ರಾಜ್ಯಸಭೆಗೆ ನಿನ್ನೆ ಚುನಾವಣೆ ನಡೆದಿದ್ದು, ಕರ್ನಾಟಕದಿಂದ ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಮತ್ತು ಓರ್ವ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆಲುವನ್ನು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಾಕನ್, ನಾಸಿರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರು ಜಯ ಗಳಿಸಿದ್ದರು. ನಾಸಿರ್ ಹುಸೇನ್ ಗೆಲುವಿನ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಸಿರ್ ಹುಸೇನ್ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ. ಈ ವೇಳೆ ‘ಪಾಕಿಸ್ತಾನ್ ಝಿಂದಾಬಾದ್ʼ ಘೋಷಣೆ ಕೂಗಿದ್ದಾರೆ ಎಂದು ಕನ್ನಡದ ಬಹುತೇಕ ಟಿವಿ ಚಾನಲ್ಗಳು ವರದಿ ಮಾಡಿದ್ದು, ಬಿಜೆಪಿ ನಾಯಕರು ವಿಭಿನ್ನ ಹೇಳಿಕೆಗಳನ್ನು ಕೊಟ್ಟಿದ್ದರು.
ವಿಭಿನ್ನ ತಲೆಬರಹದಡಿ ಸುದ್ದಿ ಬಿತ್ತರಿಸಿದ್ದ ಮಾದ್ಯಮಗಳು:
ಕನ್ನಡದ ಸುದ್ದಿ ಮಾಧ್ಯಮಗಳಾದ ಟಿವಿ9, ಸುವರ್ಣ ನ್ಯೂಸ್, ಪಬ್ಲಿಕ್ ಟಿವಿ, ವಿಸ್ತಾರ ನ್ಯೂಸ್, ನ್ಯೂಸ್ ಫಸ್ಟ್ ಹಾಗೂ ರಿಪಬ್ಲಿಕ್ ಕನ್ನಡ ಸೇರಿದಂತೆ ಬಹುತೇಕ ಮಾಧ್ಯಮಗಳು ‘ಪಾಕಿಸ್ತಾನ್ ಝಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂದು ಸುದ್ದಿ ಹರಡಿದೆ.
‘ವಿಧಾನ ಸೌಧದಲ್ಲಿ ಕಾಂಗ್ರೆಸ್ ಕಾರ್ಯಕರ್ತನಿಂದ ಪಾಕ್ ಪರ ಘೋಷಣೆ’, ‘ವಿಧಾನಸೌಧದಲ್ಲಿ ಗೆಲುವಿನ ಸಂಭ್ರಮದಲ್ಲಿ ಮೊಳಗಿದ ಪಾಕಿಸ್ತಾನ ಝಿಂದಾಬಾದ್’ ಎಂದು ಭಿನ್ನ ತಲೆಬರಹದ ಜೊತೆ ಟಿವಿ9 ವರದಿ ಮಾಡಿದೆ.
‘ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ; ನಾಸಿರ್ ಹುಸೇನ್ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ’ ಎಂದು ಇನ್ನೊಂದು ಕನ್ನಡ ಮಾದ್ಯಮ ವಿಸ್ತಾರ ನ್ಯೂಸ್ ವರದಿ ಮಾಡಿದೆ.
ಇನ್ನೊಂದು ಮುಖ್ಯವಾಹಿನಿ ಮಾಧ್ಯಮ ‘ನ್ಯೂಸ್ 18 ಕನ್ನಡ’ ‘ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಸಯ್ಯದ್ ನಾಸೀರ್ ಹುಸೇನ್ ಬೆಂಬಲಿಗರು’ ಎಂದು ಸುದ್ದಿಯನ್ನು ಬಿತ್ತರಿಸಿದೆ.
‘ರಿಪಬ್ಲಿಕ್ ಕನ್ನಡ’ ಸುದ್ದಿ ಮಾದ್ಯಮ ವಿಧಾನ ಸೌಧದಲ್ಲಿ ಪಾಕ್ ಪರ ಘೋಷಣೆ ಎಂದು ತಲೆಬರಹದಡಿ ಸುದ್ದಿಯನ್ನು ಬಿತ್ತರಿಸಿದೆ.
‘ವಿಧಾನ ಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಬೆಂಬಲಿಗರು’ ಎಂದು ವಿಜಯವಾಣಿ ಸುದ್ದಿಯನ್ನು ಪ್ರಕಟಿಸಿದೆ.
https://twitter.com/AsianetNewsSN/status/1762480895762526555
ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಬೆನ್ನಲ್ಲೇ ನಾಸೀರ್ ಹುಸೇನ್ ಬೆಂಬಲಿಗರಿಂದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ.. ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಜೈಕಾರ ಕೂಗಿದ ಬೆಂಬಲಿಗರು ಎಂದು ಪಬ್ಲಿಕ್ ಟಿವಿ ವರದಿ ಮಾಡಿದೆ.
ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಬೆನ್ನಲ್ಲೇ ನಾಸೀರ್ ಹುಸೇನ್ ಬೆಂಬಲಿಗರಿಂದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ.. ವಿಧಾನಸೌಧದಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಎಂದು ಜೈಕಾರ ಕೂಗಿದ ಬೆಂಬಲಿಗರು #Bengaluru #NaseerHussain #Congress #RajyaSabhaElection #Pakistan #Karnataka pic.twitter.com/YbqYffch5Y
— PublicTV (@publictvnews) February 27, 2024
Chants in praise of Pakistan raised during victory celebrations of Congress Rajya Sabha candidates in Karnataka.
When NewsFirst confronted candidate Syed Naseer Hussain, he denied such chants.#Karnataka #RajyaSabhaElections pic.twitter.com/iIORCkQVY7
— NewsFirst Prime (@NewsFirstprime) February 27, 2024
ಬಿಜೆಪಿಯಿಂದ ಪ್ರತಿಭಟನೆ
ವಿಧಾನ ಸೌಧದಲ್ಲಿ ನಾಸೀರ್ ಹುಸೇನ್ ಬೆಂಬಲಿಗರು ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ್ದಾರೆಂದು ಬಿಜೆಪಿ ಮಂಗಳವಾರ ಬೀದಿಗಿಳಿದು ಪ್ರತಿಭಟನೆ ನಡೆಸಿದೆ. ವಿಧಾನಸೌಧದ ಲಾಂಜ್ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಕೋಲಾರದಲ್ಲಿ ಈ ಬಗ್ಗೆ ಶ್ರೀರಾಮ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ನಾಸೀರ್ ಹುಸೇನ್ ವಿರುದ್ದ ಘೋಷಣೆ ಕೂಗಿದ್ದರು. ಅಲ್ಲದೆ ನಾಸಿರ್ ಹುಸೇನ್ ಬಾವಚಿತ್ರಕ್ಕೆ ಬೆಂಕಿ ಹಚ್ಚಿದ್ದರು. ವಿವಿಧೆಡೆ ಬಿಜೆಪಿ ಯುವ ಮೋರ್ಚಾ ಕೂಡ ಪ್ರತಿಭಟನೆ ನಡೆಸಿತ್ತು.
ಇದಲ್ಲದೆ ಬಿಜೆಪಿ ನಾಯಕರು ಒಬ್ಬರ ಹಿಂದೆ ಒಬ್ಬರಂತೆ ಹೇಳಿಕೆಯನ್ನು ಕೊಟ್ಟಿದ್ದಾರೆ. ಪ್ರತಿಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, ಕಾಂಗ್ರೆಸ್ನವರಿಗೆ ಮಾನ ಮರ್ಯಾದೆ ಇದ್ದರೆ ಅಧಿಕಾರದಲ್ಲಿ ಇರಬಾರದು, ಸಿಎಂ ರಾಜೀನಾಮೆ ನೀಡಬೇಕು, ರಾಜ್ಯಪಾಲರು ಸರಕಾರವನ್ನು ವಜಾ ಮಾಡಬೇಕು ಎಂದೆಲ್ಲಾ ಆಗ್ರಹಿಸಿದ್ದರು. ಬಿಜೆಪಿ ಶಾಸಕ ಹರೀಶ್ ಪೂಂಜಾ ಮಾತನಾಡಿ, ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುತ್ತೇವೆ, ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದ್ದರು. ಘಟನೆಯ ಪೂರ್ಣ ಚಿತ್ರಣ ನಾಸೀರ್ ಹಸೇನ್ಗೆ ಗೊತ್ತಿತ್ತು ಎಂದು ಇದೊಂದು ಪೂರ್ವ ನಿಯೋಜಿತ ಎಂಬಂತೆ ಹೇಳಿಕೆ ಕೊಟ್ಟಿದ್ದರು.
ಈ ಬಗ್ಗೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರಾಜಕೀಯ ಕಾರ್ಯದರ್ಶಿ, ಕಾಂಗ್ರೆಸ್ ನ ನಸೀರ್ ಹುಸೇನ್ ಗೆದ್ದ ನಂತರ ಪಾಕಿಸ್ತಾನ್ ಜಿಂದಾಬಾದ್ ಘೋಷಣೆಗಳು ಮೊಳಗಿದೆ ಎಂದು ಆಪಾದಿಸಿದ್ದರು.
Pakistan Zindabad slogans raised after Congress’s Naseer Hussein, political secretary of Congress President Mallikarjun Kharge, won Rajya Sabha election from Karnataka.
Congress’s obsession with Pakistan is dangerous. It is taking India towards balkanisation. We can’t afford it. pic.twitter.com/uh49RignSf
— Amit Malviya (@amitmalviya) February 27, 2024
ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲು
ಪಾಕಿಸ್ತಾನದ ಪರ ಘೋಷಣೆ ಕೂಗಿರುವ ಆರೋಪ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲು ಮಾಡಲಾಗಿದೆ. ಕರ್ತವ್ಯನಿರತ ಎಎಸ್ಐ ಶಿವಕುಮಾರ್ ದೂರಿನ ಅನ್ವಯ ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 505(1)(B), 153B ಅಡಿ ಪ್ರಕರಣ ದಾಖಲು ಮಾಡಲಾಗಿದೆ.
ಫ್ಯಾಕ್ಟ್ಚೆಕ್:
ಈ ಬಗ್ಗೆ ನಾನು ಗೌರಿ.ಕಾಂ ವಾಸ್ತವಾಂಶಗಳನ್ನು ಪರಿಶೀಲನೆ ನಡೆಸಿದ್ದು, ಸುದ್ದಿ ಮಾದ್ಯಮಗಳು ವರದಿ ಮಾಡಿದ ವಿಡಿಯೋ ಹಾಗೂ ಇತರ ಹಲವು ವಿಡಿಯೋಗಳನ್ನು ಅವಲೋಕಿಸಿದೆ. ಈ ವೇಳೆ ವಾಸ್ತವವೇ ಬೇರೆ, ಕನ್ನಡ ಸುದ್ದಿ ಮಾದ್ಯಮಗಳು ಹರಡಿರುವುದು ಸುಳ್ಳು ಸುದ್ದಿ ಎನ್ನುವುದು ಬಯಲಾಗಿದೆ. ನಾಸೀರ್ ಹುಸೇನ್ ಗೆಲುವನ್ನು ಸಂಭ್ರಮಿಸುತ್ತಿರುವಾಗ ಅವರ ಬೆಂಬಲಿಗರು ಅವರ ಪಕ್ಕದಲ್ಲೇ ನಿಂತುಕೊಂಡು ‘ನಾಸೀರ್ ಸಾಬ್ ಝಿಂದಾಬಾದ್’ ಎಂದು ಘೋಷಣೆ ಕೂಗಿರುವುದು ಸ್ಪಷ್ಟವಾಗಿ ವಿಡಿಯೋಗಳಲ್ಲಿ ಸೆರೆಯಾಗಿದೆ. ನಾಸೀರ್ ಹುಸೇನ್ ಗೆಲುವನ್ನು ಸಂಭ್ರಮಿಸುತ್ತಿರುವಾಗ ನೂರಾರು ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಸೇರಿದ್ದರು. ಅವರು ‘ನಾಸೀರ್ ಸಾಬ್ ಝಿಂದಾಬಾದ್’ ಎಂದು ಕೂಗಿದ್ದಾರೆ ಹೊರತು ಪಾಕಿಸ್ತಾನ ಝಿಂದಾಬಾದ್ ಎಂದು ಕೂಗಿಲ್ಲ ಎನ್ನುವುದು ಬಯಲಾಗಿದೆ.