Homeಮುಖಪುಟರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿದ ಮೋದಿ: ಜಾಲತಾಣಿಗರ ಪ್ರತಿಕ್ರಿಯೆ ಏನು?

ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿದ ಮೋದಿ: ಜಾಲತಾಣಿಗರ ಪ್ರತಿಕ್ರಿಯೆ ಏನು?

ನೀವು ಪ್ರಾಥಿಸುವುದನ್ನು ಬಿಟ್ಟು, ನಮ್ಮ ತೆರಿಗೆ ನಮಗೆ ನೀಡಿ, ನೆರೆ ಪರಿಹಾರ ನೀಡಿ, ಮಹಾದಾಯಿ, ಕಾವೇರಿ ವಿಚಾರದಲ್ಲಿ ನಮಗೆ ನ್ಯಾಯ ಒದಗಿಸಿದರೆ ಸಾಕು ಎಂದು ಕಬ್ಬಿನಕೆರೆ ಅಶ್ವಿನ್ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಇಂದು ಕನ್ನಡ ರಾಜ್ಯೋತ್ಸವ. ಕನ್ನಡಿಗರ ಪಾಲಿನ ಹಬ್ಬ. ಕೊರೊನಾ ಕಾರಣದಿಂದ ಬೀದಿ-ಬೀದಿಯಲ್ಲಿ ಕೆಂಪು-ಹಳದಿ ಬಣ್ಣದೋಕುಳಿ, ಆಳೆತ್ತೆರದ ಬಾವುಟಗಳು ಹಾರದಿದ್ದರೂ ಕನ್ನಡಿಗರ ಮನದಲ್ಲಿ ಕನ್ನಡತನಕ್ಕೇನು ಕೊರತೆಯಿಲ್ಲ. ಇಂತಹ ಸಂದರ್ಭದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲಿಯೇ ಟ್ವೀಟ್‌ ಮಾಡಿ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣಿಗರ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಇಂದು ಬೆಳಿಗ್ಗೆ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಹನುಮನಗೌಡ ಪೊಲೀಸ್ ಪಾಟೀಲ್ “ನಮ್ಮ ನಾಡ ಜನರಿಗೆ ಕನ್ನಡ ನಾಡೊಸಗೆಯ ಕುರಿತು ಹಾರೈಸಿದ ನಮ್ಮ ಭಾರತ ಒಕ್ಕೂಟದ ಪ್ರಧಾನಿಗಳಿಗೆ ನಮಸ್ಕಾರಗಳು. GST ಬಾಕಿ ಪಾವತಿ, IBPS ಮೋಸ ನೆರೆ ಪ್ರವಾಹದ ದುಡ್ಡು ಪಾವತಿ, ರಾಜ್ಯದ ಜಲ ಮತ್ತು ಗಡಿ ವಿವಾದ ಪರಿಹಾರ, ಕೇಂದ್ರ ಮಟ್ಟದ ಪ್ರತಿ ಪರೀಕ್ಷೆಗಳನ್ನು ನಮ್ಮ ನಾಡ ಭಾಷೆಯಲ್ಲಿ ಸಹ ನಡೆಸುವುದು ಇತ್ಯಾದಿ ಸಮಸ್ಯೆಗಳನ್ನು ಸಹ ಪರಿಹರಿಸಿ…!” ಎಂದು ಟ್ವೀಟ್ ಮಾಡಿದ್ದಾರೆ.

ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಎಲ್ಲಾ ಭಾಷೆಗಳಲ್ಲಿಯೂ ಬರೆಯುವ ಅವಕಾಶ ಮೊದಲು ನೀಡಿ. ಈ ನಿಮ್ಮ ಒಂದು ದಿನದ ಶುಭ ಕೋರಿಕೆಯ ಬದಲು ನಮಗೆ ನೀಡಬೇಕಾದ ಜಿ ಎಸ್ ಟಿ ಬಾಕಿಯನ್ನು ನೀಡಿ. ಪರಿಸರ ಕರಡು ನೀತಿಯನ್ನು ಸ್ಥಳೀಯ ಭಾಷೆಗಳಲ್ಲಿ ಪ್ರಕಟಿಸಿ. ಎಲ್ಲಾ ಭಾಷೆಗಳಿಗೂ ಪ್ರಾಮುಖ್ಯತೆ ಭಾಷಾ ವೈವಿಧ್ಯತೆಯನ್ನು ಗೌರವಿಸಿ. ಜೈ ಕರ್ನಾಟಕ ಜೈ ಕನ್ನಡ ಎಂದು ಆದರ್ಶ್ ಎಚ್ ಎಂ ಆಗ್ರಹಿಸಿದ್ದಾರೆ.

ನೆರೆ ಪರಿಹಾರ ಕೊಡ್ಲಿಲ್ಲ, GST ಬಾಕಿ ಕೊಡ್ಲಿಲ್ಲ, IBPS ನಿಯಮ ತಿದ್ದುಪಡಿ ಮಾಡಿ ಕನ್ನಡಿಗರ ಉದ್ಯೋಗವನ್ನು ಕಿತ್ತು ಕೊಂಡ್ರಿ, ಕೇಂದ್ರ ಸರಕಾರದ ಸೇವೆಗಳು ಕನ್ನಡದಲ್ಲಿ ಸಿಗುತ್ತಿಲ್ಲ. ರಾಜ್ಯೋತ್ಸವದಂದು ಕನ್ನಡದಲ್ಲಿ ಶುಭ ಕೋರಿದ್ದು ಬಿಟ್ಟರೆ ನಿಮ್ಮಿಂದ ರಾಜ್ಯಕ್ಕೆ ಇನ್ನೇನು ಸಿಕ್ಕಿಲ್ಲ ಎಂದು ಹರೀಶ್ ಎಂಬುವವರು ಕಿಡಿಕಾರಿದ್ದಾರೆ.

ಧನ್ಯವಾದಗಳು ಮಾನ್ಯ ಪ್ರಧಾನ ಮಂತ್ರಿಗಳೇ. ನಿಮ್ಮ ನಿಷ್ಕಲ್ಮಶ ಭಾಷಾಭಿಮಾನ ಜಗತ್ತಿಗೆ ಗೊತ್ತು. ಭವ್ಯ ಇತಿಹಾಸದ, ಶ್ರೀಮಂತ ಪರಂಪರೆಯ, ಸಾಂಸ್ಕೃತಿಕ ವೈವಿಧ್ಯದ, ಗಂಧದ ಗುಡಿಯ ನುಡಿ ಕನ್ನಡವನ್ನ ಉಳಿಸಿ ಬೆಳೆಸುವುದಕ್ಕಿಂತಲೂ ಹೆಚ್ಚಾಗಿ ಎಲ್ಲೆಡೆ ಕನ್ನಡವನ್ನೇ ಬಳಸಿ. ಕನ್ನಡ ಕುಲದ ನನ್ನೆಲ್ಲ ಬಂಧುಗಳಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ಪ್ರಶಾಂತ್ ವಿಪಿ ಸಂತಸ ವ್ಯಕ್ತಪಡಿಸಿದ್ದಾರೆ.

ನೀವು ಪ್ರಾಥಿಸುವುದನ್ನು ಬಿಟ್ಟು, ನಮ್ಮ ತೆರಿಗೆ ನಮಗೆ ನೀಡಿ, ನೆರೆ ಪರಿಹಾರ ನೀಡಿ, ಮಹಾದಾಯಿ, ಕಾವೇರಿ ವಿಚಾರದಲ್ಲಿ ನಮಗೆ ನ್ಯಾಯ ಒದಗಿಸಿದರೆ ಸಾಕು ಎಂದು ಕಬ್ಬಿನಕೆರೆ ಅಶ್ವಿನ್ ಟ್ವೀಟ್ ಮಾಡಿದ್ದಾರೆ.

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡದಲ್ಲೇ ಟ್ವೀಟ್ ಮಾಡಿದ ದೇಶದ ಪ್ರಧಾನ ಸೇವಕರಿಗೆ ಧನ್ಯವಾದಗಳು ಎಂದು ಎಚ್.ಎಸ್ ನವೀನ್ ತಿಳಿಸಿದ್ದಾರೆ.

ನಮ್ಮ ಜಿಎಸ್ಟಿ ದುಡ್ಡು ಕೊಟ್ಟು ಮಾತಾಡಿ ಸ್ವಾಮಿ. ನವೆಂಬರ್ 1 ರಂದು ಕನ್ನಡದಲ್ಲಿ ಶುಭಾಶಯ ಹೇಳಿ, ಆಗಾಗ ಎರಡು ಮಾತು ಕನ್ನಡದಲ್ಲಿ ಆಡಿದ್ರೆ ಕರ್ನಾಟಕ ಪ್ರಗತಿ ಕಾಣಲ್ಲ. ಇವೆಲ್ಲ ಡವ್ ಮಾಡೋದ್ ನಿಲ್ಸಿ, #GST, #FloodRelief ಕೊಡಿ. #IBPSMosa ಸರಿಪಡಿಸಿ. #StopHindiImposition ಎಂದು ಶ್ರುತಿ ಎಚ್.ಎಂ ಕಿಡಿಕಾರಿದ್ದಾರೆ.


ಇದನ್ನೂ ಓದಿ: ಇಂದಿನ ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಸಂಖ್ಯೆ ಮರೆಮಾಚಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...