Homeಮುಖಪುಟಸಿಎಂ ಕೇಜ್ರಿವಾಲ್‌ಗೆ ಶೂಟ್‌ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿದ ನರಸಿಂಗಾನಂದ ಹಿಂಬಾಲಕ

ಸಿಎಂ ಕೇಜ್ರಿವಾಲ್‌ಗೆ ಶೂಟ್‌ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿದ ನರಸಿಂಗಾನಂದ ಹಿಂಬಾಲಕ

ಈತ ಮುಸ್ಲಿಂ ಮಹಿಳೆಯರ ಮೇಲೆ ಕೂಡಾ ಲೈಂಗಿಕ ಹಿಂಸಾಚಾರದ ಬೆದರಿಕೆಯನ್ನು ಒಡ್ಡಿದ್ದಾನೆ

- Advertisement -
- Advertisement -

ದೀಪಾವಳಿಯಂದು ಪಟಾಕಿ ನಿಷೇಧ ಮಾಡಿದ್ದಕ್ಕಾಗಿ ನವೆಂಬರ್ 4 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಹಿಂದೂ ಶೇರ್ ಬಾಯ್‌ ಎಂದು ಜನಪ್ರಿಯವಾಗಿರುವ ಬಲಪಂಥೀಯ ಯೂಟ್ಯೂಬರ್ ಸುರೇಶ್ ರಜಪೂತ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ನಿಂದಿಸಿ ಶೂಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈತ ವಿವಾದಾತ್ಮಕ ಧಾರ್ಮಿಕ ಗುರು ಯತಿ ನರಸಿಂಗಾನಂದ ಅವರ ಹಿಂಬಾಲಕ ಎಂದು ದಿ ವೈರ್‌ ತನ್ನ ವರದಿಯಲ್ಲಿ ಹೇಳಿದೆ.

“ಪಾಕಿಸ್ತಾನದ ಎದುರು ಭಾರತ ಸೋತಾಗ ದೆಹಲಿಯಲ್ಲಿ ಪಟಾಕಿಗಳನ್ನು ಸುಡಲಾಯಿತು. ಆಗ ನಿಮ್ಮಗೆ ಯಾವುದೆ ಸಮಸ್ಯೆ ಇರಲಿಲ್ಲ. ನಿಮ್ಮ ಗಮನ ದೀಪಾವಳಿ ಮತ್ತು ಹೋಳಿಯ ಸಮಯದಲ್ಲಷ್ಟೇ ಬರುತ್ತದೆ. ಕೇಜ್ರಿವಾಲ್‌ ನಿಮ್ಮನ್ನು ಶೂಟ್ ಮಾಡಲಾಗುವುದು”  ಎಂದು ಬೆದರಿಕೆ ಹಾಕಿದ್ದಾನೆ.

ಜಬ್‌ ಪಾಕಿಸ್ತಾನ್‌ ಸೆ ಹಿಂದೂಸ್ತಾನ್‌ ಹರಾ ಥಾ, ತಬ್ ದಿಲ್ಲಿ ಮೆ ಪಟಾಕೆ ಚಲೇ ತೆ, ತಬ್ ತೇರಾ ಏಕ್‌ ಬಾಲ್‌ ಬಿ ನಾ ಉಕ್ಡಾ…ತೇರಾ ಗ್ಯಾನ್‌ ದಿವಾಲಿ ಔರ್‌ ಹೋಲಿ ಪರ್‌ ಹಿ ಬಾಹರ್‌ ಆತಾ ಹೆ. ಕೇಜ್ರಿವಾಲ್‌ ಪೀತಲ್‌ ಭರ್‌ ದೂಂಗಾ, ಪೀತಲ್‌

46 ನಿಮಿಷಗಳ ಈ ವಿಡಿಯೊವನ್ನು ಆತ ಶೀಘ್ರದಲ್ಲೇ ಡಿಲೀಟ್ ಮಾಡಿದ್ದಾನೆ. ವಿಡಿಯೊದಲ್ಲಿ ಹಿಂಸಾತ್ಮಕ ಲೈಂಗಿಕ ನಿಂದನೆಗಳು ಮತ್ತು ಮುಸ್ಲಿಮರಿಗೆ ಬೆದರಿಕೆಗಳನ್ನೂ ಹಾಕಲಾಗಿತ್ತು.

“ಯೇ ಕಟೀ ಲುಲ್ಲಿ ವಾಲಿ ಜಿತ್ನೆ ಭಿ ಆ ರಹೇ ಹೈ ನಾ, ಬೇಟಾ ಏಕ್ ಏಕ್ ಕರ್ಕೆ ಪೇಲ್ ದಿಯೆ ಜಾವೋಗೆ. ಜಾವೋ ತುಮ್ಹಾರಿ ಅಮ್ಮ ಬುಲಾ ರಹೀ ಹೈ ಅಪ್ನಿ ಅಮ್ಮಾ ಕೆ **** ****. ಅಪ್ನಿ ಬೆಹನ್ ಕಾ ರಿಷ್ಟ ಲೇಕರ್ ಆ ಜಾತೇ ಹೈಂ. ಶಾಹೀನ್ ಬಾಗ್ ಮೇ ಜಿತ್ನಾ ಭಿ ತುಮ್ಹಾರಿ ಮಾ ಬೆಹ್ನೋ ಕಾ ಧಂಧಾ ಕರ್ನಾ ಥಾ ಕರ್ ಚುಕೇ ಹೈ… ಸಾಲಿ ಜೈಲ್ ಜಾನೇ ಕೆ ಬಾದ್ ಭಿ ಪ್ರಗ್ನೆಂಟ್‌ ಹೋ ಗಯಿ. ತೊ ಕಾಟ್*** ತುಂ ನಿಕ್ಲೊ. ಮತ್ಲಾಬ್ ವೋ ಪ್ರಗ್ನೆಂಟ್‌ ಹೋ ಗಯಿ ಜಿಂಕಿ ಶಾದಿ ಭೀ ನಹೀ ಹುಯಿ” ಎಂದು ನಿಂದನೀಯವಾಗಿ ಮಾತನಾಡಿದ್ದಾನೆ ಎಂದು ದಿ ವೈರ್‌ ವರದಿ ಮಾಡಿದೆ. 

ಇದರ ನಂತರ ವಿಡಿಯೊದಲ್ಲಿ, ಸುರೇಶ್ ರಜಪೂತ್ ಮತ್ತು ರಾಹುಲ್ ಶರ್ಮಾ ಎಂಬವನ ಜೊತೆ ಸೇರಿ “ಯುಪಿ ಪೊಲೀಸರು ಹೇಗೆ ಮುಸ್ಲಿಂ ಮಹಿಳೆಯರಿಗೆ ಪಾಠ ಕಲಿಸಿದರು” ಎಂದು ವಿವರಿಸುತ್ತಾರೆ.

ಇದನ್ನೂ ಓದಿ: BJP ನಾಯಕ ಕಪಿಲ್ ಮಿಶ್ರಾ ಭಾಗವಹಿಸಿದ್ದ ಸಭೆಯಲ್ಲಿ ಮತ್ತೆ ‘ಗೋಲಿ ಮಾರೋ’ ಘೋಷಣೆ

ಇಡೀ ವೀಡಿಯೊದಲ್ಲಿ, ಮುಸ್ಲಿಂ ಪುರುಷರನ್ನು “ಪಿಂಪಕ್‌ಗಳು”, “ಪಂಕ್ಚರ್ ,ಮಕ್ಕಳು” ಮತ್ತು “ಜಿಹಾದಿಗಳು” ಎಂದು ಉಲ್ಲೇಖಿಸಲಾಗಿದೆ ಮತ್ತು ಲೈಂಗಿಕ ಹಿಂಸೆಯ ಮೂಲಕ ಬೆದರಿಕೆ ಹಾಕಲಾಗಿದೆ. ಇಷ್ಟೇ ಅಲ್ಲದೆ ಸುರೇಶ್‌ ರಾಜಪೂತ್‌ ತ್ರಿಪುರಾದಲ್ಲಿ ನಡೆದ ಮುಸ್ಲಿಂ ವಿರೋಧಿ ಹಿಂಸಾಚಾರವನ್ನು ಕೂಡಾ ಸಂಭ್ರಮಿಸಿದ್ದಾನೆ. “ನಿಜವಾದ ದೀಪಾವಳಿಯನ್ನು ತ್ರಿಪುರಾದಲ್ಲಿ ಆಚರಿಸಲಾಗಿದೆ. ದೀಪಾವಳಿ ಎಂದರೆ ಇದೇ. ತ್ರಿಪುರಾದಂತೆ ಎಲ್ಲಾ ಹಿಂದೂಗಳು ಎಚ್ಚೆತ್ತುಕೊಂಡರೆ, ನಿಮ್ಮ ಭವಿಷ್ಯ ಏನಾಗಬಹುದು ಎಂದು ಊಹಿಸಿ” ಎಂದು ಎಚ್ಚರಿಸಿದ್ದಾನೆ.

ಈ ವೀಡಿಯೊಗೆ ಪ್ರತಿಕ್ರಿಯಿಸಿದ ಜಾಮಿಯಾ ಮಿಲಿಯಾ ಇಸ್ಲಾಮಿಯಾದ ವಿದ್ಯಾರ್ಥಿನಿ, ಸಿಎಎ ವಿರೋಧಿ ಹೋರಾಟಗಾರ್ತಿ ಸಫೂರಾ ಜರ್ಗರ್, “ನಾನು ಆನ್‌ಲೈನ್‌ಗೆ ಬೆದರಿಕೆಗಳಿಗೆ ನಾನು ಬೆದರುವುದಿಲ್ಲ. ಆದರೆ ನನಗೆ ಕೋಪ ಉಂಟುಮಾಡುವುದು ಇಂತವರಿಗೆ ಶಿಕ್ಷೆ ಆಗುವುದಿಲ್ಲ ಎಂಬುವುದಾಗಿದೆ. ಭಾರತದಲ್ಲಿ ಮುಸ್ಲಿಂ ಪುರುಷರ ಹತ್ಯೆಗಳನ್ನು ಸಾಮಾನ್ಯಗೊಳಿಸಿದ ರೀತಿಯಲ್ಲಿಯೇ ಅವರು ಮುಸ್ಲಿಂ ಮಹಿಳೆಯರ ವಿರುದ್ಧದ ಹಿಂಸಾಚಾರವನ್ನು ಸಾಮಾನ್ಯಗೊಳಿಸಲು ಒಂದು ನೆಲೆಗಟ್ಟನ್ನು ರಚಿಸುತ್ತಿದ್ದಾರೆ ಎಂಬುದನ್ನು ನಾವು ಮುಖ್ಯವಾಗಿ ಗಮನಿಸಬೇಕು” ಎಂದು ಹೇಳಿದ್ದಾರೆ. 

ಸುದ್ದಿ ಮಾಧ್ಯಮ ಸುರೇಶ್‌ ರಜಪೂತ್‌ ವಿವಾದಾತ್ಮಕ ಧಾರ್ಮಿಕ ಗುರು ಯತಿ ನರಸಿಂಗಾನಂದ ಅವರ ಹಿಂಬಾಲಕ ಎಂದು ತನ್ನ ವರದಿಯಲ್ಲಿ ಹೇಳಿದೆ. ಯತಿ ನರಸಿಂಗಾನಂದ ಅವರ ಹಿಂಬಾಲಕರು ಹಲವಾರು ಜನರು ಇದೇ ರೀತಿಯ ಬೆದರಿಕೆಗಳನ್ನು ಹಾಕಿರುವುದನ್ನು ದಿ ವೈರ್‌ ಪಟ್ಟಿ ಮಾಡಿದೆ. ಅದನ್ನು ಇಲ್ಲಿ ಕ್ಲಿಕ್ ಮಾಡಿ ನೋಡಬಹುದು.

ಇದನ್ನೂ ಓದಿ: BJP ನಾಯಕನನ್ನು ವಿರೋಧಿಸುವವರ ಕಣ್ಣು ಕಿತ್ತು, ಕೈಗಳನ್ನು ಕತ್ತರಿಸಲಾಗುವುದು: ಹರಿಯಾಣ ಸಂಸದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...