Homeಮುಖಪುಟಮಂಗಳ ಗ್ರಹಕ್ಕೆ ಇಳಿದ ಬಾಹ್ಯಾಕಾಶ ನೌಕೆಯ ಮೈನವಿರೇಳಿಸುವ ವಿಡಿಯೋ ಬಿಡುಗಡೆ ಮಾಡಿದ ನಾಸಾ!

ಮಂಗಳ ಗ್ರಹಕ್ಕೆ ಇಳಿದ ಬಾಹ್ಯಾಕಾಶ ನೌಕೆಯ ಮೈನವಿರೇಳಿಸುವ ವಿಡಿಯೋ ಬಿಡುಗಡೆ ಮಾಡಿದ ನಾಸಾ!

- Advertisement -
- Advertisement -

ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಸೋಮವಾರದಂದು ಮಂಗಳ ಗ್ರಹದಲ್ಲಿ ತಮ್ಮ ಬಾಹ್ಯಾಕಾಶ ನೌಕೆ ಇಳಿಯುವ ಮೊದಲ ಉತ್ತಮ-ಗುಣಮಟ್ಟದ ವೀಡಿಯೊವನ್ನು ಬಿಡುಗಡೆ ಮಾಡಿದೆ. ಮೂರು ನಿಮಿಷಗಳ ಈ ವಿಡಿಯೋದಲ್ಲಿ ನೌಕೆಯು ಬಿಳಿ-ಕಿತ್ತಳೆ ಬಣ್ಣದ ಪ್ಯಾರಾಚೂಟ್ ಸಹಾಯದಲ್ಲಿ ಇಳಿಯುತ್ತಿರುವುದು ಮತ್ತು ಇಳಿಯುತ್ತಿದ್ದಂತೆ ಮಂಗಳ ಗ್ರಹದ ಮೇಲ್ಮೈಯಲ್ಲಿನ ದೂಳಿನ ದೃಶ್ಯವನ್ನು ಕೂಡಾ ತೋರಿಸುತ್ತದೆ.

ದೃಶ್ಯವು ತುಂಬಾ ಚೆನ್ನಾಗಿದ್ದು, ನಾವು ಉಸಿರು ಬಿಗಿ ಹಿಡಿದು ನೋಡುತ್ತಾ, ನೌಕೆಯಲ್ಲಿ ನಾವೆ ಸವಾರಿ ಮಾಡುತ್ತಿದ್ದೇವೆ ಎಂಬ ಭಾವನೆಯಲ್ಲಿದ್ದೆವು ಎಂದು ನೌಕೆ ಉಡಾವಣಾ ತಂಡ ಹೇಳಿದೆ.

“ಅದು ಮೈನವಿರೇಳಿಸುವ ಅದ್ಭುತ ದೃಶ್ಯವಾಗಿತ್ತು” ಎಂದು ನೌಕೆಯ ಕ್ಯಾಮೆರಾ ತಂಡದ ಮುಖ್ಯಸ್ಥ ಡೇವ್ ಗ್ರುಯೆಲ್ ಹೇಳಿದ್ದಾರೆ.

ಇದನ್ನೂ ಓದಿ: ಹೊಸ ವರುಷದ ಸಂಕ್ರಮಣ; ಗವಿ ಗಂಗಾಧರೇಶ್ವರ ದೇವಸ್ಥಾನದ ಸೂರ್ಯ ಮಜ್ಜನದ ಹಿಂದಿನ ವಿಜ್ಞಾನ ಗೊತ್ತೆ?

ಪರ್ಸೆವೆರೆನ್ಸ್ ರೋವರ್ ಬಾಹ್ಯಾಕಾಶ ನೌಕೆಯು ಮಂಗಳ ಗ್ರಹದ ಮೇಲೆ ಕಳೆದ ಗುರುವಾರ ಗ್ರಹದ ಜೆಜೆರೊ ಕ್ರೇಟರ್ನ ಪುರಾತನ ನದಿ ಮುಖಜ ಭೂಮಿ ಬಳಿ ಇಳಿಯಿತು. ಉಡಾವಣ ತಂಡವು ಸುದ್ದಿಗೋಷ್ಠಿಯಲ್ಲಿ ಈ ವೀಡಿಯೊವನ್ನು ಹಂಚಿಕೊಂಡಿದೆ.

“ಈ ವೀಡಿಯೊಗಳು ಮತ್ತು ಈ ಚಿತ್ರಣಗಳು ನಮ್ಮ ಕನಸುಗಳಾಗಿದೆ” ಎಂದು ಲ್ಯಾಂಡಿಂಗ್ ತಂಡದ ಉಸ್ತುವಾರಿ ವಹಿಸಿಕೊಂಡಿದ್ದ ಅಲ್ ಚೆನ್ ಹೇಳಿದ್ದಾರೆ.

ಆರು ಕ್ಯಾಮೆರಾಗಳನ್ನು ಪ್ರವೇಶ, ಇಳಿಯುವಿಕೆ ಮತ್ತು ಲ್ಯಾಂಡಿಂಗ್‌ಗೆ ಮೀಸಲಿಡಲಾಗಿತ್ತು, ಇವುಗಳ ಮೂಲಕ ವಿಭಿನ್ನ ದೃಷ್ಟಿಕೋನಗಳಿಂದ ಮೇಲಕ್ಕೆ ಮತ್ತು ಕೆಳಕ್ಕೆ ನೋಡಲಾಯಿತು. ಇವುಗಳಲ್ಲಿ ಒಂದು ಕ್ಯಾಮೆರಾ ಹೊರತುಪಡಿಸಿ ಎಲ್ಲವೂ ಕೆಲಸ ಮಾಡಿದೆ. ಲ್ಯಾಂಡಿಂಗ್‌ಗಾಗಿ ಆನ್ ಮಾಡಿದ ಏಕೈಕ ಮೈಕ್ರೊಫೋನ್ ವಿಫಲವಾಗಿತ್ತಾದರೂ, ನೌಕೆಯು ಇಳಿದ ನಂತರ ನಾಸಾಗೆ ಕೆಲವು ಧ್ವನಿ ತುಣುಕುಗಳು ಸಿಕ್ಕಿದೆ.

ಸಾವಿರಾರು ಚಿತ್ರಗಳನ್ನು ಕಳುಹಿಸಿರುವ ನಾಸಾದ ಅತಿದೊಡ್ಡ ಮತ್ತು ಅತ್ಯಂತ ಸಮರ್ಥ ಉತ್ತಮ ಸ್ಥಿತಿಯ ಬಾಹ್ಯಾಕಾಶ ನೌಕೆ ಇದಾಗಿದೆ. ಇದು ಮುಂದಿನ ಎರಡು ವರ್ಷಗಳನ್ನು ಮಂಗಳ ಗ್ರಹದ ಒಣ ನದಿಯ ಮುಖಜ ಭೂಮಿಯಲ್ಲಿ ಕಳೆಯಲಿದ್ದು, ಅಲ್ಲಿನ  ಬಂಡೆಗಳನ್ನು ಕೊರೆದು 3-4 ಶತಕೋಟಿ ವರ್ಷಗಳ ಹಿಂದೆ ಅಲ್ಲಿ ಜೀವಿಗಳಿದ್ದವೆ ಎಂಬ ಪುರಾವೆಗಳನ್ನು ಅನ್ವೇಷಿಸಲಿದೆ.

ಇದನ್ನೂ ಓದಿ: ಹೊಸ ವರುಷದ ಆವಿಷ್ಕಾರಗಳ ನಿರೀಕ್ಷೆಯಲ್ಲಿ, ಹಳೆ ವರುಷದ ವಿಜ್ಞಾನ ಕಸುವಿನ ನೆನಪುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...