Homeಮುಖಪುಟಒಂದು ವರ್ಷದಲ್ಲಿ ಪ್ರಧಾನಿ ಮೋದಿ ಜನಪ್ರಿಯತೆ 66% ರಿಂದ 24% ಕ್ಕೆ ಕುಸಿತ: ಇಂಡಿಯಾ ಟುಡೆ...

ಒಂದು ವರ್ಷದಲ್ಲಿ ಪ್ರಧಾನಿ ಮೋದಿ ಜನಪ್ರಿಯತೆ 66% ರಿಂದ 24% ಕ್ಕೆ ಕುಸಿತ: ಇಂಡಿಯಾ ಟುಡೆ ಸಮೀಕ್ಷೆ

- Advertisement -
- Advertisement -

ಸೋಮವಾರ (ಆಗಸ್ಟ್ 16) ಬಿಡುಗಡೆಯಾದ ಇಂಡಿಯಾ ಟುಡೇಯ “ಮೂಡ್ ಆಫ್ ದಿ ನೇಷನ್” ಸಮೀಕ್ಷೆಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯ ರೇಟಿಂಗ್ ಒಂದು ವರ್ಷದಲ್ಲಿ 66% ರಿಂದ 24% ಕ್ಕೆ ಇಳಿದಿದೆ.

ದೇಶದಲ್ಲಿ ಕೋವಿಡ್ ಬಿಕ್ಕಟ್ಟನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸದೇ ಇರುವುದು ಪ್ರಧಾನಿ ಮೋದಿಯವರ ಜನಪ್ರಿಯತೆ ಕುಸಿತಕ್ಕೆ ಪ್ರಾಥಮಿಕ ಕಾರಣ ಎಂದು ಹೇಳಲಾಗಿದೆ.

“ಕೊರೊನಾ ಮೊದಲ ಅಲೆಯನ್ನು ಸಮರ್ಥವಾಗಿ ನಿರ್ವಹಿಸಿದ್ದಕ್ಕಾಗಿ ಮೋದಿಯವರನ್ನು ಜನವರಿ 2021 ರಲ್ಲಿ ಪ್ರಶಂಸಿಸಲಾಗಿತ್ತು. ಇದಕ್ಕಾಗಿ ಶೇಕಡಾ 73% ರಷ್ಟು ಜನಪ್ರಿಯತೆ ಗಳಿಸಿದ್ದರು. ಆದರೆ, ಎರಡನೇ ಅಲೆಯನ್ನು ಸರಿಯಾಗಿ ನಿರ್ವಹಿಸದ ಕಾರಣ ಅವರ ಜನಪ್ರಿಯತೆಯ ಅಂಕಿ ಅಂಶವು 49% ಕ್ಕೆ ಇಳಿದಿದೆ” ಎಂದು ಇಂಡಿಯಾ ಟುಡೇ ವರದಿ ಹೇಳಿದೆ.

ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ 27% ರಷ್ಟು ಜನರು ಚುನಾವಣಾ ರ್‍ಯಾಲಿಗಳು ಸೇರಿದಂತೆ ದೊಡ್ಡ ಸಭೆ-ಸಮಾರಂಭಗಳು ಭಾರತದಲ್ಲಿ ಸಾಂಕ್ರಾಮಿಕ ರೋಗದ ಎರಡನೇ ಅಲೆಗೆ ಕಾರಣವೆಂದು ಹೇಳಿದ್ದಾರೆ. ಸುಮಾರು 26% ಜನರು ಕೋವಿಡ್ ಮಾರ್ಗಸೂಚಿಗಳನ್ನು ನಿರ್ಲಕ್ಷಿಸಿದ್ದರಿಂದ ಕೊರೊನಾ ಅಲೆ ಹೆಚ್ಚಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ: 3 ವರ್ಷದಿಂದ ಒಂದೇ ಭರವಸೆ ನೀಡುತ್ತಿರುವ ಪ್ರಧಾನಿ : ಸಂಖ್ಯೆಯನ್ನಾದರೂ ಬದಲಿಸಿ ಎಂದ ಕಾಂಗ್ರೆಸ್

ದೇಶದಲ್ಲಿ ಕೋವಿಡ್ ಸೋಂಕಿಗೆ ಒಳಗಾಗಿರುವವರರ ಡೇಟಾ ಮತ್ತು ಕೊರೊನಾ ಸಾವುಗಳ ಡೇಟಾ ಬಗ್ಗೆ ಸರ್ಕಾರಿ ದತ್ತಾಂಶದಲ್ಲಿ ತಿಳಿವುದಕ್ಕಿಂತ ಹೆಚ್ಚಿನ ಕೇಸ್‌ಗಳು ಮತ್ತು ಸಾವುಗಳಾಗಿವೆ ಎಂದು 71% ರಷ್ಟು ಜನರು ಹೇಳಿದ್ದಾರೆ, ಇನ್ನು ಶೇಕಡಾ 44% ಜನರು ಈ ಆರೋಗ್ಯ ಬಿಕ್ಕಟ್ಟು ಉಂಟಾಗಲು ಒಕ್ಕೂಟ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಕಾರಣವೆಂದು ಹೇಳಿದ್ದಾರೆ.

ಇಂಡಿಯಾ ಟುಡೇ ಸಮೀಕ್ಷೆಯ ಪ್ರಕಾರ, 29% ರಷ್ಟು ಜನರು ಬೆಲೆ ಏರಿಕೆ ಮತ್ತು ಹಣದುಬ್ಬರವು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಸರ್ಕಾರದ ದೊಡ್ಡ ವೈಫಲ್ಯವೆಂದು ತಿಳಿಸಿದ್ದಾರೆ. ಸುಮಾರು 23% ರಷ್ಟು ಜನರು ನಿರುದ್ಯೋಗ ದರವು ಮೋದಿ ಸರ್ಕಾರದ ಎರಡನೇ ಅತಿದೊಡ್ಡ ವೈಫಲ್ಯ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಮೋದಿ ನಂತರ ಪ್ರಧಾನಿ ಸ್ಥಾನಕ್ಕೆ ಶೇಕಡಾ 11% ರಷ್ಟು ಜನರು ಆಯ್ಕೆ ಮಾಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 10% ರೇಟಿಂಗ್ ಹೊಂದಿದ್ದು,  ಪ್ರಧಾನಿ ಸ್ಥಾನಕ್ಕೆ ಮೂರನೇ ಅತ್ಯಂತ ಜನಪ್ರಿಯ ಮುಖವಾಗಿ ಹೊರಹೊಮ್ಮಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು 2020 ರಲ್ಲಿ 8% ರಷ್ಟು ಜನಪ್ರಿಯತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್ 2019 ರಲ್ಲಿ 3% ಜನಪ್ರಿಯತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಆದರೆ, 11 ರಾಜ್ಯಗಳ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಆದಿತ್ಯನಾಥ್ ಏಳನೇ ಸ್ಥಾನದಲ್ಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಇಂಡಿಯಾ ಟುಡೇ ಸಮೀಕ್ಷೆಯನ್ನು ಜುಲೈ 10 ಮತ್ತು ಜುಲೈ 22 ರ ನಡುವೆ ನಡೆಸಿದ್ದುಉ, ಸಮೀಕ್ಷೆಯಲ್ಲಿ 14,599 ಮಂದಿ ಭಾಗವಹಿಸಿದ್ದಾರೆ. ಪ್ರತಿಕ್ರಿಯಿಸಿದವರಲ್ಲಿ 71% ಜನರು ಗ್ರಾಮೀಣ ಪ್ರದೇಶದ ಜನರು ಮತ್ತು 29% ನಗರ ಪ್ರದೇಶದ ಜನರಾಗಿದ್ದಾರೆ. ಸಮೀಕ್ಷೆಯು 19 ರಾಜ್ಯಗಳು, 115 ಸಂಸತ್ತು ಮತ್ತು 230 ವಿಧಾನಸಭಾ ಸ್ಥಾನಗಳ ಜನರನ್ನು ಒಳಗೊಂಡಿದೆ.


ಇದನ್ನೂ ಓದಿ: ಬೇಡಿಕೆ ಈಡೇರುವವರೆಗೂ ಜಿಎಸ್‌ಟಿ ಪಾವತಿಸಬೇಡಿ: ವರ್ತಕರಿಗೆ ಪ್ರಧಾನಿ ಸಹೋದರನ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...