Homeಮುಖಪುಟಸಿಎಂ ಕೇಜ್ರಿವಾಲ್‌ಗೆ ಶೂಟ್‌ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿದ ನರಸಿಂಗಾನಂದ ಹಿಂಬಾಲಕ

ಸಿಎಂ ಕೇಜ್ರಿವಾಲ್‌ಗೆ ಶೂಟ್‌ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿದ ನರಸಿಂಗಾನಂದ ಹಿಂಬಾಲಕ

ಈತ ಮುಸ್ಲಿಂ ಮಹಿಳೆಯರ ಮೇಲೆ ಕೂಡಾ ಲೈಂಗಿಕ ಹಿಂಸಾಚಾರದ ಬೆದರಿಕೆಯನ್ನು ಒಡ್ಡಿದ್ದಾನೆ

- Advertisement -
- Advertisement -

ದೀಪಾವಳಿಯಂದು ಪಟಾಕಿ ನಿಷೇಧ ಮಾಡಿದ್ದಕ್ಕಾಗಿ ನವೆಂಬರ್ 4 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಹಿಂದೂ ಶೇರ್ ಬಾಯ್‌ ಎಂದು ಜನಪ್ರಿಯವಾಗಿರುವ ಬಲಪಂಥೀಯ ಯೂಟ್ಯೂಬರ್ ಸುರೇಶ್ ರಜಪೂತ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ನಿಂದಿಸಿ ಶೂಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈತ ವಿವಾದಾತ್ಮಕ ಧಾರ್ಮಿಕ ಗುರು ಯತಿ ನರಸಿಂಗಾನಂದ ಅವರ ಹಿಂಬಾಲಕ ಎಂದು ದಿ ವೈರ್‌ ತನ್ನ ವರದಿಯಲ್ಲಿ ಹೇಳಿದೆ.

“ಪಾಕಿಸ್ತಾನದ ಎದುರು ಭಾರತ ಸೋತಾಗ ದೆಹಲಿಯಲ್ಲಿ ಪಟಾಕಿಗಳನ್ನು ಸುಡಲಾಯಿತು. ಆಗ ನಿಮ್ಮಗೆ ಯಾವುದೆ ಸಮಸ್ಯೆ ಇರಲಿಲ್ಲ. ನಿಮ್ಮ ಗಮನ ದೀಪಾವಳಿ ಮತ್ತು ಹೋಳಿಯ ಸಮಯದಲ್ಲಷ್ಟೇ ಬರುತ್ತದೆ. ಕೇಜ್ರಿವಾಲ್‌ ನಿಮ್ಮನ್ನು ಶೂಟ್ ಮಾಡಲಾಗುವುದು”  ಎಂದು ಬೆದರಿಕೆ ಹಾಕಿದ್ದಾನೆ.

ಜಬ್‌ ಪಾಕಿಸ್ತಾನ್‌ ಸೆ ಹಿಂದೂಸ್ತಾನ್‌ ಹರಾ ಥಾ, ತಬ್ ದಿಲ್ಲಿ ಮೆ ಪಟಾಕೆ ಚಲೇ ತೆ, ತಬ್ ತೇರಾ ಏಕ್‌ ಬಾಲ್‌ ಬಿ ನಾ ಉಕ್ಡಾ…ತೇರಾ ಗ್ಯಾನ್‌ ದಿವಾಲಿ ಔರ್‌ ಹೋಲಿ ಪರ್‌ ಹಿ ಬಾಹರ್‌ ಆತಾ ಹೆ. ಕೇಜ್ರಿವಾಲ್‌ ಪೀತಲ್‌ ಭರ್‌ ದೂಂಗಾ, ಪೀತಲ್‌

46 ನಿಮಿಷಗಳ ಈ ವಿಡಿಯೊವನ್ನು ಆತ ಶೀಘ್ರದಲ್ಲೇ ಡಿಲೀಟ್ ಮಾಡಿದ್ದಾನೆ. ವಿಡಿಯೊದಲ್ಲಿ ಹಿಂಸಾತ್ಮಕ ಲೈಂಗಿಕ ನಿಂದನೆಗಳು ಮತ್ತು ಮುಸ್ಲಿಮರಿಗೆ ಬೆದರಿಕೆಗಳನ್ನೂ ಹಾಕಲಾಗಿತ್ತು.

“ಯೇ ಕಟೀ ಲುಲ್ಲಿ ವಾಲಿ ಜಿತ್ನೆ ಭಿ ಆ ರಹೇ ಹೈ ನಾ, ಬೇಟಾ ಏಕ್ ಏಕ್ ಕರ್ಕೆ ಪೇಲ್ ದಿಯೆ ಜಾವೋಗೆ. ಜಾವೋ ತುಮ್ಹಾರಿ ಅಮ್ಮ ಬುಲಾ ರಹೀ ಹೈ ಅಪ್ನಿ ಅಮ್ಮಾ ಕೆ **** ****. ಅಪ್ನಿ ಬೆಹನ್ ಕಾ ರಿಷ್ಟ ಲೇಕರ್ ಆ ಜಾತೇ ಹೈಂ. ಶಾಹೀನ್ ಬಾಗ್ ಮೇ ಜಿತ್ನಾ ಭಿ ತುಮ್ಹಾರಿ ಮಾ ಬೆಹ್ನೋ ಕಾ ಧಂಧಾ ಕರ್ನಾ ಥಾ ಕರ್ ಚುಕೇ ಹೈ… ಸಾಲಿ ಜೈಲ್ ಜಾನೇ ಕೆ ಬಾದ್ ಭಿ ಪ್ರಗ್ನೆಂಟ್‌ ಹೋ ಗಯಿ. ತೊ ಕಾಟ್*** ತುಂ ನಿಕ್ಲೊ. ಮತ್ಲಾಬ್ ವೋ ಪ್ರಗ್ನೆಂಟ್‌ ಹೋ ಗಯಿ ಜಿಂಕಿ ಶಾದಿ ಭೀ ನಹೀ ಹುಯಿ” ಎಂದು ನಿಂದನೀಯವಾಗಿ ಮಾತನಾಡಿದ್ದಾನೆ ಎಂದು ದಿ ವೈರ್‌ ವರದಿ ಮಾಡಿದೆ. 

ಇದರ ನಂತರ ವಿಡಿಯೊದಲ್ಲಿ, ಸುರೇಶ್ ರಜಪೂತ್ ಮತ್ತು ರಾಹುಲ್ ಶರ್ಮಾ ಎಂಬವನ ಜೊತೆ ಸೇರಿ “ಯುಪಿ ಪೊಲೀಸರು ಹೇಗೆ ಮುಸ್ಲಿಂ ಮಹಿಳೆಯರಿಗೆ ಪಾಠ ಕಲಿಸಿದರು” ಎಂದು ವಿವರಿಸುತ್ತಾರೆ.

ಇದನ್ನೂ ಓದಿ: BJP ನಾಯಕ ಕಪಿಲ್ ಮಿಶ್ರಾ ಭಾಗವಹಿಸಿದ್ದ ಸಭೆಯಲ್ಲಿ ಮತ್ತೆ ‘ಗೋಲಿ ಮಾರೋ’ ಘೋಷಣೆ

ಇಡೀ ವೀಡಿಯೊದಲ್ಲಿ, ಮುಸ್ಲಿಂ ಪುರುಷರನ್ನು “ಪಿಂಪಕ್‌ಗಳು”, “ಪಂಕ್ಚರ್ ,ಮಕ್ಕಳು” ಮತ್ತು “ಜಿಹಾದಿಗಳು” ಎಂದು ಉಲ್ಲೇಖಿಸಲಾಗಿದೆ ಮತ್ತು ಲೈಂಗಿಕ ಹಿಂಸೆಯ ಮೂಲಕ ಬೆದರಿಕೆ ಹಾಕಲಾಗಿದೆ. ಇಷ್ಟೇ ಅಲ್ಲದೆ ಸುರೇಶ್‌ ರಾಜಪೂತ್‌ ತ್ರಿಪುರಾದಲ್ಲಿ ನಡೆದ ಮುಸ್ಲಿಂ ವಿರೋಧಿ ಹಿಂಸಾಚಾರವನ್ನು ಕೂಡಾ ಸಂಭ್ರಮಿಸಿದ್ದಾನೆ. “ನಿಜವಾದ ದೀಪಾವಳಿಯನ್ನು ತ್ರಿಪುರಾದಲ್ಲಿ ಆಚರಿಸಲಾಗಿದೆ. ದೀಪಾವಳಿ ಎಂದರೆ ಇದೇ. ತ್ರಿಪುರಾದಂತೆ ಎಲ್ಲಾ ಹಿಂದೂಗಳು ಎಚ್ಚೆತ್ತುಕೊಂಡರೆ, ನಿಮ್ಮ ಭವಿಷ್ಯ ಏನಾಗಬಹುದು ಎಂದು ಊಹಿಸಿ” ಎಂದು ಎಚ್ಚರಿಸಿದ್ದಾನೆ.

ಈ ವೀಡಿಯೊಗೆ ಪ್ರತಿಕ್ರಿಯಿಸಿದ ಜಾಮಿಯಾ ಮಿಲಿಯಾ ಇಸ್ಲಾಮಿಯಾದ ವಿದ್ಯಾರ್ಥಿನಿ, ಸಿಎಎ ವಿರೋಧಿ ಹೋರಾಟಗಾರ್ತಿ ಸಫೂರಾ ಜರ್ಗರ್, “ನಾನು ಆನ್‌ಲೈನ್‌ಗೆ ಬೆದರಿಕೆಗಳಿಗೆ ನಾನು ಬೆದರುವುದಿಲ್ಲ. ಆದರೆ ನನಗೆ ಕೋಪ ಉಂಟುಮಾಡುವುದು ಇಂತವರಿಗೆ ಶಿಕ್ಷೆ ಆಗುವುದಿಲ್ಲ ಎಂಬುವುದಾಗಿದೆ. ಭಾರತದಲ್ಲಿ ಮುಸ್ಲಿಂ ಪುರುಷರ ಹತ್ಯೆಗಳನ್ನು ಸಾಮಾನ್ಯಗೊಳಿಸಿದ ರೀತಿಯಲ್ಲಿಯೇ ಅವರು ಮುಸ್ಲಿಂ ಮಹಿಳೆಯರ ವಿರುದ್ಧದ ಹಿಂಸಾಚಾರವನ್ನು ಸಾಮಾನ್ಯಗೊಳಿಸಲು ಒಂದು ನೆಲೆಗಟ್ಟನ್ನು ರಚಿಸುತ್ತಿದ್ದಾರೆ ಎಂಬುದನ್ನು ನಾವು ಮುಖ್ಯವಾಗಿ ಗಮನಿಸಬೇಕು” ಎಂದು ಹೇಳಿದ್ದಾರೆ. 

ಸುದ್ದಿ ಮಾಧ್ಯಮ ಸುರೇಶ್‌ ರಜಪೂತ್‌ ವಿವಾದಾತ್ಮಕ ಧಾರ್ಮಿಕ ಗುರು ಯತಿ ನರಸಿಂಗಾನಂದ ಅವರ ಹಿಂಬಾಲಕ ಎಂದು ತನ್ನ ವರದಿಯಲ್ಲಿ ಹೇಳಿದೆ. ಯತಿ ನರಸಿಂಗಾನಂದ ಅವರ ಹಿಂಬಾಲಕರು ಹಲವಾರು ಜನರು ಇದೇ ರೀತಿಯ ಬೆದರಿಕೆಗಳನ್ನು ಹಾಕಿರುವುದನ್ನು ದಿ ವೈರ್‌ ಪಟ್ಟಿ ಮಾಡಿದೆ. ಅದನ್ನು ಇಲ್ಲಿ ಕ್ಲಿಕ್ ಮಾಡಿ ನೋಡಬಹುದು.

ಇದನ್ನೂ ಓದಿ: BJP ನಾಯಕನನ್ನು ವಿರೋಧಿಸುವವರ ಕಣ್ಣು ಕಿತ್ತು, ಕೈಗಳನ್ನು ಕತ್ತರಿಸಲಾಗುವುದು: ಹರಿಯಾಣ ಸಂಸದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...