟಿಲೇರಿದ ಪಂಜಾಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...