Homeಮುಖಪುಟಒಂದು ವರ್ಷದಲ್ಲಿ ಪ್ರಧಾನಿ ಮೋದಿ ಜನಪ್ರಿಯತೆ 66% ರಿಂದ 24% ಕ್ಕೆ ಕುಸಿತ: ಇಂಡಿಯಾ ಟುಡೆ...

ಒಂದು ವರ್ಷದಲ್ಲಿ ಪ್ರಧಾನಿ ಮೋದಿ ಜನಪ್ರಿಯತೆ 66% ರಿಂದ 24% ಕ್ಕೆ ಕುಸಿತ: ಇಂಡಿಯಾ ಟುಡೆ ಸಮೀಕ್ಷೆ

- Advertisement -
- Advertisement -

ಸೋಮವಾರ (ಆಗಸ್ಟ್ 16) ಬಿಡುಗಡೆಯಾದ ಇಂಡಿಯಾ ಟುಡೇಯ “ಮೂಡ್ ಆಫ್ ದಿ ನೇಷನ್” ಸಮೀಕ್ಷೆಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯ ರೇಟಿಂಗ್ ಒಂದು ವರ್ಷದಲ್ಲಿ 66% ರಿಂದ 24% ಕ್ಕೆ ಇಳಿದಿದೆ.

ದೇಶದಲ್ಲಿ ಕೋವಿಡ್ ಬಿಕ್ಕಟ್ಟನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸದೇ ಇರುವುದು ಪ್ರಧಾನಿ ಮೋದಿಯವರ ಜನಪ್ರಿಯತೆ ಕುಸಿತಕ್ಕೆ ಪ್ರಾಥಮಿಕ ಕಾರಣ ಎಂದು ಹೇಳಲಾಗಿದೆ.

“ಕೊರೊನಾ ಮೊದಲ ಅಲೆಯನ್ನು ಸಮರ್ಥವಾಗಿ ನಿರ್ವಹಿಸಿದ್ದಕ್ಕಾಗಿ ಮೋದಿಯವರನ್ನು ಜನವರಿ 2021 ರಲ್ಲಿ ಪ್ರಶಂಸಿಸಲಾಗಿತ್ತು. ಇದಕ್ಕಾಗಿ ಶೇಕಡಾ 73% ರಷ್ಟು ಜನಪ್ರಿಯತೆ ಗಳಿಸಿದ್ದರು. ಆದರೆ, ಎರಡನೇ ಅಲೆಯನ್ನು ಸರಿಯಾಗಿ ನಿರ್ವಹಿಸದ ಕಾರಣ ಅವರ ಜನಪ್ರಿಯತೆಯ ಅಂಕಿ ಅಂಶವು 49% ಕ್ಕೆ ಇಳಿದಿದೆ” ಎಂದು ಇಂಡಿಯಾ ಟುಡೇ ವರದಿ ಹೇಳಿದೆ.

ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ 27% ರಷ್ಟು ಜನರು ಚುನಾವಣಾ ರ್‍ಯಾಲಿಗಳು ಸೇರಿದಂತೆ ದೊಡ್ಡ ಸಭೆ-ಸಮಾರಂಭಗಳು ಭಾರತದಲ್ಲಿ ಸಾಂಕ್ರಾಮಿಕ ರೋಗದ ಎರಡನೇ ಅಲೆಗೆ ಕಾರಣವೆಂದು ಹೇಳಿದ್ದಾರೆ. ಸುಮಾರು 26% ಜನರು ಕೋವಿಡ್ ಮಾರ್ಗಸೂಚಿಗಳನ್ನು ನಿರ್ಲಕ್ಷಿಸಿದ್ದರಿಂದ ಕೊರೊನಾ ಅಲೆ ಹೆಚ್ಚಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ: 3 ವರ್ಷದಿಂದ ಒಂದೇ ಭರವಸೆ ನೀಡುತ್ತಿರುವ ಪ್ರಧಾನಿ : ಸಂಖ್ಯೆಯನ್ನಾದರೂ ಬದಲಿಸಿ ಎಂದ ಕಾಂಗ್ರೆಸ್

ದೇಶದಲ್ಲಿ ಕೋವಿಡ್ ಸೋಂಕಿಗೆ ಒಳಗಾಗಿರುವವರರ ಡೇಟಾ ಮತ್ತು ಕೊರೊನಾ ಸಾವುಗಳ ಡೇಟಾ ಬಗ್ಗೆ ಸರ್ಕಾರಿ ದತ್ತಾಂಶದಲ್ಲಿ ತಿಳಿವುದಕ್ಕಿಂತ ಹೆಚ್ಚಿನ ಕೇಸ್‌ಗಳು ಮತ್ತು ಸಾವುಗಳಾಗಿವೆ ಎಂದು 71% ರಷ್ಟು ಜನರು ಹೇಳಿದ್ದಾರೆ, ಇನ್ನು ಶೇಕಡಾ 44% ಜನರು ಈ ಆರೋಗ್ಯ ಬಿಕ್ಕಟ್ಟು ಉಂಟಾಗಲು ಒಕ್ಕೂಟ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಕಾರಣವೆಂದು ಹೇಳಿದ್ದಾರೆ.

ಇಂಡಿಯಾ ಟುಡೇ ಸಮೀಕ್ಷೆಯ ಪ್ರಕಾರ, 29% ರಷ್ಟು ಜನರು ಬೆಲೆ ಏರಿಕೆ ಮತ್ತು ಹಣದುಬ್ಬರವು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಸರ್ಕಾರದ ದೊಡ್ಡ ವೈಫಲ್ಯವೆಂದು ತಿಳಿಸಿದ್ದಾರೆ. ಸುಮಾರು 23% ರಷ್ಟು ಜನರು ನಿರುದ್ಯೋಗ ದರವು ಮೋದಿ ಸರ್ಕಾರದ ಎರಡನೇ ಅತಿದೊಡ್ಡ ವೈಫಲ್ಯ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಮೋದಿ ನಂತರ ಪ್ರಧಾನಿ ಸ್ಥಾನಕ್ಕೆ ಶೇಕಡಾ 11% ರಷ್ಟು ಜನರು ಆಯ್ಕೆ ಮಾಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 10% ರೇಟಿಂಗ್ ಹೊಂದಿದ್ದು,  ಪ್ರಧಾನಿ ಸ್ಥಾನಕ್ಕೆ ಮೂರನೇ ಅತ್ಯಂತ ಜನಪ್ರಿಯ ಮುಖವಾಗಿ ಹೊರಹೊಮ್ಮಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು 2020 ರಲ್ಲಿ 8% ರಷ್ಟು ಜನಪ್ರಿಯತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್ 2019 ರಲ್ಲಿ 3% ಜನಪ್ರಿಯತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಆದರೆ, 11 ರಾಜ್ಯಗಳ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಆದಿತ್ಯನಾಥ್ ಏಳನೇ ಸ್ಥಾನದಲ್ಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಇಂಡಿಯಾ ಟುಡೇ ಸಮೀಕ್ಷೆಯನ್ನು ಜುಲೈ 10 ಮತ್ತು ಜುಲೈ 22 ರ ನಡುವೆ ನಡೆಸಿದ್ದುಉ, ಸಮೀಕ್ಷೆಯಲ್ಲಿ 14,599 ಮಂದಿ ಭಾಗವಹಿಸಿದ್ದಾರೆ. ಪ್ರತಿಕ್ರಿಯಿಸಿದವರಲ್ಲಿ 71% ಜನರು ಗ್ರಾಮೀಣ ಪ್ರದೇಶದ ಜನರು ಮತ್ತು 29% ನಗರ ಪ್ರದೇಶದ ಜನರಾಗಿದ್ದಾರೆ. ಸಮೀಕ್ಷೆಯು 19 ರಾಜ್ಯಗಳು, 115 ಸಂಸತ್ತು ಮತ್ತು 230 ವಿಧಾನಸಭಾ ಸ್ಥಾನಗಳ ಜನರನ್ನು ಒಳಗೊಂಡಿದೆ.


ಇದನ್ನೂ ಓದಿ: ಬೇಡಿಕೆ ಈಡೇರುವವರೆಗೂ ಜಿಎಸ್‌ಟಿ ಪಾವತಿಸಬೇಡಿ: ವರ್ತಕರಿಗೆ ಪ್ರಧಾನಿ ಸಹೋದರನ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...