Homeಮುಖಪುಟಗುರುದ್ವಾರಕ್ಕೆ ಭೇಟಿ ನೀಡಿದ ಮೋದಿ : ’ಈ ನಾಟಕವೆಲ್ಲ ಬೇಡ’ ಎಂದ ನೆಟ್ಟಿಗರು!

ಗುರುದ್ವಾರಕ್ಕೆ ಭೇಟಿ ನೀಡಿದ ಮೋದಿ : ’ಈ ನಾಟಕವೆಲ್ಲ ಬೇಡ’ ಎಂದ ನೆಟ್ಟಿಗರು!

"ಗುರುವಿನ ಅನುಯಾಯಿಗಳು ಕೊರೆಯುವ ಚಳಿಯಲ್ಲಿ ರಸ್ತೆಯಲ್ಲಿದ್ದರೆ ನೀವು ಗುರುದ್ವಾರಕ್ಕೆ ಭೇಟಿ ನೀಡಿದ್ದನ್ನು, ಸ್ವತಃ ಗುರು ಕೂಡಾ ಕ್ಷಮಿಸಲಾರರು" ಎಂದು ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯಿದೆಗಳ ವಿರುದ್ದ ಕಳೆದ 25 ದಿನಗಳಿಂದ ರೈತರು ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದರೆ, ಪ್ರಧಾನಿ ಮೋದಿ ಸಿಖ್‌ ಸಮುದಾಯವನ್ನು ಮನವೊಲಿಸುವುದಕ್ಕಾಗಿ ನವ ದೆಹಲಿಯಲ್ಲಿರುವ ರಕಬ್‌ ಗಂಜ್‌ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಸಿಖ್ ಗುರು ತೇಗ್‌ ಬಹದ್ದೂರ್‌ ಅವರ ಬಲಿದಾದನ ದಿನವಾದ ಇಂದು ಪ್ರಧಾನಿ ಮೋದಿ ಗುರುದ್ವಾರಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ್ದು, ಅದರ ಹಲವಾರು ಚಿತ್ರಗಳನ್ನು ತಮ್ಮ ಟ್ವಿಟ್ಟರ್‌‌ನಲ್ಲಿ ಹಾಕಿಕೊಂಡಿದ್ದಾರೆ. “ಗುರುದ್ವಾರ ರಕಬ್ ಗಂಜ್ ಸಾಹಿಬ್‌‌ನಲ್ಲಿರುವ ಶ್ರೀ ಗುರು ತೇಗ್ ಬಹದ್ದೂರ್‌‌ರಿಗೆ ಇಂದು ನಾನು ಗೌರವ ನಮನ ಸಲ್ಲಿಸಿದೆ. ಅವರು ಹಿಂದೂ ಧರ್ಮವನ್ನು ಉಳಿಸುವ ಸಲುವಾಗಿ ಹಲವಾರು ಕಾರ್ಯಗಳನ್ನು ಮಾಡಿದ್ದು, ಸಾಮರಸ್ಯದ ಸಂದೇಶ ನೀಡಿದ್ದಾರೆ. ಅವರ ಜೀವನದಲ್ಲಿ ಧೈರ್ಯ ಮತ್ತು ಸಹಾನುಭೂತಿ ಗುಣಗಳು ತುಂಬಿತ್ತು. ಅವರ ಹುತಾತ್ಮ ದಿನದಂದು ನಾನು ಅವರಿಗೆ ತಲೆಬಾಗುತ್ತೇನೆ” ಎಂದು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಗೋದಿ ಮೀಡಿಯಾಗಳಿಗೆ ಸೆಡ್ಡು: ಸ್ವಂತ ಚಾನೆಲ್ ಆರಂಭಿಸಿದ ದೆಹಲಿಯ ಹೋರಾಟನಿರತ ರೈತರು!

ಡಿಸೆಂಬರ್‌ 15 ರಂದು ಕೂಡಾ ಗುಜರಾತ್‌ನ ಕಚ್‌‌ನಲ್ಲಿ ಸಿಖ್‌ ಸಮುದಾಯದ ರೈತರ ನಿಯೋಗವನ್ನು ಮೋದಿ ಭೇಟಿಯಾಗಿದ್ದಾಗಿ ಮಾಧ್ಯಮಗಳು ವರದಿ ಮಾಡಿತ್ತು. ಆದರೆ ಅದು ರೈತರ ನಿಯೋಗವಾಗಿರದೆ ಬಿಜೆಪಿ ಕಾರ್ಯಕರ್ತರ ನಿಯೋಗ ಎಂದು ನ್ಯಾಷನಲ್ ಹೆರಾಲ್ಡ್‌ ತನಿಖಾ ವರದಿ ಮಾಡಿದೆ. ದೆಹಲಿಯ ಗಡಿಯ ಸುತ್ತಲೂ ಪ್ರತಿಭಟನೆ ನಡೆಸುತ್ತಿರುವ ರೈತರಲ್ಲಿ ಸಿಖ್ ಸಮುದಾಯದವರೇ ಹೆಚ್ಚಾಗಿ ಕಾಣುತ್ತಿರುವುದರಿಂದ ಪ್ರಧಾನಿ ಸಿಖ್ಖರನ್ನು ಮನವೊಲಿಸಲು ಪ್ರಯತ್ನಿಸುತ್ತದ್ದಾರೆ ಎಂದು ಹಲವಾರು ಜನರು ಆರೋಪಿಸಿದ್ದಾರೆ.

ರೈತರ ಹೋರಾಟ ದಿನೇ ದಿನೇ ತೀವ್ರಗೊಳ್ಳುತ್ತಿದ್ದು ಪ್ರಧಾನಿ ಮೋದಿ ಇದುವರೆಗೂ ತಮ್ಮ ನೂತನ ಕಾಯ್ದೆಯನ್ನು ಸಮರ್ಥಿಸಿಕೊಳ್ಳುತ್ತಲೇ ಇದ್ದಾರೆ. ಆದರೆ ಪ್ರತಿಭಟನಾ ನಿರತ ರೈತರು ಕೃಷಿ ವಿರೋಧಿ ಕಾಯ್ದೆಯನ್ನು ರದ್ದು ಪಡಿಸಲೇಬೇಕು ಎಂದು ಪಟ್ಟುಹಿಡಿದಿದ್ದಾರೆ. ಪ್ರಧಾನಿ ಮೋದಿ ಗುರುದ್ವಾರಕ್ಕೆ ಭೇಟಿ ನೀಡಿರುವ ಸಂದರ್ಭದಲ್ಲಿ “ಗುರುವಿನ ಅನುಯಾಯಿಗಳು ಕೊರೆಯುವ ಚಳಿಯಲ್ಲಿ ರಸ್ತೆಯಲ್ಲಿದ್ದರೆ ನೀವು ಗುರುದ್ವಾರಕ್ಕೆ ಭೇಟಿ ನೀಡಿದ್ದನ್ನು, ಸ್ವತಃ ಗುರು ಕೂಡಾ ಕ್ಷಮಿಸಲಾರರು” ಎಂದು ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿ ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ‘ದೇಶಪ್ರೇಮಿ ಯುವಾಂದೋಲನ’

“ಸರ್, ದೇವರ ಸಂಬಂಧಿಗಳು ಕೊರೆಯುವ ಚಳಿಗಾಲದಲ್ಲಿ ಕುಳಿತಿದ್ದಾರೆ. ತಮ್ಮ ಅನುಯಾಯಿಗಳು ಮತ್ತು ಜನರು ಸಂತೋಷವಾಗಿರದೆ ಯಾವುದೇ ಗುರು ಕೂಡಾ ಸಂತೋಷವಾಗಿ ಇರುವುದಿಲ್ಲ. ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಪರಿಹರಿಸಿ” ಎಂದು ಚಮನ್ ವರ್ಸ್‌ನೆ ಹೇಳಿದ್ದಾರೆ.

“ಎಲ್ಲಾ ಸಿಖ್ಖರು ನಿಮ್ಮೊಂದಿಗಿದ್ದಾರೆ ಎಂದು ಹೇಳಲು ಮತ್ತು ತೋರಿಸಲು ನೀವು ಪ್ರಯತ್ನಿಸುತ್ತಿದ್ದೀರಿ. ಆದರೆ ಸಿಖ್ ರೈತರು ರಸ್ತೆಯಲ್ಲಿ ನಿಂತು ಕಾಯ್ದೆಯನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ. ದಯವಿಟ್ಟು ಕಾಯ್ದೆಯನ್ನು ಅಮಾನತುಗೊಳಿಸಿ ಹಾಗೂ ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಅನೇಕ ರಾಜ್ಯಗಳ ರೈತರು ತಮ್ಮ ಮನಗೆ ಹೋಗಲು ಅನುಕೂಲ ಮಾಡಿ” ಎಂದು ಒಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದ ಹುತಾತ್ಮರಿಗೆ ಇಂದು ಶ್ರದ್ಧಾಂಜಲಿ: ಇಲ್ಲಿವೆ ಪ್ರಮುಖ ಅಂಶಗಳು

ಅನಿಲ್ ಕಪೂರ್ ಎಂಬುವವರು‌, “ಮೋದಿಯವರೆ, ಟೈಮ್ ನಿಯತಕಾಲಿಕವು ನಿಮ್ಮನ್ನು ’ಡಿವೈಡ್ ಇನ್ ಚೀಫ್’ ಎಂದು ಕರೆದಿ‌ದ್ದು ಸರಿಯಾಗಿದೆ. ನೀವು ಸಿಖ್ ಸಮುದಾಯವನ್ನು ಎರಡು ಭಾಗಗಳಾಗಿ ವಿಂಗಡಿಸಲು ಪ್ರಯತ್ನಿಸುತ್ತಿದ್ದೀರಿ. ಪ್ರತಿಭಟಿಸುತ್ತಿರುವ ರೈತರನ್ನು ಪ್ರತ್ಯೇಕಿಸಲು ನೀವು ಬಯಸುತ್ತೀರಿ” ಎಂದು ಕಿಡಿಕಾರಿದ್ದಾರೆ.

“ಈ ನಾಟಕವೆಲ್ಲ ಬೇಡ. ರಕ್ತ, ಬೆವರು ಚೆಲ್ಲುವ ಮೂಲಕ ಉತ್ಪತ್ತಿಯಾಗುವ ಬೆಳೆಗೆ ಕನಿಷ್ಠ ಬೆಲೆ ಖಾತರಿಯ ಕಾನೂನು ಅಗತ್ಯವಿದೆ. ಗುರುವಿನ ಮಕ್ಕಳು ಕೊರೆಯುವ ಚಳಿಯಲ್ಲಿ ಸಾಯುತ್ತಿದ್ದಾರೆ ಮತ್ತು ನೀವು ಗುರುದ್ವಾರದಲ್ಲಿ ಚಿತ್ರೀಕರಣ ಮಾಡುತ್ತಿದ್ದೀರಿ. ದಿಕ್ಕಾರವಿದೆ. ರೈತರು ತಮ್ಮ ಬೆಳೆಗೆ ಕನಿಷ್ಠ ಬೆಲೆಯನ್ನಷ್ಟೇ ಕೇಳಿದ್ದಾರೆ, ವಜ್ರವನ್ನಲ್ಲ” ಎಂದು ಝಾಲಿಮ್ ಜಾಟ್ ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಹೊಸ ದೆಹಲಿಯಿಂದ ಟಿ‌ಕ್ರೀ ಮತ್ತು ಸಿಂಘೂ ಗಡಿಗೆ ತೆರಳುವ ಗೂಗಲ್ ಮ್ಯಾಪ್‌‌ನ ಚಿತ್ರವನ್ನು ಹಾಕಿರುವ ಟ್ರಾಕ್ಟರ್‌ ಟು ಟ್ವಿಟ್ಟರ್‌ ಹ್ಯಾಂಡಲ್, “ನರೇಂದ್ರ ಮೋದಿ ನಿಮ್ಮಲ್ಲಿ ವಿನಮ್ರ ವಿನಂತಿ, ನಿಜವಾದ ರೈತರು ಗುಜರಾತ್‌ನಲ್ಲಿ ಅಥವಾ ಗುರುದ್ವಾರ ಸಾಹಿಬ್‌ನಲ್ಲಿಲ್ಲ. ದಯವಿಟ್ಟು ಈ ನಕ್ಷೆಯನ್ನು ಅನುಸರಿಸಿ ಬನ್ನಿ, ಅದು ನಿಮ್ಮ ಸಮಯವನ್ನು ಉಳಿಸುವುದಲ್ಲದೆ, ಪ್ರತಿಭಟಿಸುತ್ತಿರುವ ಅರ್ಧ ಮಿಲಿಯನ್ ರೈತರ ಬಳಿಗೆ ಕರೆದೊಯ್ಯುತ್ತದೆ” ಎಂದಿದ್ದಾರೆ.

“ಗುರು ಸಾಹಿಬ್ ಅನುಯಾಯಿಗಳನ್ನು ರಸ್ತೆಯಲ್ಲಿ ಬಿಟ್ಟು ನಿಮ್ಮ ಪ್ರದರ್ಶನ ಏನು? ಸಿಖ್ಖರ ವಿರುದ್ಧ ನಿಮ್ಮ ಪಿತೂರಿ ಸ್ಪಷ್ಟವಾಗಿದೆ” ಎಂದು ಆಯುಷ್ ಹೇಳಿದ್ದಾರೆ.

ಇದನ್ನೂ ಓದಿ: ‘ಈಗ ನಾನು ರೈತರೊಂದಿಗೆ ನಿಲ್ಲಲೇಬೇಕು’ – ಬಿಜೆಪಿ ಮುಖಂಡ ಚೌಧರಿ ಬಿರೇಂದರ್ ಸಿಂಗ್

“ಶ್ರೀ ಗುರು ತೇಜ್ ಬಹದ್ದೂರ್ ಸಾಹಿಬ್ ಜಿ ಅವರಿಂದ ನೀವು ಕಲಿತದ್ದನ್ನು ಅನುಸರಿಸಲು ಬಯಸಿದರೆ, ಅವರು ಕಾಶ್ಮೀರಿ ಪಂಡಿತರ ಉಳಿವಿಗಾಗಿ ದೆಹಲಿಗೆ ಬಂದಂತೆಯೇ, ದೆಹಲಿಯ ಬಾಗಿಲನ್ನು ಬಡಿದುಕೊಳ್ಳುತ್ತಿರುವ ರೈತರ ಬಳಿ ಹೋಗಿ. ಈ ಮೂಲಕ ಅವರಿಂದ ಏನಾದರೂ ಕಲಿಯಿರಿ. ಕೇವಲ ಚಿತ್ರಗಳನ್ನು ಪೋಸ್ಟ್ ಮಾಡುವುದರಿಂದ ಏನೂ ಆಗುವುದಿಲ್ಲ” ಎಂದು ಮನ್‌‌ಜೀತ್‌ ಸಿಂಗ್‌‌ ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ತೀವ್ರ: 1 ಲಕ್ಷಕ್ಕೂ ಹೆಚ್ಚು ಗ್ರಾಮಗಳಲ್ಲಿ ‘ಶ್ರದ್ಧಾಂಜಲಿ ದಿವಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...