Homeಮುಖಪುಟಗುರುದ್ವಾರಕ್ಕೆ ಭೇಟಿ ನೀಡಿದ ಮೋದಿ : ’ಈ ನಾಟಕವೆಲ್ಲ ಬೇಡ’ ಎಂದ ನೆಟ್ಟಿಗರು!

ಗುರುದ್ವಾರಕ್ಕೆ ಭೇಟಿ ನೀಡಿದ ಮೋದಿ : ’ಈ ನಾಟಕವೆಲ್ಲ ಬೇಡ’ ಎಂದ ನೆಟ್ಟಿಗರು!

"ಗುರುವಿನ ಅನುಯಾಯಿಗಳು ಕೊರೆಯುವ ಚಳಿಯಲ್ಲಿ ರಸ್ತೆಯಲ್ಲಿದ್ದರೆ ನೀವು ಗುರುದ್ವಾರಕ್ಕೆ ಭೇಟಿ ನೀಡಿದ್ದನ್ನು, ಸ್ವತಃ ಗುರು ಕೂಡಾ ಕ್ಷಮಿಸಲಾರರು" ಎಂದು ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯಿದೆಗಳ ವಿರುದ್ದ ಕಳೆದ 25 ದಿನಗಳಿಂದ ರೈತರು ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದರೆ, ಪ್ರಧಾನಿ ಮೋದಿ ಸಿಖ್‌ ಸಮುದಾಯವನ್ನು ಮನವೊಲಿಸುವುದಕ್ಕಾಗಿ ನವ ದೆಹಲಿಯಲ್ಲಿರುವ ರಕಬ್‌ ಗಂಜ್‌ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಸಿಖ್ ಗುರು ತೇಗ್‌ ಬಹದ್ದೂರ್‌ ಅವರ ಬಲಿದಾದನ ದಿನವಾದ ಇಂದು ಪ್ರಧಾನಿ ಮೋದಿ ಗುರುದ್ವಾರಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ್ದು, ಅದರ ಹಲವಾರು ಚಿತ್ರಗಳನ್ನು ತಮ್ಮ ಟ್ವಿಟ್ಟರ್‌‌ನಲ್ಲಿ ಹಾಕಿಕೊಂಡಿದ್ದಾರೆ. “ಗುರುದ್ವಾರ ರಕಬ್ ಗಂಜ್ ಸಾಹಿಬ್‌‌ನಲ್ಲಿರುವ ಶ್ರೀ ಗುರು ತೇಗ್ ಬಹದ್ದೂರ್‌‌ರಿಗೆ ಇಂದು ನಾನು ಗೌರವ ನಮನ ಸಲ್ಲಿಸಿದೆ. ಅವರು ಹಿಂದೂ ಧರ್ಮವನ್ನು ಉಳಿಸುವ ಸಲುವಾಗಿ ಹಲವಾರು ಕಾರ್ಯಗಳನ್ನು ಮಾಡಿದ್ದು, ಸಾಮರಸ್ಯದ ಸಂದೇಶ ನೀಡಿದ್ದಾರೆ. ಅವರ ಜೀವನದಲ್ಲಿ ಧೈರ್ಯ ಮತ್ತು ಸಹಾನುಭೂತಿ ಗುಣಗಳು ತುಂಬಿತ್ತು. ಅವರ ಹುತಾತ್ಮ ದಿನದಂದು ನಾನು ಅವರಿಗೆ ತಲೆಬಾಗುತ್ತೇನೆ” ಎಂದು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಗೋದಿ ಮೀಡಿಯಾಗಳಿಗೆ ಸೆಡ್ಡು: ಸ್ವಂತ ಚಾನೆಲ್ ಆರಂಭಿಸಿದ ದೆಹಲಿಯ ಹೋರಾಟನಿರತ ರೈತರು!

ಡಿಸೆಂಬರ್‌ 15 ರಂದು ಕೂಡಾ ಗುಜರಾತ್‌ನ ಕಚ್‌‌ನಲ್ಲಿ ಸಿಖ್‌ ಸಮುದಾಯದ ರೈತರ ನಿಯೋಗವನ್ನು ಮೋದಿ ಭೇಟಿಯಾಗಿದ್ದಾಗಿ ಮಾಧ್ಯಮಗಳು ವರದಿ ಮಾಡಿತ್ತು. ಆದರೆ ಅದು ರೈತರ ನಿಯೋಗವಾಗಿರದೆ ಬಿಜೆಪಿ ಕಾರ್ಯಕರ್ತರ ನಿಯೋಗ ಎಂದು ನ್ಯಾಷನಲ್ ಹೆರಾಲ್ಡ್‌ ತನಿಖಾ ವರದಿ ಮಾಡಿದೆ. ದೆಹಲಿಯ ಗಡಿಯ ಸುತ್ತಲೂ ಪ್ರತಿಭಟನೆ ನಡೆಸುತ್ತಿರುವ ರೈತರಲ್ಲಿ ಸಿಖ್ ಸಮುದಾಯದವರೇ ಹೆಚ್ಚಾಗಿ ಕಾಣುತ್ತಿರುವುದರಿಂದ ಪ್ರಧಾನಿ ಸಿಖ್ಖರನ್ನು ಮನವೊಲಿಸಲು ಪ್ರಯತ್ನಿಸುತ್ತದ್ದಾರೆ ಎಂದು ಹಲವಾರು ಜನರು ಆರೋಪಿಸಿದ್ದಾರೆ.

ರೈತರ ಹೋರಾಟ ದಿನೇ ದಿನೇ ತೀವ್ರಗೊಳ್ಳುತ್ತಿದ್ದು ಪ್ರಧಾನಿ ಮೋದಿ ಇದುವರೆಗೂ ತಮ್ಮ ನೂತನ ಕಾಯ್ದೆಯನ್ನು ಸಮರ್ಥಿಸಿಕೊಳ್ಳುತ್ತಲೇ ಇದ್ದಾರೆ. ಆದರೆ ಪ್ರತಿಭಟನಾ ನಿರತ ರೈತರು ಕೃಷಿ ವಿರೋಧಿ ಕಾಯ್ದೆಯನ್ನು ರದ್ದು ಪಡಿಸಲೇಬೇಕು ಎಂದು ಪಟ್ಟುಹಿಡಿದಿದ್ದಾರೆ. ಪ್ರಧಾನಿ ಮೋದಿ ಗುರುದ್ವಾರಕ್ಕೆ ಭೇಟಿ ನೀಡಿರುವ ಸಂದರ್ಭದಲ್ಲಿ “ಗುರುವಿನ ಅನುಯಾಯಿಗಳು ಕೊರೆಯುವ ಚಳಿಯಲ್ಲಿ ರಸ್ತೆಯಲ್ಲಿದ್ದರೆ ನೀವು ಗುರುದ್ವಾರಕ್ಕೆ ಭೇಟಿ ನೀಡಿದ್ದನ್ನು, ಸ್ವತಃ ಗುರು ಕೂಡಾ ಕ್ಷಮಿಸಲಾರರು” ಎಂದು ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿ ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ‘ದೇಶಪ್ರೇಮಿ ಯುವಾಂದೋಲನ’

“ಸರ್, ದೇವರ ಸಂಬಂಧಿಗಳು ಕೊರೆಯುವ ಚಳಿಗಾಲದಲ್ಲಿ ಕುಳಿತಿದ್ದಾರೆ. ತಮ್ಮ ಅನುಯಾಯಿಗಳು ಮತ್ತು ಜನರು ಸಂತೋಷವಾಗಿರದೆ ಯಾವುದೇ ಗುರು ಕೂಡಾ ಸಂತೋಷವಾಗಿ ಇರುವುದಿಲ್ಲ. ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಪರಿಹರಿಸಿ” ಎಂದು ಚಮನ್ ವರ್ಸ್‌ನೆ ಹೇಳಿದ್ದಾರೆ.

“ಎಲ್ಲಾ ಸಿಖ್ಖರು ನಿಮ್ಮೊಂದಿಗಿದ್ದಾರೆ ಎಂದು ಹೇಳಲು ಮತ್ತು ತೋರಿಸಲು ನೀವು ಪ್ರಯತ್ನಿಸುತ್ತಿದ್ದೀರಿ. ಆದರೆ ಸಿಖ್ ರೈತರು ರಸ್ತೆಯಲ್ಲಿ ನಿಂತು ಕಾಯ್ದೆಯನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ. ದಯವಿಟ್ಟು ಕಾಯ್ದೆಯನ್ನು ಅಮಾನತುಗೊಳಿಸಿ ಹಾಗೂ ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಅನೇಕ ರಾಜ್ಯಗಳ ರೈತರು ತಮ್ಮ ಮನಗೆ ಹೋಗಲು ಅನುಕೂಲ ಮಾಡಿ” ಎಂದು ಒಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದ ಹುತಾತ್ಮರಿಗೆ ಇಂದು ಶ್ರದ್ಧಾಂಜಲಿ: ಇಲ್ಲಿವೆ ಪ್ರಮುಖ ಅಂಶಗಳು

ಅನಿಲ್ ಕಪೂರ್ ಎಂಬುವವರು‌, “ಮೋದಿಯವರೆ, ಟೈಮ್ ನಿಯತಕಾಲಿಕವು ನಿಮ್ಮನ್ನು ’ಡಿವೈಡ್ ಇನ್ ಚೀಫ್’ ಎಂದು ಕರೆದಿ‌ದ್ದು ಸರಿಯಾಗಿದೆ. ನೀವು ಸಿಖ್ ಸಮುದಾಯವನ್ನು ಎರಡು ಭಾಗಗಳಾಗಿ ವಿಂಗಡಿಸಲು ಪ್ರಯತ್ನಿಸುತ್ತಿದ್ದೀರಿ. ಪ್ರತಿಭಟಿಸುತ್ತಿರುವ ರೈತರನ್ನು ಪ್ರತ್ಯೇಕಿಸಲು ನೀವು ಬಯಸುತ್ತೀರಿ” ಎಂದು ಕಿಡಿಕಾರಿದ್ದಾರೆ.

“ಈ ನಾಟಕವೆಲ್ಲ ಬೇಡ. ರಕ್ತ, ಬೆವರು ಚೆಲ್ಲುವ ಮೂಲಕ ಉತ್ಪತ್ತಿಯಾಗುವ ಬೆಳೆಗೆ ಕನಿಷ್ಠ ಬೆಲೆ ಖಾತರಿಯ ಕಾನೂನು ಅಗತ್ಯವಿದೆ. ಗುರುವಿನ ಮಕ್ಕಳು ಕೊರೆಯುವ ಚಳಿಯಲ್ಲಿ ಸಾಯುತ್ತಿದ್ದಾರೆ ಮತ್ತು ನೀವು ಗುರುದ್ವಾರದಲ್ಲಿ ಚಿತ್ರೀಕರಣ ಮಾಡುತ್ತಿದ್ದೀರಿ. ದಿಕ್ಕಾರವಿದೆ. ರೈತರು ತಮ್ಮ ಬೆಳೆಗೆ ಕನಿಷ್ಠ ಬೆಲೆಯನ್ನಷ್ಟೇ ಕೇಳಿದ್ದಾರೆ, ವಜ್ರವನ್ನಲ್ಲ” ಎಂದು ಝಾಲಿಮ್ ಜಾಟ್ ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಹೊಸ ದೆಹಲಿಯಿಂದ ಟಿ‌ಕ್ರೀ ಮತ್ತು ಸಿಂಘೂ ಗಡಿಗೆ ತೆರಳುವ ಗೂಗಲ್ ಮ್ಯಾಪ್‌‌ನ ಚಿತ್ರವನ್ನು ಹಾಕಿರುವ ಟ್ರಾಕ್ಟರ್‌ ಟು ಟ್ವಿಟ್ಟರ್‌ ಹ್ಯಾಂಡಲ್, “ನರೇಂದ್ರ ಮೋದಿ ನಿಮ್ಮಲ್ಲಿ ವಿನಮ್ರ ವಿನಂತಿ, ನಿಜವಾದ ರೈತರು ಗುಜರಾತ್‌ನಲ್ಲಿ ಅಥವಾ ಗುರುದ್ವಾರ ಸಾಹಿಬ್‌ನಲ್ಲಿಲ್ಲ. ದಯವಿಟ್ಟು ಈ ನಕ್ಷೆಯನ್ನು ಅನುಸರಿಸಿ ಬನ್ನಿ, ಅದು ನಿಮ್ಮ ಸಮಯವನ್ನು ಉಳಿಸುವುದಲ್ಲದೆ, ಪ್ರತಿಭಟಿಸುತ್ತಿರುವ ಅರ್ಧ ಮಿಲಿಯನ್ ರೈತರ ಬಳಿಗೆ ಕರೆದೊಯ್ಯುತ್ತದೆ” ಎಂದಿದ್ದಾರೆ.

“ಗುರು ಸಾಹಿಬ್ ಅನುಯಾಯಿಗಳನ್ನು ರಸ್ತೆಯಲ್ಲಿ ಬಿಟ್ಟು ನಿಮ್ಮ ಪ್ರದರ್ಶನ ಏನು? ಸಿಖ್ಖರ ವಿರುದ್ಧ ನಿಮ್ಮ ಪಿತೂರಿ ಸ್ಪಷ್ಟವಾಗಿದೆ” ಎಂದು ಆಯುಷ್ ಹೇಳಿದ್ದಾರೆ.

ಇದನ್ನೂ ಓದಿ: ‘ಈಗ ನಾನು ರೈತರೊಂದಿಗೆ ನಿಲ್ಲಲೇಬೇಕು’ – ಬಿಜೆಪಿ ಮುಖಂಡ ಚೌಧರಿ ಬಿರೇಂದರ್ ಸಿಂಗ್

“ಶ್ರೀ ಗುರು ತೇಜ್ ಬಹದ್ದೂರ್ ಸಾಹಿಬ್ ಜಿ ಅವರಿಂದ ನೀವು ಕಲಿತದ್ದನ್ನು ಅನುಸರಿಸಲು ಬಯಸಿದರೆ, ಅವರು ಕಾಶ್ಮೀರಿ ಪಂಡಿತರ ಉಳಿವಿಗಾಗಿ ದೆಹಲಿಗೆ ಬಂದಂತೆಯೇ, ದೆಹಲಿಯ ಬಾಗಿಲನ್ನು ಬಡಿದುಕೊಳ್ಳುತ್ತಿರುವ ರೈತರ ಬಳಿ ಹೋಗಿ. ಈ ಮೂಲಕ ಅವರಿಂದ ಏನಾದರೂ ಕಲಿಯಿರಿ. ಕೇವಲ ಚಿತ್ರಗಳನ್ನು ಪೋಸ್ಟ್ ಮಾಡುವುದರಿಂದ ಏನೂ ಆಗುವುದಿಲ್ಲ” ಎಂದು ಮನ್‌‌ಜೀತ್‌ ಸಿಂಗ್‌‌ ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ತೀವ್ರ: 1 ಲಕ್ಷಕ್ಕೂ ಹೆಚ್ಚು ಗ್ರಾಮಗಳಲ್ಲಿ ‘ಶ್ರದ್ಧಾಂಜಲಿ ದಿವಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...