Homeಮುಖಪುಟರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿದ ಮೋದಿ: ಜಾಲತಾಣಿಗರ ಪ್ರತಿಕ್ರಿಯೆ ಏನು?

ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿದ ಮೋದಿ: ಜಾಲತಾಣಿಗರ ಪ್ರತಿಕ್ರಿಯೆ ಏನು?

ನೀವು ಪ್ರಾಥಿಸುವುದನ್ನು ಬಿಟ್ಟು, ನಮ್ಮ ತೆರಿಗೆ ನಮಗೆ ನೀಡಿ, ನೆರೆ ಪರಿಹಾರ ನೀಡಿ, ಮಹಾದಾಯಿ, ಕಾವೇರಿ ವಿಚಾರದಲ್ಲಿ ನಮಗೆ ನ್ಯಾಯ ಒದಗಿಸಿದರೆ ಸಾಕು ಎಂದು ಕಬ್ಬಿನಕೆರೆ ಅಶ್ವಿನ್ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಇಂದು ಕನ್ನಡ ರಾಜ್ಯೋತ್ಸವ. ಕನ್ನಡಿಗರ ಪಾಲಿನ ಹಬ್ಬ. ಕೊರೊನಾ ಕಾರಣದಿಂದ ಬೀದಿ-ಬೀದಿಯಲ್ಲಿ ಕೆಂಪು-ಹಳದಿ ಬಣ್ಣದೋಕುಳಿ, ಆಳೆತ್ತೆರದ ಬಾವುಟಗಳು ಹಾರದಿದ್ದರೂ ಕನ್ನಡಿಗರ ಮನದಲ್ಲಿ ಕನ್ನಡತನಕ್ಕೇನು ಕೊರತೆಯಿಲ್ಲ. ಇಂತಹ ಸಂದರ್ಭದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲಿಯೇ ಟ್ವೀಟ್‌ ಮಾಡಿ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣಿಗರ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಇಂದು ಬೆಳಿಗ್ಗೆ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಹನುಮನಗೌಡ ಪೊಲೀಸ್ ಪಾಟೀಲ್ “ನಮ್ಮ ನಾಡ ಜನರಿಗೆ ಕನ್ನಡ ನಾಡೊಸಗೆಯ ಕುರಿತು ಹಾರೈಸಿದ ನಮ್ಮ ಭಾರತ ಒಕ್ಕೂಟದ ಪ್ರಧಾನಿಗಳಿಗೆ ನಮಸ್ಕಾರಗಳು. GST ಬಾಕಿ ಪಾವತಿ, IBPS ಮೋಸ ನೆರೆ ಪ್ರವಾಹದ ದುಡ್ಡು ಪಾವತಿ, ರಾಜ್ಯದ ಜಲ ಮತ್ತು ಗಡಿ ವಿವಾದ ಪರಿಹಾರ, ಕೇಂದ್ರ ಮಟ್ಟದ ಪ್ರತಿ ಪರೀಕ್ಷೆಗಳನ್ನು ನಮ್ಮ ನಾಡ ಭಾಷೆಯಲ್ಲಿ ಸಹ ನಡೆಸುವುದು ಇತ್ಯಾದಿ ಸಮಸ್ಯೆಗಳನ್ನು ಸಹ ಪರಿಹರಿಸಿ…!” ಎಂದು ಟ್ವೀಟ್ ಮಾಡಿದ್ದಾರೆ.

ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಎಲ್ಲಾ ಭಾಷೆಗಳಲ್ಲಿಯೂ ಬರೆಯುವ ಅವಕಾಶ ಮೊದಲು ನೀಡಿ. ಈ ನಿಮ್ಮ ಒಂದು ದಿನದ ಶುಭ ಕೋರಿಕೆಯ ಬದಲು ನಮಗೆ ನೀಡಬೇಕಾದ ಜಿ ಎಸ್ ಟಿ ಬಾಕಿಯನ್ನು ನೀಡಿ. ಪರಿಸರ ಕರಡು ನೀತಿಯನ್ನು ಸ್ಥಳೀಯ ಭಾಷೆಗಳಲ್ಲಿ ಪ್ರಕಟಿಸಿ. ಎಲ್ಲಾ ಭಾಷೆಗಳಿಗೂ ಪ್ರಾಮುಖ್ಯತೆ ಭಾಷಾ ವೈವಿಧ್ಯತೆಯನ್ನು ಗೌರವಿಸಿ. ಜೈ ಕರ್ನಾಟಕ ಜೈ ಕನ್ನಡ ಎಂದು ಆದರ್ಶ್ ಎಚ್ ಎಂ ಆಗ್ರಹಿಸಿದ್ದಾರೆ.

ನೆರೆ ಪರಿಹಾರ ಕೊಡ್ಲಿಲ್ಲ, GST ಬಾಕಿ ಕೊಡ್ಲಿಲ್ಲ, IBPS ನಿಯಮ ತಿದ್ದುಪಡಿ ಮಾಡಿ ಕನ್ನಡಿಗರ ಉದ್ಯೋಗವನ್ನು ಕಿತ್ತು ಕೊಂಡ್ರಿ, ಕೇಂದ್ರ ಸರಕಾರದ ಸೇವೆಗಳು ಕನ್ನಡದಲ್ಲಿ ಸಿಗುತ್ತಿಲ್ಲ. ರಾಜ್ಯೋತ್ಸವದಂದು ಕನ್ನಡದಲ್ಲಿ ಶುಭ ಕೋರಿದ್ದು ಬಿಟ್ಟರೆ ನಿಮ್ಮಿಂದ ರಾಜ್ಯಕ್ಕೆ ಇನ್ನೇನು ಸಿಕ್ಕಿಲ್ಲ ಎಂದು ಹರೀಶ್ ಎಂಬುವವರು ಕಿಡಿಕಾರಿದ್ದಾರೆ.

ಧನ್ಯವಾದಗಳು ಮಾನ್ಯ ಪ್ರಧಾನ ಮಂತ್ರಿಗಳೇ. ನಿಮ್ಮ ನಿಷ್ಕಲ್ಮಶ ಭಾಷಾಭಿಮಾನ ಜಗತ್ತಿಗೆ ಗೊತ್ತು. ಭವ್ಯ ಇತಿಹಾಸದ, ಶ್ರೀಮಂತ ಪರಂಪರೆಯ, ಸಾಂಸ್ಕೃತಿಕ ವೈವಿಧ್ಯದ, ಗಂಧದ ಗುಡಿಯ ನುಡಿ ಕನ್ನಡವನ್ನ ಉಳಿಸಿ ಬೆಳೆಸುವುದಕ್ಕಿಂತಲೂ ಹೆಚ್ಚಾಗಿ ಎಲ್ಲೆಡೆ ಕನ್ನಡವನ್ನೇ ಬಳಸಿ. ಕನ್ನಡ ಕುಲದ ನನ್ನೆಲ್ಲ ಬಂಧುಗಳಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ಪ್ರಶಾಂತ್ ವಿಪಿ ಸಂತಸ ವ್ಯಕ್ತಪಡಿಸಿದ್ದಾರೆ.

ನೀವು ಪ್ರಾಥಿಸುವುದನ್ನು ಬಿಟ್ಟು, ನಮ್ಮ ತೆರಿಗೆ ನಮಗೆ ನೀಡಿ, ನೆರೆ ಪರಿಹಾರ ನೀಡಿ, ಮಹಾದಾಯಿ, ಕಾವೇರಿ ವಿಚಾರದಲ್ಲಿ ನಮಗೆ ನ್ಯಾಯ ಒದಗಿಸಿದರೆ ಸಾಕು ಎಂದು ಕಬ್ಬಿನಕೆರೆ ಅಶ್ವಿನ್ ಟ್ವೀಟ್ ಮಾಡಿದ್ದಾರೆ.

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡದಲ್ಲೇ ಟ್ವೀಟ್ ಮಾಡಿದ ದೇಶದ ಪ್ರಧಾನ ಸೇವಕರಿಗೆ ಧನ್ಯವಾದಗಳು ಎಂದು ಎಚ್.ಎಸ್ ನವೀನ್ ತಿಳಿಸಿದ್ದಾರೆ.

ನಮ್ಮ ಜಿಎಸ್ಟಿ ದುಡ್ಡು ಕೊಟ್ಟು ಮಾತಾಡಿ ಸ್ವಾಮಿ. ನವೆಂಬರ್ 1 ರಂದು ಕನ್ನಡದಲ್ಲಿ ಶುಭಾಶಯ ಹೇಳಿ, ಆಗಾಗ ಎರಡು ಮಾತು ಕನ್ನಡದಲ್ಲಿ ಆಡಿದ್ರೆ ಕರ್ನಾಟಕ ಪ್ರಗತಿ ಕಾಣಲ್ಲ. ಇವೆಲ್ಲ ಡವ್ ಮಾಡೋದ್ ನಿಲ್ಸಿ, #GST, #FloodRelief ಕೊಡಿ. #IBPSMosa ಸರಿಪಡಿಸಿ. #StopHindiImposition ಎಂದು ಶ್ರುತಿ ಎಚ್.ಎಂ ಕಿಡಿಕಾರಿದ್ದಾರೆ.


ಇದನ್ನೂ ಓದಿ: ಇಂದಿನ ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಸಂಖ್ಯೆ ಮರೆಮಾಚಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...