Homeಮುಖಪುಟಒಂದು ವರ್ಷದಲ್ಲಿ ಪ್ರಧಾನಿ ಮೋದಿ ಜನಪ್ರಿಯತೆ 66% ರಿಂದ 24% ಕ್ಕೆ ಕುಸಿತ: ಇಂಡಿಯಾ ಟುಡೆ...

ಒಂದು ವರ್ಷದಲ್ಲಿ ಪ್ರಧಾನಿ ಮೋದಿ ಜನಪ್ರಿಯತೆ 66% ರಿಂದ 24% ಕ್ಕೆ ಕುಸಿತ: ಇಂಡಿಯಾ ಟುಡೆ ಸಮೀಕ್ಷೆ

- Advertisement -
- Advertisement -

ಸೋಮವಾರ (ಆಗಸ್ಟ್ 16) ಬಿಡುಗಡೆಯಾದ ಇಂಡಿಯಾ ಟುಡೇಯ “ಮೂಡ್ ಆಫ್ ದಿ ನೇಷನ್” ಸಮೀಕ್ಷೆಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯ ರೇಟಿಂಗ್ ಒಂದು ವರ್ಷದಲ್ಲಿ 66% ರಿಂದ 24% ಕ್ಕೆ ಇಳಿದಿದೆ.

ದೇಶದಲ್ಲಿ ಕೋವಿಡ್ ಬಿಕ್ಕಟ್ಟನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸದೇ ಇರುವುದು ಪ್ರಧಾನಿ ಮೋದಿಯವರ ಜನಪ್ರಿಯತೆ ಕುಸಿತಕ್ಕೆ ಪ್ರಾಥಮಿಕ ಕಾರಣ ಎಂದು ಹೇಳಲಾಗಿದೆ.

“ಕೊರೊನಾ ಮೊದಲ ಅಲೆಯನ್ನು ಸಮರ್ಥವಾಗಿ ನಿರ್ವಹಿಸಿದ್ದಕ್ಕಾಗಿ ಮೋದಿಯವರನ್ನು ಜನವರಿ 2021 ರಲ್ಲಿ ಪ್ರಶಂಸಿಸಲಾಗಿತ್ತು. ಇದಕ್ಕಾಗಿ ಶೇಕಡಾ 73% ರಷ್ಟು ಜನಪ್ರಿಯತೆ ಗಳಿಸಿದ್ದರು. ಆದರೆ, ಎರಡನೇ ಅಲೆಯನ್ನು ಸರಿಯಾಗಿ ನಿರ್ವಹಿಸದ ಕಾರಣ ಅವರ ಜನಪ್ರಿಯತೆಯ ಅಂಕಿ ಅಂಶವು 49% ಕ್ಕೆ ಇಳಿದಿದೆ” ಎಂದು ಇಂಡಿಯಾ ಟುಡೇ ವರದಿ ಹೇಳಿದೆ.

ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ 27% ರಷ್ಟು ಜನರು ಚುನಾವಣಾ ರ್‍ಯಾಲಿಗಳು ಸೇರಿದಂತೆ ದೊಡ್ಡ ಸಭೆ-ಸಮಾರಂಭಗಳು ಭಾರತದಲ್ಲಿ ಸಾಂಕ್ರಾಮಿಕ ರೋಗದ ಎರಡನೇ ಅಲೆಗೆ ಕಾರಣವೆಂದು ಹೇಳಿದ್ದಾರೆ. ಸುಮಾರು 26% ಜನರು ಕೋವಿಡ್ ಮಾರ್ಗಸೂಚಿಗಳನ್ನು ನಿರ್ಲಕ್ಷಿಸಿದ್ದರಿಂದ ಕೊರೊನಾ ಅಲೆ ಹೆಚ್ಚಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ: 3 ವರ್ಷದಿಂದ ಒಂದೇ ಭರವಸೆ ನೀಡುತ್ತಿರುವ ಪ್ರಧಾನಿ : ಸಂಖ್ಯೆಯನ್ನಾದರೂ ಬದಲಿಸಿ ಎಂದ ಕಾಂಗ್ರೆಸ್

ದೇಶದಲ್ಲಿ ಕೋವಿಡ್ ಸೋಂಕಿಗೆ ಒಳಗಾಗಿರುವವರರ ಡೇಟಾ ಮತ್ತು ಕೊರೊನಾ ಸಾವುಗಳ ಡೇಟಾ ಬಗ್ಗೆ ಸರ್ಕಾರಿ ದತ್ತಾಂಶದಲ್ಲಿ ತಿಳಿವುದಕ್ಕಿಂತ ಹೆಚ್ಚಿನ ಕೇಸ್‌ಗಳು ಮತ್ತು ಸಾವುಗಳಾಗಿವೆ ಎಂದು 71% ರಷ್ಟು ಜನರು ಹೇಳಿದ್ದಾರೆ, ಇನ್ನು ಶೇಕಡಾ 44% ಜನರು ಈ ಆರೋಗ್ಯ ಬಿಕ್ಕಟ್ಟು ಉಂಟಾಗಲು ಒಕ್ಕೂಟ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಕಾರಣವೆಂದು ಹೇಳಿದ್ದಾರೆ.

ಇಂಡಿಯಾ ಟುಡೇ ಸಮೀಕ್ಷೆಯ ಪ್ರಕಾರ, 29% ರಷ್ಟು ಜನರು ಬೆಲೆ ಏರಿಕೆ ಮತ್ತು ಹಣದುಬ್ಬರವು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಸರ್ಕಾರದ ದೊಡ್ಡ ವೈಫಲ್ಯವೆಂದು ತಿಳಿಸಿದ್ದಾರೆ. ಸುಮಾರು 23% ರಷ್ಟು ಜನರು ನಿರುದ್ಯೋಗ ದರವು ಮೋದಿ ಸರ್ಕಾರದ ಎರಡನೇ ಅತಿದೊಡ್ಡ ವೈಫಲ್ಯ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಮೋದಿ ನಂತರ ಪ್ರಧಾನಿ ಸ್ಥಾನಕ್ಕೆ ಶೇಕಡಾ 11% ರಷ್ಟು ಜನರು ಆಯ್ಕೆ ಮಾಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 10% ರೇಟಿಂಗ್ ಹೊಂದಿದ್ದು,  ಪ್ರಧಾನಿ ಸ್ಥಾನಕ್ಕೆ ಮೂರನೇ ಅತ್ಯಂತ ಜನಪ್ರಿಯ ಮುಖವಾಗಿ ಹೊರಹೊಮ್ಮಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು 2020 ರಲ್ಲಿ 8% ರಷ್ಟು ಜನಪ್ರಿಯತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್ 2019 ರಲ್ಲಿ 3% ಜನಪ್ರಿಯತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಆದರೆ, 11 ರಾಜ್ಯಗಳ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಆದಿತ್ಯನಾಥ್ ಏಳನೇ ಸ್ಥಾನದಲ್ಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಇಂಡಿಯಾ ಟುಡೇ ಸಮೀಕ್ಷೆಯನ್ನು ಜುಲೈ 10 ಮತ್ತು ಜುಲೈ 22 ರ ನಡುವೆ ನಡೆಸಿದ್ದುಉ, ಸಮೀಕ್ಷೆಯಲ್ಲಿ 14,599 ಮಂದಿ ಭಾಗವಹಿಸಿದ್ದಾರೆ. ಪ್ರತಿಕ್ರಿಯಿಸಿದವರಲ್ಲಿ 71% ಜನರು ಗ್ರಾಮೀಣ ಪ್ರದೇಶದ ಜನರು ಮತ್ತು 29% ನಗರ ಪ್ರದೇಶದ ಜನರಾಗಿದ್ದಾರೆ. ಸಮೀಕ್ಷೆಯು 19 ರಾಜ್ಯಗಳು, 115 ಸಂಸತ್ತು ಮತ್ತು 230 ವಿಧಾನಸಭಾ ಸ್ಥಾನಗಳ ಜನರನ್ನು ಒಳಗೊಂಡಿದೆ.


ಇದನ್ನೂ ಓದಿ: ಬೇಡಿಕೆ ಈಡೇರುವವರೆಗೂ ಜಿಎಸ್‌ಟಿ ಪಾವತಿಸಬೇಡಿ: ವರ್ತಕರಿಗೆ ಪ್ರಧಾನಿ ಸಹೋದರನ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರ ನೇತೃತ್ವದಲ್ಲಿ ನಡೆದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು ಹಾಗೂ ಕಾರ್ಯಕರ್ತರು, ಸಂಸದರ ಸಭೆಯಲ್ಲೇ...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...