Homeಮುಖಪುಟಮಂಗಳ ಗ್ರಹಕ್ಕೆ ಇಳಿದ ಬಾಹ್ಯಾಕಾಶ ನೌಕೆಯ ಮೈನವಿರೇಳಿಸುವ ವಿಡಿಯೋ ಬಿಡುಗಡೆ ಮಾಡಿದ ನಾಸಾ!

ಮಂಗಳ ಗ್ರಹಕ್ಕೆ ಇಳಿದ ಬಾಹ್ಯಾಕಾಶ ನೌಕೆಯ ಮೈನವಿರೇಳಿಸುವ ವಿಡಿಯೋ ಬಿಡುಗಡೆ ಮಾಡಿದ ನಾಸಾ!

- Advertisement -
- Advertisement -

ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಸೋಮವಾರದಂದು ಮಂಗಳ ಗ್ರಹದಲ್ಲಿ ತಮ್ಮ ಬಾಹ್ಯಾಕಾಶ ನೌಕೆ ಇಳಿಯುವ ಮೊದಲ ಉತ್ತಮ-ಗುಣಮಟ್ಟದ ವೀಡಿಯೊವನ್ನು ಬಿಡುಗಡೆ ಮಾಡಿದೆ. ಮೂರು ನಿಮಿಷಗಳ ಈ ವಿಡಿಯೋದಲ್ಲಿ ನೌಕೆಯು ಬಿಳಿ-ಕಿತ್ತಳೆ ಬಣ್ಣದ ಪ್ಯಾರಾಚೂಟ್ ಸಹಾಯದಲ್ಲಿ ಇಳಿಯುತ್ತಿರುವುದು ಮತ್ತು ಇಳಿಯುತ್ತಿದ್ದಂತೆ ಮಂಗಳ ಗ್ರಹದ ಮೇಲ್ಮೈಯಲ್ಲಿನ ದೂಳಿನ ದೃಶ್ಯವನ್ನು ಕೂಡಾ ತೋರಿಸುತ್ತದೆ.

ದೃಶ್ಯವು ತುಂಬಾ ಚೆನ್ನಾಗಿದ್ದು, ನಾವು ಉಸಿರು ಬಿಗಿ ಹಿಡಿದು ನೋಡುತ್ತಾ, ನೌಕೆಯಲ್ಲಿ ನಾವೆ ಸವಾರಿ ಮಾಡುತ್ತಿದ್ದೇವೆ ಎಂಬ ಭಾವನೆಯಲ್ಲಿದ್ದೆವು ಎಂದು ನೌಕೆ ಉಡಾವಣಾ ತಂಡ ಹೇಳಿದೆ.

“ಅದು ಮೈನವಿರೇಳಿಸುವ ಅದ್ಭುತ ದೃಶ್ಯವಾಗಿತ್ತು” ಎಂದು ನೌಕೆಯ ಕ್ಯಾಮೆರಾ ತಂಡದ ಮುಖ್ಯಸ್ಥ ಡೇವ್ ಗ್ರುಯೆಲ್ ಹೇಳಿದ್ದಾರೆ.

ಇದನ್ನೂ ಓದಿ: ಹೊಸ ವರುಷದ ಸಂಕ್ರಮಣ; ಗವಿ ಗಂಗಾಧರೇಶ್ವರ ದೇವಸ್ಥಾನದ ಸೂರ್ಯ ಮಜ್ಜನದ ಹಿಂದಿನ ವಿಜ್ಞಾನ ಗೊತ್ತೆ?

ಪರ್ಸೆವೆರೆನ್ಸ್ ರೋವರ್ ಬಾಹ್ಯಾಕಾಶ ನೌಕೆಯು ಮಂಗಳ ಗ್ರಹದ ಮೇಲೆ ಕಳೆದ ಗುರುವಾರ ಗ್ರಹದ ಜೆಜೆರೊ ಕ್ರೇಟರ್ನ ಪುರಾತನ ನದಿ ಮುಖಜ ಭೂಮಿ ಬಳಿ ಇಳಿಯಿತು. ಉಡಾವಣ ತಂಡವು ಸುದ್ದಿಗೋಷ್ಠಿಯಲ್ಲಿ ಈ ವೀಡಿಯೊವನ್ನು ಹಂಚಿಕೊಂಡಿದೆ.

“ಈ ವೀಡಿಯೊಗಳು ಮತ್ತು ಈ ಚಿತ್ರಣಗಳು ನಮ್ಮ ಕನಸುಗಳಾಗಿದೆ” ಎಂದು ಲ್ಯಾಂಡಿಂಗ್ ತಂಡದ ಉಸ್ತುವಾರಿ ವಹಿಸಿಕೊಂಡಿದ್ದ ಅಲ್ ಚೆನ್ ಹೇಳಿದ್ದಾರೆ.

ಆರು ಕ್ಯಾಮೆರಾಗಳನ್ನು ಪ್ರವೇಶ, ಇಳಿಯುವಿಕೆ ಮತ್ತು ಲ್ಯಾಂಡಿಂಗ್‌ಗೆ ಮೀಸಲಿಡಲಾಗಿತ್ತು, ಇವುಗಳ ಮೂಲಕ ವಿಭಿನ್ನ ದೃಷ್ಟಿಕೋನಗಳಿಂದ ಮೇಲಕ್ಕೆ ಮತ್ತು ಕೆಳಕ್ಕೆ ನೋಡಲಾಯಿತು. ಇವುಗಳಲ್ಲಿ ಒಂದು ಕ್ಯಾಮೆರಾ ಹೊರತುಪಡಿಸಿ ಎಲ್ಲವೂ ಕೆಲಸ ಮಾಡಿದೆ. ಲ್ಯಾಂಡಿಂಗ್‌ಗಾಗಿ ಆನ್ ಮಾಡಿದ ಏಕೈಕ ಮೈಕ್ರೊಫೋನ್ ವಿಫಲವಾಗಿತ್ತಾದರೂ, ನೌಕೆಯು ಇಳಿದ ನಂತರ ನಾಸಾಗೆ ಕೆಲವು ಧ್ವನಿ ತುಣುಕುಗಳು ಸಿಕ್ಕಿದೆ.

ಸಾವಿರಾರು ಚಿತ್ರಗಳನ್ನು ಕಳುಹಿಸಿರುವ ನಾಸಾದ ಅತಿದೊಡ್ಡ ಮತ್ತು ಅತ್ಯಂತ ಸಮರ್ಥ ಉತ್ತಮ ಸ್ಥಿತಿಯ ಬಾಹ್ಯಾಕಾಶ ನೌಕೆ ಇದಾಗಿದೆ. ಇದು ಮುಂದಿನ ಎರಡು ವರ್ಷಗಳನ್ನು ಮಂಗಳ ಗ್ರಹದ ಒಣ ನದಿಯ ಮುಖಜ ಭೂಮಿಯಲ್ಲಿ ಕಳೆಯಲಿದ್ದು, ಅಲ್ಲಿನ  ಬಂಡೆಗಳನ್ನು ಕೊರೆದು 3-4 ಶತಕೋಟಿ ವರ್ಷಗಳ ಹಿಂದೆ ಅಲ್ಲಿ ಜೀವಿಗಳಿದ್ದವೆ ಎಂಬ ಪುರಾವೆಗಳನ್ನು ಅನ್ವೇಷಿಸಲಿದೆ.

ಇದನ್ನೂ ಓದಿ: ಹೊಸ ವರುಷದ ಆವಿಷ್ಕಾರಗಳ ನಿರೀಕ್ಷೆಯಲ್ಲಿ, ಹಳೆ ವರುಷದ ವಿಜ್ಞಾನ ಕಸುವಿನ ನೆನಪುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...