Homeಚಳವಳಿಈ ಬಂದ್‌ಗೆ ಯಾರೂ ಸಹಕಾರ ಕೊಡುವುದಿಲ್ಲ, ತಲೆಕೆಡಿಸಿಕೊಳ್ಳಬೇಡಿ: ಯಡಿಯೂರಪ್ಪ

ಈ ಬಂದ್‌ಗೆ ಯಾರೂ ಸಹಕಾರ ಕೊಡುವುದಿಲ್ಲ, ತಲೆಕೆಡಿಸಿಕೊಳ್ಳಬೇಡಿ: ಯಡಿಯೂರಪ್ಪ

ನಮ್ಮ ಸರ್ಕಾರ ಯಾವಾಗಲೂ ರೈತರ ಪರ ಇರುವಂತಹ ಸರ್ಕಾರ. ರೈತರಿಗೆ ಧಕ್ಕೆಯಾಗುವ ಕೆಲಸವನ್ನು ನರೇಂದ್ರ ಮೋದಿ ಎಂದಿಗೂ ಮಾಡುವುದಿಲ್ಲ: ಬಿಎಸ್‌ವೈ

- Advertisement -
- Advertisement -

ರೈತ ವಿರೋಧಿ ಕೃಷಿ ಮಸೂದೆಗಳನ್ನು ವಿರೋಧಿಸಿ ಇಂದು ದೇಶದಾದ್ಯಂತ ಭಾರತ್ ಬಂದ್‌ಗೆ ಕರೆ ನೀಡಲಾಗಿದ್ದು, ಕರ್ನಾಟಕದಲ್ಲಿಯೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ, “ಈ ಬಂದ್‌ಗೆ ಯಾರೂ ಸಹಕಾರ ಕೊಡುವುದಿಲ್ಲ. ಹಾಗಾಗಿ ಯಾರೂ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೇಶದಾದ್ಯಂತ ಇರುವ ನೂರಾರು ಸಂಘಟನೆಗಳು ಇಂದು ಭಾರತ್ ಬಂದ್‌ಗೆ ಕರೆ ನೀಡಿದ್ದವು. ಇದನ್ನು ಬೆಂಬಲಿಸಿ ಕರ್ನಾಟಕದಲ್ಲಿಯೂ ಸಹ ರೈತ, ದಲಿತ ಮತ್ತು ಕಾರ್ಮಿಕ ಸಂಘಟನೆಗಳ ಒಕ್ಕೂಟದ ಐಕ್ಯ ಹೋರಾಟ ಸಮಿತಿ ಸೇರಿದಂತೆ ಅನೇಕ ಪಕ್ಷ, ಸಂಘಟನೆಗಳು ಭಾರತ್ ಬಂದ್‌ ನಲ್ಲಿ ತೊಡಗಿವೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ

ಈ ಕುರಿತು ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಯಡಿಯೂರಪ್ಪ, “ರಾಜ್ಯದಲ್ಲಿರಬಹುದು ಅಥವಾ ಕೇಂದ್ರದಲ್ಲಿರಬಹುದು, ನಮ್ಮ ಸರ್ಕಾರ ಯಾವಾಗಲೂ ರೈತರ ಪರ ಇರುವಂತಹ ಸರ್ಕಾರ. ರೈತರಿಗೆ ಧಕ್ಕೆಯಾಗುವಂತಹ ಕೆಲಸವನ್ನು ಈ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಎಂದಿಗೂ ಮಾಡುವುದಿಲ್ಲ. ಇದೆಲ್ಲಾ ಗೊತ್ತಿದ್ದರೂ ಸಹ ಯಾವುದೋ ರಾಜಕೀಯ ಕಾರಣಕ್ಕಾಗಿ ಬಂದ್‌ಗೆ ಕರೆ ನೀಡಿರುವುದು ಸರಿಯಲ್ಲ. ಇದಕ್ಕೆ ಜನ ಸಹಕಾರ ಕೊಡುವುದಿಲ್ಲ. ಬೆಂಗಳೂರಿನಲ್ಲಿಯೂ ಕರ್ನಾಟಕದಲ್ಲಿಯೂ ಸಹ ಯಾರೂ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ದಿನನಿತ್ಯದಂತೆ ಜನರ ಜೀವನ ಸುಸೂತ್ರವಾಗಿ ನಡೆಯಬೇಕು. ಯಾರಾದರೂ ಅಡ್ಡಿಪಡಿಸಿದರೆ ಕಾನೂನು ಮತ್ತು ಪೊಲೀಸರು ಕ್ರಮ ಕೈಗೊಳ್ಳುತ್ತಾರೆ” ಎಂದು ಹೇಳಿದರು.

ಇದನ್ನೂ ಓದಿ: ಸ್ವಯಂಪ್ರೇರಿತರಾಗಿ ಭಾರತ್ ಬಂದ್‌ ಬೆಂಬಲಿಸಿದ ಜನ; ಬೆಂಗಳೂರು ಮೈಸೂರು ರಸ್ತೆ ಖಾಲಿ ಖಾಲಿ!

ಇದನ್ನೂ ಓದಿ: ರೈತ ಇದ್ರೇನೆ ದೇಶ: ರೈತ ಹೋರಾಟಕ್ಕೆ ನಟ ಶಿವರಾಜ್‌ಕುಮಾರ್ ಬೆಂಬಲ

ಕಾಂಗ್ರೆಸ್ ಪಕ್ಷ ಕೂಡ ಈ ಬಂದ್ ಅನ್ನು ಬೆಂಬಲಿಸಿದ್ದು, ಅಧಿವೇಶನಕ್ಕೆ ಕಪ್ಪುಪಟ್ಟಿ ಧರಿಸಿ ಬರುವುದಾಗಿ ಹೇಳಿದ್ದಾರೆ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, “ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಕಪ್ಪು ಪಟ್ಟಿ ಧರಿಸಿದರೂ ಬಿಳಿಪಟ್ಟಿ ಧರಿಸಿದರೂ ಅವರನ್ನು ಕೇಳುವವರಾರು” ಎಂದು ಹೇಳಿದ್ದಾರೆ.

ವಿವಾದಾತ್ಮಕ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ದೆಹಲಿಯಲ್ಲಿ ಕಳೆದ 13 ದಿನಗಳಿಂದ ಕೊರೆವ ಚಳಿಯಲ್ಲಿ ಹೋರಾಟ ನಡೆಸಿರುವ ರೈತರು ಕರೆ ನೀಡಿದ್ದ ಇಂದಿನ ಭಾರತ್ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಜನರು ಸ್ವಯಂ ಪ್ರೇರಿತರಾಗಿ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದು ತಮ್ಮ ದಿನನಿತ್ಯದ ಕೆಲಸಗಳಿಗೆ ಹಾಜರಾಗದೇ ಮನೆಯಲ್ಲಯೇ ಉಳಿದಿದ್ದಾರೆ. ಹಾಗಾಗಿ ಬೆಂಗಳೂರಿನ ಬಹುತೇಕ ರಸ್ತೆಗಳು ಖಾಲಿ ಖಾಲಿಯಾಗಿವೆ.

ಇದನ್ನೂ ಓದಿ: ಚುನಾವಣಾ ಪ್ರಚಾರಕ್ಕೆ ವೇಗವಾಗಿ ಧುಮುಕುವ ನಟರು ರೈತರ ಪರ ಒಂದು ಮಾತನ್ನೂ ಆಡಿಲ್ಲ: ನಟ…

ಬೆಂಗಳೂರಿನಲ್ಲಿ ಬಂದ್‌ಗೆ ಕರೆ ನೀಡಿರುವ ರೈತ-ದಲಿತ-ಕಾರ್ಮಿಕರ ‘ಐಕ್ಯ ಹೋರಾಟ’ ಸಮಿತಿಯು ಬೆಳಿಗ್ಗೆಯಿಂದಲೇ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ಜಮಾಯಿಸಿ ಹೋರಾಟ ಆರಂಭಿಸಿದ್ದಾರೆ.

ರೈತರು ನಡೆಸುತ್ತಿರುವ ಹೋರಾಟಕ್ಕೆ ಖ್ಯಾತ ಕನ್ನಡ ಚಿತ್ರನಟ ಡಾ.ಶಿವರಾಜ್‌ ಕುಮಾರ್ ಬೆಂಬಲ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು “ರೈತ ದೇಶದ ಬೆನ್ನೆಲುಬು, ರೈತ ಇದ್ರೇನೆ ದೇಶ.. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ.. ಅವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...