Homeಮುಖಪುಟಸಿಎಂ ಕೇಜ್ರಿವಾಲ್‌ಗೆ ಶೂಟ್‌ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿದ ನರಸಿಂಗಾನಂದ ಹಿಂಬಾಲಕ

ಸಿಎಂ ಕೇಜ್ರಿವಾಲ್‌ಗೆ ಶೂಟ್‌ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿದ ನರಸಿಂಗಾನಂದ ಹಿಂಬಾಲಕ

ಈತ ಮುಸ್ಲಿಂ ಮಹಿಳೆಯರ ಮೇಲೆ ಕೂಡಾ ಲೈಂಗಿಕ ಹಿಂಸಾಚಾರದ ಬೆದರಿಕೆಯನ್ನು ಒಡ್ಡಿದ್ದಾನೆ

- Advertisement -
- Advertisement -

ದೀಪಾವಳಿಯಂದು ಪಟಾಕಿ ನಿಷೇಧ ಮಾಡಿದ್ದಕ್ಕಾಗಿ ನವೆಂಬರ್ 4 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಹಿಂದೂ ಶೇರ್ ಬಾಯ್‌ ಎಂದು ಜನಪ್ರಿಯವಾಗಿರುವ ಬಲಪಂಥೀಯ ಯೂಟ್ಯೂಬರ್ ಸುರೇಶ್ ರಜಪೂತ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ನಿಂದಿಸಿ ಶೂಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈತ ವಿವಾದಾತ್ಮಕ ಧಾರ್ಮಿಕ ಗುರು ಯತಿ ನರಸಿಂಗಾನಂದ ಅವರ ಹಿಂಬಾಲಕ ಎಂದು ದಿ ವೈರ್‌ ತನ್ನ ವರದಿಯಲ್ಲಿ ಹೇಳಿದೆ.

“ಪಾಕಿಸ್ತಾನದ ಎದುರು ಭಾರತ ಸೋತಾಗ ದೆಹಲಿಯಲ್ಲಿ ಪಟಾಕಿಗಳನ್ನು ಸುಡಲಾಯಿತು. ಆಗ ನಿಮ್ಮಗೆ ಯಾವುದೆ ಸಮಸ್ಯೆ ಇರಲಿಲ್ಲ. ನಿಮ್ಮ ಗಮನ ದೀಪಾವಳಿ ಮತ್ತು ಹೋಳಿಯ ಸಮಯದಲ್ಲಷ್ಟೇ ಬರುತ್ತದೆ. ಕೇಜ್ರಿವಾಲ್‌ ನಿಮ್ಮನ್ನು ಶೂಟ್ ಮಾಡಲಾಗುವುದು”  ಎಂದು ಬೆದರಿಕೆ ಹಾಕಿದ್ದಾನೆ.

ಜಬ್‌ ಪಾಕಿಸ್ತಾನ್‌ ಸೆ ಹಿಂದೂಸ್ತಾನ್‌ ಹರಾ ಥಾ, ತಬ್ ದಿಲ್ಲಿ ಮೆ ಪಟಾಕೆ ಚಲೇ ತೆ, ತಬ್ ತೇರಾ ಏಕ್‌ ಬಾಲ್‌ ಬಿ ನಾ ಉಕ್ಡಾ…ತೇರಾ ಗ್ಯಾನ್‌ ದಿವಾಲಿ ಔರ್‌ ಹೋಲಿ ಪರ್‌ ಹಿ ಬಾಹರ್‌ ಆತಾ ಹೆ. ಕೇಜ್ರಿವಾಲ್‌ ಪೀತಲ್‌ ಭರ್‌ ದೂಂಗಾ, ಪೀತಲ್‌

46 ನಿಮಿಷಗಳ ಈ ವಿಡಿಯೊವನ್ನು ಆತ ಶೀಘ್ರದಲ್ಲೇ ಡಿಲೀಟ್ ಮಾಡಿದ್ದಾನೆ. ವಿಡಿಯೊದಲ್ಲಿ ಹಿಂಸಾತ್ಮಕ ಲೈಂಗಿಕ ನಿಂದನೆಗಳು ಮತ್ತು ಮುಸ್ಲಿಮರಿಗೆ ಬೆದರಿಕೆಗಳನ್ನೂ ಹಾಕಲಾಗಿತ್ತು.

“ಯೇ ಕಟೀ ಲುಲ್ಲಿ ವಾಲಿ ಜಿತ್ನೆ ಭಿ ಆ ರಹೇ ಹೈ ನಾ, ಬೇಟಾ ಏಕ್ ಏಕ್ ಕರ್ಕೆ ಪೇಲ್ ದಿಯೆ ಜಾವೋಗೆ. ಜಾವೋ ತುಮ್ಹಾರಿ ಅಮ್ಮ ಬುಲಾ ರಹೀ ಹೈ ಅಪ್ನಿ ಅಮ್ಮಾ ಕೆ **** ****. ಅಪ್ನಿ ಬೆಹನ್ ಕಾ ರಿಷ್ಟ ಲೇಕರ್ ಆ ಜಾತೇ ಹೈಂ. ಶಾಹೀನ್ ಬಾಗ್ ಮೇ ಜಿತ್ನಾ ಭಿ ತುಮ್ಹಾರಿ ಮಾ ಬೆಹ್ನೋ ಕಾ ಧಂಧಾ ಕರ್ನಾ ಥಾ ಕರ್ ಚುಕೇ ಹೈ… ಸಾಲಿ ಜೈಲ್ ಜಾನೇ ಕೆ ಬಾದ್ ಭಿ ಪ್ರಗ್ನೆಂಟ್‌ ಹೋ ಗಯಿ. ತೊ ಕಾಟ್*** ತುಂ ನಿಕ್ಲೊ. ಮತ್ಲಾಬ್ ವೋ ಪ್ರಗ್ನೆಂಟ್‌ ಹೋ ಗಯಿ ಜಿಂಕಿ ಶಾದಿ ಭೀ ನಹೀ ಹುಯಿ” ಎಂದು ನಿಂದನೀಯವಾಗಿ ಮಾತನಾಡಿದ್ದಾನೆ ಎಂದು ದಿ ವೈರ್‌ ವರದಿ ಮಾಡಿದೆ. 

ಇದರ ನಂತರ ವಿಡಿಯೊದಲ್ಲಿ, ಸುರೇಶ್ ರಜಪೂತ್ ಮತ್ತು ರಾಹುಲ್ ಶರ್ಮಾ ಎಂಬವನ ಜೊತೆ ಸೇರಿ “ಯುಪಿ ಪೊಲೀಸರು ಹೇಗೆ ಮುಸ್ಲಿಂ ಮಹಿಳೆಯರಿಗೆ ಪಾಠ ಕಲಿಸಿದರು” ಎಂದು ವಿವರಿಸುತ್ತಾರೆ.

ಇದನ್ನೂ ಓದಿ: BJP ನಾಯಕ ಕಪಿಲ್ ಮಿಶ್ರಾ ಭಾಗವಹಿಸಿದ್ದ ಸಭೆಯಲ್ಲಿ ಮತ್ತೆ ‘ಗೋಲಿ ಮಾರೋ’ ಘೋಷಣೆ

ಇಡೀ ವೀಡಿಯೊದಲ್ಲಿ, ಮುಸ್ಲಿಂ ಪುರುಷರನ್ನು “ಪಿಂಪಕ್‌ಗಳು”, “ಪಂಕ್ಚರ್ ,ಮಕ್ಕಳು” ಮತ್ತು “ಜಿಹಾದಿಗಳು” ಎಂದು ಉಲ್ಲೇಖಿಸಲಾಗಿದೆ ಮತ್ತು ಲೈಂಗಿಕ ಹಿಂಸೆಯ ಮೂಲಕ ಬೆದರಿಕೆ ಹಾಕಲಾಗಿದೆ. ಇಷ್ಟೇ ಅಲ್ಲದೆ ಸುರೇಶ್‌ ರಾಜಪೂತ್‌ ತ್ರಿಪುರಾದಲ್ಲಿ ನಡೆದ ಮುಸ್ಲಿಂ ವಿರೋಧಿ ಹಿಂಸಾಚಾರವನ್ನು ಕೂಡಾ ಸಂಭ್ರಮಿಸಿದ್ದಾನೆ. “ನಿಜವಾದ ದೀಪಾವಳಿಯನ್ನು ತ್ರಿಪುರಾದಲ್ಲಿ ಆಚರಿಸಲಾಗಿದೆ. ದೀಪಾವಳಿ ಎಂದರೆ ಇದೇ. ತ್ರಿಪುರಾದಂತೆ ಎಲ್ಲಾ ಹಿಂದೂಗಳು ಎಚ್ಚೆತ್ತುಕೊಂಡರೆ, ನಿಮ್ಮ ಭವಿಷ್ಯ ಏನಾಗಬಹುದು ಎಂದು ಊಹಿಸಿ” ಎಂದು ಎಚ್ಚರಿಸಿದ್ದಾನೆ.

ಈ ವೀಡಿಯೊಗೆ ಪ್ರತಿಕ್ರಿಯಿಸಿದ ಜಾಮಿಯಾ ಮಿಲಿಯಾ ಇಸ್ಲಾಮಿಯಾದ ವಿದ್ಯಾರ್ಥಿನಿ, ಸಿಎಎ ವಿರೋಧಿ ಹೋರಾಟಗಾರ್ತಿ ಸಫೂರಾ ಜರ್ಗರ್, “ನಾನು ಆನ್‌ಲೈನ್‌ಗೆ ಬೆದರಿಕೆಗಳಿಗೆ ನಾನು ಬೆದರುವುದಿಲ್ಲ. ಆದರೆ ನನಗೆ ಕೋಪ ಉಂಟುಮಾಡುವುದು ಇಂತವರಿಗೆ ಶಿಕ್ಷೆ ಆಗುವುದಿಲ್ಲ ಎಂಬುವುದಾಗಿದೆ. ಭಾರತದಲ್ಲಿ ಮುಸ್ಲಿಂ ಪುರುಷರ ಹತ್ಯೆಗಳನ್ನು ಸಾಮಾನ್ಯಗೊಳಿಸಿದ ರೀತಿಯಲ್ಲಿಯೇ ಅವರು ಮುಸ್ಲಿಂ ಮಹಿಳೆಯರ ವಿರುದ್ಧದ ಹಿಂಸಾಚಾರವನ್ನು ಸಾಮಾನ್ಯಗೊಳಿಸಲು ಒಂದು ನೆಲೆಗಟ್ಟನ್ನು ರಚಿಸುತ್ತಿದ್ದಾರೆ ಎಂಬುದನ್ನು ನಾವು ಮುಖ್ಯವಾಗಿ ಗಮನಿಸಬೇಕು” ಎಂದು ಹೇಳಿದ್ದಾರೆ. 

ಸುದ್ದಿ ಮಾಧ್ಯಮ ಸುರೇಶ್‌ ರಜಪೂತ್‌ ವಿವಾದಾತ್ಮಕ ಧಾರ್ಮಿಕ ಗುರು ಯತಿ ನರಸಿಂಗಾನಂದ ಅವರ ಹಿಂಬಾಲಕ ಎಂದು ತನ್ನ ವರದಿಯಲ್ಲಿ ಹೇಳಿದೆ. ಯತಿ ನರಸಿಂಗಾನಂದ ಅವರ ಹಿಂಬಾಲಕರು ಹಲವಾರು ಜನರು ಇದೇ ರೀತಿಯ ಬೆದರಿಕೆಗಳನ್ನು ಹಾಕಿರುವುದನ್ನು ದಿ ವೈರ್‌ ಪಟ್ಟಿ ಮಾಡಿದೆ. ಅದನ್ನು ಇಲ್ಲಿ ಕ್ಲಿಕ್ ಮಾಡಿ ನೋಡಬಹುದು.

ಇದನ್ನೂ ಓದಿ: BJP ನಾಯಕನನ್ನು ವಿರೋಧಿಸುವವರ ಕಣ್ಣು ಕಿತ್ತು, ಕೈಗಳನ್ನು ಕತ್ತರಿಸಲಾಗುವುದು: ಹರಿಯಾಣ ಸಂಸದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...