Homeಅಂತರಾಷ್ಟ್ರೀಯನಾಸಾದಲ್ಲಿರುವ ಭಾರತೀಯರ ಸಂಖ್ಯೆ ಶೇ.58 ಅಲ್ಲ! ಅಲ್ಲಿರುವ ಏಶಿಯನ್ನರ ಸಂಖ್ಯೆಯೇ ಶೇ.8 ಮಾತ್ರ!

ನಾಸಾದಲ್ಲಿರುವ ಭಾರತೀಯರ ಸಂಖ್ಯೆ ಶೇ.58 ಅಲ್ಲ! ಅಲ್ಲಿರುವ ಏಶಿಯನ್ನರ ಸಂಖ್ಯೆಯೇ ಶೇ.8 ಮಾತ್ರ!

- Advertisement -
- Advertisement -

ಮಿಥ್ಯ: ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ದಲ್ಲಿ ಶೆ.58% ರಷ್ಟು ಭಾರತೀಯರಿದ್ದಾರೆ…
ಹೀಗೊಂದು ಅಂಕಿ-ಅಂಶ ಕಳೆದ ವಾರದಿಂದ ಹರಿದಾಡುತ್ತಿದೆ. ಭಾರತ ಮುಂದಿನ ಸೂಪರ್ ಪವರ್ ಎಂದು ಭ್ರಮೆ ಹೊತ್ತಿರುವ ಕೆಲವು ಭಕ್ತರು ಇದನ್ನು ಸಿಕ್ಕಾಪಟ್ಟೆ ಪ್ರಚಾರ ಮಾಡುತ್ತಿದ್ದಾರೆ. ಇದನ್ನು ಸತ್ಯ ಎಂದು ನಂಬಿದ ಸಾವಿರಾರು ಜನ, ಸುಳ್ಳು ಎಂದು ಗೊತ್ತಿರುವ ಕೆಲವು ವೇಷಭಕ್ತರು ಫೇಸ್‍ಬುಕ್, ವ್ಯಾಟ್ಸಾಪ್‍ಗಳಲ್ಲಿ ಸಾಕಷ್ಟು ಪ್ರಚಾರ ಮಾಡುತ್ತಿದ್ದಾರೆ.

ಕಳೆದ ವಾರ 2030ಕ್ಕೆ ಚಂದ್ರನಲ್ಲಿ ಬಾಹ್ಯಾಕಾಶ ನಿಲ್ದಾಣ ಸಿದ್ಧ ಎಂದು ಇಸ್ರೋ ಮುಖ್ಯಸ್ಥ ಶಿವನ್ ಘೋಷಿಸಿದಾಗ ಬಹುಪಾಲು ಟಿವಿ ಪರದೆಗಳ ಮೇಲೆ ಚಂದ್ರಯಾನಕ್ಕೆ ಸಂಬಂಧಿಸಿದ ಅಥವಾ ಇಸ್ರೋದ ಫೋಟೊ ಪಕ್ಕ ಈ ದೇಶದ ಪ್ರಧಾನಿ ನರೇಂದ್ರ ಮೋದಿ ಫೋಟೊವನ್ನು ತಗುಲಿಸಲಾಗಿತ್ತು. ಮೋದಿ ಈ ಘೋಷಣೆಯನ್ನೂ ಮಾಡಿಲ್ಲ, ಇಸ್ರೋ ತನ್ನ ಕಾರ್ಯ ಚಟುವಟಿಕೆಯ ಬಗ್ಗೆ ಎಂದಿನಂತೆ ಮಾಹಿತಿ ನೀಡಿದೆ. ಚಾನೆಲ್‍ಗಳ ಈ ಹುಚ್ಚಾಟವೇ ಸಾಮಾಜಿಕ ಜಾಲತಾಣಗಳಲ್ಲಿ ಇನ್ನಷ್ಟು ಹರಿದು ಬಂತು. ಮೋದಿ ಕಾರಣದಿಂದಾಗಿಯೇ ಇದೆಲ್ಲ ಆಗುತ್ತಿದೆ ಎಂಬ ಭಾವವನ್ನು ಬಿತ್ತುವ ಯತ್ನವದು.

ಯಾವುದೇ ಸಂಸ್ಥೆ ಸಾಧನೆ ಮಾಡಿದಾಗ ಅದರ ಕ್ರೆಡಿಟ್ ಆ ಸರ್ಕಾರ, ಮತ್ತು ಹಿಂದೆ ಆ ಯೋಜನೆಗೆ ನೆರವು ನೀಡಿದ ಸರ್ಕಾರಗಳಿಗೂ ಹೋಗುತ್ತದೆ. ಅದಕ್ಕೂ ಮೊದಲು ಆ ಸಂಸ್ಥೆಯ ನೌಕರರಿಗೆ ಸಲ್ಲಬೇಕು. ಆದರೆ ಇಲ್ಲಿ ಬಾಲಾಕೋಟ್ ದಾಳಿಯನ್ನು ಮೋದಿಯೇ ಆಯೋಜಿಸಿದರು ಎಂಬರ್ಥದಲ್ಲಿ ಫೇಕು ಸುದ್ದಿ ಹರಡಲಾಗಿತು. ಕನ್ನಡದ ಕೆಲವು ದಿನಪತ್ರಿಕೆಗಳು ದೇಶದ ಸೇನೆಯನ್ನು ಮೋದಿ ಸೇನೆ ಎಂದೆಲ್ಲ ಬರೆದವು.

ಇವತ್ತಿಗೂ ಭಾರತದ ಸರ್ಕಾರಿ ಮತ್ತು ಖಾಸಗಿ ಕಂಪನಿಗಳಲ್ಲಿ ಇರುವ ಬಹುಪಾಲು ಯುವ ಮತ್ತು ಮಧ್ಯಮವರ್ಗಗಳ ಇಂಜನಿಯರ್‍ಗಳು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ (ನ್ಯಾಷನಲ್ ಏರೊಸ್ಪೇಸ್ ಮತ್ತು ಸ್ಪೇಸ್ ಅಡ್ಮಿನಿಷ್ಟ್ರೇಷನ್)ದಲ್ಲಿ ‘ಭಾರತೀಯರೇ ಅಧಿಕ’ ಎಂದು ಸುದ್ದಿ ಹಬ್ಬಿಸುತಿದ್ದಾರೆ. ಈ ವಾರ ಹರಿದಾಡುತ್ತಿರುವ ಸುಳ್ ಸುದ್ದಿಗಳಲ್ಲಿ ನಾಸಾದಲ್ಲಿ ಶೇ. 58% ರಷ್ಟು ಭಾರತೀಯರೇ ತುಂಬಿದ್ದಾರಂತೆ. ಇಲ್ಲಿ ಇಸ್ರೋ ಪ್ರಕಟಿಸಿದ ತನ್ನ ಮುಂದಿನ ಯೋಜನೆಯ ಪಕ್ಕ ಮೋದಿ ಫೋಟೊ ಹಾಕುವ ಸಂದರ್ಭದಲ್ಲಿಯೇ ಈ ಸುಳ್ ಸುದ್ದಿ ಓಡಾಡುತ್ತಿದೆ. ಬಹುಪಾಲು ಇಂಜಿನಿಯರ್‍ಗಳು ಇದನ್ನು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದಾರೆ. ಇದನ್ನು ಸತ್ಯ ಎಂದು ನಂಬಿದವರೇ ಹೆಚ್ಚು. ಇದನ್ನು ತಮ್ಮ ಸಂಗಾತಿಗೂ ಅವರು ದಾಟಿಸುತ್ತಾರೆ. ಮನೆಯ ಮಕ್ಕಳಿಗೂ ಇದನ್ನೇ ಬೋಧಿಸುತ್ತಾರೇನೋ?

ಸತ್ಯ: ಈಗಷ್ಟೇ ಅಲ್ಟ್‍ನ್ಯೂಸ್ ಮಾಡಿರುವ ಫ್ಯಾಕ್ಟ್ ಚೆಕ್ ಪ್ರಕಾರ, ಅಲ್ಲಿರುವುದು ಶೇ 8% ಏಶಿಯನ್ನರು ( ಪೆಸಿಫಿಕ್ ಐಸ್ ಲ್ಯಾಂಡರ್ಸ್) ಮಾತ್ರ. ಅಂದರೆ ಇರುವ ಶೇ.8%ರಷ್ಟಲ್ಲೂ ಭಾರತೀಯರಷ್ಟೇ ಅಲ್ಲ, ಇತರ ಏಶಿಯಾದ ದೇಶಗಳ ವಿಜ್ಞಾನಿಗಳು, ಇಂಜಿನಿಯರ್ಸ್ ಇದ್ದಾರೆ.

ನಾಸಾ ಅಲ್ಲಿ ನೇಮಕಾತಿ ಮಾಡುವಾಗ, ಎಲ್ಲ ಜನಾಂಗ ಮತ್ತು ಪ್ರ್ಯಾಂತ್ಯಗಳಿಗೆ ಆದ್ಯತೆ ನೀಡುತ್ತದೆ. ಇದಂತೂ ಮೀಸಲಾತಿ ವಿರೋಧಿ ಭಕ್ತರಿಗೆ ಗೊತ್ತಾಗಲಿ ಎಂಬುದು ನಮ್ಮ ಆಶಯ. ನಾಸಾ ಪ್ರಕಾರ, ಅದು ವೈವಿಧ್ಯ ಹಿನ್ನೆಲೆಯಿರುವ ಸುಮಾರು 17 ಸಾವಿರ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುತ್ತದೆ: ನಾಸಾದ ಉದ್ಯೋಗಿಗಳಲ್ಲಿ ಶೇ.72ರಷ್ಟು ಬಿಳಿಯರು(Caussasians), ಶೇ 12ರಷ್ಟು ಕರಿಯರು ಅಥವಾ ಆಫ್ರಿಕನ್ ಅಮೆರಿಕನ್ನರು, ಶೇ. 7-8 ಏಶಿಯನ್ನರು ( ಪೆಸಿಫಿಕ್ ಐಸ್‍ಲ್ಯಾಂಡರ್ಸ್), ಶೇ 7ರಷ್ಟು ಹಿಸ್ಪಾನಿಕ್ ಅಥವಾ ಲಾಟಿನೊ, ಶೇ 1.1 ರಷ್ಟು ಅಮೆರಿಕನ್ ಇಂಡಿಯನ್ಸ್ ಇದ್ದಾರೆ. ನಾಸಾದ ಅಂಕಿಸಂಖ್ಯೆ ಪ್ರಕಾರ, 1996ರಲ್ಲಿ ಶೇ. 4.5ರಷ್ಟಿದ್ದ ಏಶಿಯನ್ನರು ಈಗ 7.4ರಷ್ಟಿದ್ದಾರೆ.

ಹತ್ತು ವರ್ಷದಿಂದಲೂ ಇಂತಹ ಸುದ್ದಿ ಚಾಲ್ತಿಯಲ್ಲಿದೆ. ಆಗ ಶೇ 33ರಷ್ಟು ನಾಸಾ ನಮ್ಮವರೆ ಅಂತಿದ್ದವರು ಈಗ ಶೇ 58ಕ್ಕೆ ಏರಿದ್ದಾರೆ. ನಮ್ಮ ಭಾರತೀಯರು ಪ್ರಪಂಚದೆಲ್ಲೆಡೆ ಕೆಲಸ ಮಾಡುತ್ತಿದ್ದಾರೆ. ಅದು ನಮ್ಮ ಹೆಮ್ಮೆಯೂ ಹೌದು ಜೊತೆಗೆ ಯಾಕೆ ಅವರು ಇಲ್ಲಿಯೇ ಕೆಲಸ ಮಾಡಿ, ನಮ್ಮ ದೇಶಕ್ಕೆ ಕೊಡುಗೆ ಕೊಡಬಹುದಿತ್ತಲ್ಲ ಎಂಬ ಕೊರಗು ಹೌದು.

ನಾವು ವಾಸ್ತವ ಅಂಶಗಳನ್ನು ಇಟ್ಟುಕೊಂಡು ಹೆಮ್ಮೆಪಡಬೇಕು. ಬದಲಿಗೆ ಈ ರೀತಿಯ 58% ಭಾರತೀಯರು ಎಂಬ ಸುಳ್ಳುಗಳನ್ನು ಇಟ್ಟು ಕೊಚ್ಚಿಕೊಂಡರೆ ಮುಂದೆ ನಮಗೆ ತೊಂದರೆ ಕಾದಿರುತ್ತದೆ. ಎಲ್ಲರಿಗೂ ಗೂಗಲ್ ನೆಟ್ ಕ್ಷಣಾರ್ಧದಲ್ಲಿ ಕೈಗೆ ಸಿಗುವುದರಿಂದ ಇದು ಸುಳ್ಳು ಎಂದು ಸುಲಭವಾಗಿ ಗೊತ್ತಾಗಿ ನಂತರ ನಮ್ಮ ದೇಶದವರನ್ನು ಅಪಹಾಸ್ಯ ಮಾಡುವುದನ್ನು ತಪ್ಪಿಸಿಕೊಳ್ಳಬೇಕಾದರೆ ಇಂತಹ ಸುಳ್ಳು ಸುದ್ದಿಗಳನ್ನು ನಿಲ್ಲಿಸಬೇಕು.
(ಆಧಾರ: ಅಲ್ಟ್‍ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....