Homeಮುಖಪುಟಗುರುದ್ವಾರಕ್ಕೆ ಭೇಟಿ ನೀಡಿದ ಮೋದಿ : ’ಈ ನಾಟಕವೆಲ್ಲ ಬೇಡ’ ಎಂದ ನೆಟ್ಟಿಗರು!

ಗುರುದ್ವಾರಕ್ಕೆ ಭೇಟಿ ನೀಡಿದ ಮೋದಿ : ’ಈ ನಾಟಕವೆಲ್ಲ ಬೇಡ’ ಎಂದ ನೆಟ್ಟಿಗರು!

"ಗುರುವಿನ ಅನುಯಾಯಿಗಳು ಕೊರೆಯುವ ಚಳಿಯಲ್ಲಿ ರಸ್ತೆಯಲ್ಲಿದ್ದರೆ ನೀವು ಗುರುದ್ವಾರಕ್ಕೆ ಭೇಟಿ ನೀಡಿದ್ದನ್ನು, ಸ್ವತಃ ಗುರು ಕೂಡಾ ಕ್ಷಮಿಸಲಾರರು" ಎಂದು ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯಿದೆಗಳ ವಿರುದ್ದ ಕಳೆದ 25 ದಿನಗಳಿಂದ ರೈತರು ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದರೆ, ಪ್ರಧಾನಿ ಮೋದಿ ಸಿಖ್‌ ಸಮುದಾಯವನ್ನು ಮನವೊಲಿಸುವುದಕ್ಕಾಗಿ ನವ ದೆಹಲಿಯಲ್ಲಿರುವ ರಕಬ್‌ ಗಂಜ್‌ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಸಿಖ್ ಗುರು ತೇಗ್‌ ಬಹದ್ದೂರ್‌ ಅವರ ಬಲಿದಾದನ ದಿನವಾದ ಇಂದು ಪ್ರಧಾನಿ ಮೋದಿ ಗುರುದ್ವಾರಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ್ದು, ಅದರ ಹಲವಾರು ಚಿತ್ರಗಳನ್ನು ತಮ್ಮ ಟ್ವಿಟ್ಟರ್‌‌ನಲ್ಲಿ ಹಾಕಿಕೊಂಡಿದ್ದಾರೆ. “ಗುರುದ್ವಾರ ರಕಬ್ ಗಂಜ್ ಸಾಹಿಬ್‌‌ನಲ್ಲಿರುವ ಶ್ರೀ ಗುರು ತೇಗ್ ಬಹದ್ದೂರ್‌‌ರಿಗೆ ಇಂದು ನಾನು ಗೌರವ ನಮನ ಸಲ್ಲಿಸಿದೆ. ಅವರು ಹಿಂದೂ ಧರ್ಮವನ್ನು ಉಳಿಸುವ ಸಲುವಾಗಿ ಹಲವಾರು ಕಾರ್ಯಗಳನ್ನು ಮಾಡಿದ್ದು, ಸಾಮರಸ್ಯದ ಸಂದೇಶ ನೀಡಿದ್ದಾರೆ. ಅವರ ಜೀವನದಲ್ಲಿ ಧೈರ್ಯ ಮತ್ತು ಸಹಾನುಭೂತಿ ಗುಣಗಳು ತುಂಬಿತ್ತು. ಅವರ ಹುತಾತ್ಮ ದಿನದಂದು ನಾನು ಅವರಿಗೆ ತಲೆಬಾಗುತ್ತೇನೆ” ಎಂದು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಗೋದಿ ಮೀಡಿಯಾಗಳಿಗೆ ಸೆಡ್ಡು: ಸ್ವಂತ ಚಾನೆಲ್ ಆರಂಭಿಸಿದ ದೆಹಲಿಯ ಹೋರಾಟನಿರತ ರೈತರು!

ಡಿಸೆಂಬರ್‌ 15 ರಂದು ಕೂಡಾ ಗುಜರಾತ್‌ನ ಕಚ್‌‌ನಲ್ಲಿ ಸಿಖ್‌ ಸಮುದಾಯದ ರೈತರ ನಿಯೋಗವನ್ನು ಮೋದಿ ಭೇಟಿಯಾಗಿದ್ದಾಗಿ ಮಾಧ್ಯಮಗಳು ವರದಿ ಮಾಡಿತ್ತು. ಆದರೆ ಅದು ರೈತರ ನಿಯೋಗವಾಗಿರದೆ ಬಿಜೆಪಿ ಕಾರ್ಯಕರ್ತರ ನಿಯೋಗ ಎಂದು ನ್ಯಾಷನಲ್ ಹೆರಾಲ್ಡ್‌ ತನಿಖಾ ವರದಿ ಮಾಡಿದೆ. ದೆಹಲಿಯ ಗಡಿಯ ಸುತ್ತಲೂ ಪ್ರತಿಭಟನೆ ನಡೆಸುತ್ತಿರುವ ರೈತರಲ್ಲಿ ಸಿಖ್ ಸಮುದಾಯದವರೇ ಹೆಚ್ಚಾಗಿ ಕಾಣುತ್ತಿರುವುದರಿಂದ ಪ್ರಧಾನಿ ಸಿಖ್ಖರನ್ನು ಮನವೊಲಿಸಲು ಪ್ರಯತ್ನಿಸುತ್ತದ್ದಾರೆ ಎಂದು ಹಲವಾರು ಜನರು ಆರೋಪಿಸಿದ್ದಾರೆ.

ರೈತರ ಹೋರಾಟ ದಿನೇ ದಿನೇ ತೀವ್ರಗೊಳ್ಳುತ್ತಿದ್ದು ಪ್ರಧಾನಿ ಮೋದಿ ಇದುವರೆಗೂ ತಮ್ಮ ನೂತನ ಕಾಯ್ದೆಯನ್ನು ಸಮರ್ಥಿಸಿಕೊಳ್ಳುತ್ತಲೇ ಇದ್ದಾರೆ. ಆದರೆ ಪ್ರತಿಭಟನಾ ನಿರತ ರೈತರು ಕೃಷಿ ವಿರೋಧಿ ಕಾಯ್ದೆಯನ್ನು ರದ್ದು ಪಡಿಸಲೇಬೇಕು ಎಂದು ಪಟ್ಟುಹಿಡಿದಿದ್ದಾರೆ. ಪ್ರಧಾನಿ ಮೋದಿ ಗುರುದ್ವಾರಕ್ಕೆ ಭೇಟಿ ನೀಡಿರುವ ಸಂದರ್ಭದಲ್ಲಿ “ಗುರುವಿನ ಅನುಯಾಯಿಗಳು ಕೊರೆಯುವ ಚಳಿಯಲ್ಲಿ ರಸ್ತೆಯಲ್ಲಿದ್ದರೆ ನೀವು ಗುರುದ್ವಾರಕ್ಕೆ ಭೇಟಿ ನೀಡಿದ್ದನ್ನು, ಸ್ವತಃ ಗುರು ಕೂಡಾ ಕ್ಷಮಿಸಲಾರರು” ಎಂದು ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿ ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ‘ದೇಶಪ್ರೇಮಿ ಯುವಾಂದೋಲನ’

“ಸರ್, ದೇವರ ಸಂಬಂಧಿಗಳು ಕೊರೆಯುವ ಚಳಿಗಾಲದಲ್ಲಿ ಕುಳಿತಿದ್ದಾರೆ. ತಮ್ಮ ಅನುಯಾಯಿಗಳು ಮತ್ತು ಜನರು ಸಂತೋಷವಾಗಿರದೆ ಯಾವುದೇ ಗುರು ಕೂಡಾ ಸಂತೋಷವಾಗಿ ಇರುವುದಿಲ್ಲ. ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಪರಿಹರಿಸಿ” ಎಂದು ಚಮನ್ ವರ್ಸ್‌ನೆ ಹೇಳಿದ್ದಾರೆ.

“ಎಲ್ಲಾ ಸಿಖ್ಖರು ನಿಮ್ಮೊಂದಿಗಿದ್ದಾರೆ ಎಂದು ಹೇಳಲು ಮತ್ತು ತೋರಿಸಲು ನೀವು ಪ್ರಯತ್ನಿಸುತ್ತಿದ್ದೀರಿ. ಆದರೆ ಸಿಖ್ ರೈತರು ರಸ್ತೆಯಲ್ಲಿ ನಿಂತು ಕಾಯ್ದೆಯನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ. ದಯವಿಟ್ಟು ಕಾಯ್ದೆಯನ್ನು ಅಮಾನತುಗೊಳಿಸಿ ಹಾಗೂ ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಅನೇಕ ರಾಜ್ಯಗಳ ರೈತರು ತಮ್ಮ ಮನಗೆ ಹೋಗಲು ಅನುಕೂಲ ಮಾಡಿ” ಎಂದು ಒಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದ ಹುತಾತ್ಮರಿಗೆ ಇಂದು ಶ್ರದ್ಧಾಂಜಲಿ: ಇಲ್ಲಿವೆ ಪ್ರಮುಖ ಅಂಶಗಳು

ಅನಿಲ್ ಕಪೂರ್ ಎಂಬುವವರು‌, “ಮೋದಿಯವರೆ, ಟೈಮ್ ನಿಯತಕಾಲಿಕವು ನಿಮ್ಮನ್ನು ’ಡಿವೈಡ್ ಇನ್ ಚೀಫ್’ ಎಂದು ಕರೆದಿ‌ದ್ದು ಸರಿಯಾಗಿದೆ. ನೀವು ಸಿಖ್ ಸಮುದಾಯವನ್ನು ಎರಡು ಭಾಗಗಳಾಗಿ ವಿಂಗಡಿಸಲು ಪ್ರಯತ್ನಿಸುತ್ತಿದ್ದೀರಿ. ಪ್ರತಿಭಟಿಸುತ್ತಿರುವ ರೈತರನ್ನು ಪ್ರತ್ಯೇಕಿಸಲು ನೀವು ಬಯಸುತ್ತೀರಿ” ಎಂದು ಕಿಡಿಕಾರಿದ್ದಾರೆ.

“ಈ ನಾಟಕವೆಲ್ಲ ಬೇಡ. ರಕ್ತ, ಬೆವರು ಚೆಲ್ಲುವ ಮೂಲಕ ಉತ್ಪತ್ತಿಯಾಗುವ ಬೆಳೆಗೆ ಕನಿಷ್ಠ ಬೆಲೆ ಖಾತರಿಯ ಕಾನೂನು ಅಗತ್ಯವಿದೆ. ಗುರುವಿನ ಮಕ್ಕಳು ಕೊರೆಯುವ ಚಳಿಯಲ್ಲಿ ಸಾಯುತ್ತಿದ್ದಾರೆ ಮತ್ತು ನೀವು ಗುರುದ್ವಾರದಲ್ಲಿ ಚಿತ್ರೀಕರಣ ಮಾಡುತ್ತಿದ್ದೀರಿ. ದಿಕ್ಕಾರವಿದೆ. ರೈತರು ತಮ್ಮ ಬೆಳೆಗೆ ಕನಿಷ್ಠ ಬೆಲೆಯನ್ನಷ್ಟೇ ಕೇಳಿದ್ದಾರೆ, ವಜ್ರವನ್ನಲ್ಲ” ಎಂದು ಝಾಲಿಮ್ ಜಾಟ್ ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಹೊಸ ದೆಹಲಿಯಿಂದ ಟಿ‌ಕ್ರೀ ಮತ್ತು ಸಿಂಘೂ ಗಡಿಗೆ ತೆರಳುವ ಗೂಗಲ್ ಮ್ಯಾಪ್‌‌ನ ಚಿತ್ರವನ್ನು ಹಾಕಿರುವ ಟ್ರಾಕ್ಟರ್‌ ಟು ಟ್ವಿಟ್ಟರ್‌ ಹ್ಯಾಂಡಲ್, “ನರೇಂದ್ರ ಮೋದಿ ನಿಮ್ಮಲ್ಲಿ ವಿನಮ್ರ ವಿನಂತಿ, ನಿಜವಾದ ರೈತರು ಗುಜರಾತ್‌ನಲ್ಲಿ ಅಥವಾ ಗುರುದ್ವಾರ ಸಾಹಿಬ್‌ನಲ್ಲಿಲ್ಲ. ದಯವಿಟ್ಟು ಈ ನಕ್ಷೆಯನ್ನು ಅನುಸರಿಸಿ ಬನ್ನಿ, ಅದು ನಿಮ್ಮ ಸಮಯವನ್ನು ಉಳಿಸುವುದಲ್ಲದೆ, ಪ್ರತಿಭಟಿಸುತ್ತಿರುವ ಅರ್ಧ ಮಿಲಿಯನ್ ರೈತರ ಬಳಿಗೆ ಕರೆದೊಯ್ಯುತ್ತದೆ” ಎಂದಿದ್ದಾರೆ.

“ಗುರು ಸಾಹಿಬ್ ಅನುಯಾಯಿಗಳನ್ನು ರಸ್ತೆಯಲ್ಲಿ ಬಿಟ್ಟು ನಿಮ್ಮ ಪ್ರದರ್ಶನ ಏನು? ಸಿಖ್ಖರ ವಿರುದ್ಧ ನಿಮ್ಮ ಪಿತೂರಿ ಸ್ಪಷ್ಟವಾಗಿದೆ” ಎಂದು ಆಯುಷ್ ಹೇಳಿದ್ದಾರೆ.

ಇದನ್ನೂ ಓದಿ: ‘ಈಗ ನಾನು ರೈತರೊಂದಿಗೆ ನಿಲ್ಲಲೇಬೇಕು’ – ಬಿಜೆಪಿ ಮುಖಂಡ ಚೌಧರಿ ಬಿರೇಂದರ್ ಸಿಂಗ್

“ಶ್ರೀ ಗುರು ತೇಜ್ ಬಹದ್ದೂರ್ ಸಾಹಿಬ್ ಜಿ ಅವರಿಂದ ನೀವು ಕಲಿತದ್ದನ್ನು ಅನುಸರಿಸಲು ಬಯಸಿದರೆ, ಅವರು ಕಾಶ್ಮೀರಿ ಪಂಡಿತರ ಉಳಿವಿಗಾಗಿ ದೆಹಲಿಗೆ ಬಂದಂತೆಯೇ, ದೆಹಲಿಯ ಬಾಗಿಲನ್ನು ಬಡಿದುಕೊಳ್ಳುತ್ತಿರುವ ರೈತರ ಬಳಿ ಹೋಗಿ. ಈ ಮೂಲಕ ಅವರಿಂದ ಏನಾದರೂ ಕಲಿಯಿರಿ. ಕೇವಲ ಚಿತ್ರಗಳನ್ನು ಪೋಸ್ಟ್ ಮಾಡುವುದರಿಂದ ಏನೂ ಆಗುವುದಿಲ್ಲ” ಎಂದು ಮನ್‌‌ಜೀತ್‌ ಸಿಂಗ್‌‌ ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ತೀವ್ರ: 1 ಲಕ್ಷಕ್ಕೂ ಹೆಚ್ಚು ಗ್ರಾಮಗಳಲ್ಲಿ ‘ಶ್ರದ್ಧಾಂಜಲಿ ದಿವಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...