Homeಕರ್ನಾಟಕFACT CHECK| ನಾಸೀರ್‌ ಹುಸೇನ್‌ ಬೆಂಬಲಿಗರು 'ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರಾ? ಕನ್ನಡ ಮಾದ್ಯಮಗಳ ಸುದ್ದಿಯ...

FACT CHECK| ನಾಸೀರ್‌ ಹುಸೇನ್‌ ಬೆಂಬಲಿಗರು ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರಾ? ಕನ್ನಡ ಮಾದ್ಯಮಗಳ ಸುದ್ದಿಯ ವಾಸ್ತವಾಂಶವೇನು?

- Advertisement -
- Advertisement -

ರಾಜ್ಯಸಭೆಗೆ ನಿನ್ನೆ ಚುನಾವಣೆ ನಡೆದಿದ್ದು, ಕರ್ನಾಟಕದಿಂದ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ಮತ್ತು ಓರ್ವ ಬಿಜೆಪಿ- ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಗೆಲುವನ್ನು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಾಕನ್, ನಾಸಿರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರು ಜಯ ಗಳಿಸಿದ್ದರು. ನಾಸಿರ್ ಹುಸೇನ್ ಗೆಲುವಿನ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಸಿರ್ ಹುಸೇನ್ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ. ಈ ವೇಳೆ ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರೆ ಎಂದು ಕನ್ನಡದ ಬಹುತೇಕ ಟಿವಿ ಚಾನಲ್‌ಗಳು ವರದಿ ಮಾಡಿದ್ದು, ಬಿಜೆಪಿ ನಾಯಕರು ವಿಭಿನ್ನ ಹೇಳಿಕೆಗಳನ್ನು ಕೊಟ್ಟಿದ್ದರು.

ವಿಭಿನ್ನ ತಲೆಬರಹದಡಿ ಸುದ್ದಿ ಬಿತ್ತರಿಸಿದ್ದ ಮಾದ್ಯಮಗಳು:

ಕನ್ನಡದ ಸುದ್ದಿ ಮಾಧ್ಯಮಗಳಾದ ಟಿವಿ9, ಸುವರ್ಣ ನ್ಯೂಸ್, ಪಬ್ಲಿಕ್ ಟಿವಿ, ವಿಸ್ತಾರ ನ್ಯೂಸ್, ನ್ಯೂಸ್ ಫಸ್ಟ್ ಹಾಗೂ ರಿಪಬ್ಲಿಕ್ ಕನ್ನಡ ಸೇರಿದಂತೆ ಬಹುತೇಕ ಮಾಧ್ಯಮಗಳು ‘ಪಾಕಿಸ್ತಾನ್ ಝಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂದು ಸುದ್ದಿ ಹರಡಿದೆ.

‘ವಿಧಾನ ಸೌಧದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನಿಂದ ಪಾಕ್‌ ಪರ ಘೋಷಣೆ’, ‘ವಿಧಾನಸೌಧದಲ್ಲಿ ಗೆಲುವಿನ ಸಂಭ್ರಮದಲ್ಲಿ ಮೊಳಗಿದ ಪಾಕಿಸ್ತಾನ ಝಿಂದಾಬಾದ್‌’ ಎಂದು ಭಿನ್ನ ತಲೆಬರಹದ ಜೊತೆ ಟಿವಿ9 ವರದಿ ಮಾಡಿದೆ.

‘ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ’ ಎಂದು ಇನ್ನೊಂದು ಕನ್ನಡ ಮಾದ್ಯಮ ವಿಸ್ತಾರ ನ್ಯೂಸ್ ವರದಿ ಮಾಡಿದೆ.
ಇನ್ನೊಂದು ಮುಖ್ಯವಾಹಿನಿ ಮಾಧ್ಯಮ ‘ನ್ಯೂಸ್‌ 18 ಕನ್ನಡ’ ‘ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಸಯ್ಯದ್ ನಾಸೀರ್ ಹುಸೇನ್ ಬೆಂಬಲಿಗರು’ ಎಂದು ಸುದ್ದಿಯನ್ನು ಬಿತ್ತರಿಸಿದೆ.

‘ರಿಪಬ್ಲಿಕ್ ಕನ್ನಡ’ ಸುದ್ದಿ ಮಾದ್ಯಮ ವಿಧಾನ ಸೌಧದಲ್ಲಿ ಪಾಕ್‌ ಪರ ಘೋಷಣೆ ಎಂದು ತಲೆಬರಹದಡಿ ಸುದ್ದಿಯನ್ನು ಬಿತ್ತರಿಸಿದೆ.

‘ವಿಧಾನ ಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ ಕಾಂಗ್ರೆಸ್‌ ಅಭ್ಯರ್ಥಿ ನಾಸೀರ್‌ ಹುಸೇನ್‌ ಬೆಂಬಲಿಗರು’ ಎಂದು ವಿಜಯವಾಣಿ ಸುದ್ದಿಯನ್ನು ಪ್ರಕಟಿಸಿದೆ.

ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ ಘಟನೆ ಮಂಗಳವಾರ ನಡೆದಿದೆ. ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಕಂಡ ಬಳಿಕ ಕಾಂಗ್ರೆಸ್‌ನ ನಾಸಿರ್‌ ಹುಸೇನ್‌ ಬೆಂಬಲಿಗರು ಈ ಘೋಷಣೆ ಕೂಗಿದ್ದಾರೆ ಎಂದು ಕನ್ನಡದ ‘ಸುವರ್ಣ ನ್ಯೂಸ್’ ವರದಿ ಮಾಡಿದೆ.

https://twitter.com/AsianetNewsSN/status/1762480895762526555

ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಬೆನ್ನಲ್ಲೇ ನಾಸೀರ್ ಹುಸೇನ್ ಬೆಂಬಲಿಗರಿಂದ ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ.. ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಜೈಕಾರ ಕೂಗಿದ ಬೆಂಬಲಿಗರು ಎಂದು ಪಬ್ಲಿಕ್‌ ಟಿವಿ ವರದಿ ಮಾಡಿದೆ.

 

ಬಿಜೆಪಿಯಿಂದ ಪ್ರತಿಭಟನೆ

ವಿಧಾನ ಸೌಧದಲ್ಲಿ ನಾಸೀರ್‌ ಹುಸೇನ್‌ ಬೆಂಬಲಿಗರು ‘ಪಾಕಿಸ್ತಾನ ಜಿಂದಾಬಾದ್‌’  ಘೋಷಣೆ ಕೂಗಿದ್ದಾರೆಂದು  ಬಿಜೆಪಿ ಮಂಗಳವಾರ ಬೀದಿಗಿಳಿದು ಪ್ರತಿಭಟನೆ ನಡೆಸಿದೆ. ವಿಧಾನಸೌಧದ ಲಾಂಜ್​ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಕೋಲಾರದಲ್ಲಿ ಈ ಬಗ್ಗೆ ಶ್ರೀರಾಮ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ನಾಸೀರ್ ಹುಸೇನ್ ವಿರುದ್ದ ಘೋಷಣೆ ಕೂಗಿದ್ದರು. ಅಲ್ಲದೆ ನಾಸಿರ್ ಹುಸೇನ್ ಬಾವಚಿತ್ರಕ್ಕೆ ಬೆಂಕಿ ಹಚ್ಚಿದ್ದರು. ವಿವಿಧೆಡೆ ಬಿಜೆಪಿ ಯುವ ಮೋರ್ಚಾ ಕೂಡ ಪ್ರತಿಭಟನೆ ನಡೆಸಿತ್ತು.

ಇದಲ್ಲದೆ ಬಿಜೆಪಿ ನಾಯಕರು ಒಬ್ಬರ ಹಿಂದೆ ಒಬ್ಬರಂತೆ ಹೇಳಿಕೆಯನ್ನು ಕೊಟ್ಟಿದ್ದಾರೆ. ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಮಾತನಾಡಿ, ಕಾಂಗ್ರೆಸ್‌ನವರಿಗೆ ಮಾನ ಮರ್ಯಾದೆ ಇದ್ದರೆ ಅಧಿಕಾರದಲ್ಲಿ ಇರಬಾರದು, ಸಿಎಂ ರಾಜೀನಾಮೆ ನೀಡಬೇಕು, ರಾಜ್ಯಪಾಲರು ಸರಕಾರವನ್ನು ವಜಾ ಮಾಡಬೇಕು ಎಂದೆಲ್ಲಾ ಆಗ್ರಹಿಸಿದ್ದರು. ಬಿಜೆಪಿ ಶಾಸಕ ಹರೀಶ್‌ ಪೂಂಜಾ ಮಾತನಾಡಿ, ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕುತ್ತೇವೆ, ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದ್ದರು. ಘಟನೆಯ ಪೂರ್ಣ ಚಿತ್ರಣ ನಾಸೀರ್‌ ಹಸೇನ್‌ಗೆ ಗೊತ್ತಿತ್ತು ಎಂದು ಇದೊಂದು ಪೂರ್ವ ನಿಯೋಜಿತ ಎಂಬಂತೆ ಹೇಳಿಕೆ ಕೊಟ್ಟಿದ್ದರು.

ಈ ಬಗ್ಗೆ ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರಾಜಕೀಯ ಕಾರ್ಯದರ್ಶಿ, ಕಾಂಗ್ರೆಸ್ ನ ನಸೀರ್ ಹುಸೇನ್ ಗೆದ್ದ ನಂತರ ಪಾಕಿಸ್ತಾನ್ ಜಿಂದಾಬಾದ್ ಘೋಷಣೆಗಳು ಮೊಳಗಿದೆ ಎಂದು ಆಪಾದಿಸಿದ್ದರು.

ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲು

ಪಾಕಿಸ್ತಾನದ ಪರ ಘೋಷಣೆ ಕೂಗಿರುವ ಆರೋಪ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲು ಮಾಡಲಾಗಿದೆ. ಕರ್ತವ್ಯನಿರತ ಎಎಸ್​ಐ ಶಿವಕುಮಾರ್ ದೂರಿನ ಅನ್ವಯ ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 505(1)(B), 153B ಅಡಿ ಪ್ರಕರಣ ದಾಖಲು ಮಾಡಲಾಗಿದೆ.

ಫ್ಯಾಕ್ಟ್‌ಚೆಕ್‌:

ಈ ಬಗ್ಗೆ ನಾನು ಗೌರಿ.ಕಾಂ ವಾಸ್ತವಾಂಶಗಳನ್ನು ಪರಿಶೀಲನೆ ನಡೆಸಿದ್ದು, ಸುದ್ದಿ ಮಾದ್ಯಮಗಳು ವರದಿ ಮಾಡಿದ ವಿಡಿಯೋ ಹಾಗೂ ಇತರ ಹಲವು ವಿಡಿಯೋಗಳನ್ನು ಅವಲೋಕಿಸಿದೆ. ಈ ವೇಳೆ ವಾಸ್ತವವೇ ಬೇರೆ, ಕನ್ನಡ ಸುದ್ದಿ ಮಾದ್ಯಮಗಳು ಹರಡಿರುವುದು ಸುಳ್ಳು ಸುದ್ದಿ ಎನ್ನುವುದು ಬಯಲಾಗಿದೆ. ನಾಸೀರ್‌ ಹುಸೇನ್‌ ಗೆಲುವನ್ನು ಸಂಭ್ರಮಿಸುತ್ತಿರುವಾಗ ಅವರ ಬೆಂಬಲಿಗರು ಅವರ ಪಕ್ಕದಲ್ಲೇ ನಿಂತುಕೊಂಡು ‘ನಾಸೀರ್ ಸಾಬ್ ಝಿಂದಾಬಾದ್’ ಎಂದು ಘೋಷಣೆ ಕೂಗಿರುವುದು ಸ್ಪಷ್ಟವಾಗಿ ವಿಡಿಯೋಗಳಲ್ಲಿ ಸೆರೆಯಾಗಿದೆ. ನಾಸೀರ್‌ ಹುಸೇನ್‌ ಗೆಲುವನ್ನು ಸಂಭ್ರಮಿಸುತ್ತಿರುವಾಗ ನೂರಾರು ಬೆಂಬಲಿಗರು ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ಸೇರಿದ್ದರು. ಅವರು ‘ನಾಸೀರ್ ಸಾಬ್ ಝಿಂದಾಬಾದ್’ ಎಂದು ಕೂಗಿದ್ದಾರೆ ಹೊರತು ಪಾಕಿಸ್ತಾನ ಝಿಂದಾಬಾದ್‌ ಎಂದು ಕೂಗಿಲ್ಲ ಎನ್ನುವುದು ಬಯಲಾಗಿದೆ.

ಆಲ್ಟ್‌ ನ್ಯೂಸ್‌ ಸಹ ಸಂಸ್ಥಾಪಕ ಮುಹಮ್ಮದ್‌ ಝುಬೈರ್‌ ಅವರೂ, ಈ ವೀಡಿಯೊ ವನ್ನು ಸ್ಲೋ ಮೋಷನ್‌ನಲ್ಲಿ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ಸ್ಪಷ್ಟವಾಗಿ ನಾಸಿರ್‌ ಸಾಬ್‌ ಝಿಂದಾಬಾದ್‌ ಎಂದು ಕೂಗುವುದು ಕೇಳಿಸುತ್ತಿದೆ.
https://twitter.com/zoo_bear/status/1762496344563040310
ವೈರಲ್ ಆಗುತ್ತಿರುವ ವಿಡಿಯೋದಲ್ಲಿ, “ನಾಸೀರ್ ಸಾಬ್ ಜಿಂದಾಬಾದ್‌” ಎಂದು ಕೂಗುತ್ತಿರುವುದು ಸ್ಪಷ್ಟವಾಗಿ ಕೇಳಿಸುತ್ತಿದ್ದರೂ, ಮಾಧ್ಯಮಗಳು “ಪಾಕಿಸ್ತಾನ ಜಿಂದಾಬಾದ್‌” ಎಂದು ಕೂಗುತ್ತಿದ್ದಾರೆ ಎಂದು ಸುದ್ದಿ ಬಿತ್ತರಿಸಿ ಸಮಾಜದ ಸಾಮರಸ್ಯವನ್ನು ಕದಡುವ ಕೆಲಸ ಮಾಡಿದೆ ಎನ್ನುವುದು ಪರಿಶೀಲನೆಯ ವೇಳೆ ಕಂಡು ಬಂದಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...