Homeಕರ್ನಾಟಕFACT CHECK| ನಾಸೀರ್‌ ಹುಸೇನ್‌ ಬೆಂಬಲಿಗರು 'ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರಾ? ಕನ್ನಡ ಮಾದ್ಯಮಗಳ ಸುದ್ದಿಯ...

FACT CHECK| ನಾಸೀರ್‌ ಹುಸೇನ್‌ ಬೆಂಬಲಿಗರು ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರಾ? ಕನ್ನಡ ಮಾದ್ಯಮಗಳ ಸುದ್ದಿಯ ವಾಸ್ತವಾಂಶವೇನು?

- Advertisement -
- Advertisement -

ರಾಜ್ಯಸಭೆಗೆ ನಿನ್ನೆ ಚುನಾವಣೆ ನಡೆದಿದ್ದು, ಕರ್ನಾಟಕದಿಂದ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ಮತ್ತು ಓರ್ವ ಬಿಜೆಪಿ- ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಗೆಲುವನ್ನು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಾಕನ್, ನಾಸಿರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರು ಜಯ ಗಳಿಸಿದ್ದರು. ನಾಸಿರ್ ಹುಸೇನ್ ಗೆಲುವಿನ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಸಿರ್ ಹುಸೇನ್ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ. ಈ ವೇಳೆ ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರೆ ಎಂದು ಕನ್ನಡದ ಬಹುತೇಕ ಟಿವಿ ಚಾನಲ್‌ಗಳು ವರದಿ ಮಾಡಿದ್ದು, ಬಿಜೆಪಿ ನಾಯಕರು ವಿಭಿನ್ನ ಹೇಳಿಕೆಗಳನ್ನು ಕೊಟ್ಟಿದ್ದರು.

ವಿಭಿನ್ನ ತಲೆಬರಹದಡಿ ಸುದ್ದಿ ಬಿತ್ತರಿಸಿದ್ದ ಮಾದ್ಯಮಗಳು:

ಕನ್ನಡದ ಸುದ್ದಿ ಮಾಧ್ಯಮಗಳಾದ ಟಿವಿ9, ಸುವರ್ಣ ನ್ಯೂಸ್, ಪಬ್ಲಿಕ್ ಟಿವಿ, ವಿಸ್ತಾರ ನ್ಯೂಸ್, ನ್ಯೂಸ್ ಫಸ್ಟ್ ಹಾಗೂ ರಿಪಬ್ಲಿಕ್ ಕನ್ನಡ ಸೇರಿದಂತೆ ಬಹುತೇಕ ಮಾಧ್ಯಮಗಳು ‘ಪಾಕಿಸ್ತಾನ್ ಝಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂದು ಸುದ್ದಿ ಹರಡಿದೆ.

‘ವಿಧಾನ ಸೌಧದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನಿಂದ ಪಾಕ್‌ ಪರ ಘೋಷಣೆ’, ‘ವಿಧಾನಸೌಧದಲ್ಲಿ ಗೆಲುವಿನ ಸಂಭ್ರಮದಲ್ಲಿ ಮೊಳಗಿದ ಪಾಕಿಸ್ತಾನ ಝಿಂದಾಬಾದ್‌’ ಎಂದು ಭಿನ್ನ ತಲೆಬರಹದ ಜೊತೆ ಟಿವಿ9 ವರದಿ ಮಾಡಿದೆ.

‘ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ’ ಎಂದು ಇನ್ನೊಂದು ಕನ್ನಡ ಮಾದ್ಯಮ ವಿಸ್ತಾರ ನ್ಯೂಸ್ ವರದಿ ಮಾಡಿದೆ.
ಇನ್ನೊಂದು ಮುಖ್ಯವಾಹಿನಿ ಮಾಧ್ಯಮ ‘ನ್ಯೂಸ್‌ 18 ಕನ್ನಡ’ ‘ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಸಯ್ಯದ್ ನಾಸೀರ್ ಹುಸೇನ್ ಬೆಂಬಲಿಗರು’ ಎಂದು ಸುದ್ದಿಯನ್ನು ಬಿತ್ತರಿಸಿದೆ.

‘ರಿಪಬ್ಲಿಕ್ ಕನ್ನಡ’ ಸುದ್ದಿ ಮಾದ್ಯಮ ವಿಧಾನ ಸೌಧದಲ್ಲಿ ಪಾಕ್‌ ಪರ ಘೋಷಣೆ ಎಂದು ತಲೆಬರಹದಡಿ ಸುದ್ದಿಯನ್ನು ಬಿತ್ತರಿಸಿದೆ.

‘ವಿಧಾನ ಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ ಕಾಂಗ್ರೆಸ್‌ ಅಭ್ಯರ್ಥಿ ನಾಸೀರ್‌ ಹುಸೇನ್‌ ಬೆಂಬಲಿಗರು’ ಎಂದು ವಿಜಯವಾಣಿ ಸುದ್ದಿಯನ್ನು ಪ್ರಕಟಿಸಿದೆ.

ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ ಘಟನೆ ಮಂಗಳವಾರ ನಡೆದಿದೆ. ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಕಂಡ ಬಳಿಕ ಕಾಂಗ್ರೆಸ್‌ನ ನಾಸಿರ್‌ ಹುಸೇನ್‌ ಬೆಂಬಲಿಗರು ಈ ಘೋಷಣೆ ಕೂಗಿದ್ದಾರೆ ಎಂದು ಕನ್ನಡದ ‘ಸುವರ್ಣ ನ್ಯೂಸ್’ ವರದಿ ಮಾಡಿದೆ.

https://twitter.com/AsianetNewsSN/status/1762480895762526555

ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಬೆನ್ನಲ್ಲೇ ನಾಸೀರ್ ಹುಸೇನ್ ಬೆಂಬಲಿಗರಿಂದ ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ.. ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಜೈಕಾರ ಕೂಗಿದ ಬೆಂಬಲಿಗರು ಎಂದು ಪಬ್ಲಿಕ್‌ ಟಿವಿ ವರದಿ ಮಾಡಿದೆ.

 

ಬಿಜೆಪಿಯಿಂದ ಪ್ರತಿಭಟನೆ

ವಿಧಾನ ಸೌಧದಲ್ಲಿ ನಾಸೀರ್‌ ಹುಸೇನ್‌ ಬೆಂಬಲಿಗರು ‘ಪಾಕಿಸ್ತಾನ ಜಿಂದಾಬಾದ್‌’  ಘೋಷಣೆ ಕೂಗಿದ್ದಾರೆಂದು  ಬಿಜೆಪಿ ಮಂಗಳವಾರ ಬೀದಿಗಿಳಿದು ಪ್ರತಿಭಟನೆ ನಡೆಸಿದೆ. ವಿಧಾನಸೌಧದ ಲಾಂಜ್​ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಕೋಲಾರದಲ್ಲಿ ಈ ಬಗ್ಗೆ ಶ್ರೀರಾಮ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ನಾಸೀರ್ ಹುಸೇನ್ ವಿರುದ್ದ ಘೋಷಣೆ ಕೂಗಿದ್ದರು. ಅಲ್ಲದೆ ನಾಸಿರ್ ಹುಸೇನ್ ಬಾವಚಿತ್ರಕ್ಕೆ ಬೆಂಕಿ ಹಚ್ಚಿದ್ದರು. ವಿವಿಧೆಡೆ ಬಿಜೆಪಿ ಯುವ ಮೋರ್ಚಾ ಕೂಡ ಪ್ರತಿಭಟನೆ ನಡೆಸಿತ್ತು.

ಇದಲ್ಲದೆ ಬಿಜೆಪಿ ನಾಯಕರು ಒಬ್ಬರ ಹಿಂದೆ ಒಬ್ಬರಂತೆ ಹೇಳಿಕೆಯನ್ನು ಕೊಟ್ಟಿದ್ದಾರೆ. ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಮಾತನಾಡಿ, ಕಾಂಗ್ರೆಸ್‌ನವರಿಗೆ ಮಾನ ಮರ್ಯಾದೆ ಇದ್ದರೆ ಅಧಿಕಾರದಲ್ಲಿ ಇರಬಾರದು, ಸಿಎಂ ರಾಜೀನಾಮೆ ನೀಡಬೇಕು, ರಾಜ್ಯಪಾಲರು ಸರಕಾರವನ್ನು ವಜಾ ಮಾಡಬೇಕು ಎಂದೆಲ್ಲಾ ಆಗ್ರಹಿಸಿದ್ದರು. ಬಿಜೆಪಿ ಶಾಸಕ ಹರೀಶ್‌ ಪೂಂಜಾ ಮಾತನಾಡಿ, ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕುತ್ತೇವೆ, ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದ್ದರು. ಘಟನೆಯ ಪೂರ್ಣ ಚಿತ್ರಣ ನಾಸೀರ್‌ ಹಸೇನ್‌ಗೆ ಗೊತ್ತಿತ್ತು ಎಂದು ಇದೊಂದು ಪೂರ್ವ ನಿಯೋಜಿತ ಎಂಬಂತೆ ಹೇಳಿಕೆ ಕೊಟ್ಟಿದ್ದರು.

ಈ ಬಗ್ಗೆ ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರಾಜಕೀಯ ಕಾರ್ಯದರ್ಶಿ, ಕಾಂಗ್ರೆಸ್ ನ ನಸೀರ್ ಹುಸೇನ್ ಗೆದ್ದ ನಂತರ ಪಾಕಿಸ್ತಾನ್ ಜಿಂದಾಬಾದ್ ಘೋಷಣೆಗಳು ಮೊಳಗಿದೆ ಎಂದು ಆಪಾದಿಸಿದ್ದರು.

ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲು

ಪಾಕಿಸ್ತಾನದ ಪರ ಘೋಷಣೆ ಕೂಗಿರುವ ಆರೋಪ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲು ಮಾಡಲಾಗಿದೆ. ಕರ್ತವ್ಯನಿರತ ಎಎಸ್​ಐ ಶಿವಕುಮಾರ್ ದೂರಿನ ಅನ್ವಯ ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 505(1)(B), 153B ಅಡಿ ಪ್ರಕರಣ ದಾಖಲು ಮಾಡಲಾಗಿದೆ.

ಫ್ಯಾಕ್ಟ್‌ಚೆಕ್‌:

ಈ ಬಗ್ಗೆ ನಾನು ಗೌರಿ.ಕಾಂ ವಾಸ್ತವಾಂಶಗಳನ್ನು ಪರಿಶೀಲನೆ ನಡೆಸಿದ್ದು, ಸುದ್ದಿ ಮಾದ್ಯಮಗಳು ವರದಿ ಮಾಡಿದ ವಿಡಿಯೋ ಹಾಗೂ ಇತರ ಹಲವು ವಿಡಿಯೋಗಳನ್ನು ಅವಲೋಕಿಸಿದೆ. ಈ ವೇಳೆ ವಾಸ್ತವವೇ ಬೇರೆ, ಕನ್ನಡ ಸುದ್ದಿ ಮಾದ್ಯಮಗಳು ಹರಡಿರುವುದು ಸುಳ್ಳು ಸುದ್ದಿ ಎನ್ನುವುದು ಬಯಲಾಗಿದೆ. ನಾಸೀರ್‌ ಹುಸೇನ್‌ ಗೆಲುವನ್ನು ಸಂಭ್ರಮಿಸುತ್ತಿರುವಾಗ ಅವರ ಬೆಂಬಲಿಗರು ಅವರ ಪಕ್ಕದಲ್ಲೇ ನಿಂತುಕೊಂಡು ‘ನಾಸೀರ್ ಸಾಬ್ ಝಿಂದಾಬಾದ್’ ಎಂದು ಘೋಷಣೆ ಕೂಗಿರುವುದು ಸ್ಪಷ್ಟವಾಗಿ ವಿಡಿಯೋಗಳಲ್ಲಿ ಸೆರೆಯಾಗಿದೆ. ನಾಸೀರ್‌ ಹುಸೇನ್‌ ಗೆಲುವನ್ನು ಸಂಭ್ರಮಿಸುತ್ತಿರುವಾಗ ನೂರಾರು ಬೆಂಬಲಿಗರು ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ಸೇರಿದ್ದರು. ಅವರು ‘ನಾಸೀರ್ ಸಾಬ್ ಝಿಂದಾಬಾದ್’ ಎಂದು ಕೂಗಿದ್ದಾರೆ ಹೊರತು ಪಾಕಿಸ್ತಾನ ಝಿಂದಾಬಾದ್‌ ಎಂದು ಕೂಗಿಲ್ಲ ಎನ್ನುವುದು ಬಯಲಾಗಿದೆ.

ಆಲ್ಟ್‌ ನ್ಯೂಸ್‌ ಸಹ ಸಂಸ್ಥಾಪಕ ಮುಹಮ್ಮದ್‌ ಝುಬೈರ್‌ ಅವರೂ, ಈ ವೀಡಿಯೊ ವನ್ನು ಸ್ಲೋ ಮೋಷನ್‌ನಲ್ಲಿ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ಸ್ಪಷ್ಟವಾಗಿ ನಾಸಿರ್‌ ಸಾಬ್‌ ಝಿಂದಾಬಾದ್‌ ಎಂದು ಕೂಗುವುದು ಕೇಳಿಸುತ್ತಿದೆ.
https://twitter.com/zoo_bear/status/1762496344563040310
ವೈರಲ್ ಆಗುತ್ತಿರುವ ವಿಡಿಯೋದಲ್ಲಿ, “ನಾಸೀರ್ ಸಾಬ್ ಜಿಂದಾಬಾದ್‌” ಎಂದು ಕೂಗುತ್ತಿರುವುದು ಸ್ಪಷ್ಟವಾಗಿ ಕೇಳಿಸುತ್ತಿದ್ದರೂ, ಮಾಧ್ಯಮಗಳು “ಪಾಕಿಸ್ತಾನ ಜಿಂದಾಬಾದ್‌” ಎಂದು ಕೂಗುತ್ತಿದ್ದಾರೆ ಎಂದು ಸುದ್ದಿ ಬಿತ್ತರಿಸಿ ಸಮಾಜದ ಸಾಮರಸ್ಯವನ್ನು ಕದಡುವ ಕೆಲಸ ಮಾಡಿದೆ ಎನ್ನುವುದು ಪರಿಶೀಲನೆಯ ವೇಳೆ ಕಂಡು ಬಂದಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...