Homeಮುಖಪುಟಗುರುದ್ವಾರಕ್ಕೆ ಭೇಟಿ ನೀಡಿದ ಮೋದಿ : ’ಈ ನಾಟಕವೆಲ್ಲ ಬೇಡ’ ಎಂದ ನೆಟ್ಟಿಗರು!

ಗುರುದ್ವಾರಕ್ಕೆ ಭೇಟಿ ನೀಡಿದ ಮೋದಿ : ’ಈ ನಾಟಕವೆಲ್ಲ ಬೇಡ’ ಎಂದ ನೆಟ್ಟಿಗರು!

"ಗುರುವಿನ ಅನುಯಾಯಿಗಳು ಕೊರೆಯುವ ಚಳಿಯಲ್ಲಿ ರಸ್ತೆಯಲ್ಲಿದ್ದರೆ ನೀವು ಗುರುದ್ವಾರಕ್ಕೆ ಭೇಟಿ ನೀಡಿದ್ದನ್ನು, ಸ್ವತಃ ಗುರು ಕೂಡಾ ಕ್ಷಮಿಸಲಾರರು" ಎಂದು ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯಿದೆಗಳ ವಿರುದ್ದ ಕಳೆದ 25 ದಿನಗಳಿಂದ ರೈತರು ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದರೆ, ಪ್ರಧಾನಿ ಮೋದಿ ಸಿಖ್‌ ಸಮುದಾಯವನ್ನು ಮನವೊಲಿಸುವುದಕ್ಕಾಗಿ ನವ ದೆಹಲಿಯಲ್ಲಿರುವ ರಕಬ್‌ ಗಂಜ್‌ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಸಿಖ್ ಗುರು ತೇಗ್‌ ಬಹದ್ದೂರ್‌ ಅವರ ಬಲಿದಾದನ ದಿನವಾದ ಇಂದು ಪ್ರಧಾನಿ ಮೋದಿ ಗುರುದ್ವಾರಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ್ದು, ಅದರ ಹಲವಾರು ಚಿತ್ರಗಳನ್ನು ತಮ್ಮ ಟ್ವಿಟ್ಟರ್‌‌ನಲ್ಲಿ ಹಾಕಿಕೊಂಡಿದ್ದಾರೆ. “ಗುರುದ್ವಾರ ರಕಬ್ ಗಂಜ್ ಸಾಹಿಬ್‌‌ನಲ್ಲಿರುವ ಶ್ರೀ ಗುರು ತೇಗ್ ಬಹದ್ದೂರ್‌‌ರಿಗೆ ಇಂದು ನಾನು ಗೌರವ ನಮನ ಸಲ್ಲಿಸಿದೆ. ಅವರು ಹಿಂದೂ ಧರ್ಮವನ್ನು ಉಳಿಸುವ ಸಲುವಾಗಿ ಹಲವಾರು ಕಾರ್ಯಗಳನ್ನು ಮಾಡಿದ್ದು, ಸಾಮರಸ್ಯದ ಸಂದೇಶ ನೀಡಿದ್ದಾರೆ. ಅವರ ಜೀವನದಲ್ಲಿ ಧೈರ್ಯ ಮತ್ತು ಸಹಾನುಭೂತಿ ಗುಣಗಳು ತುಂಬಿತ್ತು. ಅವರ ಹುತಾತ್ಮ ದಿನದಂದು ನಾನು ಅವರಿಗೆ ತಲೆಬಾಗುತ್ತೇನೆ” ಎಂದು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಗೋದಿ ಮೀಡಿಯಾಗಳಿಗೆ ಸೆಡ್ಡು: ಸ್ವಂತ ಚಾನೆಲ್ ಆರಂಭಿಸಿದ ದೆಹಲಿಯ ಹೋರಾಟನಿರತ ರೈತರು!

ಡಿಸೆಂಬರ್‌ 15 ರಂದು ಕೂಡಾ ಗುಜರಾತ್‌ನ ಕಚ್‌‌ನಲ್ಲಿ ಸಿಖ್‌ ಸಮುದಾಯದ ರೈತರ ನಿಯೋಗವನ್ನು ಮೋದಿ ಭೇಟಿಯಾಗಿದ್ದಾಗಿ ಮಾಧ್ಯಮಗಳು ವರದಿ ಮಾಡಿತ್ತು. ಆದರೆ ಅದು ರೈತರ ನಿಯೋಗವಾಗಿರದೆ ಬಿಜೆಪಿ ಕಾರ್ಯಕರ್ತರ ನಿಯೋಗ ಎಂದು ನ್ಯಾಷನಲ್ ಹೆರಾಲ್ಡ್‌ ತನಿಖಾ ವರದಿ ಮಾಡಿದೆ. ದೆಹಲಿಯ ಗಡಿಯ ಸುತ್ತಲೂ ಪ್ರತಿಭಟನೆ ನಡೆಸುತ್ತಿರುವ ರೈತರಲ್ಲಿ ಸಿಖ್ ಸಮುದಾಯದವರೇ ಹೆಚ್ಚಾಗಿ ಕಾಣುತ್ತಿರುವುದರಿಂದ ಪ್ರಧಾನಿ ಸಿಖ್ಖರನ್ನು ಮನವೊಲಿಸಲು ಪ್ರಯತ್ನಿಸುತ್ತದ್ದಾರೆ ಎಂದು ಹಲವಾರು ಜನರು ಆರೋಪಿಸಿದ್ದಾರೆ.

ರೈತರ ಹೋರಾಟ ದಿನೇ ದಿನೇ ತೀವ್ರಗೊಳ್ಳುತ್ತಿದ್ದು ಪ್ರಧಾನಿ ಮೋದಿ ಇದುವರೆಗೂ ತಮ್ಮ ನೂತನ ಕಾಯ್ದೆಯನ್ನು ಸಮರ್ಥಿಸಿಕೊಳ್ಳುತ್ತಲೇ ಇದ್ದಾರೆ. ಆದರೆ ಪ್ರತಿಭಟನಾ ನಿರತ ರೈತರು ಕೃಷಿ ವಿರೋಧಿ ಕಾಯ್ದೆಯನ್ನು ರದ್ದು ಪಡಿಸಲೇಬೇಕು ಎಂದು ಪಟ್ಟುಹಿಡಿದಿದ್ದಾರೆ. ಪ್ರಧಾನಿ ಮೋದಿ ಗುರುದ್ವಾರಕ್ಕೆ ಭೇಟಿ ನೀಡಿರುವ ಸಂದರ್ಭದಲ್ಲಿ “ಗುರುವಿನ ಅನುಯಾಯಿಗಳು ಕೊರೆಯುವ ಚಳಿಯಲ್ಲಿ ರಸ್ತೆಯಲ್ಲಿದ್ದರೆ ನೀವು ಗುರುದ್ವಾರಕ್ಕೆ ಭೇಟಿ ನೀಡಿದ್ದನ್ನು, ಸ್ವತಃ ಗುರು ಕೂಡಾ ಕ್ಷಮಿಸಲಾರರು” ಎಂದು ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿ ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ‘ದೇಶಪ್ರೇಮಿ ಯುವಾಂದೋಲನ’

“ಸರ್, ದೇವರ ಸಂಬಂಧಿಗಳು ಕೊರೆಯುವ ಚಳಿಗಾಲದಲ್ಲಿ ಕುಳಿತಿದ್ದಾರೆ. ತಮ್ಮ ಅನುಯಾಯಿಗಳು ಮತ್ತು ಜನರು ಸಂತೋಷವಾಗಿರದೆ ಯಾವುದೇ ಗುರು ಕೂಡಾ ಸಂತೋಷವಾಗಿ ಇರುವುದಿಲ್ಲ. ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಪರಿಹರಿಸಿ” ಎಂದು ಚಮನ್ ವರ್ಸ್‌ನೆ ಹೇಳಿದ್ದಾರೆ.

“ಎಲ್ಲಾ ಸಿಖ್ಖರು ನಿಮ್ಮೊಂದಿಗಿದ್ದಾರೆ ಎಂದು ಹೇಳಲು ಮತ್ತು ತೋರಿಸಲು ನೀವು ಪ್ರಯತ್ನಿಸುತ್ತಿದ್ದೀರಿ. ಆದರೆ ಸಿಖ್ ರೈತರು ರಸ್ತೆಯಲ್ಲಿ ನಿಂತು ಕಾಯ್ದೆಯನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ. ದಯವಿಟ್ಟು ಕಾಯ್ದೆಯನ್ನು ಅಮಾನತುಗೊಳಿಸಿ ಹಾಗೂ ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಅನೇಕ ರಾಜ್ಯಗಳ ರೈತರು ತಮ್ಮ ಮನಗೆ ಹೋಗಲು ಅನುಕೂಲ ಮಾಡಿ” ಎಂದು ಒಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದ ಹುತಾತ್ಮರಿಗೆ ಇಂದು ಶ್ರದ್ಧಾಂಜಲಿ: ಇಲ್ಲಿವೆ ಪ್ರಮುಖ ಅಂಶಗಳು

ಅನಿಲ್ ಕಪೂರ್ ಎಂಬುವವರು‌, “ಮೋದಿಯವರೆ, ಟೈಮ್ ನಿಯತಕಾಲಿಕವು ನಿಮ್ಮನ್ನು ’ಡಿವೈಡ್ ಇನ್ ಚೀಫ್’ ಎಂದು ಕರೆದಿ‌ದ್ದು ಸರಿಯಾಗಿದೆ. ನೀವು ಸಿಖ್ ಸಮುದಾಯವನ್ನು ಎರಡು ಭಾಗಗಳಾಗಿ ವಿಂಗಡಿಸಲು ಪ್ರಯತ್ನಿಸುತ್ತಿದ್ದೀರಿ. ಪ್ರತಿಭಟಿಸುತ್ತಿರುವ ರೈತರನ್ನು ಪ್ರತ್ಯೇಕಿಸಲು ನೀವು ಬಯಸುತ್ತೀರಿ” ಎಂದು ಕಿಡಿಕಾರಿದ್ದಾರೆ.

“ಈ ನಾಟಕವೆಲ್ಲ ಬೇಡ. ರಕ್ತ, ಬೆವರು ಚೆಲ್ಲುವ ಮೂಲಕ ಉತ್ಪತ್ತಿಯಾಗುವ ಬೆಳೆಗೆ ಕನಿಷ್ಠ ಬೆಲೆ ಖಾತರಿಯ ಕಾನೂನು ಅಗತ್ಯವಿದೆ. ಗುರುವಿನ ಮಕ್ಕಳು ಕೊರೆಯುವ ಚಳಿಯಲ್ಲಿ ಸಾಯುತ್ತಿದ್ದಾರೆ ಮತ್ತು ನೀವು ಗುರುದ್ವಾರದಲ್ಲಿ ಚಿತ್ರೀಕರಣ ಮಾಡುತ್ತಿದ್ದೀರಿ. ದಿಕ್ಕಾರವಿದೆ. ರೈತರು ತಮ್ಮ ಬೆಳೆಗೆ ಕನಿಷ್ಠ ಬೆಲೆಯನ್ನಷ್ಟೇ ಕೇಳಿದ್ದಾರೆ, ವಜ್ರವನ್ನಲ್ಲ” ಎಂದು ಝಾಲಿಮ್ ಜಾಟ್ ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಹೊಸ ದೆಹಲಿಯಿಂದ ಟಿ‌ಕ್ರೀ ಮತ್ತು ಸಿಂಘೂ ಗಡಿಗೆ ತೆರಳುವ ಗೂಗಲ್ ಮ್ಯಾಪ್‌‌ನ ಚಿತ್ರವನ್ನು ಹಾಕಿರುವ ಟ್ರಾಕ್ಟರ್‌ ಟು ಟ್ವಿಟ್ಟರ್‌ ಹ್ಯಾಂಡಲ್, “ನರೇಂದ್ರ ಮೋದಿ ನಿಮ್ಮಲ್ಲಿ ವಿನಮ್ರ ವಿನಂತಿ, ನಿಜವಾದ ರೈತರು ಗುಜರಾತ್‌ನಲ್ಲಿ ಅಥವಾ ಗುರುದ್ವಾರ ಸಾಹಿಬ್‌ನಲ್ಲಿಲ್ಲ. ದಯವಿಟ್ಟು ಈ ನಕ್ಷೆಯನ್ನು ಅನುಸರಿಸಿ ಬನ್ನಿ, ಅದು ನಿಮ್ಮ ಸಮಯವನ್ನು ಉಳಿಸುವುದಲ್ಲದೆ, ಪ್ರತಿಭಟಿಸುತ್ತಿರುವ ಅರ್ಧ ಮಿಲಿಯನ್ ರೈತರ ಬಳಿಗೆ ಕರೆದೊಯ್ಯುತ್ತದೆ” ಎಂದಿದ್ದಾರೆ.

“ಗುರು ಸಾಹಿಬ್ ಅನುಯಾಯಿಗಳನ್ನು ರಸ್ತೆಯಲ್ಲಿ ಬಿಟ್ಟು ನಿಮ್ಮ ಪ್ರದರ್ಶನ ಏನು? ಸಿಖ್ಖರ ವಿರುದ್ಧ ನಿಮ್ಮ ಪಿತೂರಿ ಸ್ಪಷ್ಟವಾಗಿದೆ” ಎಂದು ಆಯುಷ್ ಹೇಳಿದ್ದಾರೆ.

ಇದನ್ನೂ ಓದಿ: ‘ಈಗ ನಾನು ರೈತರೊಂದಿಗೆ ನಿಲ್ಲಲೇಬೇಕು’ – ಬಿಜೆಪಿ ಮುಖಂಡ ಚೌಧರಿ ಬಿರೇಂದರ್ ಸಿಂಗ್

“ಶ್ರೀ ಗುರು ತೇಜ್ ಬಹದ್ದೂರ್ ಸಾಹಿಬ್ ಜಿ ಅವರಿಂದ ನೀವು ಕಲಿತದ್ದನ್ನು ಅನುಸರಿಸಲು ಬಯಸಿದರೆ, ಅವರು ಕಾಶ್ಮೀರಿ ಪಂಡಿತರ ಉಳಿವಿಗಾಗಿ ದೆಹಲಿಗೆ ಬಂದಂತೆಯೇ, ದೆಹಲಿಯ ಬಾಗಿಲನ್ನು ಬಡಿದುಕೊಳ್ಳುತ್ತಿರುವ ರೈತರ ಬಳಿ ಹೋಗಿ. ಈ ಮೂಲಕ ಅವರಿಂದ ಏನಾದರೂ ಕಲಿಯಿರಿ. ಕೇವಲ ಚಿತ್ರಗಳನ್ನು ಪೋಸ್ಟ್ ಮಾಡುವುದರಿಂದ ಏನೂ ಆಗುವುದಿಲ್ಲ” ಎಂದು ಮನ್‌‌ಜೀತ್‌ ಸಿಂಗ್‌‌ ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ತೀವ್ರ: 1 ಲಕ್ಷಕ್ಕೂ ಹೆಚ್ಚು ಗ್ರಾಮಗಳಲ್ಲಿ ‘ಶ್ರದ್ಧಾಂಜಲಿ ದಿವಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...