Homeಮುಖಪುಟಹಿಂದಿಯಲ್ಲಿ ಸ್ವಾಗತ ಕೋರಿದ ನಿರೂಪಕಿ: ವೇದಿಕೆಯಿಂದ ಕೆಳಗಿಳಿದ ಎ ಆರ್ ರಹಮಾನ್!

ಹಿಂದಿಯಲ್ಲಿ ಸ್ವಾಗತ ಕೋರಿದ ನಿರೂಪಕಿ: ವೇದಿಕೆಯಿಂದ ಕೆಳಗಿಳಿದ ಎ ಆರ್ ರಹಮಾನ್!

- Advertisement -
- Advertisement -

‘99 ಸಾಂಗ್ಸ್’ ಚಿತ್ರದ ಕಾರ್ಯಕ್ರಮವೊಂದರಲ್ಲಿ ನಿರೂಪಕಿಯೊಬ್ಬರು ಹಿಂದಿಯಲ್ಲಿ ಸ್ವಾಗತಿಸಿದರು ಎನ್ನುವ ಕಾರಣಕ್ಕೆ ಎ ಆರ್ ರಹಮಾನ್ ವೇದಿಕೆಯಿಂದ ಕೆಳಗಿಳಿದ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಆಸ್ಕರ್ ಪ್ರಶಸ್ತಿ ಪುರಸ್ಕೃತ ಸಂಗೀತಗಾರ ಎ ಆರ್ ರೆಹಮಾನ್ ಅವರ ಮೊದಲ ನಿರ್ಮಾಣದ, ವಿಶ್ವೇಶ್ ಕೃಷ್ಣಮೂರ್ತಿ ಅವರ ಚೊಚ್ಚಲ ನಿರ್ದೇಶನದ ‘99 ಸಾಂಗ್ಸ್’ ಚಿತ್ರದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ.

‘99 ಸಾಂಗ್ಸ್‌’ನಲ್ಲಿ ಹೊಸಮುಖಗಳಾದ ಇಹಾನ್ ಭಟ್ ಮತ್ತು ಎಡಿಲ್ಸಿ ವರ್ಗಾಸ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇತ್ತೀಚೆಗೆ, ಚೆನ್ನೈನಲ್ಲಿ ಚಿತ್ರದ ಲಾಂಚಿಂಗ್ ಕಾರ್ಯಕ್ರಮ ನಡೆಯಿತು. ಈ ಚಿತ್ರವನ್ನು ಎ ಆರ್ ರಹಮಾನ್ ಅವರೇ ಅವರ ವೈಎಂ ಮೂವೀಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ. ಚಿತ್ರದಲ್ಲಿ ಹೊಸಮುಖಗಳ ಜೊತೆಗೆ ಲಿಸಾ ರೇ, ಮನೀಶಾ ಕೊಯಿರಾಲಾ, ಆದಿತ್ಯ ಸೀಲ್, ಡ್ರಮ್ಮರ್ ರಂಜಿತ್ ಬರೋಟ್ ಮತ್ತು ರಾಹುಲ್ ರಾಮ್ ಕೂಡ ಕಾಣಿಸಿಕೊಳ್ಳಲಿದ್ದಾರೆ.

ರಹಮಾನ್ ಅವರನ್ನು ತಮಿಳಿನಲ್ಲಿ ಸ್ವಾಗತಿಸಿದ ನಿರೂಪಕಿ, ನಟ ಇಹಾನ್ ಭಟ್ ಅವರನ್ನು ಹಿಂದಿಯಲ್ಲಿ ಸ್ವಾಗತಿಸಿದರು. “ಇಹಾನ್ ಭಟ್, ಚೆನ್ನೈ ಮೇ ಆಪ್ ಕಾ ಹಾರ್ದಿಕ್ ಸ್ವಾಗತ್ ಕರ್ತಿ ಹೂ” ಎಂದರು.

ಇದಕ್ಕೆ ರಹಮಾನ್, ಆಶ್ಚರ್ಯಕರ ರೀತಿಯಲ್ಲಿ ‘ಹಿಂದಿ’! ಎಂದು ಪ್ರತಿಕ್ರಿಯಿಸಿ ವೇದಿಕೆಯಿಂದ ಕೆಳಗಿಳಿದರು. ನಂತರ ‘ನೀವು ತಮಿಳು ಭಾಷೆಯಲ್ಲಿ ಮಾತನಾಡುತ್ತೀರೋ ಇಲ್ಲವೋ ಎಂದು ನಾನು ಆಗಲೇ ನಿಮ್ಮನ್ನು ಕೇಳಿರಲಿಲ್ಲವೇ?’ ಎಂದು ಹಾಸ್ಯಚಟಾಕಿ ಹಾರಿಸಿದರು. ಈ ವೇಳೆ, ಕಾರ್ಯಕ್ರಮದಲ್ಲಿ ಸೇರಿದ್ದ ಜನ ಸಮೂಹ ನಗೆಗಡಲಲ್ಲಿ ತೇಲಿತು.

ಇದನ್ನೂ ಓದಿ: ಕರ್ನಾಟಕದಲ್ಲಿ ಕನ್ನಡ ಮಾಯ, ತಮಿಳುನಾಡಿನಲ್ಲಿ ತಮಿಳುಮಯ: ಹಿಂದಿ ಹೇರಿಕೆಗೆ ಆಕ್ರೋಶ

ಬಳಿಕ ತಮಿಳಿನಲ್ಲಿ ಉತ್ತರಿಸಿದ ನಿರೂಪಕಿ, “ಇಹಾನ್ ಭಟ್ ಅವರಿಗೆ ಅರ್ಥವಾಗಲಿ ಎಂದು ಅವರನ್ನು ಹಿಂದಿ ಭಾಷೆಯಲ್ಲಿ ಸ್ವಾಗತಿಸಲು ಪ್ರಯತ್ನಿಸಿದೆ. ಕೋಪಿಸಿಕೊಳ್ಳಬೇಡಿ ಸರ್” ಎಂದು ವಿವರಣೆ ನೀಡಿದರು.

ಆದರೆ ಇದು ಆ ಕ್ಷಣಕ್ಕೆ ಹಾಸ್ಯದಂತೆ ಕಂಡರೂ ಸಹ ಹಿಂದಿ ಹೇರಿಕೆಯ ವಿರುದ್ಧದ ತಮಿಳಿಗರ ಧೋರಣೆಯನ್ನು ಬಿಂಬಿಸುತ್ತದೆ. ಹಾಗಾಗಿಯೇ ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಂಡು ಹಿಂದಿ ಭಾಷಾ ಹೇರಿಕೆಯ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.


ಇದನ್ನೂ ಓದಿ: ಹಿಂದಿ ರಾಷ್ಟ್ರ ಭಾಷೆ ಅಲ್ಲ: ಕನ್ನಡಿಗರ ಆಕ್ರೋಶಕ್ಕೆ ಮಣಿದು ಕ್ಷಮೆ ಕೇಳಿದ ದೊಡ್ಡರಂಗೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...