Homeಮುಖಪುಟಒಂದು ವರ್ಷದಲ್ಲಿ ಪ್ರಧಾನಿ ಮೋದಿ ಜನಪ್ರಿಯತೆ 66% ರಿಂದ 24% ಕ್ಕೆ ಕುಸಿತ: ಇಂಡಿಯಾ ಟುಡೆ...

ಒಂದು ವರ್ಷದಲ್ಲಿ ಪ್ರಧಾನಿ ಮೋದಿ ಜನಪ್ರಿಯತೆ 66% ರಿಂದ 24% ಕ್ಕೆ ಕುಸಿತ: ಇಂಡಿಯಾ ಟುಡೆ ಸಮೀಕ್ಷೆ

- Advertisement -
- Advertisement -

ಸೋಮವಾರ (ಆಗಸ್ಟ್ 16) ಬಿಡುಗಡೆಯಾದ ಇಂಡಿಯಾ ಟುಡೇಯ “ಮೂಡ್ ಆಫ್ ದಿ ನೇಷನ್” ಸಮೀಕ್ಷೆಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯ ರೇಟಿಂಗ್ ಒಂದು ವರ್ಷದಲ್ಲಿ 66% ರಿಂದ 24% ಕ್ಕೆ ಇಳಿದಿದೆ.

ದೇಶದಲ್ಲಿ ಕೋವಿಡ್ ಬಿಕ್ಕಟ್ಟನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸದೇ ಇರುವುದು ಪ್ರಧಾನಿ ಮೋದಿಯವರ ಜನಪ್ರಿಯತೆ ಕುಸಿತಕ್ಕೆ ಪ್ರಾಥಮಿಕ ಕಾರಣ ಎಂದು ಹೇಳಲಾಗಿದೆ.

“ಕೊರೊನಾ ಮೊದಲ ಅಲೆಯನ್ನು ಸಮರ್ಥವಾಗಿ ನಿರ್ವಹಿಸಿದ್ದಕ್ಕಾಗಿ ಮೋದಿಯವರನ್ನು ಜನವರಿ 2021 ರಲ್ಲಿ ಪ್ರಶಂಸಿಸಲಾಗಿತ್ತು. ಇದಕ್ಕಾಗಿ ಶೇಕಡಾ 73% ರಷ್ಟು ಜನಪ್ರಿಯತೆ ಗಳಿಸಿದ್ದರು. ಆದರೆ, ಎರಡನೇ ಅಲೆಯನ್ನು ಸರಿಯಾಗಿ ನಿರ್ವಹಿಸದ ಕಾರಣ ಅವರ ಜನಪ್ರಿಯತೆಯ ಅಂಕಿ ಅಂಶವು 49% ಕ್ಕೆ ಇಳಿದಿದೆ” ಎಂದು ಇಂಡಿಯಾ ಟುಡೇ ವರದಿ ಹೇಳಿದೆ.

ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ 27% ರಷ್ಟು ಜನರು ಚುನಾವಣಾ ರ್‍ಯಾಲಿಗಳು ಸೇರಿದಂತೆ ದೊಡ್ಡ ಸಭೆ-ಸಮಾರಂಭಗಳು ಭಾರತದಲ್ಲಿ ಸಾಂಕ್ರಾಮಿಕ ರೋಗದ ಎರಡನೇ ಅಲೆಗೆ ಕಾರಣವೆಂದು ಹೇಳಿದ್ದಾರೆ. ಸುಮಾರು 26% ಜನರು ಕೋವಿಡ್ ಮಾರ್ಗಸೂಚಿಗಳನ್ನು ನಿರ್ಲಕ್ಷಿಸಿದ್ದರಿಂದ ಕೊರೊನಾ ಅಲೆ ಹೆಚ್ಚಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ: 3 ವರ್ಷದಿಂದ ಒಂದೇ ಭರವಸೆ ನೀಡುತ್ತಿರುವ ಪ್ರಧಾನಿ : ಸಂಖ್ಯೆಯನ್ನಾದರೂ ಬದಲಿಸಿ ಎಂದ ಕಾಂಗ್ರೆಸ್

ದೇಶದಲ್ಲಿ ಕೋವಿಡ್ ಸೋಂಕಿಗೆ ಒಳಗಾಗಿರುವವರರ ಡೇಟಾ ಮತ್ತು ಕೊರೊನಾ ಸಾವುಗಳ ಡೇಟಾ ಬಗ್ಗೆ ಸರ್ಕಾರಿ ದತ್ತಾಂಶದಲ್ಲಿ ತಿಳಿವುದಕ್ಕಿಂತ ಹೆಚ್ಚಿನ ಕೇಸ್‌ಗಳು ಮತ್ತು ಸಾವುಗಳಾಗಿವೆ ಎಂದು 71% ರಷ್ಟು ಜನರು ಹೇಳಿದ್ದಾರೆ, ಇನ್ನು ಶೇಕಡಾ 44% ಜನರು ಈ ಆರೋಗ್ಯ ಬಿಕ್ಕಟ್ಟು ಉಂಟಾಗಲು ಒಕ್ಕೂಟ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಕಾರಣವೆಂದು ಹೇಳಿದ್ದಾರೆ.

ಇಂಡಿಯಾ ಟುಡೇ ಸಮೀಕ್ಷೆಯ ಪ್ರಕಾರ, 29% ರಷ್ಟು ಜನರು ಬೆಲೆ ಏರಿಕೆ ಮತ್ತು ಹಣದುಬ್ಬರವು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಸರ್ಕಾರದ ದೊಡ್ಡ ವೈಫಲ್ಯವೆಂದು ತಿಳಿಸಿದ್ದಾರೆ. ಸುಮಾರು 23% ರಷ್ಟು ಜನರು ನಿರುದ್ಯೋಗ ದರವು ಮೋದಿ ಸರ್ಕಾರದ ಎರಡನೇ ಅತಿದೊಡ್ಡ ವೈಫಲ್ಯ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಮೋದಿ ನಂತರ ಪ್ರಧಾನಿ ಸ್ಥಾನಕ್ಕೆ ಶೇಕಡಾ 11% ರಷ್ಟು ಜನರು ಆಯ್ಕೆ ಮಾಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 10% ರೇಟಿಂಗ್ ಹೊಂದಿದ್ದು,  ಪ್ರಧಾನಿ ಸ್ಥಾನಕ್ಕೆ ಮೂರನೇ ಅತ್ಯಂತ ಜನಪ್ರಿಯ ಮುಖವಾಗಿ ಹೊರಹೊಮ್ಮಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು 2020 ರಲ್ಲಿ 8% ರಷ್ಟು ಜನಪ್ರಿಯತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್ 2019 ರಲ್ಲಿ 3% ಜನಪ್ರಿಯತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಆದರೆ, 11 ರಾಜ್ಯಗಳ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಆದಿತ್ಯನಾಥ್ ಏಳನೇ ಸ್ಥಾನದಲ್ಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಇಂಡಿಯಾ ಟುಡೇ ಸಮೀಕ್ಷೆಯನ್ನು ಜುಲೈ 10 ಮತ್ತು ಜುಲೈ 22 ರ ನಡುವೆ ನಡೆಸಿದ್ದುಉ, ಸಮೀಕ್ಷೆಯಲ್ಲಿ 14,599 ಮಂದಿ ಭಾಗವಹಿಸಿದ್ದಾರೆ. ಪ್ರತಿಕ್ರಿಯಿಸಿದವರಲ್ಲಿ 71% ಜನರು ಗ್ರಾಮೀಣ ಪ್ರದೇಶದ ಜನರು ಮತ್ತು 29% ನಗರ ಪ್ರದೇಶದ ಜನರಾಗಿದ್ದಾರೆ. ಸಮೀಕ್ಷೆಯು 19 ರಾಜ್ಯಗಳು, 115 ಸಂಸತ್ತು ಮತ್ತು 230 ವಿಧಾನಸಭಾ ಸ್ಥಾನಗಳ ಜನರನ್ನು ಒಳಗೊಂಡಿದೆ.


ಇದನ್ನೂ ಓದಿ: ಬೇಡಿಕೆ ಈಡೇರುವವರೆಗೂ ಜಿಎಸ್‌ಟಿ ಪಾವತಿಸಬೇಡಿ: ವರ್ತಕರಿಗೆ ಪ್ರಧಾನಿ ಸಹೋದರನ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಫ್‌ಐಆರ್ ದಾಖಲಾಗದೆ ಇಲ್ಲಿಂದ ಕದಲಲ್ಲ” : ಡಿಸಿಪಿ ಕಚೇರಿ ಮುಂದೆ ಧರಣಿ ಕುಳಿತ ರಾಹುಲ್ ಗಾಂಧಿ

ಜುಲೈ 20ರಂದು ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪೆಲೆಟ್ ಗನ್‌ ಬಳಕೆ, ಲಾಠಿ ಚಾರ್ಜ್ ಸೇರಿದಂತೆ ಪೊಲೀಸರಿಂದ ವಿವಿಧ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ...

ಪೆಲೆಟ್ ಗನ್ ಫೈರಿಂಗ್ ವಿರುದ್ಧ FIR ದಾಖಲಿಸಲು ದೆಹಲಿ ಪೊಲೀಸರ ನಿರಾಕರಣೆ, ರಾಹುಲ್ ಗಾಂಧಿ ಧರಣಿ

ಜುಲೈ 20ರ ಸಂಸತ್ ಚಲೋ ಪ್ರತಿಭಟನೆ ವೇಳೆ ಭದ್ರತಾ ಸಿಬ್ಬಂದಿ ಪೆಲೆಟ್ ಗನ್ ಬಳಸಿ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ (ಅಗಸ್ಟ್ 20)...

ಎಸ್ಐಆರ್ ಹಗರಣದಂತೆ ಕಾಣುತ್ತಿದೆ: ಚುನಾವಣಾ ಆಯೋಗದ ಪಾರದರ್ಶಕತೆಯನ್ನು ಪ್ರಶ್ನಿಸಿದ ನಟ ಕಿಶೋರ್ ಕುಮಾರ್: ಸಾರ್ವಜನಿಕ ಪ್ರತಿರೋಧಕ್ಕೆ ಕರೆ

ಬೆಂಗಳೂರು: ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಪವಿತ್ರವೆನಿಸಿದ ಮತದಾನದ ಹಕ್ಕನ್ನು ಕಸಿಯುವ ಹುನ್ನಾರಗಳು ತೀವ್ರಗೊಳ್ಳುತ್ತಿದ್ದು, ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆಯಾಗಬೇಕಿದ್ದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಇಂದು ಬಹುದೊಡ್ಡ ಹಗರಣದಂತೆ ಕಾಣಿಸುತ್ತಿದೆ ಎಂದು...

ಕರ್ನಾಟಕ SIR : 43.80 ಲಕ್ಷ ಜನರಿಗೆ ಬರಲಿದೆ ಚುನಾವಣಾ ಆಯೋಗದ ನೋಟಿಸ್!

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಭಾಗವಾಗಿ ಮತದಾರರು ತುಂಬಿ ಕೊಟ್ಟಿರುವ 4,46,35,899 ಎನ್ಯುಮರೇಷನ್ ಫಾರಂಗಳು (ಗಣತಿ ನಮೂನೆ) ಡಿಜಿಟಲೀಕರಣಗೊಂಡಿವೆ. ಈ ಪೈಕಿ 43,80,740 ಮತದಾರರಿಗೆ ದಾಖಲೆ ಕೇಳಿ...

ರಾಜಸ್ಥಾನ: ವರದಿಗಾರಿಕೆಯಲ್ಲಿ ನಿರತರಾಗಿದ್ದ ದಲಿತ ಪತ್ರಕರ್ತನ ಮೇಲೆ ಜಾತಿ ಆಧಾರಿತ ದಾಳಿ, ಭೀಕರ ಹಲ್ಲೆ, ಜಾತಿ ನಿಂದನೆ 

ಉದಯಪುರ: ರಾಜಸ್ಥಾನದ ಉದಯಪುರ ಜಿಲ್ಲೆಯ ಗೋಗುಂಡದಲ್ಲಿ ಕರ್ತವ್ಯನಿರತ ದಲಿತ ಪತ್ರಕರ್ತರೊಬ್ಬರ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಜಾತ್ಯಾತೀತ ಸಮಾಜ ತಲೆತಗ್ಗಿಸುವಂತೆ ಜಾತಿ ಆಧಾರಿತವಾಗಿ ನಿಂದಿಸಿರುವ ಘಟನೆ ವರದಿಯಾಗಿದೆ. ಸಾರ್ವಜನಿಕ ಕುಂದುಕೊರತೆ ಆಲಿಕೆ ಕಾರ್ಯಕ್ರಮದ...

ನಕಲಿ ಔಷಧ ಮಾಫಿಯಾ: 5 ರಾಜ್ಯಗಳಿಗೆ ಹರಡಿದ ಜಾಲ, ತೀವ್ರ ಶೋಧ

ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ನಕಲಿ ಔಷಧ ತಯಾರಿಕೆ ಹಾಗೂ ವಿತರಣೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಸುಳಿವುಗಳು ಲಭ್ಯವಾಗಿದ್ದು, ಈ ಅಕ್ರಮ ಜಾಲವು ಕರ್ನಾಟಕ ಮಾತ್ರವಲ್ಲದೆ ದೇಶದ ಇತರ ಐದು ರಾಜ್ಯಗಳಿಗೂ ಹರಡಿರುವುದು ಬೆಳಕಿಗೆ...

ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಪಡಿಸಿ, ನೇರ ವೇತನ ಪಾವತಿ ಜಾರಿಗೊಳಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಲು ಆಗ್ರಹಿಸಿ ಎಐಸಿಸಿಟಿಯು ಪ್ರತಿಭಟನೆ

ಬೆಂಗಳೂರು: ರಾಜ್ಯಾದ್ಯಂತ ವಿವಿಧ ವಲಯಗಳಲ್ಲಿ ದುಡಿಯುತ್ತಿರುವ ಗುತ್ತಿಗೆ, ಹೊರಗುತ್ತಿಗೆ, ದಿನಗೂಲಿ ಹಾಗೂ ತಾತ್ಕಾಲಿಕ ಕಾರ್ಮಿಕರ ಶೋಷಣೆ ತಡೆಗಟ್ಟಿ, ಅವರಿಗೆ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ...

ಯುಜಿಸಿ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟುವ ಕುರಿತಾದ 2026 ರ ವಿಶ್ವವಿದ್ಯಾಲಯ ಅನುದಾನ ಆಯೋಗದ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಜನವರಿ 29 ರಂದು, ಸುಪ್ರೀಂ...

ಅಲ್ಪಸಂಖ್ಯಾತರ ಮೇಲಿನ ದಾಳಿ ಹಿನ್ನೆಲೆ: ಭಾಗವತ್ ಭೇಟಿಗೂ ಮುನ್ನ ಆರ್‌ಎಸ್‌ಎಸ್ ನಾಯಕರನ್ನು ದೂರವಿಡುವಂತೆ ವಾಷಿಂಗ್ಟನ್‌ಗೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ ಒತ್ತಾಯ

ವಾಷಿಂಗ್ಟನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಅಮೆರಿಕ ಭೇಟಿಗೆ ಮುನ್ನ, ಅವರೊಂದಿಗೆ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳನ್ನು ತಡೆಹಿಡಿಯಬೇಕು ಮತ್ತು ಸಂಘದ ಪ್ರಮುಖ ನಾಯಕರ ವಿರುದ್ಧ ನಿರ್ಬಂಧಗಳನ್ನು...

ಮೋಹನ್ ಭಾಗವತ್‌ ಅಮೆರಿಕ ಪ್ರವಾಸಕ್ಕೆ ವಿರೋಧ: RSSಗೆ ನಿರ್ಬಂಧದ ಭೀತಿ

ಆರ್‌ಎಸ್‌ಎಸ್ (RSS) ಸಂಘಟನೆಯ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಕುರಿತ ಸಲಹಾ ಮಂಡಳಿಯ (USCIRF) ಅಧಿಕಾರಿಗಳು ಅಮೆರಿಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿರುವ RSS ಸರಸಂಘಚಾಲಕ ಮೋಹನ್ ಭಾಗವತ್...