Homeಮುಖಪುಟ10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ 'ಮನ್-ಕಿ-ಬಾತ್'!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ ‘ಮನ್-ಕಿ-ಬಾತ್’!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

ಡಿಸ್‌ಲೈಕ್‌ಗಳಿಗಿಂತ ಲೈಕ್ ಸಂಖ್ಯೆ ಹೆಚ್ಚು ಮಾಡಿ ಅವಮಾನ ತಡೆಯಲು ಬಿಜೆಪಿ ಐಟಿ ಸೆಲ್ ಏನೆಲ್ಲಾ ಪ್ರಯತ್ನಪಟ್ಟರೂ ಸಾಧ್ಯವಾಗಿಲ್ಲ. ಹಾಗಾಗಿ ಕೊನೆಗೆ ಅಧಿಕಾರದ ಪ್ರಭಾವ ಬಳಿಸಿ ಡಿಸ್‌ಲೈಕ್‌ಗಳನ್ನೇ ಇಳಿಸುವ ಕೆಲಸಕ್ಕೆ ಬಿಜೆಪಿ ಕೈಹಾಕಿದೆ ಎಂಬ ಆರೋಪ ಕೇಳಿಬಂದಿದೆ.

- Advertisement -
- Advertisement -

ಹತ್ತುಲಕ್ಷ ಡಿಸ್‌ಲೈಕ್ ಗಳಿಸಿ, ಪ್ರಧಾನಿ ಮೋದಿಯ ‘ಮನ್-ಕಿ-ಬಾತ್’ ಕಾರ್ಯಕ್ರಮ ದಾಖಲೆ ಬರೆದಿದೆ. ಅದಾಗ್ಯೂ ಡಿಸ್‌ಲೈಕ್‌ಗಳನ್ನು ಡಿಲೀಟ್ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಪ್ರತಿ ಬಾರಿ ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿತ್ತು. ಆದರೆ ಈ ಬಾರಿಯ ಆಗಸ್ಟ್ 30ರ ಮನ್ ಕಿ ಬಾತ್‌ಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಮೋದಿಯವರ ಜನಪ್ರಿಯತೆ ಕುಸಿದಿದೆ ಎಂಬ ಚರ್ಚೆ ಆರಂಭವಾಗಿತ್ತು.

ಮನ್‌ ಕಿ ಬಾತ್ ಕಾರ್ಯಕ್ರಮವನ್ನು ಬಿಜೆಪಿಯ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಲಾಗಿತ್ತು. ಅಲ್ಲೆ ಅತ್ಯಧಿಕ ಜನ ಡಿಸ್‌ಲೈಕ್ ಮಾಡುವ ಮೂಲಕ ತಮ್ಮ ವಿರೋಧ ದಾಖಲಿಸಿದ್ದಾರೆ. ಈ ವರದಿ ಬರೆಯುವ ವೇಳೆಗೆ ಒಂದೇ ದಿನದಲ್ಲಿ, ಆ ವಿಡಿಯೋಗೆ 3 ಲಕ್ಷ ಜನರು ಲೈಕ್ ಒತ್ತಿದರೆ 10 ಲಕ್ಷ ಜನರು ಡಿಸ್‌ಲೈಕ್‌ ಒತ್ತುವ ಮೂಲಕ ಮೋದಿಯವರನ್ನು ಮುಜುಗರಕ್ಕೀಡುಮಾಡಿದ್ದಾರೆ.

ಇದನ್ನೂ ಓದಿ: ಮೋದಿಯವರದ್ದೇ ಯೂಟ್ಯೂಬ್‌ನಲ್ಲಿ ಅವರ ಜನಪ್ರಿಯತೆ ಕುಸಿತ: ಮನ್ ಕಿ ಬಾತ್ ತಿರಸ್ಕರಿಸಿದ ವಿದ್ಯಾರ್ಥಿಗಳು!

ಆದರೆ ಇಂದು ಈ ವರದಿ ಬರೆಯುವ ವೇಳೆಗೆ ಡಿಸ್ಲೈಕ್ ಗಳ ಸಂಖ್ಯೆ 1 ಮಿಲಿಯನ್ ದಾಟಿ ದಾಖಲೆ ಬರೆದಿದೆ. ಲೈಕ್ ಗಳ ಸಂಖ್ಯೆ ಕೇವಲ 3 ಲಕ್ಷ ದಾಟಿದೆ.

ಈ ನಡುವೆ ಡಿಸ್‌ಲೈಕ್‌ಗಳನ್ನು ಡಿಲೀಟ್ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಇದರ ಕುರಿತು ಪ್ರಜಾವಾಣಿ ವರದಿ ಮಾಡಿದೆ.

“ಮಂಗಳವಾರ ಸಂಜೆ 6.30ರಲ್ಲಿ ಪರಿಶೀಲಿಸದಾಗ ಡಿಸ್‌ಲೈಕ್‌ಗಳ ಸಂಖ್ಯೆ 9.92 ಲಕ್ಷ ಇತ್ತು. 7 ಗಂಟೆಯಲ್ಲಿ 9.98 ಲಕ್ಷದಷ್ಟಿತ್ತು. ಆದರೆ ರಾತ್ರಿ 8.40 ರಲ್ಲಿ ಪರಿಶೀಲಿಸಿದಾಗ, ಡಿಸ್‌ಲೈಕ್‌ಗಳ ಸಂಖ್ಯೆ 9.3 ಲಕ್ಷಕ್ಕೆ ಕುಸಿದಿತ್ತು. ಅದು ಹೇಗೆ ಕುಸಿಯಲು ಸಾಧ್ಯ ಎಂದು ಪತ್ರಿಕೆ ಪ್ರಶ್ನಿಸಿದೆ.

ಬಿಜೆಪಿ ಐಟಿ ಸೆಲ್ ದೇಶದಲ್ಲಿ ಅತ್ಯಂತ ಪ್ರಭಾವಿ ಮತ್ತು ವಿಸ್ತೃತ ಜಾಲ ಹೊಂದಿದೆ ಎಂದು ಹೇಳಲಾಗುತ್ತದೆ. ಡಿಸ್‌ಲೈಕ್‌ಗಳಿಗಿಂತ ಲೈಕ್ ಸಂಖ್ಯೆ ಹೆಚ್ಚು ಮಾಡಿ ಅವಮಾನ ತಡೆಯಲು ಬಿಜೆಪಿ ಐಟಿ ಸೆಲ್ ಏನೆಲ್ಲಾ ಪ್ರಯತ್ನಪಟ್ಟರೂ ಸಾಧ್ಯವಾಗಿಲ್ಲ. ಒಂದೇ ಸಮನೇ ಡಿಸ್‌ಲೈಕ್‌ಗಳ ಸಂಖ್ಯೆ ಏರತೊಡಗಿದೆ. ಹಾಗಾಗಿ ಕೊನೆಗೆ ಅಧಿಕಾರದ ಪ್ರಭಾವ ಬಳಿಸಿ ಡಿಸ್‌ಲೈಕ್‌ಗಳನ್ನೇ ಇಳಿಸುವ ಕೆಲಸಕ್ಕೆ ಬಿಜೆಪಿ ಕೈಹಾಕಿದೆ ಎಂಬ ಆರೋಪ ಕೇಳಿಬಂದಿದೆ.

ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರವನ್ನು ಯೂಟ್ಯೂಬ್‌ನಲ್ಲಿ ಅತಿಹೆಚ್ಚು ಸಂಖ್ಯೆಯ ಜನರು ಡಿಸ್ ಲೈಕ್ ಮಾಡಿರುವ ಬೆನ್ನಲ್ಲೇ ಟ್ವಿಟರ್ ನಲ್ಲಿ #StudentsDislikePMModi ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್ ಆಗಿತ್ತು.

ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹೊತ್ತಲ್ಲಿ, ಲಕ್ಷಾಂತರ ವಿದ್ಯಾರ್ಥಿಗಳ, ಹಲವು ರಾಜ್ಯಗಳ ವಿರೋಧದ ನಡುವೆಯೂ NEET ಮತ್ತು JEE ಪರೀಕ್ಷೆಗಳನ್ನು ನಡೆಸಲು ಕೇಂದ್ರ ತಯಾರಿ ನಡೆಸಿರುವುದಕ್ಕೆ ಪ್ರತಿಯಾಗಿ ವಿದ್ಯಾರ್ಥಿಗಳು ಮೋದಿ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಈಗಾಗಲೇ ಜೆಇಇ ಮತ್ತು ನೀಟ್ ಪರೀಕ್ಷೆಗಳು ಪ್ರಾರಂಭವಾಗಿವೆ. ಆದರೂ ಮನ್-ಕಿ-ಬಾತ್ ವೀಡಿಯೋಗೆ  ಡಿಸ್‌ಲೈಕ್‌ಗಳ ಸಂಖ್ಯೆ ಮಾತ್ರ ಒಂದೇ ಸಮನೆ ಏರುತ್ತಿದೆ (ಪ್ರಸ್ತುತ ಹತ್ತುಲಕ್ಷ). ಇದು ಮೋದಿ ಆಡಳಿತದ ವಿರುದ್ಧ ಜನಾಕ್ರೋಶ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: #StudentsDislikePMModi: ವಿದ್ಯಾರ್ಥಿಗಳಿಂದ ಟ್ವಿಟರ್ ನಲ್ಲಿ ಅಭಿಯಾನ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...