Homeಮುಖಪುಟನರೇಂದ್ರ ಮೋದಿ ಒಬ್ಬ ಸಾಮಾನ್ಯ ಪ್ರಜೆಯಾಗಿದ್ದಿದ್ದರೆ ಜೈಲಿನಲ್ಲಿರುತ್ತಿದ್ದ ಅಲ್ಲವೇ?

ನರೇಂದ್ರ ಮೋದಿ ಒಬ್ಬ ಸಾಮಾನ್ಯ ಪ್ರಜೆಯಾಗಿದ್ದಿದ್ದರೆ ಜೈಲಿನಲ್ಲಿರುತ್ತಿದ್ದ ಅಲ್ಲವೇ?

- Advertisement -
- Advertisement -

|ಎ.ಕೆ.ಸುಬ್ಬಯ್ಯ, ಹಿರಿಯ ಚಿಂತಕರು|

ನಾನು ಇಸಿಜಿ ಮಾಡಿಸಿಕೊಳ್ಳಲು ಆಸ್ಪತ್ರೆಗೆ ಬಂದಿದ್ದೆ.ಇಸಿಜಿ ಮಾಡುವ ಟೆಕ್ನಿಷಿಯನ್ ಒಬ್ಬರು ಲೇಡಿ, ಇನ್ನೊಬ್ಬ ಟೆಕ್ನಿಷಿಯನ್ ಹುಡುಗ.ಆ ಹುಡುಗ ಜೆಡಿಎಸ್‌ನವನು. ಈ ಲೇಡಿ ಬಿಜೆಪಿಯವರು. ಅವನು ಬಿಜೆಪಿಗೆ ಓಟ್ ಮಾಡಲ್ಲ ಅನ್ನೊದು ಗೊತ್ತಿತ್ತು.ಅವನನ್ನ ಕೆಣಕುತ್ತಿದ್ದಳು. ಏನು ನೀವು ಸದಾನಂದ ಗೌಡನಿಗೆ ಓಟು ಕೊಡೋದಿಲ್ಲವಾ… ಇಲ್ಲ ಹಂಗೇನಿಲ್ಲ. ಯಾರಿಗೇನು ಓಟು ಕೊಡಬೇಕು ಅಂತೇನಿಲ್ಲ ಎಂದು ಗೌರವದಿಂದಲೇ ಆ ದಿನ ಯಾರ್ಯಾರು ಎಂದು ಮುಖ ನೋಡಿ ಓಟು ಮಾಡುವುದು ಎಂದ. ನಾನಂದೆ ಸದಾನಂದರ ಮುಖ ನೋಡಿದರೆ ನಿಮಗೆ ಕಾಣೋದು ಬರೀ ಹಲ್ಲು ಮಾತ್ರ.. ಓಟು ಯಾರಿಗೆ ಕೊಡ್ತೀರಿ.. ಹಲ್ಲಿಗೆ ಕೊಟ್ಟು ಬಿಡ್ತೀರಾ ಅಂದಾಗ ಸ್ವಲ್ಪ ಸ್ತಭ್ದರಾದರು. ನಂತರ ಆ ಲೇಡಿ, ಸದಾನಂದ ಗೌಡರಲ್ಲ, ನರೇಂದ್ರ ಮೋದಿಯವರನ್ನು ನೋಡಿ ಓಟು ಕೊಡಬೇಕಿದೆ ಎಂದರು.ನಾನೇಳುವುದೂ ಅದನ್ನೇ, ನರೇಂದ್ರ ಮೋದಿಯವರನ್ನು ನೋಡಿ ಆ ಮುಖದ ಹಿಂದೆ ಅಡಗಿಕೊಂಡಿರುವ ಕರಾಳ ಮುಖದ ದರ್ಶನವನ್ನು ಸಂಪೂರ್ಣವಾಗಿ ಪಡೆದು, ಅದರ ನಂತರವೂ ಓಟು ಮಾಡಬೇಕೆಂದರೆ ಮಾಡಿ ಎಂದೆ.

ನರೇಂದ್ರ ಮೋದಿಯ ಮೊದಲ ಕರಾಳ ಮುಖ ಯಾವುದೆಂದು ನಾನೇಳಲಾ ಎಂದೆ, ಹಾ ಹೇಳಿ ಅಂದರು.ನೋಡಿ ಚೆನ್ನಾಗಿ ನೋಡಿ.

ನರೇಂದ್ರ ಮೋದಿ ಚುನಾವಣೆಗೆ ಅರ್ಜಿ ಹಾಕುವಾಗ ನಾನು ಮದುವೆ ಆಗಿದ್ದೇನೆ ಎಂತಲೂ, ಹೆಂಡತಿಯ ಹೆಸರೂ ಬರೆದಿದ್ದಾನೆ, ಅವನ ಜೊತೆ ಹೆಂಡತಿ ಇದ್ದಾಳಾ.. ಅಥವಾ ಹೆಂಡತಿಗೆ ಏನಾದರೂ ಡೈವರ್ಸ್ ಹಾಕಿ ಆಕೆಗೇನಾದರೂ ನೆಮ್ಮದಿಯ ಬದುಕಿಗೇನಾದರೂ ನರೇಂದ್ರ ಮೋದಿ ವ್ಯವಸ್ಥೆ ಮಾಡಿದ್ದಾನಾ.. ಆಕೆಗೆ ಡೈವರ್ಸೂ ನೀಡಲಿಲ್ಲ, ಆಕೆಯ ಬದುಕನ್ನೂ ನೋಡಲಿಲ್ಲ. ಆಕೆಯ ಹೆಸರನ್ನೂ ಬಳಸಿಕೊಳ್ಳುತ್ತಿದ್ದಾನೆ. ಆಕೆ ಗಂಜಿ ಕುಡಿಯಲಿಕ್ಕೂ ವ್ಯವಸ್ತೆಯೂ ಮಾಡಿಲ್ಲ. ಇದು ಮಹಿಳೆಯ ಮೇಲೆ ನಡೆದಂತಹ ಅತ್ಯಂತ ಕ್ರೌರ್ಯವಲ್ಲವೇ? ನರೇಂದ್ರ ಮೋದಿ ಒಬ್ಬ ಸಾಮಾನ್ಯ ಪ್ರಜೆಯಾಗಿದ್ದಿದ್ದರೆ ಜೈಲಿನಲ್ಲಿರುತ್ತಿದ್ದ ಅಲ್ಲವೇ? ಸಾಮಾನ್ಯ ಪ್ರಜೆ ಜೈಲಿನಲ್ಲಿರಬೇಕಾದ ಅಪರಾಧ ಮಾಡಿ, ಜೈಲಿನಿಂದ ತಪ್ಪಿಸಿಕೊಂಡಿರುವುದು ನರೇಂದ್ರ ಮೋದಿಯಲ್ಲಿರುವಂತಹಾ ಕರಾಳ ಮುಖವಲ್ಲವೇ? ಇಂತಹ ಹಲವಾರು ಮುಖಗಳು ಕಾಣುತ್ತವೆ. ನರೇಂದ್ರ ಮೋದಿಯ ಈ ಮುಖವನ್ನು ಆಳವಾಗಿ ನೋಡಿ, ತೀಕ್ಷಣವಾಗಿ ನೋಡಿ, ಎಲ್ಲಾ ಕರಾಳ ಮುಖದ ದರ್ಶನವನ್ನು ಪಡೆದುಕೊಂಡು ನಂತರವೂ ಅವನಿಗ್ಯಾರಾದರೂ ಓಟು ಮಾಡೋದಾದರೆ ಅವರು ಪಿಶಾಚಿಗಳೇ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...