Homeಮುಖಪುಟಒಂದು ವರ್ಷದಲ್ಲಿ ಪ್ರಧಾನಿ ಮೋದಿ ಜನಪ್ರಿಯತೆ 66% ರಿಂದ 24% ಕ್ಕೆ ಕುಸಿತ: ಇಂಡಿಯಾ ಟುಡೆ...

ಒಂದು ವರ್ಷದಲ್ಲಿ ಪ್ರಧಾನಿ ಮೋದಿ ಜನಪ್ರಿಯತೆ 66% ರಿಂದ 24% ಕ್ಕೆ ಕುಸಿತ: ಇಂಡಿಯಾ ಟುಡೆ ಸಮೀಕ್ಷೆ

- Advertisement -
- Advertisement -

ಸೋಮವಾರ (ಆಗಸ್ಟ್ 16) ಬಿಡುಗಡೆಯಾದ ಇಂಡಿಯಾ ಟುಡೇಯ “ಮೂಡ್ ಆಫ್ ದಿ ನೇಷನ್” ಸಮೀಕ್ಷೆಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯ ರೇಟಿಂಗ್ ಒಂದು ವರ್ಷದಲ್ಲಿ 66% ರಿಂದ 24% ಕ್ಕೆ ಇಳಿದಿದೆ.

ದೇಶದಲ್ಲಿ ಕೋವಿಡ್ ಬಿಕ್ಕಟ್ಟನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸದೇ ಇರುವುದು ಪ್ರಧಾನಿ ಮೋದಿಯವರ ಜನಪ್ರಿಯತೆ ಕುಸಿತಕ್ಕೆ ಪ್ರಾಥಮಿಕ ಕಾರಣ ಎಂದು ಹೇಳಲಾಗಿದೆ.

“ಕೊರೊನಾ ಮೊದಲ ಅಲೆಯನ್ನು ಸಮರ್ಥವಾಗಿ ನಿರ್ವಹಿಸಿದ್ದಕ್ಕಾಗಿ ಮೋದಿಯವರನ್ನು ಜನವರಿ 2021 ರಲ್ಲಿ ಪ್ರಶಂಸಿಸಲಾಗಿತ್ತು. ಇದಕ್ಕಾಗಿ ಶೇಕಡಾ 73% ರಷ್ಟು ಜನಪ್ರಿಯತೆ ಗಳಿಸಿದ್ದರು. ಆದರೆ, ಎರಡನೇ ಅಲೆಯನ್ನು ಸರಿಯಾಗಿ ನಿರ್ವಹಿಸದ ಕಾರಣ ಅವರ ಜನಪ್ರಿಯತೆಯ ಅಂಕಿ ಅಂಶವು 49% ಕ್ಕೆ ಇಳಿದಿದೆ” ಎಂದು ಇಂಡಿಯಾ ಟುಡೇ ವರದಿ ಹೇಳಿದೆ.

ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ 27% ರಷ್ಟು ಜನರು ಚುನಾವಣಾ ರ್‍ಯಾಲಿಗಳು ಸೇರಿದಂತೆ ದೊಡ್ಡ ಸಭೆ-ಸಮಾರಂಭಗಳು ಭಾರತದಲ್ಲಿ ಸಾಂಕ್ರಾಮಿಕ ರೋಗದ ಎರಡನೇ ಅಲೆಗೆ ಕಾರಣವೆಂದು ಹೇಳಿದ್ದಾರೆ. ಸುಮಾರು 26% ಜನರು ಕೋವಿಡ್ ಮಾರ್ಗಸೂಚಿಗಳನ್ನು ನಿರ್ಲಕ್ಷಿಸಿದ್ದರಿಂದ ಕೊರೊನಾ ಅಲೆ ಹೆಚ್ಚಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ: 3 ವರ್ಷದಿಂದ ಒಂದೇ ಭರವಸೆ ನೀಡುತ್ತಿರುವ ಪ್ರಧಾನಿ : ಸಂಖ್ಯೆಯನ್ನಾದರೂ ಬದಲಿಸಿ ಎಂದ ಕಾಂಗ್ರೆಸ್

ದೇಶದಲ್ಲಿ ಕೋವಿಡ್ ಸೋಂಕಿಗೆ ಒಳಗಾಗಿರುವವರರ ಡೇಟಾ ಮತ್ತು ಕೊರೊನಾ ಸಾವುಗಳ ಡೇಟಾ ಬಗ್ಗೆ ಸರ್ಕಾರಿ ದತ್ತಾಂಶದಲ್ಲಿ ತಿಳಿವುದಕ್ಕಿಂತ ಹೆಚ್ಚಿನ ಕೇಸ್‌ಗಳು ಮತ್ತು ಸಾವುಗಳಾಗಿವೆ ಎಂದು 71% ರಷ್ಟು ಜನರು ಹೇಳಿದ್ದಾರೆ, ಇನ್ನು ಶೇಕಡಾ 44% ಜನರು ಈ ಆರೋಗ್ಯ ಬಿಕ್ಕಟ್ಟು ಉಂಟಾಗಲು ಒಕ್ಕೂಟ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಕಾರಣವೆಂದು ಹೇಳಿದ್ದಾರೆ.

ಇಂಡಿಯಾ ಟುಡೇ ಸಮೀಕ್ಷೆಯ ಪ್ರಕಾರ, 29% ರಷ್ಟು ಜನರು ಬೆಲೆ ಏರಿಕೆ ಮತ್ತು ಹಣದುಬ್ಬರವು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಸರ್ಕಾರದ ದೊಡ್ಡ ವೈಫಲ್ಯವೆಂದು ತಿಳಿಸಿದ್ದಾರೆ. ಸುಮಾರು 23% ರಷ್ಟು ಜನರು ನಿರುದ್ಯೋಗ ದರವು ಮೋದಿ ಸರ್ಕಾರದ ಎರಡನೇ ಅತಿದೊಡ್ಡ ವೈಫಲ್ಯ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಮೋದಿ ನಂತರ ಪ್ರಧಾನಿ ಸ್ಥಾನಕ್ಕೆ ಶೇಕಡಾ 11% ರಷ್ಟು ಜನರು ಆಯ್ಕೆ ಮಾಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 10% ರೇಟಿಂಗ್ ಹೊಂದಿದ್ದು,  ಪ್ರಧಾನಿ ಸ್ಥಾನಕ್ಕೆ ಮೂರನೇ ಅತ್ಯಂತ ಜನಪ್ರಿಯ ಮುಖವಾಗಿ ಹೊರಹೊಮ್ಮಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು 2020 ರಲ್ಲಿ 8% ರಷ್ಟು ಜನಪ್ರಿಯತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್ 2019 ರಲ್ಲಿ 3% ಜನಪ್ರಿಯತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಆದರೆ, 11 ರಾಜ್ಯಗಳ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಆದಿತ್ಯನಾಥ್ ಏಳನೇ ಸ್ಥಾನದಲ್ಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಇಂಡಿಯಾ ಟುಡೇ ಸಮೀಕ್ಷೆಯನ್ನು ಜುಲೈ 10 ಮತ್ತು ಜುಲೈ 22 ರ ನಡುವೆ ನಡೆಸಿದ್ದುಉ, ಸಮೀಕ್ಷೆಯಲ್ಲಿ 14,599 ಮಂದಿ ಭಾಗವಹಿಸಿದ್ದಾರೆ. ಪ್ರತಿಕ್ರಿಯಿಸಿದವರಲ್ಲಿ 71% ಜನರು ಗ್ರಾಮೀಣ ಪ್ರದೇಶದ ಜನರು ಮತ್ತು 29% ನಗರ ಪ್ರದೇಶದ ಜನರಾಗಿದ್ದಾರೆ. ಸಮೀಕ್ಷೆಯು 19 ರಾಜ್ಯಗಳು, 115 ಸಂಸತ್ತು ಮತ್ತು 230 ವಿಧಾನಸಭಾ ಸ್ಥಾನಗಳ ಜನರನ್ನು ಒಳಗೊಂಡಿದೆ.


ಇದನ್ನೂ ಓದಿ: ಬೇಡಿಕೆ ಈಡೇರುವವರೆಗೂ ಜಿಎಸ್‌ಟಿ ಪಾವತಿಸಬೇಡಿ: ವರ್ತಕರಿಗೆ ಪ್ರಧಾನಿ ಸಹೋದರನ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...