Homeಮುಖಪುಟಒಂದು ವರ್ಷದಲ್ಲಿ ಪ್ರಧಾನಿ ಮೋದಿ ಜನಪ್ರಿಯತೆ 66% ರಿಂದ 24% ಕ್ಕೆ ಕುಸಿತ: ಇಂಡಿಯಾ ಟುಡೆ...

ಒಂದು ವರ್ಷದಲ್ಲಿ ಪ್ರಧಾನಿ ಮೋದಿ ಜನಪ್ರಿಯತೆ 66% ರಿಂದ 24% ಕ್ಕೆ ಕುಸಿತ: ಇಂಡಿಯಾ ಟುಡೆ ಸಮೀಕ್ಷೆ

- Advertisement -
- Advertisement -

ಸೋಮವಾರ (ಆಗಸ್ಟ್ 16) ಬಿಡುಗಡೆಯಾದ ಇಂಡಿಯಾ ಟುಡೇಯ “ಮೂಡ್ ಆಫ್ ದಿ ನೇಷನ್” ಸಮೀಕ್ಷೆಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯ ರೇಟಿಂಗ್ ಒಂದು ವರ್ಷದಲ್ಲಿ 66% ರಿಂದ 24% ಕ್ಕೆ ಇಳಿದಿದೆ.

ದೇಶದಲ್ಲಿ ಕೋವಿಡ್ ಬಿಕ್ಕಟ್ಟನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸದೇ ಇರುವುದು ಪ್ರಧಾನಿ ಮೋದಿಯವರ ಜನಪ್ರಿಯತೆ ಕುಸಿತಕ್ಕೆ ಪ್ರಾಥಮಿಕ ಕಾರಣ ಎಂದು ಹೇಳಲಾಗಿದೆ.

“ಕೊರೊನಾ ಮೊದಲ ಅಲೆಯನ್ನು ಸಮರ್ಥವಾಗಿ ನಿರ್ವಹಿಸಿದ್ದಕ್ಕಾಗಿ ಮೋದಿಯವರನ್ನು ಜನವರಿ 2021 ರಲ್ಲಿ ಪ್ರಶಂಸಿಸಲಾಗಿತ್ತು. ಇದಕ್ಕಾಗಿ ಶೇಕಡಾ 73% ರಷ್ಟು ಜನಪ್ರಿಯತೆ ಗಳಿಸಿದ್ದರು. ಆದರೆ, ಎರಡನೇ ಅಲೆಯನ್ನು ಸರಿಯಾಗಿ ನಿರ್ವಹಿಸದ ಕಾರಣ ಅವರ ಜನಪ್ರಿಯತೆಯ ಅಂಕಿ ಅಂಶವು 49% ಕ್ಕೆ ಇಳಿದಿದೆ” ಎಂದು ಇಂಡಿಯಾ ಟುಡೇ ವರದಿ ಹೇಳಿದೆ.

ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ 27% ರಷ್ಟು ಜನರು ಚುನಾವಣಾ ರ್‍ಯಾಲಿಗಳು ಸೇರಿದಂತೆ ದೊಡ್ಡ ಸಭೆ-ಸಮಾರಂಭಗಳು ಭಾರತದಲ್ಲಿ ಸಾಂಕ್ರಾಮಿಕ ರೋಗದ ಎರಡನೇ ಅಲೆಗೆ ಕಾರಣವೆಂದು ಹೇಳಿದ್ದಾರೆ. ಸುಮಾರು 26% ಜನರು ಕೋವಿಡ್ ಮಾರ್ಗಸೂಚಿಗಳನ್ನು ನಿರ್ಲಕ್ಷಿಸಿದ್ದರಿಂದ ಕೊರೊನಾ ಅಲೆ ಹೆಚ್ಚಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ: 3 ವರ್ಷದಿಂದ ಒಂದೇ ಭರವಸೆ ನೀಡುತ್ತಿರುವ ಪ್ರಧಾನಿ : ಸಂಖ್ಯೆಯನ್ನಾದರೂ ಬದಲಿಸಿ ಎಂದ ಕಾಂಗ್ರೆಸ್

ದೇಶದಲ್ಲಿ ಕೋವಿಡ್ ಸೋಂಕಿಗೆ ಒಳಗಾಗಿರುವವರರ ಡೇಟಾ ಮತ್ತು ಕೊರೊನಾ ಸಾವುಗಳ ಡೇಟಾ ಬಗ್ಗೆ ಸರ್ಕಾರಿ ದತ್ತಾಂಶದಲ್ಲಿ ತಿಳಿವುದಕ್ಕಿಂತ ಹೆಚ್ಚಿನ ಕೇಸ್‌ಗಳು ಮತ್ತು ಸಾವುಗಳಾಗಿವೆ ಎಂದು 71% ರಷ್ಟು ಜನರು ಹೇಳಿದ್ದಾರೆ, ಇನ್ನು ಶೇಕಡಾ 44% ಜನರು ಈ ಆರೋಗ್ಯ ಬಿಕ್ಕಟ್ಟು ಉಂಟಾಗಲು ಒಕ್ಕೂಟ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಕಾರಣವೆಂದು ಹೇಳಿದ್ದಾರೆ.

ಇಂಡಿಯಾ ಟುಡೇ ಸಮೀಕ್ಷೆಯ ಪ್ರಕಾರ, 29% ರಷ್ಟು ಜನರು ಬೆಲೆ ಏರಿಕೆ ಮತ್ತು ಹಣದುಬ್ಬರವು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಸರ್ಕಾರದ ದೊಡ್ಡ ವೈಫಲ್ಯವೆಂದು ತಿಳಿಸಿದ್ದಾರೆ. ಸುಮಾರು 23% ರಷ್ಟು ಜನರು ನಿರುದ್ಯೋಗ ದರವು ಮೋದಿ ಸರ್ಕಾರದ ಎರಡನೇ ಅತಿದೊಡ್ಡ ವೈಫಲ್ಯ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಮೋದಿ ನಂತರ ಪ್ರಧಾನಿ ಸ್ಥಾನಕ್ಕೆ ಶೇಕಡಾ 11% ರಷ್ಟು ಜನರು ಆಯ್ಕೆ ಮಾಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 10% ರೇಟಿಂಗ್ ಹೊಂದಿದ್ದು,  ಪ್ರಧಾನಿ ಸ್ಥಾನಕ್ಕೆ ಮೂರನೇ ಅತ್ಯಂತ ಜನಪ್ರಿಯ ಮುಖವಾಗಿ ಹೊರಹೊಮ್ಮಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು 2020 ರಲ್ಲಿ 8% ರಷ್ಟು ಜನಪ್ರಿಯತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್ 2019 ರಲ್ಲಿ 3% ಜನಪ್ರಿಯತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಆದರೆ, 11 ರಾಜ್ಯಗಳ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಆದಿತ್ಯನಾಥ್ ಏಳನೇ ಸ್ಥಾನದಲ್ಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಇಂಡಿಯಾ ಟುಡೇ ಸಮೀಕ್ಷೆಯನ್ನು ಜುಲೈ 10 ಮತ್ತು ಜುಲೈ 22 ರ ನಡುವೆ ನಡೆಸಿದ್ದುಉ, ಸಮೀಕ್ಷೆಯಲ್ಲಿ 14,599 ಮಂದಿ ಭಾಗವಹಿಸಿದ್ದಾರೆ. ಪ್ರತಿಕ್ರಿಯಿಸಿದವರಲ್ಲಿ 71% ಜನರು ಗ್ರಾಮೀಣ ಪ್ರದೇಶದ ಜನರು ಮತ್ತು 29% ನಗರ ಪ್ರದೇಶದ ಜನರಾಗಿದ್ದಾರೆ. ಸಮೀಕ್ಷೆಯು 19 ರಾಜ್ಯಗಳು, 115 ಸಂಸತ್ತು ಮತ್ತು 230 ವಿಧಾನಸಭಾ ಸ್ಥಾನಗಳ ಜನರನ್ನು ಒಳಗೊಂಡಿದೆ.


ಇದನ್ನೂ ಓದಿ: ಬೇಡಿಕೆ ಈಡೇರುವವರೆಗೂ ಜಿಎಸ್‌ಟಿ ಪಾವತಿಸಬೇಡಿ: ವರ್ತಕರಿಗೆ ಪ್ರಧಾನಿ ಸಹೋದರನ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...