Homeಅಂತರಾಷ್ಟ್ರೀಯನಾಸಾದಲ್ಲಿರುವ ಭಾರತೀಯರ ಸಂಖ್ಯೆ ಶೇ.58 ಅಲ್ಲ! ಅಲ್ಲಿರುವ ಏಶಿಯನ್ನರ ಸಂಖ್ಯೆಯೇ ಶೇ.8 ಮಾತ್ರ!

ನಾಸಾದಲ್ಲಿರುವ ಭಾರತೀಯರ ಸಂಖ್ಯೆ ಶೇ.58 ಅಲ್ಲ! ಅಲ್ಲಿರುವ ಏಶಿಯನ್ನರ ಸಂಖ್ಯೆಯೇ ಶೇ.8 ಮಾತ್ರ!

- Advertisement -
- Advertisement -

ಮಿಥ್ಯ: ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ದಲ್ಲಿ ಶೆ.58% ರಷ್ಟು ಭಾರತೀಯರಿದ್ದಾರೆ…
ಹೀಗೊಂದು ಅಂಕಿ-ಅಂಶ ಕಳೆದ ವಾರದಿಂದ ಹರಿದಾಡುತ್ತಿದೆ. ಭಾರತ ಮುಂದಿನ ಸೂಪರ್ ಪವರ್ ಎಂದು ಭ್ರಮೆ ಹೊತ್ತಿರುವ ಕೆಲವು ಭಕ್ತರು ಇದನ್ನು ಸಿಕ್ಕಾಪಟ್ಟೆ ಪ್ರಚಾರ ಮಾಡುತ್ತಿದ್ದಾರೆ. ಇದನ್ನು ಸತ್ಯ ಎಂದು ನಂಬಿದ ಸಾವಿರಾರು ಜನ, ಸುಳ್ಳು ಎಂದು ಗೊತ್ತಿರುವ ಕೆಲವು ವೇಷಭಕ್ತರು ಫೇಸ್‍ಬುಕ್, ವ್ಯಾಟ್ಸಾಪ್‍ಗಳಲ್ಲಿ ಸಾಕಷ್ಟು ಪ್ರಚಾರ ಮಾಡುತ್ತಿದ್ದಾರೆ.

ಕಳೆದ ವಾರ 2030ಕ್ಕೆ ಚಂದ್ರನಲ್ಲಿ ಬಾಹ್ಯಾಕಾಶ ನಿಲ್ದಾಣ ಸಿದ್ಧ ಎಂದು ಇಸ್ರೋ ಮುಖ್ಯಸ್ಥ ಶಿವನ್ ಘೋಷಿಸಿದಾಗ ಬಹುಪಾಲು ಟಿವಿ ಪರದೆಗಳ ಮೇಲೆ ಚಂದ್ರಯಾನಕ್ಕೆ ಸಂಬಂಧಿಸಿದ ಅಥವಾ ಇಸ್ರೋದ ಫೋಟೊ ಪಕ್ಕ ಈ ದೇಶದ ಪ್ರಧಾನಿ ನರೇಂದ್ರ ಮೋದಿ ಫೋಟೊವನ್ನು ತಗುಲಿಸಲಾಗಿತ್ತು. ಮೋದಿ ಈ ಘೋಷಣೆಯನ್ನೂ ಮಾಡಿಲ್ಲ, ಇಸ್ರೋ ತನ್ನ ಕಾರ್ಯ ಚಟುವಟಿಕೆಯ ಬಗ್ಗೆ ಎಂದಿನಂತೆ ಮಾಹಿತಿ ನೀಡಿದೆ. ಚಾನೆಲ್‍ಗಳ ಈ ಹುಚ್ಚಾಟವೇ ಸಾಮಾಜಿಕ ಜಾಲತಾಣಗಳಲ್ಲಿ ಇನ್ನಷ್ಟು ಹರಿದು ಬಂತು. ಮೋದಿ ಕಾರಣದಿಂದಾಗಿಯೇ ಇದೆಲ್ಲ ಆಗುತ್ತಿದೆ ಎಂಬ ಭಾವವನ್ನು ಬಿತ್ತುವ ಯತ್ನವದು.

ಯಾವುದೇ ಸಂಸ್ಥೆ ಸಾಧನೆ ಮಾಡಿದಾಗ ಅದರ ಕ್ರೆಡಿಟ್ ಆ ಸರ್ಕಾರ, ಮತ್ತು ಹಿಂದೆ ಆ ಯೋಜನೆಗೆ ನೆರವು ನೀಡಿದ ಸರ್ಕಾರಗಳಿಗೂ ಹೋಗುತ್ತದೆ. ಅದಕ್ಕೂ ಮೊದಲು ಆ ಸಂಸ್ಥೆಯ ನೌಕರರಿಗೆ ಸಲ್ಲಬೇಕು. ಆದರೆ ಇಲ್ಲಿ ಬಾಲಾಕೋಟ್ ದಾಳಿಯನ್ನು ಮೋದಿಯೇ ಆಯೋಜಿಸಿದರು ಎಂಬರ್ಥದಲ್ಲಿ ಫೇಕು ಸುದ್ದಿ ಹರಡಲಾಗಿತು. ಕನ್ನಡದ ಕೆಲವು ದಿನಪತ್ರಿಕೆಗಳು ದೇಶದ ಸೇನೆಯನ್ನು ಮೋದಿ ಸೇನೆ ಎಂದೆಲ್ಲ ಬರೆದವು.

ಇವತ್ತಿಗೂ ಭಾರತದ ಸರ್ಕಾರಿ ಮತ್ತು ಖಾಸಗಿ ಕಂಪನಿಗಳಲ್ಲಿ ಇರುವ ಬಹುಪಾಲು ಯುವ ಮತ್ತು ಮಧ್ಯಮವರ್ಗಗಳ ಇಂಜನಿಯರ್‍ಗಳು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ (ನ್ಯಾಷನಲ್ ಏರೊಸ್ಪೇಸ್ ಮತ್ತು ಸ್ಪೇಸ್ ಅಡ್ಮಿನಿಷ್ಟ್ರೇಷನ್)ದಲ್ಲಿ ‘ಭಾರತೀಯರೇ ಅಧಿಕ’ ಎಂದು ಸುದ್ದಿ ಹಬ್ಬಿಸುತಿದ್ದಾರೆ. ಈ ವಾರ ಹರಿದಾಡುತ್ತಿರುವ ಸುಳ್ ಸುದ್ದಿಗಳಲ್ಲಿ ನಾಸಾದಲ್ಲಿ ಶೇ. 58% ರಷ್ಟು ಭಾರತೀಯರೇ ತುಂಬಿದ್ದಾರಂತೆ. ಇಲ್ಲಿ ಇಸ್ರೋ ಪ್ರಕಟಿಸಿದ ತನ್ನ ಮುಂದಿನ ಯೋಜನೆಯ ಪಕ್ಕ ಮೋದಿ ಫೋಟೊ ಹಾಕುವ ಸಂದರ್ಭದಲ್ಲಿಯೇ ಈ ಸುಳ್ ಸುದ್ದಿ ಓಡಾಡುತ್ತಿದೆ. ಬಹುಪಾಲು ಇಂಜಿನಿಯರ್‍ಗಳು ಇದನ್ನು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದಾರೆ. ಇದನ್ನು ಸತ್ಯ ಎಂದು ನಂಬಿದವರೇ ಹೆಚ್ಚು. ಇದನ್ನು ತಮ್ಮ ಸಂಗಾತಿಗೂ ಅವರು ದಾಟಿಸುತ್ತಾರೆ. ಮನೆಯ ಮಕ್ಕಳಿಗೂ ಇದನ್ನೇ ಬೋಧಿಸುತ್ತಾರೇನೋ?

ಸತ್ಯ: ಈಗಷ್ಟೇ ಅಲ್ಟ್‍ನ್ಯೂಸ್ ಮಾಡಿರುವ ಫ್ಯಾಕ್ಟ್ ಚೆಕ್ ಪ್ರಕಾರ, ಅಲ್ಲಿರುವುದು ಶೇ 8% ಏಶಿಯನ್ನರು ( ಪೆಸಿಫಿಕ್ ಐಸ್ ಲ್ಯಾಂಡರ್ಸ್) ಮಾತ್ರ. ಅಂದರೆ ಇರುವ ಶೇ.8%ರಷ್ಟಲ್ಲೂ ಭಾರತೀಯರಷ್ಟೇ ಅಲ್ಲ, ಇತರ ಏಶಿಯಾದ ದೇಶಗಳ ವಿಜ್ಞಾನಿಗಳು, ಇಂಜಿನಿಯರ್ಸ್ ಇದ್ದಾರೆ.

ನಾಸಾ ಅಲ್ಲಿ ನೇಮಕಾತಿ ಮಾಡುವಾಗ, ಎಲ್ಲ ಜನಾಂಗ ಮತ್ತು ಪ್ರ್ಯಾಂತ್ಯಗಳಿಗೆ ಆದ್ಯತೆ ನೀಡುತ್ತದೆ. ಇದಂತೂ ಮೀಸಲಾತಿ ವಿರೋಧಿ ಭಕ್ತರಿಗೆ ಗೊತ್ತಾಗಲಿ ಎಂಬುದು ನಮ್ಮ ಆಶಯ. ನಾಸಾ ಪ್ರಕಾರ, ಅದು ವೈವಿಧ್ಯ ಹಿನ್ನೆಲೆಯಿರುವ ಸುಮಾರು 17 ಸಾವಿರ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುತ್ತದೆ: ನಾಸಾದ ಉದ್ಯೋಗಿಗಳಲ್ಲಿ ಶೇ.72ರಷ್ಟು ಬಿಳಿಯರು(Caussasians), ಶೇ 12ರಷ್ಟು ಕರಿಯರು ಅಥವಾ ಆಫ್ರಿಕನ್ ಅಮೆರಿಕನ್ನರು, ಶೇ. 7-8 ಏಶಿಯನ್ನರು ( ಪೆಸಿಫಿಕ್ ಐಸ್‍ಲ್ಯಾಂಡರ್ಸ್), ಶೇ 7ರಷ್ಟು ಹಿಸ್ಪಾನಿಕ್ ಅಥವಾ ಲಾಟಿನೊ, ಶೇ 1.1 ರಷ್ಟು ಅಮೆರಿಕನ್ ಇಂಡಿಯನ್ಸ್ ಇದ್ದಾರೆ. ನಾಸಾದ ಅಂಕಿಸಂಖ್ಯೆ ಪ್ರಕಾರ, 1996ರಲ್ಲಿ ಶೇ. 4.5ರಷ್ಟಿದ್ದ ಏಶಿಯನ್ನರು ಈಗ 7.4ರಷ್ಟಿದ್ದಾರೆ.

ಹತ್ತು ವರ್ಷದಿಂದಲೂ ಇಂತಹ ಸುದ್ದಿ ಚಾಲ್ತಿಯಲ್ಲಿದೆ. ಆಗ ಶೇ 33ರಷ್ಟು ನಾಸಾ ನಮ್ಮವರೆ ಅಂತಿದ್ದವರು ಈಗ ಶೇ 58ಕ್ಕೆ ಏರಿದ್ದಾರೆ. ನಮ್ಮ ಭಾರತೀಯರು ಪ್ರಪಂಚದೆಲ್ಲೆಡೆ ಕೆಲಸ ಮಾಡುತ್ತಿದ್ದಾರೆ. ಅದು ನಮ್ಮ ಹೆಮ್ಮೆಯೂ ಹೌದು ಜೊತೆಗೆ ಯಾಕೆ ಅವರು ಇಲ್ಲಿಯೇ ಕೆಲಸ ಮಾಡಿ, ನಮ್ಮ ದೇಶಕ್ಕೆ ಕೊಡುಗೆ ಕೊಡಬಹುದಿತ್ತಲ್ಲ ಎಂಬ ಕೊರಗು ಹೌದು.

ನಾವು ವಾಸ್ತವ ಅಂಶಗಳನ್ನು ಇಟ್ಟುಕೊಂಡು ಹೆಮ್ಮೆಪಡಬೇಕು. ಬದಲಿಗೆ ಈ ರೀತಿಯ 58% ಭಾರತೀಯರು ಎಂಬ ಸುಳ್ಳುಗಳನ್ನು ಇಟ್ಟು ಕೊಚ್ಚಿಕೊಂಡರೆ ಮುಂದೆ ನಮಗೆ ತೊಂದರೆ ಕಾದಿರುತ್ತದೆ. ಎಲ್ಲರಿಗೂ ಗೂಗಲ್ ನೆಟ್ ಕ್ಷಣಾರ್ಧದಲ್ಲಿ ಕೈಗೆ ಸಿಗುವುದರಿಂದ ಇದು ಸುಳ್ಳು ಎಂದು ಸುಲಭವಾಗಿ ಗೊತ್ತಾಗಿ ನಂತರ ನಮ್ಮ ದೇಶದವರನ್ನು ಅಪಹಾಸ್ಯ ಮಾಡುವುದನ್ನು ತಪ್ಪಿಸಿಕೊಳ್ಳಬೇಕಾದರೆ ಇಂತಹ ಸುಳ್ಳು ಸುದ್ದಿಗಳನ್ನು ನಿಲ್ಲಿಸಬೇಕು.
(ಆಧಾರ: ಅಲ್ಟ್‍ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...