Homeಅಂತರಾಷ್ಟ್ರೀಯಮಂಗಳ ಗ್ರಹದ ಮೊದಲ ಆಡಿಯೊ ಬಿಡುಗಡೆ ಮಾಡಿದ ನಾಸಾ!

ಮಂಗಳ ಗ್ರಹದ ಮೊದಲ ಆಡಿಯೊ ಬಿಡುಗಡೆ ಮಾಡಿದ ನಾಸಾ!

- Advertisement -
- Advertisement -

ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಸೋಮವಾರ ಮಂಗಳ ಗ್ರಹದ ಮೊದಲ ಆಡಿಯೊವನ್ನು ಬಿಡುಗಡೆ ಮಾಡಿದೆ. ಈ ಅತಿ ನಿಧಾನವಾದ ಗಾಳಿಯ ಬೀಸುವಿಕೆಯ ಆಡಿಯೊವನ್ನು ಬಾಹ್ಯಾಕಾಶ ನೌಕೆ ‘ಪರ್ಸೀವರನ್ಸ್’ ದಾಖಲಿಸಿ ಕಳುಹಿಸಿದೆ.

ನಾಸಾ ಇತ್ತೀಚೆಗೆ ಬಾಹ್ಯಕಾಶ ನೌಕೆಯ ಇಳಿಯುವಿಕೆಯ ಮೊದಲ ವೀಡಿಯೊವನ್ನು ಬಿಡುಗಡೆ ಮಾಡಿತ್ತು. ನೌಕೆಯು ಮಂಗಳ ಗ್ರಹದಲ್ಲಿ ಈ ಹಿಂದೆ ಜೀವಿಗಳಿದ್ದವೆ ಎಂದು ಅನ್ವೇಷಿಸುತ್ತದೆ.

ನೌಕೆಯು ಮಂಗಳ ಗ್ರಹದ ಮೇಲೆ ಇಳಿಯುವ ಸಮಯದಲ್ಲಿ ಮೈಕ್ರೋಫೋನ್‌ ಕಾರ್ಯನಿರ್ವಹಿಸಲಿಲ್ಲ ಎಂದು ನಾಸ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿತ್ತು. ಆದರೆ ಪ್ರಸ್ತುತ ಬಿಡುಗಡೆಗೊಳಿಸಿರುವ ಆಡಿಯೊ ಮಂಗಳ ಗ್ರಹಕ್ಕೆ ಇಳಿದ ನಂತರ ಸೆರೆಹಿಡಿದ ಧ್ವನಿಯಾಗಿದೆ.

ಇದನ್ನೂ ಓದಿ:  ನಾಸಾದಲ್ಲಿರುವ ಭಾರತೀಯರ ಸಂಖ್ಯೆ ಶೇ.58 ಅಲ್ಲ! ಅಲ್ಲಿರುವ ಏಶಿಯನ್ನರ ಸಂಖ್ಯೆಯೇ ಶೇ.8 ಮಾತ್ರ!

“10 ಸೆಕೆಂಡ್‌ಗಳಲ್ಲಿ ಕೇಳುತ್ತಿರುವ ಆಡಿಯೊ ಮಂಗಳ ಗ್ರಹದಲ್ಲಿ ಬೀಸುತ್ತಿರುವ ನಿಜವಾದಗಾಳಿಯ ಸದ್ದಾಗಿದೆ” ಎಂದು “ಪರ್ಸೀವರನ್ಸ್’’ ನ ಕ್ಯಾಮರ ಮತ್ತು ಮೈಕ್ರೋಫೋನ್ ವ್ಯವಸ್ಥೆಯ ಪ್ರಧಾನ ಇಂಜಿನಿಯರ್ ಡೇವ್ ಗ್ರುಯೆಲ್ ಹೇಳಿದ್ದಾರೆ.

ಇದನ್ನೂ ಓದಿ: ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ಗೆ ಒಡಿಶಾ ಶಾಲಾ ವಿದ್ಯಾರ್ಥಿಗಳ ತಂಡ!

ನವೆಂಬರ್‌ 18 2020 ರಂದು ಕೂಡಾ 60 ಸೆಕೆಂಡುಗಳ ಆಡಿಯೊವನ್ನು ನಾಸಾ ಬಿಡುಗಡೆ ಮಾಡಿತ್ತು. ಈ ಧ್ವನಿಯನ್ನು ಅಕ್ಟೋಬರ್ 19, 2020 ರಂದು ಮಂಗಳ ಗ್ರಹದ ಪ್ರಯಾಣದಲ್ಲಿದ್ದ ಪರ್ಸೆವೆರೆನ್ಸ್ ನೌಕೆಯ ಕ್ಯಾಮೆರಾ ಮತ್ತು ಮೈಕ್ರೊಫೋನ್ ಸಿಸ್ಟಮ್‌ನ ಹಾರಾಟದ ಚೆಕ್‌ಔಟ್ ಸಮಯದಲ್ಲಿ ದಾಖಲಿಸಲಾಗಿದೆ ಎಂದು ನಾಸ ತಿಳಿಸಿತ್ತು.

ನಾಸಾ ಇತ್ತೀಚೆಗೆ ಬಿಡುಗಡೆ ಮಾಡಿದ್ದ 3 ನಿಮಿಷ 25 ಸೆಕೆಂಡುಗಳ ವಿಡಿಯೊ ಸ್ಪಷ್ಟವಾಗಿದ್ದು ಬಾಹ್ಯಾಕಾಶ ನೌಕೆಯು ಮಂಗಳ ಗ್ರಹಕ್ಕೆ ಇಳಿಯುತ್ತಿರುವ ಮೈನವಿರೇಳಿಸುವ ದೃಶ್ಯ ತೋರಿಸುತ್ತದೆ.

ಸಾವಿರಾರು ಚಿತ್ರಗಳನ್ನು ಕಳುಹಿಸಿರುವ ನಾಸಾದ ಅತಿದೊಡ್ಡ ಮತ್ತು ಅತ್ಯಂತ ಸಮರ್ಥ ಉತ್ತಮ ಸ್ಥಿತಿಯ ಬಾಹ್ಯಾಕಾಶ ನೌಕೆ ಇದಾಗಿದೆ. ಇದು ಮುಂದಿನ ಎರಡು ವರ್ಷಗಳನ್ನು ಮಂಗಳ ಗ್ರಹದ ಒಣ ನದಿಯ ಮುಖಜ ಭೂಮಿಯಲ್ಲಿ ಕಳೆಯಲಿದ್ದು, ಅಲ್ಲಿನ  ಬಂಡೆಗಳನ್ನು ಕೊರೆದು 3-4 ಶತಕೋಟಿ ವರ್ಷಗಳ ಹಿಂದೆ ಅಲ್ಲಿ ಜೀವಿಗಳಿದ್ದವೆ ಎಂಬ ಪುರಾವೆಗಳನ್ನು ಅನ್ವೇಷಿಸಲಿದೆ.

ಇದನ್ನೂ ಓದಿ: ಮಂಗಳ ಗ್ರಹಕ್ಕೆ ಇಳಿದ ಬಾಹ್ಯಾಕಾಶ ನೌಕೆಯ ಮೈನವಿರೇಳಿಸುವ ವಿಡಿಯೋ ಬಿಡುಗಡೆ ಮಾಡಿದ ನಾಸಾ!

2024ರಲ್ಲಿ ಮೊದಲ ಬಾರಿಗೆ ಚಂದ್ರನ ಮೇಲೆ ಕಾಲಿಡಲಿರುವ ಮಹಿಳೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...