Homeಅಂತರಾಷ್ಟ್ರೀಯನಾಸಾದಲ್ಲಿರುವ ಭಾರತೀಯರ ಸಂಖ್ಯೆ ಶೇ.58 ಅಲ್ಲ! ಅಲ್ಲಿರುವ ಏಶಿಯನ್ನರ ಸಂಖ್ಯೆಯೇ ಶೇ.8 ಮಾತ್ರ!

ನಾಸಾದಲ್ಲಿರುವ ಭಾರತೀಯರ ಸಂಖ್ಯೆ ಶೇ.58 ಅಲ್ಲ! ಅಲ್ಲಿರುವ ಏಶಿಯನ್ನರ ಸಂಖ್ಯೆಯೇ ಶೇ.8 ಮಾತ್ರ!

- Advertisement -
- Advertisement -

ಮಿಥ್ಯ: ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ದಲ್ಲಿ ಶೆ.58% ರಷ್ಟು ಭಾರತೀಯರಿದ್ದಾರೆ…
ಹೀಗೊಂದು ಅಂಕಿ-ಅಂಶ ಕಳೆದ ವಾರದಿಂದ ಹರಿದಾಡುತ್ತಿದೆ. ಭಾರತ ಮುಂದಿನ ಸೂಪರ್ ಪವರ್ ಎಂದು ಭ್ರಮೆ ಹೊತ್ತಿರುವ ಕೆಲವು ಭಕ್ತರು ಇದನ್ನು ಸಿಕ್ಕಾಪಟ್ಟೆ ಪ್ರಚಾರ ಮಾಡುತ್ತಿದ್ದಾರೆ. ಇದನ್ನು ಸತ್ಯ ಎಂದು ನಂಬಿದ ಸಾವಿರಾರು ಜನ, ಸುಳ್ಳು ಎಂದು ಗೊತ್ತಿರುವ ಕೆಲವು ವೇಷಭಕ್ತರು ಫೇಸ್‍ಬುಕ್, ವ್ಯಾಟ್ಸಾಪ್‍ಗಳಲ್ಲಿ ಸಾಕಷ್ಟು ಪ್ರಚಾರ ಮಾಡುತ್ತಿದ್ದಾರೆ.

ಕಳೆದ ವಾರ 2030ಕ್ಕೆ ಚಂದ್ರನಲ್ಲಿ ಬಾಹ್ಯಾಕಾಶ ನಿಲ್ದಾಣ ಸಿದ್ಧ ಎಂದು ಇಸ್ರೋ ಮುಖ್ಯಸ್ಥ ಶಿವನ್ ಘೋಷಿಸಿದಾಗ ಬಹುಪಾಲು ಟಿವಿ ಪರದೆಗಳ ಮೇಲೆ ಚಂದ್ರಯಾನಕ್ಕೆ ಸಂಬಂಧಿಸಿದ ಅಥವಾ ಇಸ್ರೋದ ಫೋಟೊ ಪಕ್ಕ ಈ ದೇಶದ ಪ್ರಧಾನಿ ನರೇಂದ್ರ ಮೋದಿ ಫೋಟೊವನ್ನು ತಗುಲಿಸಲಾಗಿತ್ತು. ಮೋದಿ ಈ ಘೋಷಣೆಯನ್ನೂ ಮಾಡಿಲ್ಲ, ಇಸ್ರೋ ತನ್ನ ಕಾರ್ಯ ಚಟುವಟಿಕೆಯ ಬಗ್ಗೆ ಎಂದಿನಂತೆ ಮಾಹಿತಿ ನೀಡಿದೆ. ಚಾನೆಲ್‍ಗಳ ಈ ಹುಚ್ಚಾಟವೇ ಸಾಮಾಜಿಕ ಜಾಲತಾಣಗಳಲ್ಲಿ ಇನ್ನಷ್ಟು ಹರಿದು ಬಂತು. ಮೋದಿ ಕಾರಣದಿಂದಾಗಿಯೇ ಇದೆಲ್ಲ ಆಗುತ್ತಿದೆ ಎಂಬ ಭಾವವನ್ನು ಬಿತ್ತುವ ಯತ್ನವದು.

ಯಾವುದೇ ಸಂಸ್ಥೆ ಸಾಧನೆ ಮಾಡಿದಾಗ ಅದರ ಕ್ರೆಡಿಟ್ ಆ ಸರ್ಕಾರ, ಮತ್ತು ಹಿಂದೆ ಆ ಯೋಜನೆಗೆ ನೆರವು ನೀಡಿದ ಸರ್ಕಾರಗಳಿಗೂ ಹೋಗುತ್ತದೆ. ಅದಕ್ಕೂ ಮೊದಲು ಆ ಸಂಸ್ಥೆಯ ನೌಕರರಿಗೆ ಸಲ್ಲಬೇಕು. ಆದರೆ ಇಲ್ಲಿ ಬಾಲಾಕೋಟ್ ದಾಳಿಯನ್ನು ಮೋದಿಯೇ ಆಯೋಜಿಸಿದರು ಎಂಬರ್ಥದಲ್ಲಿ ಫೇಕು ಸುದ್ದಿ ಹರಡಲಾಗಿತು. ಕನ್ನಡದ ಕೆಲವು ದಿನಪತ್ರಿಕೆಗಳು ದೇಶದ ಸೇನೆಯನ್ನು ಮೋದಿ ಸೇನೆ ಎಂದೆಲ್ಲ ಬರೆದವು.

ಇವತ್ತಿಗೂ ಭಾರತದ ಸರ್ಕಾರಿ ಮತ್ತು ಖಾಸಗಿ ಕಂಪನಿಗಳಲ್ಲಿ ಇರುವ ಬಹುಪಾಲು ಯುವ ಮತ್ತು ಮಧ್ಯಮವರ್ಗಗಳ ಇಂಜನಿಯರ್‍ಗಳು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ (ನ್ಯಾಷನಲ್ ಏರೊಸ್ಪೇಸ್ ಮತ್ತು ಸ್ಪೇಸ್ ಅಡ್ಮಿನಿಷ್ಟ್ರೇಷನ್)ದಲ್ಲಿ ‘ಭಾರತೀಯರೇ ಅಧಿಕ’ ಎಂದು ಸುದ್ದಿ ಹಬ್ಬಿಸುತಿದ್ದಾರೆ. ಈ ವಾರ ಹರಿದಾಡುತ್ತಿರುವ ಸುಳ್ ಸುದ್ದಿಗಳಲ್ಲಿ ನಾಸಾದಲ್ಲಿ ಶೇ. 58% ರಷ್ಟು ಭಾರತೀಯರೇ ತುಂಬಿದ್ದಾರಂತೆ. ಇಲ್ಲಿ ಇಸ್ರೋ ಪ್ರಕಟಿಸಿದ ತನ್ನ ಮುಂದಿನ ಯೋಜನೆಯ ಪಕ್ಕ ಮೋದಿ ಫೋಟೊ ಹಾಕುವ ಸಂದರ್ಭದಲ್ಲಿಯೇ ಈ ಸುಳ್ ಸುದ್ದಿ ಓಡಾಡುತ್ತಿದೆ. ಬಹುಪಾಲು ಇಂಜಿನಿಯರ್‍ಗಳು ಇದನ್ನು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದಾರೆ. ಇದನ್ನು ಸತ್ಯ ಎಂದು ನಂಬಿದವರೇ ಹೆಚ್ಚು. ಇದನ್ನು ತಮ್ಮ ಸಂಗಾತಿಗೂ ಅವರು ದಾಟಿಸುತ್ತಾರೆ. ಮನೆಯ ಮಕ್ಕಳಿಗೂ ಇದನ್ನೇ ಬೋಧಿಸುತ್ತಾರೇನೋ?

ಸತ್ಯ: ಈಗಷ್ಟೇ ಅಲ್ಟ್‍ನ್ಯೂಸ್ ಮಾಡಿರುವ ಫ್ಯಾಕ್ಟ್ ಚೆಕ್ ಪ್ರಕಾರ, ಅಲ್ಲಿರುವುದು ಶೇ 8% ಏಶಿಯನ್ನರು ( ಪೆಸಿಫಿಕ್ ಐಸ್ ಲ್ಯಾಂಡರ್ಸ್) ಮಾತ್ರ. ಅಂದರೆ ಇರುವ ಶೇ.8%ರಷ್ಟಲ್ಲೂ ಭಾರತೀಯರಷ್ಟೇ ಅಲ್ಲ, ಇತರ ಏಶಿಯಾದ ದೇಶಗಳ ವಿಜ್ಞಾನಿಗಳು, ಇಂಜಿನಿಯರ್ಸ್ ಇದ್ದಾರೆ.

ನಾಸಾ ಅಲ್ಲಿ ನೇಮಕಾತಿ ಮಾಡುವಾಗ, ಎಲ್ಲ ಜನಾಂಗ ಮತ್ತು ಪ್ರ್ಯಾಂತ್ಯಗಳಿಗೆ ಆದ್ಯತೆ ನೀಡುತ್ತದೆ. ಇದಂತೂ ಮೀಸಲಾತಿ ವಿರೋಧಿ ಭಕ್ತರಿಗೆ ಗೊತ್ತಾಗಲಿ ಎಂಬುದು ನಮ್ಮ ಆಶಯ. ನಾಸಾ ಪ್ರಕಾರ, ಅದು ವೈವಿಧ್ಯ ಹಿನ್ನೆಲೆಯಿರುವ ಸುಮಾರು 17 ಸಾವಿರ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುತ್ತದೆ: ನಾಸಾದ ಉದ್ಯೋಗಿಗಳಲ್ಲಿ ಶೇ.72ರಷ್ಟು ಬಿಳಿಯರು(Caussasians), ಶೇ 12ರಷ್ಟು ಕರಿಯರು ಅಥವಾ ಆಫ್ರಿಕನ್ ಅಮೆರಿಕನ್ನರು, ಶೇ. 7-8 ಏಶಿಯನ್ನರು ( ಪೆಸಿಫಿಕ್ ಐಸ್‍ಲ್ಯಾಂಡರ್ಸ್), ಶೇ 7ರಷ್ಟು ಹಿಸ್ಪಾನಿಕ್ ಅಥವಾ ಲಾಟಿನೊ, ಶೇ 1.1 ರಷ್ಟು ಅಮೆರಿಕನ್ ಇಂಡಿಯನ್ಸ್ ಇದ್ದಾರೆ. ನಾಸಾದ ಅಂಕಿಸಂಖ್ಯೆ ಪ್ರಕಾರ, 1996ರಲ್ಲಿ ಶೇ. 4.5ರಷ್ಟಿದ್ದ ಏಶಿಯನ್ನರು ಈಗ 7.4ರಷ್ಟಿದ್ದಾರೆ.

ಹತ್ತು ವರ್ಷದಿಂದಲೂ ಇಂತಹ ಸುದ್ದಿ ಚಾಲ್ತಿಯಲ್ಲಿದೆ. ಆಗ ಶೇ 33ರಷ್ಟು ನಾಸಾ ನಮ್ಮವರೆ ಅಂತಿದ್ದವರು ಈಗ ಶೇ 58ಕ್ಕೆ ಏರಿದ್ದಾರೆ. ನಮ್ಮ ಭಾರತೀಯರು ಪ್ರಪಂಚದೆಲ್ಲೆಡೆ ಕೆಲಸ ಮಾಡುತ್ತಿದ್ದಾರೆ. ಅದು ನಮ್ಮ ಹೆಮ್ಮೆಯೂ ಹೌದು ಜೊತೆಗೆ ಯಾಕೆ ಅವರು ಇಲ್ಲಿಯೇ ಕೆಲಸ ಮಾಡಿ, ನಮ್ಮ ದೇಶಕ್ಕೆ ಕೊಡುಗೆ ಕೊಡಬಹುದಿತ್ತಲ್ಲ ಎಂಬ ಕೊರಗು ಹೌದು.

ನಾವು ವಾಸ್ತವ ಅಂಶಗಳನ್ನು ಇಟ್ಟುಕೊಂಡು ಹೆಮ್ಮೆಪಡಬೇಕು. ಬದಲಿಗೆ ಈ ರೀತಿಯ 58% ಭಾರತೀಯರು ಎಂಬ ಸುಳ್ಳುಗಳನ್ನು ಇಟ್ಟು ಕೊಚ್ಚಿಕೊಂಡರೆ ಮುಂದೆ ನಮಗೆ ತೊಂದರೆ ಕಾದಿರುತ್ತದೆ. ಎಲ್ಲರಿಗೂ ಗೂಗಲ್ ನೆಟ್ ಕ್ಷಣಾರ್ಧದಲ್ಲಿ ಕೈಗೆ ಸಿಗುವುದರಿಂದ ಇದು ಸುಳ್ಳು ಎಂದು ಸುಲಭವಾಗಿ ಗೊತ್ತಾಗಿ ನಂತರ ನಮ್ಮ ದೇಶದವರನ್ನು ಅಪಹಾಸ್ಯ ಮಾಡುವುದನ್ನು ತಪ್ಪಿಸಿಕೊಳ್ಳಬೇಕಾದರೆ ಇಂತಹ ಸುಳ್ಳು ಸುದ್ದಿಗಳನ್ನು ನಿಲ್ಲಿಸಬೇಕು.
(ಆಧಾರ: ಅಲ್ಟ್‍ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...