Homeಮುಖಪುಟಒಂದು ವರ್ಷದಲ್ಲಿ ಪ್ರಧಾನಿ ಮೋದಿ ಜನಪ್ರಿಯತೆ 66% ರಿಂದ 24% ಕ್ಕೆ ಕುಸಿತ: ಇಂಡಿಯಾ ಟುಡೆ...

ಒಂದು ವರ್ಷದಲ್ಲಿ ಪ್ರಧಾನಿ ಮೋದಿ ಜನಪ್ರಿಯತೆ 66% ರಿಂದ 24% ಕ್ಕೆ ಕುಸಿತ: ಇಂಡಿಯಾ ಟುಡೆ ಸಮೀಕ್ಷೆ

- Advertisement -
- Advertisement -

ಸೋಮವಾರ (ಆಗಸ್ಟ್ 16) ಬಿಡುಗಡೆಯಾದ ಇಂಡಿಯಾ ಟುಡೇಯ “ಮೂಡ್ ಆಫ್ ದಿ ನೇಷನ್” ಸಮೀಕ್ಷೆಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯ ರೇಟಿಂಗ್ ಒಂದು ವರ್ಷದಲ್ಲಿ 66% ರಿಂದ 24% ಕ್ಕೆ ಇಳಿದಿದೆ.

ದೇಶದಲ್ಲಿ ಕೋವಿಡ್ ಬಿಕ್ಕಟ್ಟನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸದೇ ಇರುವುದು ಪ್ರಧಾನಿ ಮೋದಿಯವರ ಜನಪ್ರಿಯತೆ ಕುಸಿತಕ್ಕೆ ಪ್ರಾಥಮಿಕ ಕಾರಣ ಎಂದು ಹೇಳಲಾಗಿದೆ.

“ಕೊರೊನಾ ಮೊದಲ ಅಲೆಯನ್ನು ಸಮರ್ಥವಾಗಿ ನಿರ್ವಹಿಸಿದ್ದಕ್ಕಾಗಿ ಮೋದಿಯವರನ್ನು ಜನವರಿ 2021 ರಲ್ಲಿ ಪ್ರಶಂಸಿಸಲಾಗಿತ್ತು. ಇದಕ್ಕಾಗಿ ಶೇಕಡಾ 73% ರಷ್ಟು ಜನಪ್ರಿಯತೆ ಗಳಿಸಿದ್ದರು. ಆದರೆ, ಎರಡನೇ ಅಲೆಯನ್ನು ಸರಿಯಾಗಿ ನಿರ್ವಹಿಸದ ಕಾರಣ ಅವರ ಜನಪ್ರಿಯತೆಯ ಅಂಕಿ ಅಂಶವು 49% ಕ್ಕೆ ಇಳಿದಿದೆ” ಎಂದು ಇಂಡಿಯಾ ಟುಡೇ ವರದಿ ಹೇಳಿದೆ.

ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ 27% ರಷ್ಟು ಜನರು ಚುನಾವಣಾ ರ್‍ಯಾಲಿಗಳು ಸೇರಿದಂತೆ ದೊಡ್ಡ ಸಭೆ-ಸಮಾರಂಭಗಳು ಭಾರತದಲ್ಲಿ ಸಾಂಕ್ರಾಮಿಕ ರೋಗದ ಎರಡನೇ ಅಲೆಗೆ ಕಾರಣವೆಂದು ಹೇಳಿದ್ದಾರೆ. ಸುಮಾರು 26% ಜನರು ಕೋವಿಡ್ ಮಾರ್ಗಸೂಚಿಗಳನ್ನು ನಿರ್ಲಕ್ಷಿಸಿದ್ದರಿಂದ ಕೊರೊನಾ ಅಲೆ ಹೆಚ್ಚಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ: 3 ವರ್ಷದಿಂದ ಒಂದೇ ಭರವಸೆ ನೀಡುತ್ತಿರುವ ಪ್ರಧಾನಿ : ಸಂಖ್ಯೆಯನ್ನಾದರೂ ಬದಲಿಸಿ ಎಂದ ಕಾಂಗ್ರೆಸ್

ದೇಶದಲ್ಲಿ ಕೋವಿಡ್ ಸೋಂಕಿಗೆ ಒಳಗಾಗಿರುವವರರ ಡೇಟಾ ಮತ್ತು ಕೊರೊನಾ ಸಾವುಗಳ ಡೇಟಾ ಬಗ್ಗೆ ಸರ್ಕಾರಿ ದತ್ತಾಂಶದಲ್ಲಿ ತಿಳಿವುದಕ್ಕಿಂತ ಹೆಚ್ಚಿನ ಕೇಸ್‌ಗಳು ಮತ್ತು ಸಾವುಗಳಾಗಿವೆ ಎಂದು 71% ರಷ್ಟು ಜನರು ಹೇಳಿದ್ದಾರೆ, ಇನ್ನು ಶೇಕಡಾ 44% ಜನರು ಈ ಆರೋಗ್ಯ ಬಿಕ್ಕಟ್ಟು ಉಂಟಾಗಲು ಒಕ್ಕೂಟ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಕಾರಣವೆಂದು ಹೇಳಿದ್ದಾರೆ.

ಇಂಡಿಯಾ ಟುಡೇ ಸಮೀಕ್ಷೆಯ ಪ್ರಕಾರ, 29% ರಷ್ಟು ಜನರು ಬೆಲೆ ಏರಿಕೆ ಮತ್ತು ಹಣದುಬ್ಬರವು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಸರ್ಕಾರದ ದೊಡ್ಡ ವೈಫಲ್ಯವೆಂದು ತಿಳಿಸಿದ್ದಾರೆ. ಸುಮಾರು 23% ರಷ್ಟು ಜನರು ನಿರುದ್ಯೋಗ ದರವು ಮೋದಿ ಸರ್ಕಾರದ ಎರಡನೇ ಅತಿದೊಡ್ಡ ವೈಫಲ್ಯ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಮೋದಿ ನಂತರ ಪ್ರಧಾನಿ ಸ್ಥಾನಕ್ಕೆ ಶೇಕಡಾ 11% ರಷ್ಟು ಜನರು ಆಯ್ಕೆ ಮಾಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 10% ರೇಟಿಂಗ್ ಹೊಂದಿದ್ದು,  ಪ್ರಧಾನಿ ಸ್ಥಾನಕ್ಕೆ ಮೂರನೇ ಅತ್ಯಂತ ಜನಪ್ರಿಯ ಮುಖವಾಗಿ ಹೊರಹೊಮ್ಮಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು 2020 ರಲ್ಲಿ 8% ರಷ್ಟು ಜನಪ್ರಿಯತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್ 2019 ರಲ್ಲಿ 3% ಜನಪ್ರಿಯತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಆದರೆ, 11 ರಾಜ್ಯಗಳ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಆದಿತ್ಯನಾಥ್ ಏಳನೇ ಸ್ಥಾನದಲ್ಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಇಂಡಿಯಾ ಟುಡೇ ಸಮೀಕ್ಷೆಯನ್ನು ಜುಲೈ 10 ಮತ್ತು ಜುಲೈ 22 ರ ನಡುವೆ ನಡೆಸಿದ್ದುಉ, ಸಮೀಕ್ಷೆಯಲ್ಲಿ 14,599 ಮಂದಿ ಭಾಗವಹಿಸಿದ್ದಾರೆ. ಪ್ರತಿಕ್ರಿಯಿಸಿದವರಲ್ಲಿ 71% ಜನರು ಗ್ರಾಮೀಣ ಪ್ರದೇಶದ ಜನರು ಮತ್ತು 29% ನಗರ ಪ್ರದೇಶದ ಜನರಾಗಿದ್ದಾರೆ. ಸಮೀಕ್ಷೆಯು 19 ರಾಜ್ಯಗಳು, 115 ಸಂಸತ್ತು ಮತ್ತು 230 ವಿಧಾನಸಭಾ ಸ್ಥಾನಗಳ ಜನರನ್ನು ಒಳಗೊಂಡಿದೆ.


ಇದನ್ನೂ ಓದಿ: ಬೇಡಿಕೆ ಈಡೇರುವವರೆಗೂ ಜಿಎಸ್‌ಟಿ ಪಾವತಿಸಬೇಡಿ: ವರ್ತಕರಿಗೆ ಪ್ರಧಾನಿ ಸಹೋದರನ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಪಡಿಸಿ, ನೇರ ವೇತನ ಪಾವತಿ ಜಾರಿಗೊಳಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಲು ಆಗ್ರಹಿಸಿ ಎಐಸಿಸಿಟಿಯು ಪ್ರತಿಭಟನೆ

ಬೆಂಗಳೂರು: ರಾಜ್ಯಾದ್ಯಂತ ವಿವಿಧ ವಲಯಗಳಲ್ಲಿ ದುಡಿಯುತ್ತಿರುವ ಗುತ್ತಿಗೆ, ಹೊರಗುತ್ತಿಗೆ, ದಿನಗೂಲಿ ಹಾಗೂ ತಾತ್ಕಾಲಿಕ ಕಾರ್ಮಿಕರ ಶೋಷಣೆ ತಡೆಗಟ್ಟಿ, ಅವರಿಗೆ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ...

ಯುಜಿಸಿ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟುವ ಕುರಿತಾದ 2026 ರ ವಿಶ್ವವಿದ್ಯಾಲಯ ಅನುದಾನ ಆಯೋಗದ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಜನವರಿ 29 ರಂದು, ಸುಪ್ರೀಂ...

ಅಲ್ಪಸಂಖ್ಯಾತರ ಮೇಲಿನ ದಾಳಿ ಹಿನ್ನೆಲೆ: ಭಾಗವತ್ ಭೇಟಿಗೂ ಮುನ್ನ ಆರ್‌ಎಸ್‌ಎಸ್ ನಾಯಕರನ್ನು ದೂರವಿಡುವಂತೆ ವಾಷಿಂಗ್ಟನ್‌ಗೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ ಒತ್ತಾಯ

ವಾಷಿಂಗ್ಟನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಅಮೆರಿಕ ಭೇಟಿಗೆ ಮುನ್ನ, ಅವರೊಂದಿಗೆ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳನ್ನು ತಡೆಹಿಡಿಯಬೇಕು ಮತ್ತು ಸಂಘದ ಪ್ರಮುಖ ನಾಯಕರ ವಿರುದ್ಧ ನಿರ್ಬಂಧಗಳನ್ನು...

ಮೋಹನ್ ಭಾಗವತ್‌ ಅಮೆರಿಕ ಪ್ರವಾಸಕ್ಕೆ ವಿರೋಧ: RSSಗೆ ನಿರ್ಬಂಧದ ಭೀತಿ

ಆರ್‌ಎಸ್‌ಎಸ್ (RSS) ಸಂಘಟನೆಯ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಕುರಿತ ಸಲಹಾ ಮಂಡಳಿಯ (USCIRF) ಅಧಿಕಾರಿಗಳು ಅಮೆರಿಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿರುವ RSS ಸರಸಂಘಚಾಲಕ ಮೋಹನ್ ಭಾಗವತ್...

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕೇರಳದ ಟ್ರಾನ್ಸ್ ಜೆಂಡರ್ ಮೇಕಪ್ ಕಲಾವಿದೆ ಜಾನ್ಮೋನಿ ದಾಸ್ ಬಂಧನ

ಕೋಝಿಕ್ಕೋಡ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾರ್ವಜನಿಕವಾಗಿ ಅವಮಾನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇರೆಗೆ ಕೇರಳದ ಪ್ರಸಿದ್ಧ ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಹಾಗೂ ಬಿಗ್ ಬಾಸ್ ಮಾಜಿ...

ಎರಡು ಚರಣಗಳ ‘ವಂದೇ ಮಾತರಂ’ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ವಂದೇ ಮಾತರಂ ವಿವಾದ ತೀವ್ರಗೊಳ್ಳುತ್ತಿರುವಂತೆಯೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ತೀವ್ರ ಟೀಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವ ತನ್ನ ದೀರ್ಘಕಾಲದ ಪದ್ಧತಿಯನ್ನು...

31ನೇ ದಕ್ಷಿಣ ವಲಯ ಮಂಡಳಿ ಸಭೆ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡುವಂತೆ ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ...

ರಾಯಚೂರು| ಬಾವಿಯಲ್ಲಿ ದಲಿತ ಯುವತಿ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ

ನಿನ್ನೆ ರಾತ್ರಿ ಬಯಲು ಶೌಚಾಲಯಕ್ಕೆಂದು ಮನೆಯಿಂದ ಹೊರಹೋಗಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ರಾಣಿ ಗ್ರಾಮದಲ್ಲಿ ಘಟನೆ ನಡೆಸಿದ್ದು, ಮೃತ...

ನಕಲಿ ಔಷಧ ಜಾಲದ ಸುಳಿವು ನೀಡಿದವರಿಗೆ ₹50,000 ನಗದು ಬಹುಮಾನ: ಆರೋಗ್ಯ ಇಲಾಖೆ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಕಲಿ ಔಷಧ ಜಾಲದ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ರಾಜ್ಯದಲ್ಲಿ ನಕಲಿ ಔಷಧಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ಪೂರೈಕೆ ಕುರಿತು ನಿಖರ ಮಾಹಿತಿ ನೀಡುವ...

ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳ ನಡುವೆ ವಾಗ್ವಾದ: ಮಧ್ಯರಾತ್ರಿ ಜಾದವ್‌ಪುರ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಳಿ ನಡೆಸಿದ ಹಿಂದುತ್ವವಾದಿ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಷ್ಠಿತ ಜಾದವ್‌ಪುರ ವಿಶ್ವವಿದ್ಯಾಲಯದ (ಜೆ ಯು) ಕ್ಯಾಂಪಸ್‌ ಮೇಲೆ ತಡರಾತ್ರಿ ಹಿಂದುತ್ವವಾದಿ ಸಂಘಟನೆಗೆ ಸೇರಿದ ಗುಂಪೊಂದು ಭೀಕರ ದಾಳಿ ನಡೆಸಿದ್ದು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಧ್ವಂಸಗೊಳಿಸಿ ಹಲವು ವಿದ್ಯಾರ್ಥಿಗಳನ್ನು ತೀವ್ರವಾಗಿ...