Homeಅಂತರಾಷ್ಟ್ರೀಯಮಂಗಳ ಗ್ರಹದ ಮೊದಲ ಆಡಿಯೊ ಬಿಡುಗಡೆ ಮಾಡಿದ ನಾಸಾ!

ಮಂಗಳ ಗ್ರಹದ ಮೊದಲ ಆಡಿಯೊ ಬಿಡುಗಡೆ ಮಾಡಿದ ನಾಸಾ!

- Advertisement -
- Advertisement -

ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಸೋಮವಾರ ಮಂಗಳ ಗ್ರಹದ ಮೊದಲ ಆಡಿಯೊವನ್ನು ಬಿಡುಗಡೆ ಮಾಡಿದೆ. ಈ ಅತಿ ನಿಧಾನವಾದ ಗಾಳಿಯ ಬೀಸುವಿಕೆಯ ಆಡಿಯೊವನ್ನು ಬಾಹ್ಯಾಕಾಶ ನೌಕೆ ‘ಪರ್ಸೀವರನ್ಸ್’ ದಾಖಲಿಸಿ ಕಳುಹಿಸಿದೆ.

ನಾಸಾ ಇತ್ತೀಚೆಗೆ ಬಾಹ್ಯಕಾಶ ನೌಕೆಯ ಇಳಿಯುವಿಕೆಯ ಮೊದಲ ವೀಡಿಯೊವನ್ನು ಬಿಡುಗಡೆ ಮಾಡಿತ್ತು. ನೌಕೆಯು ಮಂಗಳ ಗ್ರಹದಲ್ಲಿ ಈ ಹಿಂದೆ ಜೀವಿಗಳಿದ್ದವೆ ಎಂದು ಅನ್ವೇಷಿಸುತ್ತದೆ.

ನೌಕೆಯು ಮಂಗಳ ಗ್ರಹದ ಮೇಲೆ ಇಳಿಯುವ ಸಮಯದಲ್ಲಿ ಮೈಕ್ರೋಫೋನ್‌ ಕಾರ್ಯನಿರ್ವಹಿಸಲಿಲ್ಲ ಎಂದು ನಾಸ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿತ್ತು. ಆದರೆ ಪ್ರಸ್ತುತ ಬಿಡುಗಡೆಗೊಳಿಸಿರುವ ಆಡಿಯೊ ಮಂಗಳ ಗ್ರಹಕ್ಕೆ ಇಳಿದ ನಂತರ ಸೆರೆಹಿಡಿದ ಧ್ವನಿಯಾಗಿದೆ.

ಇದನ್ನೂ ಓದಿ:  ನಾಸಾದಲ್ಲಿರುವ ಭಾರತೀಯರ ಸಂಖ್ಯೆ ಶೇ.58 ಅಲ್ಲ! ಅಲ್ಲಿರುವ ಏಶಿಯನ್ನರ ಸಂಖ್ಯೆಯೇ ಶೇ.8 ಮಾತ್ರ!

“10 ಸೆಕೆಂಡ್‌ಗಳಲ್ಲಿ ಕೇಳುತ್ತಿರುವ ಆಡಿಯೊ ಮಂಗಳ ಗ್ರಹದಲ್ಲಿ ಬೀಸುತ್ತಿರುವ ನಿಜವಾದಗಾಳಿಯ ಸದ್ದಾಗಿದೆ” ಎಂದು “ಪರ್ಸೀವರನ್ಸ್’’ ನ ಕ್ಯಾಮರ ಮತ್ತು ಮೈಕ್ರೋಫೋನ್ ವ್ಯವಸ್ಥೆಯ ಪ್ರಧಾನ ಇಂಜಿನಿಯರ್ ಡೇವ್ ಗ್ರುಯೆಲ್ ಹೇಳಿದ್ದಾರೆ.

ಇದನ್ನೂ ಓದಿ: ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ಗೆ ಒಡಿಶಾ ಶಾಲಾ ವಿದ್ಯಾರ್ಥಿಗಳ ತಂಡ!

ನವೆಂಬರ್‌ 18 2020 ರಂದು ಕೂಡಾ 60 ಸೆಕೆಂಡುಗಳ ಆಡಿಯೊವನ್ನು ನಾಸಾ ಬಿಡುಗಡೆ ಮಾಡಿತ್ತು. ಈ ಧ್ವನಿಯನ್ನು ಅಕ್ಟೋಬರ್ 19, 2020 ರಂದು ಮಂಗಳ ಗ್ರಹದ ಪ್ರಯಾಣದಲ್ಲಿದ್ದ ಪರ್ಸೆವೆರೆನ್ಸ್ ನೌಕೆಯ ಕ್ಯಾಮೆರಾ ಮತ್ತು ಮೈಕ್ರೊಫೋನ್ ಸಿಸ್ಟಮ್‌ನ ಹಾರಾಟದ ಚೆಕ್‌ಔಟ್ ಸಮಯದಲ್ಲಿ ದಾಖಲಿಸಲಾಗಿದೆ ಎಂದು ನಾಸ ತಿಳಿಸಿತ್ತು.

ನಾಸಾ ಇತ್ತೀಚೆಗೆ ಬಿಡುಗಡೆ ಮಾಡಿದ್ದ 3 ನಿಮಿಷ 25 ಸೆಕೆಂಡುಗಳ ವಿಡಿಯೊ ಸ್ಪಷ್ಟವಾಗಿದ್ದು ಬಾಹ್ಯಾಕಾಶ ನೌಕೆಯು ಮಂಗಳ ಗ್ರಹಕ್ಕೆ ಇಳಿಯುತ್ತಿರುವ ಮೈನವಿರೇಳಿಸುವ ದೃಶ್ಯ ತೋರಿಸುತ್ತದೆ.

ಸಾವಿರಾರು ಚಿತ್ರಗಳನ್ನು ಕಳುಹಿಸಿರುವ ನಾಸಾದ ಅತಿದೊಡ್ಡ ಮತ್ತು ಅತ್ಯಂತ ಸಮರ್ಥ ಉತ್ತಮ ಸ್ಥಿತಿಯ ಬಾಹ್ಯಾಕಾಶ ನೌಕೆ ಇದಾಗಿದೆ. ಇದು ಮುಂದಿನ ಎರಡು ವರ್ಷಗಳನ್ನು ಮಂಗಳ ಗ್ರಹದ ಒಣ ನದಿಯ ಮುಖಜ ಭೂಮಿಯಲ್ಲಿ ಕಳೆಯಲಿದ್ದು, ಅಲ್ಲಿನ  ಬಂಡೆಗಳನ್ನು ಕೊರೆದು 3-4 ಶತಕೋಟಿ ವರ್ಷಗಳ ಹಿಂದೆ ಅಲ್ಲಿ ಜೀವಿಗಳಿದ್ದವೆ ಎಂಬ ಪುರಾವೆಗಳನ್ನು ಅನ್ವೇಷಿಸಲಿದೆ.

ಇದನ್ನೂ ಓದಿ: ಮಂಗಳ ಗ್ರಹಕ್ಕೆ ಇಳಿದ ಬಾಹ್ಯಾಕಾಶ ನೌಕೆಯ ಮೈನವಿರೇಳಿಸುವ ವಿಡಿಯೋ ಬಿಡುಗಡೆ ಮಾಡಿದ ನಾಸಾ!

2024ರಲ್ಲಿ ಮೊದಲ ಬಾರಿಗೆ ಚಂದ್ರನ ಮೇಲೆ ಕಾಲಿಡಲಿರುವ ಮಹಿಳೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...