Homeಮುಖಪುಟಹಿಂದಿಯಲ್ಲಿ ಸ್ವಾಗತ ಕೋರಿದ ನಿರೂಪಕಿ: ವೇದಿಕೆಯಿಂದ ಕೆಳಗಿಳಿದ ಎ ಆರ್ ರಹಮಾನ್!

ಹಿಂದಿಯಲ್ಲಿ ಸ್ವಾಗತ ಕೋರಿದ ನಿರೂಪಕಿ: ವೇದಿಕೆಯಿಂದ ಕೆಳಗಿಳಿದ ಎ ಆರ್ ರಹಮಾನ್!

- Advertisement -
- Advertisement -

‘99 ಸಾಂಗ್ಸ್’ ಚಿತ್ರದ ಕಾರ್ಯಕ್ರಮವೊಂದರಲ್ಲಿ ನಿರೂಪಕಿಯೊಬ್ಬರು ಹಿಂದಿಯಲ್ಲಿ ಸ್ವಾಗತಿಸಿದರು ಎನ್ನುವ ಕಾರಣಕ್ಕೆ ಎ ಆರ್ ರಹಮಾನ್ ವೇದಿಕೆಯಿಂದ ಕೆಳಗಿಳಿದ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಆಸ್ಕರ್ ಪ್ರಶಸ್ತಿ ಪುರಸ್ಕೃತ ಸಂಗೀತಗಾರ ಎ ಆರ್ ರೆಹಮಾನ್ ಅವರ ಮೊದಲ ನಿರ್ಮಾಣದ, ವಿಶ್ವೇಶ್ ಕೃಷ್ಣಮೂರ್ತಿ ಅವರ ಚೊಚ್ಚಲ ನಿರ್ದೇಶನದ ‘99 ಸಾಂಗ್ಸ್’ ಚಿತ್ರದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ.

‘99 ಸಾಂಗ್ಸ್‌’ನಲ್ಲಿ ಹೊಸಮುಖಗಳಾದ ಇಹಾನ್ ಭಟ್ ಮತ್ತು ಎಡಿಲ್ಸಿ ವರ್ಗಾಸ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇತ್ತೀಚೆಗೆ, ಚೆನ್ನೈನಲ್ಲಿ ಚಿತ್ರದ ಲಾಂಚಿಂಗ್ ಕಾರ್ಯಕ್ರಮ ನಡೆಯಿತು. ಈ ಚಿತ್ರವನ್ನು ಎ ಆರ್ ರಹಮಾನ್ ಅವರೇ ಅವರ ವೈಎಂ ಮೂವೀಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ. ಚಿತ್ರದಲ್ಲಿ ಹೊಸಮುಖಗಳ ಜೊತೆಗೆ ಲಿಸಾ ರೇ, ಮನೀಶಾ ಕೊಯಿರಾಲಾ, ಆದಿತ್ಯ ಸೀಲ್, ಡ್ರಮ್ಮರ್ ರಂಜಿತ್ ಬರೋಟ್ ಮತ್ತು ರಾಹುಲ್ ರಾಮ್ ಕೂಡ ಕಾಣಿಸಿಕೊಳ್ಳಲಿದ್ದಾರೆ.

ರಹಮಾನ್ ಅವರನ್ನು ತಮಿಳಿನಲ್ಲಿ ಸ್ವಾಗತಿಸಿದ ನಿರೂಪಕಿ, ನಟ ಇಹಾನ್ ಭಟ್ ಅವರನ್ನು ಹಿಂದಿಯಲ್ಲಿ ಸ್ವಾಗತಿಸಿದರು. “ಇಹಾನ್ ಭಟ್, ಚೆನ್ನೈ ಮೇ ಆಪ್ ಕಾ ಹಾರ್ದಿಕ್ ಸ್ವಾಗತ್ ಕರ್ತಿ ಹೂ” ಎಂದರು.

ಇದಕ್ಕೆ ರಹಮಾನ್, ಆಶ್ಚರ್ಯಕರ ರೀತಿಯಲ್ಲಿ ‘ಹಿಂದಿ’! ಎಂದು ಪ್ರತಿಕ್ರಿಯಿಸಿ ವೇದಿಕೆಯಿಂದ ಕೆಳಗಿಳಿದರು. ನಂತರ ‘ನೀವು ತಮಿಳು ಭಾಷೆಯಲ್ಲಿ ಮಾತನಾಡುತ್ತೀರೋ ಇಲ್ಲವೋ ಎಂದು ನಾನು ಆಗಲೇ ನಿಮ್ಮನ್ನು ಕೇಳಿರಲಿಲ್ಲವೇ?’ ಎಂದು ಹಾಸ್ಯಚಟಾಕಿ ಹಾರಿಸಿದರು. ಈ ವೇಳೆ, ಕಾರ್ಯಕ್ರಮದಲ್ಲಿ ಸೇರಿದ್ದ ಜನ ಸಮೂಹ ನಗೆಗಡಲಲ್ಲಿ ತೇಲಿತು.

ಇದನ್ನೂ ಓದಿ: ಕರ್ನಾಟಕದಲ್ಲಿ ಕನ್ನಡ ಮಾಯ, ತಮಿಳುನಾಡಿನಲ್ಲಿ ತಮಿಳುಮಯ: ಹಿಂದಿ ಹೇರಿಕೆಗೆ ಆಕ್ರೋಶ

ಬಳಿಕ ತಮಿಳಿನಲ್ಲಿ ಉತ್ತರಿಸಿದ ನಿರೂಪಕಿ, “ಇಹಾನ್ ಭಟ್ ಅವರಿಗೆ ಅರ್ಥವಾಗಲಿ ಎಂದು ಅವರನ್ನು ಹಿಂದಿ ಭಾಷೆಯಲ್ಲಿ ಸ್ವಾಗತಿಸಲು ಪ್ರಯತ್ನಿಸಿದೆ. ಕೋಪಿಸಿಕೊಳ್ಳಬೇಡಿ ಸರ್” ಎಂದು ವಿವರಣೆ ನೀಡಿದರು.

ಆದರೆ ಇದು ಆ ಕ್ಷಣಕ್ಕೆ ಹಾಸ್ಯದಂತೆ ಕಂಡರೂ ಸಹ ಹಿಂದಿ ಹೇರಿಕೆಯ ವಿರುದ್ಧದ ತಮಿಳಿಗರ ಧೋರಣೆಯನ್ನು ಬಿಂಬಿಸುತ್ತದೆ. ಹಾಗಾಗಿಯೇ ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಂಡು ಹಿಂದಿ ಭಾಷಾ ಹೇರಿಕೆಯ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.


ಇದನ್ನೂ ಓದಿ: ಹಿಂದಿ ರಾಷ್ಟ್ರ ಭಾಷೆ ಅಲ್ಲ: ಕನ್ನಡಿಗರ ಆಕ್ರೋಶಕ್ಕೆ ಮಣಿದು ಕ್ಷಮೆ ಕೇಳಿದ ದೊಡ್ಡರಂಗೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...