Homeಅಂತರಾಷ್ಟ್ರೀಯನಾಸಾದಲ್ಲಿರುವ ಭಾರತೀಯರ ಸಂಖ್ಯೆ ಶೇ.58 ಅಲ್ಲ! ಅಲ್ಲಿರುವ ಏಶಿಯನ್ನರ ಸಂಖ್ಯೆಯೇ ಶೇ.8 ಮಾತ್ರ!

ನಾಸಾದಲ್ಲಿರುವ ಭಾರತೀಯರ ಸಂಖ್ಯೆ ಶೇ.58 ಅಲ್ಲ! ಅಲ್ಲಿರುವ ಏಶಿಯನ್ನರ ಸಂಖ್ಯೆಯೇ ಶೇ.8 ಮಾತ್ರ!

- Advertisement -
- Advertisement -

ಮಿಥ್ಯ: ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ದಲ್ಲಿ ಶೆ.58% ರಷ್ಟು ಭಾರತೀಯರಿದ್ದಾರೆ…
ಹೀಗೊಂದು ಅಂಕಿ-ಅಂಶ ಕಳೆದ ವಾರದಿಂದ ಹರಿದಾಡುತ್ತಿದೆ. ಭಾರತ ಮುಂದಿನ ಸೂಪರ್ ಪವರ್ ಎಂದು ಭ್ರಮೆ ಹೊತ್ತಿರುವ ಕೆಲವು ಭಕ್ತರು ಇದನ್ನು ಸಿಕ್ಕಾಪಟ್ಟೆ ಪ್ರಚಾರ ಮಾಡುತ್ತಿದ್ದಾರೆ. ಇದನ್ನು ಸತ್ಯ ಎಂದು ನಂಬಿದ ಸಾವಿರಾರು ಜನ, ಸುಳ್ಳು ಎಂದು ಗೊತ್ತಿರುವ ಕೆಲವು ವೇಷಭಕ್ತರು ಫೇಸ್‍ಬುಕ್, ವ್ಯಾಟ್ಸಾಪ್‍ಗಳಲ್ಲಿ ಸಾಕಷ್ಟು ಪ್ರಚಾರ ಮಾಡುತ್ತಿದ್ದಾರೆ.

ಕಳೆದ ವಾರ 2030ಕ್ಕೆ ಚಂದ್ರನಲ್ಲಿ ಬಾಹ್ಯಾಕಾಶ ನಿಲ್ದಾಣ ಸಿದ್ಧ ಎಂದು ಇಸ್ರೋ ಮುಖ್ಯಸ್ಥ ಶಿವನ್ ಘೋಷಿಸಿದಾಗ ಬಹುಪಾಲು ಟಿವಿ ಪರದೆಗಳ ಮೇಲೆ ಚಂದ್ರಯಾನಕ್ಕೆ ಸಂಬಂಧಿಸಿದ ಅಥವಾ ಇಸ್ರೋದ ಫೋಟೊ ಪಕ್ಕ ಈ ದೇಶದ ಪ್ರಧಾನಿ ನರೇಂದ್ರ ಮೋದಿ ಫೋಟೊವನ್ನು ತಗುಲಿಸಲಾಗಿತ್ತು. ಮೋದಿ ಈ ಘೋಷಣೆಯನ್ನೂ ಮಾಡಿಲ್ಲ, ಇಸ್ರೋ ತನ್ನ ಕಾರ್ಯ ಚಟುವಟಿಕೆಯ ಬಗ್ಗೆ ಎಂದಿನಂತೆ ಮಾಹಿತಿ ನೀಡಿದೆ. ಚಾನೆಲ್‍ಗಳ ಈ ಹುಚ್ಚಾಟವೇ ಸಾಮಾಜಿಕ ಜಾಲತಾಣಗಳಲ್ಲಿ ಇನ್ನಷ್ಟು ಹರಿದು ಬಂತು. ಮೋದಿ ಕಾರಣದಿಂದಾಗಿಯೇ ಇದೆಲ್ಲ ಆಗುತ್ತಿದೆ ಎಂಬ ಭಾವವನ್ನು ಬಿತ್ತುವ ಯತ್ನವದು.

ಯಾವುದೇ ಸಂಸ್ಥೆ ಸಾಧನೆ ಮಾಡಿದಾಗ ಅದರ ಕ್ರೆಡಿಟ್ ಆ ಸರ್ಕಾರ, ಮತ್ತು ಹಿಂದೆ ಆ ಯೋಜನೆಗೆ ನೆರವು ನೀಡಿದ ಸರ್ಕಾರಗಳಿಗೂ ಹೋಗುತ್ತದೆ. ಅದಕ್ಕೂ ಮೊದಲು ಆ ಸಂಸ್ಥೆಯ ನೌಕರರಿಗೆ ಸಲ್ಲಬೇಕು. ಆದರೆ ಇಲ್ಲಿ ಬಾಲಾಕೋಟ್ ದಾಳಿಯನ್ನು ಮೋದಿಯೇ ಆಯೋಜಿಸಿದರು ಎಂಬರ್ಥದಲ್ಲಿ ಫೇಕು ಸುದ್ದಿ ಹರಡಲಾಗಿತು. ಕನ್ನಡದ ಕೆಲವು ದಿನಪತ್ರಿಕೆಗಳು ದೇಶದ ಸೇನೆಯನ್ನು ಮೋದಿ ಸೇನೆ ಎಂದೆಲ್ಲ ಬರೆದವು.

ಇವತ್ತಿಗೂ ಭಾರತದ ಸರ್ಕಾರಿ ಮತ್ತು ಖಾಸಗಿ ಕಂಪನಿಗಳಲ್ಲಿ ಇರುವ ಬಹುಪಾಲು ಯುವ ಮತ್ತು ಮಧ್ಯಮವರ್ಗಗಳ ಇಂಜನಿಯರ್‍ಗಳು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ (ನ್ಯಾಷನಲ್ ಏರೊಸ್ಪೇಸ್ ಮತ್ತು ಸ್ಪೇಸ್ ಅಡ್ಮಿನಿಷ್ಟ್ರೇಷನ್)ದಲ್ಲಿ ‘ಭಾರತೀಯರೇ ಅಧಿಕ’ ಎಂದು ಸುದ್ದಿ ಹಬ್ಬಿಸುತಿದ್ದಾರೆ. ಈ ವಾರ ಹರಿದಾಡುತ್ತಿರುವ ಸುಳ್ ಸುದ್ದಿಗಳಲ್ಲಿ ನಾಸಾದಲ್ಲಿ ಶೇ. 58% ರಷ್ಟು ಭಾರತೀಯರೇ ತುಂಬಿದ್ದಾರಂತೆ. ಇಲ್ಲಿ ಇಸ್ರೋ ಪ್ರಕಟಿಸಿದ ತನ್ನ ಮುಂದಿನ ಯೋಜನೆಯ ಪಕ್ಕ ಮೋದಿ ಫೋಟೊ ಹಾಕುವ ಸಂದರ್ಭದಲ್ಲಿಯೇ ಈ ಸುಳ್ ಸುದ್ದಿ ಓಡಾಡುತ್ತಿದೆ. ಬಹುಪಾಲು ಇಂಜಿನಿಯರ್‍ಗಳು ಇದನ್ನು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದಾರೆ. ಇದನ್ನು ಸತ್ಯ ಎಂದು ನಂಬಿದವರೇ ಹೆಚ್ಚು. ಇದನ್ನು ತಮ್ಮ ಸಂಗಾತಿಗೂ ಅವರು ದಾಟಿಸುತ್ತಾರೆ. ಮನೆಯ ಮಕ್ಕಳಿಗೂ ಇದನ್ನೇ ಬೋಧಿಸುತ್ತಾರೇನೋ?

ಸತ್ಯ: ಈಗಷ್ಟೇ ಅಲ್ಟ್‍ನ್ಯೂಸ್ ಮಾಡಿರುವ ಫ್ಯಾಕ್ಟ್ ಚೆಕ್ ಪ್ರಕಾರ, ಅಲ್ಲಿರುವುದು ಶೇ 8% ಏಶಿಯನ್ನರು ( ಪೆಸಿಫಿಕ್ ಐಸ್ ಲ್ಯಾಂಡರ್ಸ್) ಮಾತ್ರ. ಅಂದರೆ ಇರುವ ಶೇ.8%ರಷ್ಟಲ್ಲೂ ಭಾರತೀಯರಷ್ಟೇ ಅಲ್ಲ, ಇತರ ಏಶಿಯಾದ ದೇಶಗಳ ವಿಜ್ಞಾನಿಗಳು, ಇಂಜಿನಿಯರ್ಸ್ ಇದ್ದಾರೆ.

ನಾಸಾ ಅಲ್ಲಿ ನೇಮಕಾತಿ ಮಾಡುವಾಗ, ಎಲ್ಲ ಜನಾಂಗ ಮತ್ತು ಪ್ರ್ಯಾಂತ್ಯಗಳಿಗೆ ಆದ್ಯತೆ ನೀಡುತ್ತದೆ. ಇದಂತೂ ಮೀಸಲಾತಿ ವಿರೋಧಿ ಭಕ್ತರಿಗೆ ಗೊತ್ತಾಗಲಿ ಎಂಬುದು ನಮ್ಮ ಆಶಯ. ನಾಸಾ ಪ್ರಕಾರ, ಅದು ವೈವಿಧ್ಯ ಹಿನ್ನೆಲೆಯಿರುವ ಸುಮಾರು 17 ಸಾವಿರ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುತ್ತದೆ: ನಾಸಾದ ಉದ್ಯೋಗಿಗಳಲ್ಲಿ ಶೇ.72ರಷ್ಟು ಬಿಳಿಯರು(Caussasians), ಶೇ 12ರಷ್ಟು ಕರಿಯರು ಅಥವಾ ಆಫ್ರಿಕನ್ ಅಮೆರಿಕನ್ನರು, ಶೇ. 7-8 ಏಶಿಯನ್ನರು ( ಪೆಸಿಫಿಕ್ ಐಸ್‍ಲ್ಯಾಂಡರ್ಸ್), ಶೇ 7ರಷ್ಟು ಹಿಸ್ಪಾನಿಕ್ ಅಥವಾ ಲಾಟಿನೊ, ಶೇ 1.1 ರಷ್ಟು ಅಮೆರಿಕನ್ ಇಂಡಿಯನ್ಸ್ ಇದ್ದಾರೆ. ನಾಸಾದ ಅಂಕಿಸಂಖ್ಯೆ ಪ್ರಕಾರ, 1996ರಲ್ಲಿ ಶೇ. 4.5ರಷ್ಟಿದ್ದ ಏಶಿಯನ್ನರು ಈಗ 7.4ರಷ್ಟಿದ್ದಾರೆ.

ಹತ್ತು ವರ್ಷದಿಂದಲೂ ಇಂತಹ ಸುದ್ದಿ ಚಾಲ್ತಿಯಲ್ಲಿದೆ. ಆಗ ಶೇ 33ರಷ್ಟು ನಾಸಾ ನಮ್ಮವರೆ ಅಂತಿದ್ದವರು ಈಗ ಶೇ 58ಕ್ಕೆ ಏರಿದ್ದಾರೆ. ನಮ್ಮ ಭಾರತೀಯರು ಪ್ರಪಂಚದೆಲ್ಲೆಡೆ ಕೆಲಸ ಮಾಡುತ್ತಿದ್ದಾರೆ. ಅದು ನಮ್ಮ ಹೆಮ್ಮೆಯೂ ಹೌದು ಜೊತೆಗೆ ಯಾಕೆ ಅವರು ಇಲ್ಲಿಯೇ ಕೆಲಸ ಮಾಡಿ, ನಮ್ಮ ದೇಶಕ್ಕೆ ಕೊಡುಗೆ ಕೊಡಬಹುದಿತ್ತಲ್ಲ ಎಂಬ ಕೊರಗು ಹೌದು.

ನಾವು ವಾಸ್ತವ ಅಂಶಗಳನ್ನು ಇಟ್ಟುಕೊಂಡು ಹೆಮ್ಮೆಪಡಬೇಕು. ಬದಲಿಗೆ ಈ ರೀತಿಯ 58% ಭಾರತೀಯರು ಎಂಬ ಸುಳ್ಳುಗಳನ್ನು ಇಟ್ಟು ಕೊಚ್ಚಿಕೊಂಡರೆ ಮುಂದೆ ನಮಗೆ ತೊಂದರೆ ಕಾದಿರುತ್ತದೆ. ಎಲ್ಲರಿಗೂ ಗೂಗಲ್ ನೆಟ್ ಕ್ಷಣಾರ್ಧದಲ್ಲಿ ಕೈಗೆ ಸಿಗುವುದರಿಂದ ಇದು ಸುಳ್ಳು ಎಂದು ಸುಲಭವಾಗಿ ಗೊತ್ತಾಗಿ ನಂತರ ನಮ್ಮ ದೇಶದವರನ್ನು ಅಪಹಾಸ್ಯ ಮಾಡುವುದನ್ನು ತಪ್ಪಿಸಿಕೊಳ್ಳಬೇಕಾದರೆ ಇಂತಹ ಸುಳ್ಳು ಸುದ್ದಿಗಳನ್ನು ನಿಲ್ಲಿಸಬೇಕು.
(ಆಧಾರ: ಅಲ್ಟ್‍ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...