Homeಅಂತರಾಷ್ಟ್ರೀಯಮಂಗಳ ಗ್ರಹದ ಮೊದಲ ಆಡಿಯೊ ಬಿಡುಗಡೆ ಮಾಡಿದ ನಾಸಾ!

ಮಂಗಳ ಗ್ರಹದ ಮೊದಲ ಆಡಿಯೊ ಬಿಡುಗಡೆ ಮಾಡಿದ ನಾಸಾ!

- Advertisement -
- Advertisement -

ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಸೋಮವಾರ ಮಂಗಳ ಗ್ರಹದ ಮೊದಲ ಆಡಿಯೊವನ್ನು ಬಿಡುಗಡೆ ಮಾಡಿದೆ. ಈ ಅತಿ ನಿಧಾನವಾದ ಗಾಳಿಯ ಬೀಸುವಿಕೆಯ ಆಡಿಯೊವನ್ನು ಬಾಹ್ಯಾಕಾಶ ನೌಕೆ ‘ಪರ್ಸೀವರನ್ಸ್’ ದಾಖಲಿಸಿ ಕಳುಹಿಸಿದೆ.

ನಾಸಾ ಇತ್ತೀಚೆಗೆ ಬಾಹ್ಯಕಾಶ ನೌಕೆಯ ಇಳಿಯುವಿಕೆಯ ಮೊದಲ ವೀಡಿಯೊವನ್ನು ಬಿಡುಗಡೆ ಮಾಡಿತ್ತು. ನೌಕೆಯು ಮಂಗಳ ಗ್ರಹದಲ್ಲಿ ಈ ಹಿಂದೆ ಜೀವಿಗಳಿದ್ದವೆ ಎಂದು ಅನ್ವೇಷಿಸುತ್ತದೆ.

ನೌಕೆಯು ಮಂಗಳ ಗ್ರಹದ ಮೇಲೆ ಇಳಿಯುವ ಸಮಯದಲ್ಲಿ ಮೈಕ್ರೋಫೋನ್‌ ಕಾರ್ಯನಿರ್ವಹಿಸಲಿಲ್ಲ ಎಂದು ನಾಸ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿತ್ತು. ಆದರೆ ಪ್ರಸ್ತುತ ಬಿಡುಗಡೆಗೊಳಿಸಿರುವ ಆಡಿಯೊ ಮಂಗಳ ಗ್ರಹಕ್ಕೆ ಇಳಿದ ನಂತರ ಸೆರೆಹಿಡಿದ ಧ್ವನಿಯಾಗಿದೆ.

ಇದನ್ನೂ ಓದಿ:  ನಾಸಾದಲ್ಲಿರುವ ಭಾರತೀಯರ ಸಂಖ್ಯೆ ಶೇ.58 ಅಲ್ಲ! ಅಲ್ಲಿರುವ ಏಶಿಯನ್ನರ ಸಂಖ್ಯೆಯೇ ಶೇ.8 ಮಾತ್ರ!

“10 ಸೆಕೆಂಡ್‌ಗಳಲ್ಲಿ ಕೇಳುತ್ತಿರುವ ಆಡಿಯೊ ಮಂಗಳ ಗ್ರಹದಲ್ಲಿ ಬೀಸುತ್ತಿರುವ ನಿಜವಾದಗಾಳಿಯ ಸದ್ದಾಗಿದೆ” ಎಂದು “ಪರ್ಸೀವರನ್ಸ್’’ ನ ಕ್ಯಾಮರ ಮತ್ತು ಮೈಕ್ರೋಫೋನ್ ವ್ಯವಸ್ಥೆಯ ಪ್ರಧಾನ ಇಂಜಿನಿಯರ್ ಡೇವ್ ಗ್ರುಯೆಲ್ ಹೇಳಿದ್ದಾರೆ.

ಇದನ್ನೂ ಓದಿ: ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ಗೆ ಒಡಿಶಾ ಶಾಲಾ ವಿದ್ಯಾರ್ಥಿಗಳ ತಂಡ!

ನವೆಂಬರ್‌ 18 2020 ರಂದು ಕೂಡಾ 60 ಸೆಕೆಂಡುಗಳ ಆಡಿಯೊವನ್ನು ನಾಸಾ ಬಿಡುಗಡೆ ಮಾಡಿತ್ತು. ಈ ಧ್ವನಿಯನ್ನು ಅಕ್ಟೋಬರ್ 19, 2020 ರಂದು ಮಂಗಳ ಗ್ರಹದ ಪ್ರಯಾಣದಲ್ಲಿದ್ದ ಪರ್ಸೆವೆರೆನ್ಸ್ ನೌಕೆಯ ಕ್ಯಾಮೆರಾ ಮತ್ತು ಮೈಕ್ರೊಫೋನ್ ಸಿಸ್ಟಮ್‌ನ ಹಾರಾಟದ ಚೆಕ್‌ಔಟ್ ಸಮಯದಲ್ಲಿ ದಾಖಲಿಸಲಾಗಿದೆ ಎಂದು ನಾಸ ತಿಳಿಸಿತ್ತು.

ನಾಸಾ ಇತ್ತೀಚೆಗೆ ಬಿಡುಗಡೆ ಮಾಡಿದ್ದ 3 ನಿಮಿಷ 25 ಸೆಕೆಂಡುಗಳ ವಿಡಿಯೊ ಸ್ಪಷ್ಟವಾಗಿದ್ದು ಬಾಹ್ಯಾಕಾಶ ನೌಕೆಯು ಮಂಗಳ ಗ್ರಹಕ್ಕೆ ಇಳಿಯುತ್ತಿರುವ ಮೈನವಿರೇಳಿಸುವ ದೃಶ್ಯ ತೋರಿಸುತ್ತದೆ.

ಸಾವಿರಾರು ಚಿತ್ರಗಳನ್ನು ಕಳುಹಿಸಿರುವ ನಾಸಾದ ಅತಿದೊಡ್ಡ ಮತ್ತು ಅತ್ಯಂತ ಸಮರ್ಥ ಉತ್ತಮ ಸ್ಥಿತಿಯ ಬಾಹ್ಯಾಕಾಶ ನೌಕೆ ಇದಾಗಿದೆ. ಇದು ಮುಂದಿನ ಎರಡು ವರ್ಷಗಳನ್ನು ಮಂಗಳ ಗ್ರಹದ ಒಣ ನದಿಯ ಮುಖಜ ಭೂಮಿಯಲ್ಲಿ ಕಳೆಯಲಿದ್ದು, ಅಲ್ಲಿನ  ಬಂಡೆಗಳನ್ನು ಕೊರೆದು 3-4 ಶತಕೋಟಿ ವರ್ಷಗಳ ಹಿಂದೆ ಅಲ್ಲಿ ಜೀವಿಗಳಿದ್ದವೆ ಎಂಬ ಪುರಾವೆಗಳನ್ನು ಅನ್ವೇಷಿಸಲಿದೆ.

ಇದನ್ನೂ ಓದಿ: ಮಂಗಳ ಗ್ರಹಕ್ಕೆ ಇಳಿದ ಬಾಹ್ಯಾಕಾಶ ನೌಕೆಯ ಮೈನವಿರೇಳಿಸುವ ವಿಡಿಯೋ ಬಿಡುಗಡೆ ಮಾಡಿದ ನಾಸಾ!

2024ರಲ್ಲಿ ಮೊದಲ ಬಾರಿಗೆ ಚಂದ್ರನ ಮೇಲೆ ಕಾಲಿಡಲಿರುವ ಮಹಿಳೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ: ಬುಡಕಟ್ಟು ವಿಶ್ವವಿದ್ಯಾಲಯ ಹಾಸ್ಟೆಲ್ ಒಳಗೆ ಅಸ್ಸಾಮಿ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ

ಮಧ್ಯಪ್ರದೇಶದ ಇಂದಿರಾ ಗಾಂಧಿ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯೊಳಗೆ ಐದು ಜನ ವಿದ್ಯಾರ್ಥಿಗಳ ತಂಡವು ಅಸ್ಸಾಮಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಗುಂಪು ಆತನಿಗೆ ಇಲ್ಲಿಯೇ ಸಾಯಬೇಕು ಎಂದು...

ಮಹಿಳೆಯರ ಜೊತೆ ಪುರುಷರಿಗೂ ಉಚಿತ ಬಸ್‌ ಪ್ರಯಾಣ, ಗ್ರಾಮೀಣರಿಗೆ 150 ಕೂಲಿ ದಿನ : ಮೊದಲ ಹಂತದ ಪ್ರಣಾಳಿಕೆ ಬಿಡುಗಡೆ ಮಾಡಿದ ಎಐಎಡಿಎಂಕೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ (ಜ.17) ಪಕ್ಷದ ಮೊದಲ ಹಂತದ ಪ್ರಣಾಳಿಕೆ (ಚುನಾವಣಾ ಭರವಸೆ) ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಂತೆ ಎಲ್ಲಾ ಪಡಿತರ...

ಛತ್ತೀಸ್‌ಗಢ| ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಸಾವು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗಿನ ಎನ್‌ಕೌಂಟರ್‌ನಲ್ಲಿ ಕನಿಷ್ಠ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ವಾಯುವ್ಯ ಪ್ರದೇಶದ ಅರಣ್ಯ ಬೆಟ್ಟಗಳಲ್ಲಿ ಶನಿವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆಯಿತು. ಹಿರಿಯ...

ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಶುಕ್ರವಾರ (ಜ.16) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ 100 ಕೋಟಿ ರೂ.ಗಳ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮಮತಾ...

ಕೋಮುವಾದ ಕಾರಣಕ್ಕೆ ಬಾಲಿವುಡ್‌ನಲ್ಲಿ ಅವಕಾಶ ಕಡಿಮೆ; ರೆಹಮಾನ್ ಹೇಳಿಕೆ ತಳ್ಳಿಹಾಕಿದ ಜಾವೇದ್ ಅಖ್ತರ್

ಯಶಸ್ವೀ ಸಂಗೀತಗಾರನಾಗಿ ಹಲವು ಕೊಡುಗೆ ನೀಡಿದ್ದರೂ ಕೆಲವರಿಗೆ ಹೊರಗಿನವನು ಎಂಬ ಭಾವನೆ ಹೋಗಿಲ್ಲ. ಕಳೆದ ಎಂಟು ವರ್ಷಗಳಲ್ಲಿ ಬಾಲಿವುಡ್‌ನ ಕದ ಮುಚ್ಚಿದೆ ಎಂಬ ಬಗ್ಗೆ ಎ.ಆರ್. ರೆಹಮಾನ್ ಹೇಳಿಕೆಯನ್ನು ಹಿರಿಯ ಗೀತೆ ರಚನೆಕಾರ...

14 ವರ್ಷದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ : 16 ವರ್ಷದ ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 14 ವರ್ಷದ ದಲಿತ ಬಾಲಕಿಯ ಭೀಕರ ಅತ್ಯಾಚಾರ, ಕೊಲೆ ನಡೆದಿದ್ದು, ಈ ಸಂಬಂಧ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ (ಜ.15) ಬೆಳಿಗ್ಗೆ ಶಾಲೆಗೆ ಹೋದ...

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳುತ್ತದೆ: ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿ ನಡೆಸಿದ್ದಾರೆ. ಪೌರತ್ವ ಕಾಯ್ದೆ ಮತ್ತು ಹೊಸ ವಕ್ಫ್ ಕಾಯ್ದೆಯಂತಹ ಅದರ ವಿವಿಧ ಕಾನೂನುಗಳು ಮತ್ತು ನೀತಿಗಳು...

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವು (ಎಐಎಂಐಎಂ) 114 ಸ್ಥಾನಗಳನ್ನು ಗೆದ್ದು, 2017 ರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಿಂತ ತನ್ನ ಸಂಖ್ಯೆಯನ್ನು ತೀವ್ರವಾಗಿ ಹೆಚ್ಚಿಸಿಕೊಂಡಿದೆ....

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅನೈತಿಕ ಪೊಲೀಸ್‌ಗಿರಿ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಬಂಧನ

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅವರ ಗೌಪ್ಯ ದಾಖಲೆಗಳನ್ನು ಪಡೆದು ಪೌರತ್ವ ಪರಿಶೀಲಿಸುವ ಮೂಲಕ ಅನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸರು ಶುಕ್ರವಾರ (ಜ.16) ತಡರಾತ್ರಿ ಬಂಧಿಸಿದ್ದಾರೆ...

ಬಳ್ಳಾರಿ| ಬಂಡಿಹಟ್ಟಿ-ದಾನಪ್ಪ ಬೀದಿ ಬಡರೈತರ ಮೇಲೆ ದೌರ್ಜನ್ಯ; ಪ್ರತಾಪರೆಡ್ಡಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಬಳ್ಳಾರಿ ಜಿಲ್ಲೆಯ ಬಂಡಿಹಟ್ಟಿ-ದಾನಪ್ಪ ಬೀದಿಯ ಬಡರೈತರ ಮೇಲೆ ದೌರ್ಜನ್ಯ ಎಸಗುತ್ತಿರುವ ಎನ್‌.ಪ್ರತಾಪ ರೆಡ್ಡಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು 'ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ' ಮುಖಂಡರು ಆಗ್ರಹಿಸಿದರು....