Homeಮುಖಪುಟಗುರುದ್ವಾರಕ್ಕೆ ಭೇಟಿ ನೀಡಿದ ಮೋದಿ : ’ಈ ನಾಟಕವೆಲ್ಲ ಬೇಡ’ ಎಂದ ನೆಟ್ಟಿಗರು!

ಗುರುದ್ವಾರಕ್ಕೆ ಭೇಟಿ ನೀಡಿದ ಮೋದಿ : ’ಈ ನಾಟಕವೆಲ್ಲ ಬೇಡ’ ಎಂದ ನೆಟ್ಟಿಗರು!

"ಗುರುವಿನ ಅನುಯಾಯಿಗಳು ಕೊರೆಯುವ ಚಳಿಯಲ್ಲಿ ರಸ್ತೆಯಲ್ಲಿದ್ದರೆ ನೀವು ಗುರುದ್ವಾರಕ್ಕೆ ಭೇಟಿ ನೀಡಿದ್ದನ್ನು, ಸ್ವತಃ ಗುರು ಕೂಡಾ ಕ್ಷಮಿಸಲಾರರು" ಎಂದು ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯಿದೆಗಳ ವಿರುದ್ದ ಕಳೆದ 25 ದಿನಗಳಿಂದ ರೈತರು ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದರೆ, ಪ್ರಧಾನಿ ಮೋದಿ ಸಿಖ್‌ ಸಮುದಾಯವನ್ನು ಮನವೊಲಿಸುವುದಕ್ಕಾಗಿ ನವ ದೆಹಲಿಯಲ್ಲಿರುವ ರಕಬ್‌ ಗಂಜ್‌ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಸಿಖ್ ಗುರು ತೇಗ್‌ ಬಹದ್ದೂರ್‌ ಅವರ ಬಲಿದಾದನ ದಿನವಾದ ಇಂದು ಪ್ರಧಾನಿ ಮೋದಿ ಗುರುದ್ವಾರಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ್ದು, ಅದರ ಹಲವಾರು ಚಿತ್ರಗಳನ್ನು ತಮ್ಮ ಟ್ವಿಟ್ಟರ್‌‌ನಲ್ಲಿ ಹಾಕಿಕೊಂಡಿದ್ದಾರೆ. “ಗುರುದ್ವಾರ ರಕಬ್ ಗಂಜ್ ಸಾಹಿಬ್‌‌ನಲ್ಲಿರುವ ಶ್ರೀ ಗುರು ತೇಗ್ ಬಹದ್ದೂರ್‌‌ರಿಗೆ ಇಂದು ನಾನು ಗೌರವ ನಮನ ಸಲ್ಲಿಸಿದೆ. ಅವರು ಹಿಂದೂ ಧರ್ಮವನ್ನು ಉಳಿಸುವ ಸಲುವಾಗಿ ಹಲವಾರು ಕಾರ್ಯಗಳನ್ನು ಮಾಡಿದ್ದು, ಸಾಮರಸ್ಯದ ಸಂದೇಶ ನೀಡಿದ್ದಾರೆ. ಅವರ ಜೀವನದಲ್ಲಿ ಧೈರ್ಯ ಮತ್ತು ಸಹಾನುಭೂತಿ ಗುಣಗಳು ತುಂಬಿತ್ತು. ಅವರ ಹುತಾತ್ಮ ದಿನದಂದು ನಾನು ಅವರಿಗೆ ತಲೆಬಾಗುತ್ತೇನೆ” ಎಂದು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಗೋದಿ ಮೀಡಿಯಾಗಳಿಗೆ ಸೆಡ್ಡು: ಸ್ವಂತ ಚಾನೆಲ್ ಆರಂಭಿಸಿದ ದೆಹಲಿಯ ಹೋರಾಟನಿರತ ರೈತರು!

ಡಿಸೆಂಬರ್‌ 15 ರಂದು ಕೂಡಾ ಗುಜರಾತ್‌ನ ಕಚ್‌‌ನಲ್ಲಿ ಸಿಖ್‌ ಸಮುದಾಯದ ರೈತರ ನಿಯೋಗವನ್ನು ಮೋದಿ ಭೇಟಿಯಾಗಿದ್ದಾಗಿ ಮಾಧ್ಯಮಗಳು ವರದಿ ಮಾಡಿತ್ತು. ಆದರೆ ಅದು ರೈತರ ನಿಯೋಗವಾಗಿರದೆ ಬಿಜೆಪಿ ಕಾರ್ಯಕರ್ತರ ನಿಯೋಗ ಎಂದು ನ್ಯಾಷನಲ್ ಹೆರಾಲ್ಡ್‌ ತನಿಖಾ ವರದಿ ಮಾಡಿದೆ. ದೆಹಲಿಯ ಗಡಿಯ ಸುತ್ತಲೂ ಪ್ರತಿಭಟನೆ ನಡೆಸುತ್ತಿರುವ ರೈತರಲ್ಲಿ ಸಿಖ್ ಸಮುದಾಯದವರೇ ಹೆಚ್ಚಾಗಿ ಕಾಣುತ್ತಿರುವುದರಿಂದ ಪ್ರಧಾನಿ ಸಿಖ್ಖರನ್ನು ಮನವೊಲಿಸಲು ಪ್ರಯತ್ನಿಸುತ್ತದ್ದಾರೆ ಎಂದು ಹಲವಾರು ಜನರು ಆರೋಪಿಸಿದ್ದಾರೆ.

ರೈತರ ಹೋರಾಟ ದಿನೇ ದಿನೇ ತೀವ್ರಗೊಳ್ಳುತ್ತಿದ್ದು ಪ್ರಧಾನಿ ಮೋದಿ ಇದುವರೆಗೂ ತಮ್ಮ ನೂತನ ಕಾಯ್ದೆಯನ್ನು ಸಮರ್ಥಿಸಿಕೊಳ್ಳುತ್ತಲೇ ಇದ್ದಾರೆ. ಆದರೆ ಪ್ರತಿಭಟನಾ ನಿರತ ರೈತರು ಕೃಷಿ ವಿರೋಧಿ ಕಾಯ್ದೆಯನ್ನು ರದ್ದು ಪಡಿಸಲೇಬೇಕು ಎಂದು ಪಟ್ಟುಹಿಡಿದಿದ್ದಾರೆ. ಪ್ರಧಾನಿ ಮೋದಿ ಗುರುದ್ವಾರಕ್ಕೆ ಭೇಟಿ ನೀಡಿರುವ ಸಂದರ್ಭದಲ್ಲಿ “ಗುರುವಿನ ಅನುಯಾಯಿಗಳು ಕೊರೆಯುವ ಚಳಿಯಲ್ಲಿ ರಸ್ತೆಯಲ್ಲಿದ್ದರೆ ನೀವು ಗುರುದ್ವಾರಕ್ಕೆ ಭೇಟಿ ನೀಡಿದ್ದನ್ನು, ಸ್ವತಃ ಗುರು ಕೂಡಾ ಕ್ಷಮಿಸಲಾರರು” ಎಂದು ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿ ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ‘ದೇಶಪ್ರೇಮಿ ಯುವಾಂದೋಲನ’

“ಸರ್, ದೇವರ ಸಂಬಂಧಿಗಳು ಕೊರೆಯುವ ಚಳಿಗಾಲದಲ್ಲಿ ಕುಳಿತಿದ್ದಾರೆ. ತಮ್ಮ ಅನುಯಾಯಿಗಳು ಮತ್ತು ಜನರು ಸಂತೋಷವಾಗಿರದೆ ಯಾವುದೇ ಗುರು ಕೂಡಾ ಸಂತೋಷವಾಗಿ ಇರುವುದಿಲ್ಲ. ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಪರಿಹರಿಸಿ” ಎಂದು ಚಮನ್ ವರ್ಸ್‌ನೆ ಹೇಳಿದ್ದಾರೆ.

“ಎಲ್ಲಾ ಸಿಖ್ಖರು ನಿಮ್ಮೊಂದಿಗಿದ್ದಾರೆ ಎಂದು ಹೇಳಲು ಮತ್ತು ತೋರಿಸಲು ನೀವು ಪ್ರಯತ್ನಿಸುತ್ತಿದ್ದೀರಿ. ಆದರೆ ಸಿಖ್ ರೈತರು ರಸ್ತೆಯಲ್ಲಿ ನಿಂತು ಕಾಯ್ದೆಯನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ. ದಯವಿಟ್ಟು ಕಾಯ್ದೆಯನ್ನು ಅಮಾನತುಗೊಳಿಸಿ ಹಾಗೂ ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಅನೇಕ ರಾಜ್ಯಗಳ ರೈತರು ತಮ್ಮ ಮನಗೆ ಹೋಗಲು ಅನುಕೂಲ ಮಾಡಿ” ಎಂದು ಒಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದ ಹುತಾತ್ಮರಿಗೆ ಇಂದು ಶ್ರದ್ಧಾಂಜಲಿ: ಇಲ್ಲಿವೆ ಪ್ರಮುಖ ಅಂಶಗಳು

ಅನಿಲ್ ಕಪೂರ್ ಎಂಬುವವರು‌, “ಮೋದಿಯವರೆ, ಟೈಮ್ ನಿಯತಕಾಲಿಕವು ನಿಮ್ಮನ್ನು ’ಡಿವೈಡ್ ಇನ್ ಚೀಫ್’ ಎಂದು ಕರೆದಿ‌ದ್ದು ಸರಿಯಾಗಿದೆ. ನೀವು ಸಿಖ್ ಸಮುದಾಯವನ್ನು ಎರಡು ಭಾಗಗಳಾಗಿ ವಿಂಗಡಿಸಲು ಪ್ರಯತ್ನಿಸುತ್ತಿದ್ದೀರಿ. ಪ್ರತಿಭಟಿಸುತ್ತಿರುವ ರೈತರನ್ನು ಪ್ರತ್ಯೇಕಿಸಲು ನೀವು ಬಯಸುತ್ತೀರಿ” ಎಂದು ಕಿಡಿಕಾರಿದ್ದಾರೆ.

“ಈ ನಾಟಕವೆಲ್ಲ ಬೇಡ. ರಕ್ತ, ಬೆವರು ಚೆಲ್ಲುವ ಮೂಲಕ ಉತ್ಪತ್ತಿಯಾಗುವ ಬೆಳೆಗೆ ಕನಿಷ್ಠ ಬೆಲೆ ಖಾತರಿಯ ಕಾನೂನು ಅಗತ್ಯವಿದೆ. ಗುರುವಿನ ಮಕ್ಕಳು ಕೊರೆಯುವ ಚಳಿಯಲ್ಲಿ ಸಾಯುತ್ತಿದ್ದಾರೆ ಮತ್ತು ನೀವು ಗುರುದ್ವಾರದಲ್ಲಿ ಚಿತ್ರೀಕರಣ ಮಾಡುತ್ತಿದ್ದೀರಿ. ದಿಕ್ಕಾರವಿದೆ. ರೈತರು ತಮ್ಮ ಬೆಳೆಗೆ ಕನಿಷ್ಠ ಬೆಲೆಯನ್ನಷ್ಟೇ ಕೇಳಿದ್ದಾರೆ, ವಜ್ರವನ್ನಲ್ಲ” ಎಂದು ಝಾಲಿಮ್ ಜಾಟ್ ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಹೊಸ ದೆಹಲಿಯಿಂದ ಟಿ‌ಕ್ರೀ ಮತ್ತು ಸಿಂಘೂ ಗಡಿಗೆ ತೆರಳುವ ಗೂಗಲ್ ಮ್ಯಾಪ್‌‌ನ ಚಿತ್ರವನ್ನು ಹಾಕಿರುವ ಟ್ರಾಕ್ಟರ್‌ ಟು ಟ್ವಿಟ್ಟರ್‌ ಹ್ಯಾಂಡಲ್, “ನರೇಂದ್ರ ಮೋದಿ ನಿಮ್ಮಲ್ಲಿ ವಿನಮ್ರ ವಿನಂತಿ, ನಿಜವಾದ ರೈತರು ಗುಜರಾತ್‌ನಲ್ಲಿ ಅಥವಾ ಗುರುದ್ವಾರ ಸಾಹಿಬ್‌ನಲ್ಲಿಲ್ಲ. ದಯವಿಟ್ಟು ಈ ನಕ್ಷೆಯನ್ನು ಅನುಸರಿಸಿ ಬನ್ನಿ, ಅದು ನಿಮ್ಮ ಸಮಯವನ್ನು ಉಳಿಸುವುದಲ್ಲದೆ, ಪ್ರತಿಭಟಿಸುತ್ತಿರುವ ಅರ್ಧ ಮಿಲಿಯನ್ ರೈತರ ಬಳಿಗೆ ಕರೆದೊಯ್ಯುತ್ತದೆ” ಎಂದಿದ್ದಾರೆ.

“ಗುರು ಸಾಹಿಬ್ ಅನುಯಾಯಿಗಳನ್ನು ರಸ್ತೆಯಲ್ಲಿ ಬಿಟ್ಟು ನಿಮ್ಮ ಪ್ರದರ್ಶನ ಏನು? ಸಿಖ್ಖರ ವಿರುದ್ಧ ನಿಮ್ಮ ಪಿತೂರಿ ಸ್ಪಷ್ಟವಾಗಿದೆ” ಎಂದು ಆಯುಷ್ ಹೇಳಿದ್ದಾರೆ.

ಇದನ್ನೂ ಓದಿ: ‘ಈಗ ನಾನು ರೈತರೊಂದಿಗೆ ನಿಲ್ಲಲೇಬೇಕು’ – ಬಿಜೆಪಿ ಮುಖಂಡ ಚೌಧರಿ ಬಿರೇಂದರ್ ಸಿಂಗ್

“ಶ್ರೀ ಗುರು ತೇಜ್ ಬಹದ್ದೂರ್ ಸಾಹಿಬ್ ಜಿ ಅವರಿಂದ ನೀವು ಕಲಿತದ್ದನ್ನು ಅನುಸರಿಸಲು ಬಯಸಿದರೆ, ಅವರು ಕಾಶ್ಮೀರಿ ಪಂಡಿತರ ಉಳಿವಿಗಾಗಿ ದೆಹಲಿಗೆ ಬಂದಂತೆಯೇ, ದೆಹಲಿಯ ಬಾಗಿಲನ್ನು ಬಡಿದುಕೊಳ್ಳುತ್ತಿರುವ ರೈತರ ಬಳಿ ಹೋಗಿ. ಈ ಮೂಲಕ ಅವರಿಂದ ಏನಾದರೂ ಕಲಿಯಿರಿ. ಕೇವಲ ಚಿತ್ರಗಳನ್ನು ಪೋಸ್ಟ್ ಮಾಡುವುದರಿಂದ ಏನೂ ಆಗುವುದಿಲ್ಲ” ಎಂದು ಮನ್‌‌ಜೀತ್‌ ಸಿಂಗ್‌‌ ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ತೀವ್ರ: 1 ಲಕ್ಷಕ್ಕೂ ಹೆಚ್ಚು ಗ್ರಾಮಗಳಲ್ಲಿ ‘ಶ್ರದ್ಧಾಂಜಲಿ ದಿವಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...