Homeಮುಖಪುಟರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿದ ಮೋದಿ: ಜಾಲತಾಣಿಗರ ಪ್ರತಿಕ್ರಿಯೆ ಏನು?

ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿದ ಮೋದಿ: ಜಾಲತಾಣಿಗರ ಪ್ರತಿಕ್ರಿಯೆ ಏನು?

ನೀವು ಪ್ರಾಥಿಸುವುದನ್ನು ಬಿಟ್ಟು, ನಮ್ಮ ತೆರಿಗೆ ನಮಗೆ ನೀಡಿ, ನೆರೆ ಪರಿಹಾರ ನೀಡಿ, ಮಹಾದಾಯಿ, ಕಾವೇರಿ ವಿಚಾರದಲ್ಲಿ ನಮಗೆ ನ್ಯಾಯ ಒದಗಿಸಿದರೆ ಸಾಕು ಎಂದು ಕಬ್ಬಿನಕೆರೆ ಅಶ್ವಿನ್ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಇಂದು ಕನ್ನಡ ರಾಜ್ಯೋತ್ಸವ. ಕನ್ನಡಿಗರ ಪಾಲಿನ ಹಬ್ಬ. ಕೊರೊನಾ ಕಾರಣದಿಂದ ಬೀದಿ-ಬೀದಿಯಲ್ಲಿ ಕೆಂಪು-ಹಳದಿ ಬಣ್ಣದೋಕುಳಿ, ಆಳೆತ್ತೆರದ ಬಾವುಟಗಳು ಹಾರದಿದ್ದರೂ ಕನ್ನಡಿಗರ ಮನದಲ್ಲಿ ಕನ್ನಡತನಕ್ಕೇನು ಕೊರತೆಯಿಲ್ಲ. ಇಂತಹ ಸಂದರ್ಭದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲಿಯೇ ಟ್ವೀಟ್‌ ಮಾಡಿ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣಿಗರ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಇಂದು ಬೆಳಿಗ್ಗೆ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಹನುಮನಗೌಡ ಪೊಲೀಸ್ ಪಾಟೀಲ್ “ನಮ್ಮ ನಾಡ ಜನರಿಗೆ ಕನ್ನಡ ನಾಡೊಸಗೆಯ ಕುರಿತು ಹಾರೈಸಿದ ನಮ್ಮ ಭಾರತ ಒಕ್ಕೂಟದ ಪ್ರಧಾನಿಗಳಿಗೆ ನಮಸ್ಕಾರಗಳು. GST ಬಾಕಿ ಪಾವತಿ, IBPS ಮೋಸ ನೆರೆ ಪ್ರವಾಹದ ದುಡ್ಡು ಪಾವತಿ, ರಾಜ್ಯದ ಜಲ ಮತ್ತು ಗಡಿ ವಿವಾದ ಪರಿಹಾರ, ಕೇಂದ್ರ ಮಟ್ಟದ ಪ್ರತಿ ಪರೀಕ್ಷೆಗಳನ್ನು ನಮ್ಮ ನಾಡ ಭಾಷೆಯಲ್ಲಿ ಸಹ ನಡೆಸುವುದು ಇತ್ಯಾದಿ ಸಮಸ್ಯೆಗಳನ್ನು ಸಹ ಪರಿಹರಿಸಿ…!” ಎಂದು ಟ್ವೀಟ್ ಮಾಡಿದ್ದಾರೆ.

ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಎಲ್ಲಾ ಭಾಷೆಗಳಲ್ಲಿಯೂ ಬರೆಯುವ ಅವಕಾಶ ಮೊದಲು ನೀಡಿ. ಈ ನಿಮ್ಮ ಒಂದು ದಿನದ ಶುಭ ಕೋರಿಕೆಯ ಬದಲು ನಮಗೆ ನೀಡಬೇಕಾದ ಜಿ ಎಸ್ ಟಿ ಬಾಕಿಯನ್ನು ನೀಡಿ. ಪರಿಸರ ಕರಡು ನೀತಿಯನ್ನು ಸ್ಥಳೀಯ ಭಾಷೆಗಳಲ್ಲಿ ಪ್ರಕಟಿಸಿ. ಎಲ್ಲಾ ಭಾಷೆಗಳಿಗೂ ಪ್ರಾಮುಖ್ಯತೆ ಭಾಷಾ ವೈವಿಧ್ಯತೆಯನ್ನು ಗೌರವಿಸಿ. ಜೈ ಕರ್ನಾಟಕ ಜೈ ಕನ್ನಡ ಎಂದು ಆದರ್ಶ್ ಎಚ್ ಎಂ ಆಗ್ರಹಿಸಿದ್ದಾರೆ.

ನೆರೆ ಪರಿಹಾರ ಕೊಡ್ಲಿಲ್ಲ, GST ಬಾಕಿ ಕೊಡ್ಲಿಲ್ಲ, IBPS ನಿಯಮ ತಿದ್ದುಪಡಿ ಮಾಡಿ ಕನ್ನಡಿಗರ ಉದ್ಯೋಗವನ್ನು ಕಿತ್ತು ಕೊಂಡ್ರಿ, ಕೇಂದ್ರ ಸರಕಾರದ ಸೇವೆಗಳು ಕನ್ನಡದಲ್ಲಿ ಸಿಗುತ್ತಿಲ್ಲ. ರಾಜ್ಯೋತ್ಸವದಂದು ಕನ್ನಡದಲ್ಲಿ ಶುಭ ಕೋರಿದ್ದು ಬಿಟ್ಟರೆ ನಿಮ್ಮಿಂದ ರಾಜ್ಯಕ್ಕೆ ಇನ್ನೇನು ಸಿಕ್ಕಿಲ್ಲ ಎಂದು ಹರೀಶ್ ಎಂಬುವವರು ಕಿಡಿಕಾರಿದ್ದಾರೆ.

ಧನ್ಯವಾದಗಳು ಮಾನ್ಯ ಪ್ರಧಾನ ಮಂತ್ರಿಗಳೇ. ನಿಮ್ಮ ನಿಷ್ಕಲ್ಮಶ ಭಾಷಾಭಿಮಾನ ಜಗತ್ತಿಗೆ ಗೊತ್ತು. ಭವ್ಯ ಇತಿಹಾಸದ, ಶ್ರೀಮಂತ ಪರಂಪರೆಯ, ಸಾಂಸ್ಕೃತಿಕ ವೈವಿಧ್ಯದ, ಗಂಧದ ಗುಡಿಯ ನುಡಿ ಕನ್ನಡವನ್ನ ಉಳಿಸಿ ಬೆಳೆಸುವುದಕ್ಕಿಂತಲೂ ಹೆಚ್ಚಾಗಿ ಎಲ್ಲೆಡೆ ಕನ್ನಡವನ್ನೇ ಬಳಸಿ. ಕನ್ನಡ ಕುಲದ ನನ್ನೆಲ್ಲ ಬಂಧುಗಳಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ಪ್ರಶಾಂತ್ ವಿಪಿ ಸಂತಸ ವ್ಯಕ್ತಪಡಿಸಿದ್ದಾರೆ.

ನೀವು ಪ್ರಾಥಿಸುವುದನ್ನು ಬಿಟ್ಟು, ನಮ್ಮ ತೆರಿಗೆ ನಮಗೆ ನೀಡಿ, ನೆರೆ ಪರಿಹಾರ ನೀಡಿ, ಮಹಾದಾಯಿ, ಕಾವೇರಿ ವಿಚಾರದಲ್ಲಿ ನಮಗೆ ನ್ಯಾಯ ಒದಗಿಸಿದರೆ ಸಾಕು ಎಂದು ಕಬ್ಬಿನಕೆರೆ ಅಶ್ವಿನ್ ಟ್ವೀಟ್ ಮಾಡಿದ್ದಾರೆ.

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡದಲ್ಲೇ ಟ್ವೀಟ್ ಮಾಡಿದ ದೇಶದ ಪ್ರಧಾನ ಸೇವಕರಿಗೆ ಧನ್ಯವಾದಗಳು ಎಂದು ಎಚ್.ಎಸ್ ನವೀನ್ ತಿಳಿಸಿದ್ದಾರೆ.

ನಮ್ಮ ಜಿಎಸ್ಟಿ ದುಡ್ಡು ಕೊಟ್ಟು ಮಾತಾಡಿ ಸ್ವಾಮಿ. ನವೆಂಬರ್ 1 ರಂದು ಕನ್ನಡದಲ್ಲಿ ಶುಭಾಶಯ ಹೇಳಿ, ಆಗಾಗ ಎರಡು ಮಾತು ಕನ್ನಡದಲ್ಲಿ ಆಡಿದ್ರೆ ಕರ್ನಾಟಕ ಪ್ರಗತಿ ಕಾಣಲ್ಲ. ಇವೆಲ್ಲ ಡವ್ ಮಾಡೋದ್ ನಿಲ್ಸಿ, #GST, #FloodRelief ಕೊಡಿ. #IBPSMosa ಸರಿಪಡಿಸಿ. #StopHindiImposition ಎಂದು ಶ್ರುತಿ ಎಚ್.ಎಂ ಕಿಡಿಕಾರಿದ್ದಾರೆ.


ಇದನ್ನೂ ಓದಿ: ಇಂದಿನ ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಸಂಖ್ಯೆ ಮರೆಮಾಚಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...