Homeಮುಖಪುಟಸಿಎಂ ಕೇಜ್ರಿವಾಲ್‌ಗೆ ಶೂಟ್‌ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿದ ನರಸಿಂಗಾನಂದ ಹಿಂಬಾಲಕ

ಸಿಎಂ ಕೇಜ್ರಿವಾಲ್‌ಗೆ ಶೂಟ್‌ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿದ ನರಸಿಂಗಾನಂದ ಹಿಂಬಾಲಕ

ಈತ ಮುಸ್ಲಿಂ ಮಹಿಳೆಯರ ಮೇಲೆ ಕೂಡಾ ಲೈಂಗಿಕ ಹಿಂಸಾಚಾರದ ಬೆದರಿಕೆಯನ್ನು ಒಡ್ಡಿದ್ದಾನೆ

- Advertisement -
- Advertisement -

ದೀಪಾವಳಿಯಂದು ಪಟಾಕಿ ನಿಷೇಧ ಮಾಡಿದ್ದಕ್ಕಾಗಿ ನವೆಂಬರ್ 4 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಹಿಂದೂ ಶೇರ್ ಬಾಯ್‌ ಎಂದು ಜನಪ್ರಿಯವಾಗಿರುವ ಬಲಪಂಥೀಯ ಯೂಟ್ಯೂಬರ್ ಸುರೇಶ್ ರಜಪೂತ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ನಿಂದಿಸಿ ಶೂಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈತ ವಿವಾದಾತ್ಮಕ ಧಾರ್ಮಿಕ ಗುರು ಯತಿ ನರಸಿಂಗಾನಂದ ಅವರ ಹಿಂಬಾಲಕ ಎಂದು ದಿ ವೈರ್‌ ತನ್ನ ವರದಿಯಲ್ಲಿ ಹೇಳಿದೆ.

“ಪಾಕಿಸ್ತಾನದ ಎದುರು ಭಾರತ ಸೋತಾಗ ದೆಹಲಿಯಲ್ಲಿ ಪಟಾಕಿಗಳನ್ನು ಸುಡಲಾಯಿತು. ಆಗ ನಿಮ್ಮಗೆ ಯಾವುದೆ ಸಮಸ್ಯೆ ಇರಲಿಲ್ಲ. ನಿಮ್ಮ ಗಮನ ದೀಪಾವಳಿ ಮತ್ತು ಹೋಳಿಯ ಸಮಯದಲ್ಲಷ್ಟೇ ಬರುತ್ತದೆ. ಕೇಜ್ರಿವಾಲ್‌ ನಿಮ್ಮನ್ನು ಶೂಟ್ ಮಾಡಲಾಗುವುದು”  ಎಂದು ಬೆದರಿಕೆ ಹಾಕಿದ್ದಾನೆ.

ಜಬ್‌ ಪಾಕಿಸ್ತಾನ್‌ ಸೆ ಹಿಂದೂಸ್ತಾನ್‌ ಹರಾ ಥಾ, ತಬ್ ದಿಲ್ಲಿ ಮೆ ಪಟಾಕೆ ಚಲೇ ತೆ, ತಬ್ ತೇರಾ ಏಕ್‌ ಬಾಲ್‌ ಬಿ ನಾ ಉಕ್ಡಾ…ತೇರಾ ಗ್ಯಾನ್‌ ದಿವಾಲಿ ಔರ್‌ ಹೋಲಿ ಪರ್‌ ಹಿ ಬಾಹರ್‌ ಆತಾ ಹೆ. ಕೇಜ್ರಿವಾಲ್‌ ಪೀತಲ್‌ ಭರ್‌ ದೂಂಗಾ, ಪೀತಲ್‌

46 ನಿಮಿಷಗಳ ಈ ವಿಡಿಯೊವನ್ನು ಆತ ಶೀಘ್ರದಲ್ಲೇ ಡಿಲೀಟ್ ಮಾಡಿದ್ದಾನೆ. ವಿಡಿಯೊದಲ್ಲಿ ಹಿಂಸಾತ್ಮಕ ಲೈಂಗಿಕ ನಿಂದನೆಗಳು ಮತ್ತು ಮುಸ್ಲಿಮರಿಗೆ ಬೆದರಿಕೆಗಳನ್ನೂ ಹಾಕಲಾಗಿತ್ತು.

“ಯೇ ಕಟೀ ಲುಲ್ಲಿ ವಾಲಿ ಜಿತ್ನೆ ಭಿ ಆ ರಹೇ ಹೈ ನಾ, ಬೇಟಾ ಏಕ್ ಏಕ್ ಕರ್ಕೆ ಪೇಲ್ ದಿಯೆ ಜಾವೋಗೆ. ಜಾವೋ ತುಮ್ಹಾರಿ ಅಮ್ಮ ಬುಲಾ ರಹೀ ಹೈ ಅಪ್ನಿ ಅಮ್ಮಾ ಕೆ **** ****. ಅಪ್ನಿ ಬೆಹನ್ ಕಾ ರಿಷ್ಟ ಲೇಕರ್ ಆ ಜಾತೇ ಹೈಂ. ಶಾಹೀನ್ ಬಾಗ್ ಮೇ ಜಿತ್ನಾ ಭಿ ತುಮ್ಹಾರಿ ಮಾ ಬೆಹ್ನೋ ಕಾ ಧಂಧಾ ಕರ್ನಾ ಥಾ ಕರ್ ಚುಕೇ ಹೈ… ಸಾಲಿ ಜೈಲ್ ಜಾನೇ ಕೆ ಬಾದ್ ಭಿ ಪ್ರಗ್ನೆಂಟ್‌ ಹೋ ಗಯಿ. ತೊ ಕಾಟ್*** ತುಂ ನಿಕ್ಲೊ. ಮತ್ಲಾಬ್ ವೋ ಪ್ರಗ್ನೆಂಟ್‌ ಹೋ ಗಯಿ ಜಿಂಕಿ ಶಾದಿ ಭೀ ನಹೀ ಹುಯಿ” ಎಂದು ನಿಂದನೀಯವಾಗಿ ಮಾತನಾಡಿದ್ದಾನೆ ಎಂದು ದಿ ವೈರ್‌ ವರದಿ ಮಾಡಿದೆ. 

ಇದರ ನಂತರ ವಿಡಿಯೊದಲ್ಲಿ, ಸುರೇಶ್ ರಜಪೂತ್ ಮತ್ತು ರಾಹುಲ್ ಶರ್ಮಾ ಎಂಬವನ ಜೊತೆ ಸೇರಿ “ಯುಪಿ ಪೊಲೀಸರು ಹೇಗೆ ಮುಸ್ಲಿಂ ಮಹಿಳೆಯರಿಗೆ ಪಾಠ ಕಲಿಸಿದರು” ಎಂದು ವಿವರಿಸುತ್ತಾರೆ.

ಇದನ್ನೂ ಓದಿ: BJP ನಾಯಕ ಕಪಿಲ್ ಮಿಶ್ರಾ ಭಾಗವಹಿಸಿದ್ದ ಸಭೆಯಲ್ಲಿ ಮತ್ತೆ ‘ಗೋಲಿ ಮಾರೋ’ ಘೋಷಣೆ

ಇಡೀ ವೀಡಿಯೊದಲ್ಲಿ, ಮುಸ್ಲಿಂ ಪುರುಷರನ್ನು “ಪಿಂಪಕ್‌ಗಳು”, “ಪಂಕ್ಚರ್ ,ಮಕ್ಕಳು” ಮತ್ತು “ಜಿಹಾದಿಗಳು” ಎಂದು ಉಲ್ಲೇಖಿಸಲಾಗಿದೆ ಮತ್ತು ಲೈಂಗಿಕ ಹಿಂಸೆಯ ಮೂಲಕ ಬೆದರಿಕೆ ಹಾಕಲಾಗಿದೆ. ಇಷ್ಟೇ ಅಲ್ಲದೆ ಸುರೇಶ್‌ ರಾಜಪೂತ್‌ ತ್ರಿಪುರಾದಲ್ಲಿ ನಡೆದ ಮುಸ್ಲಿಂ ವಿರೋಧಿ ಹಿಂಸಾಚಾರವನ್ನು ಕೂಡಾ ಸಂಭ್ರಮಿಸಿದ್ದಾನೆ. “ನಿಜವಾದ ದೀಪಾವಳಿಯನ್ನು ತ್ರಿಪುರಾದಲ್ಲಿ ಆಚರಿಸಲಾಗಿದೆ. ದೀಪಾವಳಿ ಎಂದರೆ ಇದೇ. ತ್ರಿಪುರಾದಂತೆ ಎಲ್ಲಾ ಹಿಂದೂಗಳು ಎಚ್ಚೆತ್ತುಕೊಂಡರೆ, ನಿಮ್ಮ ಭವಿಷ್ಯ ಏನಾಗಬಹುದು ಎಂದು ಊಹಿಸಿ” ಎಂದು ಎಚ್ಚರಿಸಿದ್ದಾನೆ.

ಈ ವೀಡಿಯೊಗೆ ಪ್ರತಿಕ್ರಿಯಿಸಿದ ಜಾಮಿಯಾ ಮಿಲಿಯಾ ಇಸ್ಲಾಮಿಯಾದ ವಿದ್ಯಾರ್ಥಿನಿ, ಸಿಎಎ ವಿರೋಧಿ ಹೋರಾಟಗಾರ್ತಿ ಸಫೂರಾ ಜರ್ಗರ್, “ನಾನು ಆನ್‌ಲೈನ್‌ಗೆ ಬೆದರಿಕೆಗಳಿಗೆ ನಾನು ಬೆದರುವುದಿಲ್ಲ. ಆದರೆ ನನಗೆ ಕೋಪ ಉಂಟುಮಾಡುವುದು ಇಂತವರಿಗೆ ಶಿಕ್ಷೆ ಆಗುವುದಿಲ್ಲ ಎಂಬುವುದಾಗಿದೆ. ಭಾರತದಲ್ಲಿ ಮುಸ್ಲಿಂ ಪುರುಷರ ಹತ್ಯೆಗಳನ್ನು ಸಾಮಾನ್ಯಗೊಳಿಸಿದ ರೀತಿಯಲ್ಲಿಯೇ ಅವರು ಮುಸ್ಲಿಂ ಮಹಿಳೆಯರ ವಿರುದ್ಧದ ಹಿಂಸಾಚಾರವನ್ನು ಸಾಮಾನ್ಯಗೊಳಿಸಲು ಒಂದು ನೆಲೆಗಟ್ಟನ್ನು ರಚಿಸುತ್ತಿದ್ದಾರೆ ಎಂಬುದನ್ನು ನಾವು ಮುಖ್ಯವಾಗಿ ಗಮನಿಸಬೇಕು” ಎಂದು ಹೇಳಿದ್ದಾರೆ. 

ಸುದ್ದಿ ಮಾಧ್ಯಮ ಸುರೇಶ್‌ ರಜಪೂತ್‌ ವಿವಾದಾತ್ಮಕ ಧಾರ್ಮಿಕ ಗುರು ಯತಿ ನರಸಿಂಗಾನಂದ ಅವರ ಹಿಂಬಾಲಕ ಎಂದು ತನ್ನ ವರದಿಯಲ್ಲಿ ಹೇಳಿದೆ. ಯತಿ ನರಸಿಂಗಾನಂದ ಅವರ ಹಿಂಬಾಲಕರು ಹಲವಾರು ಜನರು ಇದೇ ರೀತಿಯ ಬೆದರಿಕೆಗಳನ್ನು ಹಾಕಿರುವುದನ್ನು ದಿ ವೈರ್‌ ಪಟ್ಟಿ ಮಾಡಿದೆ. ಅದನ್ನು ಇಲ್ಲಿ ಕ್ಲಿಕ್ ಮಾಡಿ ನೋಡಬಹುದು.

ಇದನ್ನೂ ಓದಿ: BJP ನಾಯಕನನ್ನು ವಿರೋಧಿಸುವವರ ಕಣ್ಣು ಕಿತ್ತು, ಕೈಗಳನ್ನು ಕತ್ತರಿಸಲಾಗುವುದು: ಹರಿಯಾಣ ಸಂಸದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....