Homeಮುಖಪುಟರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿದ ಮೋದಿ: ಜಾಲತಾಣಿಗರ ಪ್ರತಿಕ್ರಿಯೆ ಏನು?

ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿದ ಮೋದಿ: ಜಾಲತಾಣಿಗರ ಪ್ರತಿಕ್ರಿಯೆ ಏನು?

ನೀವು ಪ್ರಾಥಿಸುವುದನ್ನು ಬಿಟ್ಟು, ನಮ್ಮ ತೆರಿಗೆ ನಮಗೆ ನೀಡಿ, ನೆರೆ ಪರಿಹಾರ ನೀಡಿ, ಮಹಾದಾಯಿ, ಕಾವೇರಿ ವಿಚಾರದಲ್ಲಿ ನಮಗೆ ನ್ಯಾಯ ಒದಗಿಸಿದರೆ ಸಾಕು ಎಂದು ಕಬ್ಬಿನಕೆರೆ ಅಶ್ವಿನ್ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಇಂದು ಕನ್ನಡ ರಾಜ್ಯೋತ್ಸವ. ಕನ್ನಡಿಗರ ಪಾಲಿನ ಹಬ್ಬ. ಕೊರೊನಾ ಕಾರಣದಿಂದ ಬೀದಿ-ಬೀದಿಯಲ್ಲಿ ಕೆಂಪು-ಹಳದಿ ಬಣ್ಣದೋಕುಳಿ, ಆಳೆತ್ತೆರದ ಬಾವುಟಗಳು ಹಾರದಿದ್ದರೂ ಕನ್ನಡಿಗರ ಮನದಲ್ಲಿ ಕನ್ನಡತನಕ್ಕೇನು ಕೊರತೆಯಿಲ್ಲ. ಇಂತಹ ಸಂದರ್ಭದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲಿಯೇ ಟ್ವೀಟ್‌ ಮಾಡಿ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣಿಗರ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಇಂದು ಬೆಳಿಗ್ಗೆ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಹನುಮನಗೌಡ ಪೊಲೀಸ್ ಪಾಟೀಲ್ “ನಮ್ಮ ನಾಡ ಜನರಿಗೆ ಕನ್ನಡ ನಾಡೊಸಗೆಯ ಕುರಿತು ಹಾರೈಸಿದ ನಮ್ಮ ಭಾರತ ಒಕ್ಕೂಟದ ಪ್ರಧಾನಿಗಳಿಗೆ ನಮಸ್ಕಾರಗಳು. GST ಬಾಕಿ ಪಾವತಿ, IBPS ಮೋಸ ನೆರೆ ಪ್ರವಾಹದ ದುಡ್ಡು ಪಾವತಿ, ರಾಜ್ಯದ ಜಲ ಮತ್ತು ಗಡಿ ವಿವಾದ ಪರಿಹಾರ, ಕೇಂದ್ರ ಮಟ್ಟದ ಪ್ರತಿ ಪರೀಕ್ಷೆಗಳನ್ನು ನಮ್ಮ ನಾಡ ಭಾಷೆಯಲ್ಲಿ ಸಹ ನಡೆಸುವುದು ಇತ್ಯಾದಿ ಸಮಸ್ಯೆಗಳನ್ನು ಸಹ ಪರಿಹರಿಸಿ…!” ಎಂದು ಟ್ವೀಟ್ ಮಾಡಿದ್ದಾರೆ.

ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಎಲ್ಲಾ ಭಾಷೆಗಳಲ್ಲಿಯೂ ಬರೆಯುವ ಅವಕಾಶ ಮೊದಲು ನೀಡಿ. ಈ ನಿಮ್ಮ ಒಂದು ದಿನದ ಶುಭ ಕೋರಿಕೆಯ ಬದಲು ನಮಗೆ ನೀಡಬೇಕಾದ ಜಿ ಎಸ್ ಟಿ ಬಾಕಿಯನ್ನು ನೀಡಿ. ಪರಿಸರ ಕರಡು ನೀತಿಯನ್ನು ಸ್ಥಳೀಯ ಭಾಷೆಗಳಲ್ಲಿ ಪ್ರಕಟಿಸಿ. ಎಲ್ಲಾ ಭಾಷೆಗಳಿಗೂ ಪ್ರಾಮುಖ್ಯತೆ ಭಾಷಾ ವೈವಿಧ್ಯತೆಯನ್ನು ಗೌರವಿಸಿ. ಜೈ ಕರ್ನಾಟಕ ಜೈ ಕನ್ನಡ ಎಂದು ಆದರ್ಶ್ ಎಚ್ ಎಂ ಆಗ್ರಹಿಸಿದ್ದಾರೆ.

ನೆರೆ ಪರಿಹಾರ ಕೊಡ್ಲಿಲ್ಲ, GST ಬಾಕಿ ಕೊಡ್ಲಿಲ್ಲ, IBPS ನಿಯಮ ತಿದ್ದುಪಡಿ ಮಾಡಿ ಕನ್ನಡಿಗರ ಉದ್ಯೋಗವನ್ನು ಕಿತ್ತು ಕೊಂಡ್ರಿ, ಕೇಂದ್ರ ಸರಕಾರದ ಸೇವೆಗಳು ಕನ್ನಡದಲ್ಲಿ ಸಿಗುತ್ತಿಲ್ಲ. ರಾಜ್ಯೋತ್ಸವದಂದು ಕನ್ನಡದಲ್ಲಿ ಶುಭ ಕೋರಿದ್ದು ಬಿಟ್ಟರೆ ನಿಮ್ಮಿಂದ ರಾಜ್ಯಕ್ಕೆ ಇನ್ನೇನು ಸಿಕ್ಕಿಲ್ಲ ಎಂದು ಹರೀಶ್ ಎಂಬುವವರು ಕಿಡಿಕಾರಿದ್ದಾರೆ.

ಧನ್ಯವಾದಗಳು ಮಾನ್ಯ ಪ್ರಧಾನ ಮಂತ್ರಿಗಳೇ. ನಿಮ್ಮ ನಿಷ್ಕಲ್ಮಶ ಭಾಷಾಭಿಮಾನ ಜಗತ್ತಿಗೆ ಗೊತ್ತು. ಭವ್ಯ ಇತಿಹಾಸದ, ಶ್ರೀಮಂತ ಪರಂಪರೆಯ, ಸಾಂಸ್ಕೃತಿಕ ವೈವಿಧ್ಯದ, ಗಂಧದ ಗುಡಿಯ ನುಡಿ ಕನ್ನಡವನ್ನ ಉಳಿಸಿ ಬೆಳೆಸುವುದಕ್ಕಿಂತಲೂ ಹೆಚ್ಚಾಗಿ ಎಲ್ಲೆಡೆ ಕನ್ನಡವನ್ನೇ ಬಳಸಿ. ಕನ್ನಡ ಕುಲದ ನನ್ನೆಲ್ಲ ಬಂಧುಗಳಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ಪ್ರಶಾಂತ್ ವಿಪಿ ಸಂತಸ ವ್ಯಕ್ತಪಡಿಸಿದ್ದಾರೆ.

ನೀವು ಪ್ರಾಥಿಸುವುದನ್ನು ಬಿಟ್ಟು, ನಮ್ಮ ತೆರಿಗೆ ನಮಗೆ ನೀಡಿ, ನೆರೆ ಪರಿಹಾರ ನೀಡಿ, ಮಹಾದಾಯಿ, ಕಾವೇರಿ ವಿಚಾರದಲ್ಲಿ ನಮಗೆ ನ್ಯಾಯ ಒದಗಿಸಿದರೆ ಸಾಕು ಎಂದು ಕಬ್ಬಿನಕೆರೆ ಅಶ್ವಿನ್ ಟ್ವೀಟ್ ಮಾಡಿದ್ದಾರೆ.

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡದಲ್ಲೇ ಟ್ವೀಟ್ ಮಾಡಿದ ದೇಶದ ಪ್ರಧಾನ ಸೇವಕರಿಗೆ ಧನ್ಯವಾದಗಳು ಎಂದು ಎಚ್.ಎಸ್ ನವೀನ್ ತಿಳಿಸಿದ್ದಾರೆ.

ನಮ್ಮ ಜಿಎಸ್ಟಿ ದುಡ್ಡು ಕೊಟ್ಟು ಮಾತಾಡಿ ಸ್ವಾಮಿ. ನವೆಂಬರ್ 1 ರಂದು ಕನ್ನಡದಲ್ಲಿ ಶುಭಾಶಯ ಹೇಳಿ, ಆಗಾಗ ಎರಡು ಮಾತು ಕನ್ನಡದಲ್ಲಿ ಆಡಿದ್ರೆ ಕರ್ನಾಟಕ ಪ್ರಗತಿ ಕಾಣಲ್ಲ. ಇವೆಲ್ಲ ಡವ್ ಮಾಡೋದ್ ನಿಲ್ಸಿ, #GST, #FloodRelief ಕೊಡಿ. #IBPSMosa ಸರಿಪಡಿಸಿ. #StopHindiImposition ಎಂದು ಶ್ರುತಿ ಎಚ್.ಎಂ ಕಿಡಿಕಾರಿದ್ದಾರೆ.


ಇದನ್ನೂ ಓದಿ: ಇಂದಿನ ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಸಂಖ್ಯೆ ಮರೆಮಾಚಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...