Homeಮುಖಪುಟಸಿಎಂ ಕೇಜ್ರಿವಾಲ್‌ಗೆ ಶೂಟ್‌ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿದ ನರಸಿಂಗಾನಂದ ಹಿಂಬಾಲಕ

ಸಿಎಂ ಕೇಜ್ರಿವಾಲ್‌ಗೆ ಶೂಟ್‌ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿದ ನರಸಿಂಗಾನಂದ ಹಿಂಬಾಲಕ

ಈತ ಮುಸ್ಲಿಂ ಮಹಿಳೆಯರ ಮೇಲೆ ಕೂಡಾ ಲೈಂಗಿಕ ಹಿಂಸಾಚಾರದ ಬೆದರಿಕೆಯನ್ನು ಒಡ್ಡಿದ್ದಾನೆ

- Advertisement -
- Advertisement -

ದೀಪಾವಳಿಯಂದು ಪಟಾಕಿ ನಿಷೇಧ ಮಾಡಿದ್ದಕ್ಕಾಗಿ ನವೆಂಬರ್ 4 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಹಿಂದೂ ಶೇರ್ ಬಾಯ್‌ ಎಂದು ಜನಪ್ರಿಯವಾಗಿರುವ ಬಲಪಂಥೀಯ ಯೂಟ್ಯೂಬರ್ ಸುರೇಶ್ ರಜಪೂತ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ನಿಂದಿಸಿ ಶೂಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈತ ವಿವಾದಾತ್ಮಕ ಧಾರ್ಮಿಕ ಗುರು ಯತಿ ನರಸಿಂಗಾನಂದ ಅವರ ಹಿಂಬಾಲಕ ಎಂದು ದಿ ವೈರ್‌ ತನ್ನ ವರದಿಯಲ್ಲಿ ಹೇಳಿದೆ.

“ಪಾಕಿಸ್ತಾನದ ಎದುರು ಭಾರತ ಸೋತಾಗ ದೆಹಲಿಯಲ್ಲಿ ಪಟಾಕಿಗಳನ್ನು ಸುಡಲಾಯಿತು. ಆಗ ನಿಮ್ಮಗೆ ಯಾವುದೆ ಸಮಸ್ಯೆ ಇರಲಿಲ್ಲ. ನಿಮ್ಮ ಗಮನ ದೀಪಾವಳಿ ಮತ್ತು ಹೋಳಿಯ ಸಮಯದಲ್ಲಷ್ಟೇ ಬರುತ್ತದೆ. ಕೇಜ್ರಿವಾಲ್‌ ನಿಮ್ಮನ್ನು ಶೂಟ್ ಮಾಡಲಾಗುವುದು”  ಎಂದು ಬೆದರಿಕೆ ಹಾಕಿದ್ದಾನೆ.

ಜಬ್‌ ಪಾಕಿಸ್ತಾನ್‌ ಸೆ ಹಿಂದೂಸ್ತಾನ್‌ ಹರಾ ಥಾ, ತಬ್ ದಿಲ್ಲಿ ಮೆ ಪಟಾಕೆ ಚಲೇ ತೆ, ತಬ್ ತೇರಾ ಏಕ್‌ ಬಾಲ್‌ ಬಿ ನಾ ಉಕ್ಡಾ…ತೇರಾ ಗ್ಯಾನ್‌ ದಿವಾಲಿ ಔರ್‌ ಹೋಲಿ ಪರ್‌ ಹಿ ಬಾಹರ್‌ ಆತಾ ಹೆ. ಕೇಜ್ರಿವಾಲ್‌ ಪೀತಲ್‌ ಭರ್‌ ದೂಂಗಾ, ಪೀತಲ್‌

46 ನಿಮಿಷಗಳ ಈ ವಿಡಿಯೊವನ್ನು ಆತ ಶೀಘ್ರದಲ್ಲೇ ಡಿಲೀಟ್ ಮಾಡಿದ್ದಾನೆ. ವಿಡಿಯೊದಲ್ಲಿ ಹಿಂಸಾತ್ಮಕ ಲೈಂಗಿಕ ನಿಂದನೆಗಳು ಮತ್ತು ಮುಸ್ಲಿಮರಿಗೆ ಬೆದರಿಕೆಗಳನ್ನೂ ಹಾಕಲಾಗಿತ್ತು.

“ಯೇ ಕಟೀ ಲುಲ್ಲಿ ವಾಲಿ ಜಿತ್ನೆ ಭಿ ಆ ರಹೇ ಹೈ ನಾ, ಬೇಟಾ ಏಕ್ ಏಕ್ ಕರ್ಕೆ ಪೇಲ್ ದಿಯೆ ಜಾವೋಗೆ. ಜಾವೋ ತುಮ್ಹಾರಿ ಅಮ್ಮ ಬುಲಾ ರಹೀ ಹೈ ಅಪ್ನಿ ಅಮ್ಮಾ ಕೆ **** ****. ಅಪ್ನಿ ಬೆಹನ್ ಕಾ ರಿಷ್ಟ ಲೇಕರ್ ಆ ಜಾತೇ ಹೈಂ. ಶಾಹೀನ್ ಬಾಗ್ ಮೇ ಜಿತ್ನಾ ಭಿ ತುಮ್ಹಾರಿ ಮಾ ಬೆಹ್ನೋ ಕಾ ಧಂಧಾ ಕರ್ನಾ ಥಾ ಕರ್ ಚುಕೇ ಹೈ… ಸಾಲಿ ಜೈಲ್ ಜಾನೇ ಕೆ ಬಾದ್ ಭಿ ಪ್ರಗ್ನೆಂಟ್‌ ಹೋ ಗಯಿ. ತೊ ಕಾಟ್*** ತುಂ ನಿಕ್ಲೊ. ಮತ್ಲಾಬ್ ವೋ ಪ್ರಗ್ನೆಂಟ್‌ ಹೋ ಗಯಿ ಜಿಂಕಿ ಶಾದಿ ಭೀ ನಹೀ ಹುಯಿ” ಎಂದು ನಿಂದನೀಯವಾಗಿ ಮಾತನಾಡಿದ್ದಾನೆ ಎಂದು ದಿ ವೈರ್‌ ವರದಿ ಮಾಡಿದೆ. 

ಇದರ ನಂತರ ವಿಡಿಯೊದಲ್ಲಿ, ಸುರೇಶ್ ರಜಪೂತ್ ಮತ್ತು ರಾಹುಲ್ ಶರ್ಮಾ ಎಂಬವನ ಜೊತೆ ಸೇರಿ “ಯುಪಿ ಪೊಲೀಸರು ಹೇಗೆ ಮುಸ್ಲಿಂ ಮಹಿಳೆಯರಿಗೆ ಪಾಠ ಕಲಿಸಿದರು” ಎಂದು ವಿವರಿಸುತ್ತಾರೆ.

ಇದನ್ನೂ ಓದಿ: BJP ನಾಯಕ ಕಪಿಲ್ ಮಿಶ್ರಾ ಭಾಗವಹಿಸಿದ್ದ ಸಭೆಯಲ್ಲಿ ಮತ್ತೆ ‘ಗೋಲಿ ಮಾರೋ’ ಘೋಷಣೆ

ಇಡೀ ವೀಡಿಯೊದಲ್ಲಿ, ಮುಸ್ಲಿಂ ಪುರುಷರನ್ನು “ಪಿಂಪಕ್‌ಗಳು”, “ಪಂಕ್ಚರ್ ,ಮಕ್ಕಳು” ಮತ್ತು “ಜಿಹಾದಿಗಳು” ಎಂದು ಉಲ್ಲೇಖಿಸಲಾಗಿದೆ ಮತ್ತು ಲೈಂಗಿಕ ಹಿಂಸೆಯ ಮೂಲಕ ಬೆದರಿಕೆ ಹಾಕಲಾಗಿದೆ. ಇಷ್ಟೇ ಅಲ್ಲದೆ ಸುರೇಶ್‌ ರಾಜಪೂತ್‌ ತ್ರಿಪುರಾದಲ್ಲಿ ನಡೆದ ಮುಸ್ಲಿಂ ವಿರೋಧಿ ಹಿಂಸಾಚಾರವನ್ನು ಕೂಡಾ ಸಂಭ್ರಮಿಸಿದ್ದಾನೆ. “ನಿಜವಾದ ದೀಪಾವಳಿಯನ್ನು ತ್ರಿಪುರಾದಲ್ಲಿ ಆಚರಿಸಲಾಗಿದೆ. ದೀಪಾವಳಿ ಎಂದರೆ ಇದೇ. ತ್ರಿಪುರಾದಂತೆ ಎಲ್ಲಾ ಹಿಂದೂಗಳು ಎಚ್ಚೆತ್ತುಕೊಂಡರೆ, ನಿಮ್ಮ ಭವಿಷ್ಯ ಏನಾಗಬಹುದು ಎಂದು ಊಹಿಸಿ” ಎಂದು ಎಚ್ಚರಿಸಿದ್ದಾನೆ.

ಈ ವೀಡಿಯೊಗೆ ಪ್ರತಿಕ್ರಿಯಿಸಿದ ಜಾಮಿಯಾ ಮಿಲಿಯಾ ಇಸ್ಲಾಮಿಯಾದ ವಿದ್ಯಾರ್ಥಿನಿ, ಸಿಎಎ ವಿರೋಧಿ ಹೋರಾಟಗಾರ್ತಿ ಸಫೂರಾ ಜರ್ಗರ್, “ನಾನು ಆನ್‌ಲೈನ್‌ಗೆ ಬೆದರಿಕೆಗಳಿಗೆ ನಾನು ಬೆದರುವುದಿಲ್ಲ. ಆದರೆ ನನಗೆ ಕೋಪ ಉಂಟುಮಾಡುವುದು ಇಂತವರಿಗೆ ಶಿಕ್ಷೆ ಆಗುವುದಿಲ್ಲ ಎಂಬುವುದಾಗಿದೆ. ಭಾರತದಲ್ಲಿ ಮುಸ್ಲಿಂ ಪುರುಷರ ಹತ್ಯೆಗಳನ್ನು ಸಾಮಾನ್ಯಗೊಳಿಸಿದ ರೀತಿಯಲ್ಲಿಯೇ ಅವರು ಮುಸ್ಲಿಂ ಮಹಿಳೆಯರ ವಿರುದ್ಧದ ಹಿಂಸಾಚಾರವನ್ನು ಸಾಮಾನ್ಯಗೊಳಿಸಲು ಒಂದು ನೆಲೆಗಟ್ಟನ್ನು ರಚಿಸುತ್ತಿದ್ದಾರೆ ಎಂಬುದನ್ನು ನಾವು ಮುಖ್ಯವಾಗಿ ಗಮನಿಸಬೇಕು” ಎಂದು ಹೇಳಿದ್ದಾರೆ. 

ಸುದ್ದಿ ಮಾಧ್ಯಮ ಸುರೇಶ್‌ ರಜಪೂತ್‌ ವಿವಾದಾತ್ಮಕ ಧಾರ್ಮಿಕ ಗುರು ಯತಿ ನರಸಿಂಗಾನಂದ ಅವರ ಹಿಂಬಾಲಕ ಎಂದು ತನ್ನ ವರದಿಯಲ್ಲಿ ಹೇಳಿದೆ. ಯತಿ ನರಸಿಂಗಾನಂದ ಅವರ ಹಿಂಬಾಲಕರು ಹಲವಾರು ಜನರು ಇದೇ ರೀತಿಯ ಬೆದರಿಕೆಗಳನ್ನು ಹಾಕಿರುವುದನ್ನು ದಿ ವೈರ್‌ ಪಟ್ಟಿ ಮಾಡಿದೆ. ಅದನ್ನು ಇಲ್ಲಿ ಕ್ಲಿಕ್ ಮಾಡಿ ನೋಡಬಹುದು.

ಇದನ್ನೂ ಓದಿ: BJP ನಾಯಕನನ್ನು ವಿರೋಧಿಸುವವರ ಕಣ್ಣು ಕಿತ್ತು, ಕೈಗಳನ್ನು ಕತ್ತರಿಸಲಾಗುವುದು: ಹರಿಯಾಣ ಸಂಸದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...