Homeಮುಖಪುಟಮಂಗಳ ಗ್ರಹಕ್ಕೆ ಇಳಿದ ಬಾಹ್ಯಾಕಾಶ ನೌಕೆಯ ಮೈನವಿರೇಳಿಸುವ ವಿಡಿಯೋ ಬಿಡುಗಡೆ ಮಾಡಿದ ನಾಸಾ!

ಮಂಗಳ ಗ್ರಹಕ್ಕೆ ಇಳಿದ ಬಾಹ್ಯಾಕಾಶ ನೌಕೆಯ ಮೈನವಿರೇಳಿಸುವ ವಿಡಿಯೋ ಬಿಡುಗಡೆ ಮಾಡಿದ ನಾಸಾ!

- Advertisement -
- Advertisement -

ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಸೋಮವಾರದಂದು ಮಂಗಳ ಗ್ರಹದಲ್ಲಿ ತಮ್ಮ ಬಾಹ್ಯಾಕಾಶ ನೌಕೆ ಇಳಿಯುವ ಮೊದಲ ಉತ್ತಮ-ಗುಣಮಟ್ಟದ ವೀಡಿಯೊವನ್ನು ಬಿಡುಗಡೆ ಮಾಡಿದೆ. ಮೂರು ನಿಮಿಷಗಳ ಈ ವಿಡಿಯೋದಲ್ಲಿ ನೌಕೆಯು ಬಿಳಿ-ಕಿತ್ತಳೆ ಬಣ್ಣದ ಪ್ಯಾರಾಚೂಟ್ ಸಹಾಯದಲ್ಲಿ ಇಳಿಯುತ್ತಿರುವುದು ಮತ್ತು ಇಳಿಯುತ್ತಿದ್ದಂತೆ ಮಂಗಳ ಗ್ರಹದ ಮೇಲ್ಮೈಯಲ್ಲಿನ ದೂಳಿನ ದೃಶ್ಯವನ್ನು ಕೂಡಾ ತೋರಿಸುತ್ತದೆ.

ದೃಶ್ಯವು ತುಂಬಾ ಚೆನ್ನಾಗಿದ್ದು, ನಾವು ಉಸಿರು ಬಿಗಿ ಹಿಡಿದು ನೋಡುತ್ತಾ, ನೌಕೆಯಲ್ಲಿ ನಾವೆ ಸವಾರಿ ಮಾಡುತ್ತಿದ್ದೇವೆ ಎಂಬ ಭಾವನೆಯಲ್ಲಿದ್ದೆವು ಎಂದು ನೌಕೆ ಉಡಾವಣಾ ತಂಡ ಹೇಳಿದೆ.

“ಅದು ಮೈನವಿರೇಳಿಸುವ ಅದ್ಭುತ ದೃಶ್ಯವಾಗಿತ್ತು” ಎಂದು ನೌಕೆಯ ಕ್ಯಾಮೆರಾ ತಂಡದ ಮುಖ್ಯಸ್ಥ ಡೇವ್ ಗ್ರುಯೆಲ್ ಹೇಳಿದ್ದಾರೆ.

ಇದನ್ನೂ ಓದಿ: ಹೊಸ ವರುಷದ ಸಂಕ್ರಮಣ; ಗವಿ ಗಂಗಾಧರೇಶ್ವರ ದೇವಸ್ಥಾನದ ಸೂರ್ಯ ಮಜ್ಜನದ ಹಿಂದಿನ ವಿಜ್ಞಾನ ಗೊತ್ತೆ?

ಪರ್ಸೆವೆರೆನ್ಸ್ ರೋವರ್ ಬಾಹ್ಯಾಕಾಶ ನೌಕೆಯು ಮಂಗಳ ಗ್ರಹದ ಮೇಲೆ ಕಳೆದ ಗುರುವಾರ ಗ್ರಹದ ಜೆಜೆರೊ ಕ್ರೇಟರ್ನ ಪುರಾತನ ನದಿ ಮುಖಜ ಭೂಮಿ ಬಳಿ ಇಳಿಯಿತು. ಉಡಾವಣ ತಂಡವು ಸುದ್ದಿಗೋಷ್ಠಿಯಲ್ಲಿ ಈ ವೀಡಿಯೊವನ್ನು ಹಂಚಿಕೊಂಡಿದೆ.

“ಈ ವೀಡಿಯೊಗಳು ಮತ್ತು ಈ ಚಿತ್ರಣಗಳು ನಮ್ಮ ಕನಸುಗಳಾಗಿದೆ” ಎಂದು ಲ್ಯಾಂಡಿಂಗ್ ತಂಡದ ಉಸ್ತುವಾರಿ ವಹಿಸಿಕೊಂಡಿದ್ದ ಅಲ್ ಚೆನ್ ಹೇಳಿದ್ದಾರೆ.

ಆರು ಕ್ಯಾಮೆರಾಗಳನ್ನು ಪ್ರವೇಶ, ಇಳಿಯುವಿಕೆ ಮತ್ತು ಲ್ಯಾಂಡಿಂಗ್‌ಗೆ ಮೀಸಲಿಡಲಾಗಿತ್ತು, ಇವುಗಳ ಮೂಲಕ ವಿಭಿನ್ನ ದೃಷ್ಟಿಕೋನಗಳಿಂದ ಮೇಲಕ್ಕೆ ಮತ್ತು ಕೆಳಕ್ಕೆ ನೋಡಲಾಯಿತು. ಇವುಗಳಲ್ಲಿ ಒಂದು ಕ್ಯಾಮೆರಾ ಹೊರತುಪಡಿಸಿ ಎಲ್ಲವೂ ಕೆಲಸ ಮಾಡಿದೆ. ಲ್ಯಾಂಡಿಂಗ್‌ಗಾಗಿ ಆನ್ ಮಾಡಿದ ಏಕೈಕ ಮೈಕ್ರೊಫೋನ್ ವಿಫಲವಾಗಿತ್ತಾದರೂ, ನೌಕೆಯು ಇಳಿದ ನಂತರ ನಾಸಾಗೆ ಕೆಲವು ಧ್ವನಿ ತುಣುಕುಗಳು ಸಿಕ್ಕಿದೆ.

ಸಾವಿರಾರು ಚಿತ್ರಗಳನ್ನು ಕಳುಹಿಸಿರುವ ನಾಸಾದ ಅತಿದೊಡ್ಡ ಮತ್ತು ಅತ್ಯಂತ ಸಮರ್ಥ ಉತ್ತಮ ಸ್ಥಿತಿಯ ಬಾಹ್ಯಾಕಾಶ ನೌಕೆ ಇದಾಗಿದೆ. ಇದು ಮುಂದಿನ ಎರಡು ವರ್ಷಗಳನ್ನು ಮಂಗಳ ಗ್ರಹದ ಒಣ ನದಿಯ ಮುಖಜ ಭೂಮಿಯಲ್ಲಿ ಕಳೆಯಲಿದ್ದು, ಅಲ್ಲಿನ  ಬಂಡೆಗಳನ್ನು ಕೊರೆದು 3-4 ಶತಕೋಟಿ ವರ್ಷಗಳ ಹಿಂದೆ ಅಲ್ಲಿ ಜೀವಿಗಳಿದ್ದವೆ ಎಂಬ ಪುರಾವೆಗಳನ್ನು ಅನ್ವೇಷಿಸಲಿದೆ.

ಇದನ್ನೂ ಓದಿ: ಹೊಸ ವರುಷದ ಆವಿಷ್ಕಾರಗಳ ನಿರೀಕ್ಷೆಯಲ್ಲಿ, ಹಳೆ ವರುಷದ ವಿಜ್ಞಾನ ಕಸುವಿನ ನೆನಪುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...