Homeಅಂತರಾಷ್ಟ್ರೀಯನಾಸಾದಲ್ಲಿರುವ ಭಾರತೀಯರ ಸಂಖ್ಯೆ ಶೇ.58 ಅಲ್ಲ! ಅಲ್ಲಿರುವ ಏಶಿಯನ್ನರ ಸಂಖ್ಯೆಯೇ ಶೇ.8 ಮಾತ್ರ!

ನಾಸಾದಲ್ಲಿರುವ ಭಾರತೀಯರ ಸಂಖ್ಯೆ ಶೇ.58 ಅಲ್ಲ! ಅಲ್ಲಿರುವ ಏಶಿಯನ್ನರ ಸಂಖ್ಯೆಯೇ ಶೇ.8 ಮಾತ್ರ!

- Advertisement -
- Advertisement -

ಮಿಥ್ಯ: ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ದಲ್ಲಿ ಶೆ.58% ರಷ್ಟು ಭಾರತೀಯರಿದ್ದಾರೆ…
ಹೀಗೊಂದು ಅಂಕಿ-ಅಂಶ ಕಳೆದ ವಾರದಿಂದ ಹರಿದಾಡುತ್ತಿದೆ. ಭಾರತ ಮುಂದಿನ ಸೂಪರ್ ಪವರ್ ಎಂದು ಭ್ರಮೆ ಹೊತ್ತಿರುವ ಕೆಲವು ಭಕ್ತರು ಇದನ್ನು ಸಿಕ್ಕಾಪಟ್ಟೆ ಪ್ರಚಾರ ಮಾಡುತ್ತಿದ್ದಾರೆ. ಇದನ್ನು ಸತ್ಯ ಎಂದು ನಂಬಿದ ಸಾವಿರಾರು ಜನ, ಸುಳ್ಳು ಎಂದು ಗೊತ್ತಿರುವ ಕೆಲವು ವೇಷಭಕ್ತರು ಫೇಸ್‍ಬುಕ್, ವ್ಯಾಟ್ಸಾಪ್‍ಗಳಲ್ಲಿ ಸಾಕಷ್ಟು ಪ್ರಚಾರ ಮಾಡುತ್ತಿದ್ದಾರೆ.

ಕಳೆದ ವಾರ 2030ಕ್ಕೆ ಚಂದ್ರನಲ್ಲಿ ಬಾಹ್ಯಾಕಾಶ ನಿಲ್ದಾಣ ಸಿದ್ಧ ಎಂದು ಇಸ್ರೋ ಮುಖ್ಯಸ್ಥ ಶಿವನ್ ಘೋಷಿಸಿದಾಗ ಬಹುಪಾಲು ಟಿವಿ ಪರದೆಗಳ ಮೇಲೆ ಚಂದ್ರಯಾನಕ್ಕೆ ಸಂಬಂಧಿಸಿದ ಅಥವಾ ಇಸ್ರೋದ ಫೋಟೊ ಪಕ್ಕ ಈ ದೇಶದ ಪ್ರಧಾನಿ ನರೇಂದ್ರ ಮೋದಿ ಫೋಟೊವನ್ನು ತಗುಲಿಸಲಾಗಿತ್ತು. ಮೋದಿ ಈ ಘೋಷಣೆಯನ್ನೂ ಮಾಡಿಲ್ಲ, ಇಸ್ರೋ ತನ್ನ ಕಾರ್ಯ ಚಟುವಟಿಕೆಯ ಬಗ್ಗೆ ಎಂದಿನಂತೆ ಮಾಹಿತಿ ನೀಡಿದೆ. ಚಾನೆಲ್‍ಗಳ ಈ ಹುಚ್ಚಾಟವೇ ಸಾಮಾಜಿಕ ಜಾಲತಾಣಗಳಲ್ಲಿ ಇನ್ನಷ್ಟು ಹರಿದು ಬಂತು. ಮೋದಿ ಕಾರಣದಿಂದಾಗಿಯೇ ಇದೆಲ್ಲ ಆಗುತ್ತಿದೆ ಎಂಬ ಭಾವವನ್ನು ಬಿತ್ತುವ ಯತ್ನವದು.

ಯಾವುದೇ ಸಂಸ್ಥೆ ಸಾಧನೆ ಮಾಡಿದಾಗ ಅದರ ಕ್ರೆಡಿಟ್ ಆ ಸರ್ಕಾರ, ಮತ್ತು ಹಿಂದೆ ಆ ಯೋಜನೆಗೆ ನೆರವು ನೀಡಿದ ಸರ್ಕಾರಗಳಿಗೂ ಹೋಗುತ್ತದೆ. ಅದಕ್ಕೂ ಮೊದಲು ಆ ಸಂಸ್ಥೆಯ ನೌಕರರಿಗೆ ಸಲ್ಲಬೇಕು. ಆದರೆ ಇಲ್ಲಿ ಬಾಲಾಕೋಟ್ ದಾಳಿಯನ್ನು ಮೋದಿಯೇ ಆಯೋಜಿಸಿದರು ಎಂಬರ್ಥದಲ್ಲಿ ಫೇಕು ಸುದ್ದಿ ಹರಡಲಾಗಿತು. ಕನ್ನಡದ ಕೆಲವು ದಿನಪತ್ರಿಕೆಗಳು ದೇಶದ ಸೇನೆಯನ್ನು ಮೋದಿ ಸೇನೆ ಎಂದೆಲ್ಲ ಬರೆದವು.

ಇವತ್ತಿಗೂ ಭಾರತದ ಸರ್ಕಾರಿ ಮತ್ತು ಖಾಸಗಿ ಕಂಪನಿಗಳಲ್ಲಿ ಇರುವ ಬಹುಪಾಲು ಯುವ ಮತ್ತು ಮಧ್ಯಮವರ್ಗಗಳ ಇಂಜನಿಯರ್‍ಗಳು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ (ನ್ಯಾಷನಲ್ ಏರೊಸ್ಪೇಸ್ ಮತ್ತು ಸ್ಪೇಸ್ ಅಡ್ಮಿನಿಷ್ಟ್ರೇಷನ್)ದಲ್ಲಿ ‘ಭಾರತೀಯರೇ ಅಧಿಕ’ ಎಂದು ಸುದ್ದಿ ಹಬ್ಬಿಸುತಿದ್ದಾರೆ. ಈ ವಾರ ಹರಿದಾಡುತ್ತಿರುವ ಸುಳ್ ಸುದ್ದಿಗಳಲ್ಲಿ ನಾಸಾದಲ್ಲಿ ಶೇ. 58% ರಷ್ಟು ಭಾರತೀಯರೇ ತುಂಬಿದ್ದಾರಂತೆ. ಇಲ್ಲಿ ಇಸ್ರೋ ಪ್ರಕಟಿಸಿದ ತನ್ನ ಮುಂದಿನ ಯೋಜನೆಯ ಪಕ್ಕ ಮೋದಿ ಫೋಟೊ ಹಾಕುವ ಸಂದರ್ಭದಲ್ಲಿಯೇ ಈ ಸುಳ್ ಸುದ್ದಿ ಓಡಾಡುತ್ತಿದೆ. ಬಹುಪಾಲು ಇಂಜಿನಿಯರ್‍ಗಳು ಇದನ್ನು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದಾರೆ. ಇದನ್ನು ಸತ್ಯ ಎಂದು ನಂಬಿದವರೇ ಹೆಚ್ಚು. ಇದನ್ನು ತಮ್ಮ ಸಂಗಾತಿಗೂ ಅವರು ದಾಟಿಸುತ್ತಾರೆ. ಮನೆಯ ಮಕ್ಕಳಿಗೂ ಇದನ್ನೇ ಬೋಧಿಸುತ್ತಾರೇನೋ?

ಸತ್ಯ: ಈಗಷ್ಟೇ ಅಲ್ಟ್‍ನ್ಯೂಸ್ ಮಾಡಿರುವ ಫ್ಯಾಕ್ಟ್ ಚೆಕ್ ಪ್ರಕಾರ, ಅಲ್ಲಿರುವುದು ಶೇ 8% ಏಶಿಯನ್ನರು ( ಪೆಸಿಫಿಕ್ ಐಸ್ ಲ್ಯಾಂಡರ್ಸ್) ಮಾತ್ರ. ಅಂದರೆ ಇರುವ ಶೇ.8%ರಷ್ಟಲ್ಲೂ ಭಾರತೀಯರಷ್ಟೇ ಅಲ್ಲ, ಇತರ ಏಶಿಯಾದ ದೇಶಗಳ ವಿಜ್ಞಾನಿಗಳು, ಇಂಜಿನಿಯರ್ಸ್ ಇದ್ದಾರೆ.

ನಾಸಾ ಅಲ್ಲಿ ನೇಮಕಾತಿ ಮಾಡುವಾಗ, ಎಲ್ಲ ಜನಾಂಗ ಮತ್ತು ಪ್ರ್ಯಾಂತ್ಯಗಳಿಗೆ ಆದ್ಯತೆ ನೀಡುತ್ತದೆ. ಇದಂತೂ ಮೀಸಲಾತಿ ವಿರೋಧಿ ಭಕ್ತರಿಗೆ ಗೊತ್ತಾಗಲಿ ಎಂಬುದು ನಮ್ಮ ಆಶಯ. ನಾಸಾ ಪ್ರಕಾರ, ಅದು ವೈವಿಧ್ಯ ಹಿನ್ನೆಲೆಯಿರುವ ಸುಮಾರು 17 ಸಾವಿರ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುತ್ತದೆ: ನಾಸಾದ ಉದ್ಯೋಗಿಗಳಲ್ಲಿ ಶೇ.72ರಷ್ಟು ಬಿಳಿಯರು(Caussasians), ಶೇ 12ರಷ್ಟು ಕರಿಯರು ಅಥವಾ ಆಫ್ರಿಕನ್ ಅಮೆರಿಕನ್ನರು, ಶೇ. 7-8 ಏಶಿಯನ್ನರು ( ಪೆಸಿಫಿಕ್ ಐಸ್‍ಲ್ಯಾಂಡರ್ಸ್), ಶೇ 7ರಷ್ಟು ಹಿಸ್ಪಾನಿಕ್ ಅಥವಾ ಲಾಟಿನೊ, ಶೇ 1.1 ರಷ್ಟು ಅಮೆರಿಕನ್ ಇಂಡಿಯನ್ಸ್ ಇದ್ದಾರೆ. ನಾಸಾದ ಅಂಕಿಸಂಖ್ಯೆ ಪ್ರಕಾರ, 1996ರಲ್ಲಿ ಶೇ. 4.5ರಷ್ಟಿದ್ದ ಏಶಿಯನ್ನರು ಈಗ 7.4ರಷ್ಟಿದ್ದಾರೆ.

ಹತ್ತು ವರ್ಷದಿಂದಲೂ ಇಂತಹ ಸುದ್ದಿ ಚಾಲ್ತಿಯಲ್ಲಿದೆ. ಆಗ ಶೇ 33ರಷ್ಟು ನಾಸಾ ನಮ್ಮವರೆ ಅಂತಿದ್ದವರು ಈಗ ಶೇ 58ಕ್ಕೆ ಏರಿದ್ದಾರೆ. ನಮ್ಮ ಭಾರತೀಯರು ಪ್ರಪಂಚದೆಲ್ಲೆಡೆ ಕೆಲಸ ಮಾಡುತ್ತಿದ್ದಾರೆ. ಅದು ನಮ್ಮ ಹೆಮ್ಮೆಯೂ ಹೌದು ಜೊತೆಗೆ ಯಾಕೆ ಅವರು ಇಲ್ಲಿಯೇ ಕೆಲಸ ಮಾಡಿ, ನಮ್ಮ ದೇಶಕ್ಕೆ ಕೊಡುಗೆ ಕೊಡಬಹುದಿತ್ತಲ್ಲ ಎಂಬ ಕೊರಗು ಹೌದು.

ನಾವು ವಾಸ್ತವ ಅಂಶಗಳನ್ನು ಇಟ್ಟುಕೊಂಡು ಹೆಮ್ಮೆಪಡಬೇಕು. ಬದಲಿಗೆ ಈ ರೀತಿಯ 58% ಭಾರತೀಯರು ಎಂಬ ಸುಳ್ಳುಗಳನ್ನು ಇಟ್ಟು ಕೊಚ್ಚಿಕೊಂಡರೆ ಮುಂದೆ ನಮಗೆ ತೊಂದರೆ ಕಾದಿರುತ್ತದೆ. ಎಲ್ಲರಿಗೂ ಗೂಗಲ್ ನೆಟ್ ಕ್ಷಣಾರ್ಧದಲ್ಲಿ ಕೈಗೆ ಸಿಗುವುದರಿಂದ ಇದು ಸುಳ್ಳು ಎಂದು ಸುಲಭವಾಗಿ ಗೊತ್ತಾಗಿ ನಂತರ ನಮ್ಮ ದೇಶದವರನ್ನು ಅಪಹಾಸ್ಯ ಮಾಡುವುದನ್ನು ತಪ್ಪಿಸಿಕೊಳ್ಳಬೇಕಾದರೆ ಇಂತಹ ಸುಳ್ಳು ಸುದ್ದಿಗಳನ್ನು ನಿಲ್ಲಿಸಬೇಕು.
(ಆಧಾರ: ಅಲ್ಟ್‍ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...